Skip to main content

Posts

Showing posts from 2010

ಸರ್ವಜ್ಞನ ವಚನಗಳು - 191 ರಿಂದ 200

೧೯೧. ಹಿರಿದು ಪಾಪವ ಮಾಡಿ - ಹರಿವರು ಗಂಗೆಗೆ ಹರಿವ ನೀರಲ್ಲಿ ಕರಗುವೊಡೆ - ಯಾ ಪಾಪ ಎರೆಯ ಮಣ್ಣಲ್ಲ ಸರ್ವಜ್ಞ ೧೯೨. ಅಂತಿರ್ದರಿಂತಿರ್ದ | ರೆಂತಿರ್ದರೆನಬೇಡ ಕುಂತಿಯಣುಗರು ತಿರಿದರು - ಮಿಕ್ಕವರು ಎಂತಿರ್ದರೇನು ಸರ್ವಜ್ಞ ೧೯೩. ಉಳ್ಳಲ್ಲಿ ಉಣಲೊಲ್ಲ | ಉಳ್ಳಲ್ಲಿ ಉಡಲೊಲ್ಲ ಉಳ್ಳಲ್ಲಿ ದಾನಗೊಡಲೊಲ್ಲ - ನವನೊಡವೆ ಕಳ್ಳಗೆ ನೃಪಗೆ ಸರ್ವಜ್ಞ ೧೯೪. ಕೊಡುವಾತನೇ ಮೃಢನು | ಪಡೆವಾತನೇ ನರನು ಒಡಲು-ಒಡವೆಗಳು ಕೆಡೆದು ಹೋಗದ ಮುನ್ನ ಕೊಡು ಪಾತ್ರವನರಿದು ಸರ್ವಜ್ಞ ೧೯೫. ಅನ್ನವನಿಕ್ಕುವುದು | ನನ್ನಿಯನು ನುಡಿವುದು ತನ್ನಂತೆ ಪರರ ಬಗೆದೊಡೆ - ಕೈಲಾಸ ಬಿನ್ನಾಣವಕ್ಕು ಸರ್ವಜ್ಞ ೧೯೬. ಆನೆ ಮುಕುರದೊಳಡಗಿ | ಭಾನು ಸರಸಿಯೊಳಡಗಿ ನಾನೆನ್ನ ಗುರುವಿನೊಳಡಗಿ - ಸಂಸಾರ ತಾನದೆತ್ತಣದು ಸರ್ವಜ್ಞ ೧೯೭. ಎಂಜಲು ಹೊಲೆಯಿಲ್ಲ | ಸಂಜೆಗತ್ತಲೆಯಿಲ್ಲ ಅಂಜಿಕೆಯಿಲ್ಲ ಭಯವಿಲ್ಲ - ಜ್ಞಾನವೆಂ ಬಂಜನವಿರಲು ಸರ್ವಜ್ಞ ೧೯೮. ಬಲ್ಲೆನೆಂಬಾ ಮಾತು | ಎಲ್ಲವೂ ಹುಸಿ ನೋಡಾ ಬಲ್ಲರೆ ಬಲ್ಲೆನೆನಬೇಡ - ಸುಮ್ಮನಿರ ಬಲ್ಲರೆ ಬಲ್ಲ ಸರ್ವಜ್ಞ ೧೯೯. ಏನಾದಡೇನಯ್ಯ | ತಾನಾಗದನ್ನಕ್ಕ ತಾನಾಗಿ ತನ್ನನರಿದಡೆ - ಲೋಕ ತಾ ನೇನಾದಡೇನು ಸರ್ವಜ್ಞ ೨೦೦. ಆನೆ ನೀರಾಟದಲಿ | ಮೀನ ಕಂಡಂಜುವುದೇ ಹೀನಮಾನವರ ಬಿರುನುಡಿಗೆ - ತತ್ವದ ಜ್ಞಾನಿ ಅಂಜುವನೆ ಸರ್ವಜ್ಞ

ಸರ್ವಜ್ಞನ ವಚನಗಳು - 181 ರಿಂದ 190

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೧೮೧. ಕೊಟ್ಟು ಹುಟ್ಟಲಿಲ್ಲ | ಮುಟ್ಟಿ ಪೂಜಿಸಲಿಲ್ಲ ಸಿಟ್ಟಿನಲಿ ಶಿವನ ಬೈದರೆ - ಶಿವ ತಾನು ರೊಟ್ಟಿ ಕೊಡುವನೆ ಸರ್ವಜ್ಞ ೧೮೨. ಹಸಿವರಿತು ಉಂಬುದು | ಬಿಸಿನೀರ ಕುಡಿವುದು ಹಸಿವಕ್ಕು ವಿಷಯ ಘನವಕ್ಕು - ವೈದ್ಯಗೆ ಬೆಸಸ ಬೇಡೆಂದ ಸರ್ವಜ್ಞ ೧೮೩. ಲಿಂಗಕೆ ತೋರಿಸುತ | ನುಂಗುವಾತನೆ ಕೇಳು ಲಿಂಗ ಉಂಬುವುದೆ ? ಪೊಡಮಡು - ತೆಲೊ ಪಾಪಿ ಜಂಗಮಕೆ ನೀಡು ಸರ್ವಜ್ಞ ೧೮೪. ಹೆಂಡಿರು ಮಕ್ಕಳಿಗೆಂದು | ದಂಡಿಸದಿರು ದೇಹವನು ಭಂಡ ವಸ್ತುವನು ಕೊಡದುಣದೆ - ಬೈಚಿಡಲು ಕಂಡವರಿಗಹುದು ಸರ್ವಜ್ಞ ೧೮೫. ಮಾತು ಬಂದಲ್ಲಿ ತಾ | ಸೋತು ಬರುವುದು ಲೇಸು ಮಾತಿಂಗೆ ಮಾತು ಮಥಿಸೆ - ವಿಧಿ ಬಂದು ಆತುಕೊಂಡಿಹುದು ಸರ್ವಜ್ಞ ೧೮೬. ಕಣ್ಣು ನಾಲಗೆ ಮನವು | ತನ್ನವೆಂದೆನ ಬೇಡ ಅನ್ಯರು ಕೊಂದರೆನ ಬೇಡ - ಇವು ಮೂರು ತನ್ನನೇ ಕೊಲುಗು ಸರ್ವಜ್ಞ ೧೮೭. ನುಡಿಸುವುದಸತ್ಯವನು | ಕೆಡಿಸುವುದು ಧರ್ಮವನು ಒಡಲನೆ ಕಟ್ಟಿ ಹಿಡಿಸುವುದು - ಲೋಭದ ಗಡಣ ಕಾಣಯ್ಯ ಸರ್ವಜ್ಞ ೧೮೮. ಸೊಡರಿಂಗೆ ಎಣ್ಣೆಯ | ಕೊಡನೆತ್ತಿ ಹೊಯಿ

ಸರ್ವಜ್ಞನ ವಚನಗಳು - 171 ರಿಂದ 180

೧೭೧. ಜ್ಞಾನಿಯನಜ್ಞಾನಿಯೆಂದು | ಹೀನ ತಾ ನುಡಿದರೆ ಆನೆಯನೇರಿ ಸುಖದಿಂದಲಿ - ಹೋಹಂಗೆ ಶ್ವಾನ ಬೊಗಳ್ದೇನು ಸರ್ವಜ್ಞ ೧೭೨. ತುಂಬಿದಾ ಕೆರೆಭಾವಿ | ತುಂಬಿಹುದೆನಬೇಡ ನಂಬಿರಬೇಡ ಲಕ್ಶ್ಮಿಯನು - ಬಡತನವು ಬೆಂಬಳಿಯೊಳಿಹುದು ಸರ್ವಜ್ಞ ೧೭೩. ಕೇಡನೊಬ್ಬನಿಗೆ ಬಯಸೆ | ಕೇಡು ತಪ್ಪದು ತನಗೆ ಕೂಡಿ ಕೆಂಡವನು ತೆಗೆದೊಡೆ - ತನ್ನ ಕೈ ಕೂಡೆ ಬೇವಂತೆ ಸರ್ವಜ್ಞ ೧೭೪. ಅರಸು ಮುನಿದೂರೊಳಗೆ | ಇರುವುದೇ ಕರ ಕಷ್ಟ ಅರಸು ಮನ್ನಣೆಯು ಕರಗಿದ - ಠಾವಿಂದ ಸರಿವುದೇ ಲೇಸು ಸರ್ವಜ್ಞ ೧೭೫. ಆಶೆಯುಳ್ಳನ್ನಕ್ಕರ - ದಾಸನಾಗಿರುತಿಪ್ಪ ಆಶೆಯ ತಲೆಯನಳಿದರೆ - ಕೈಲಾಸ ದಾಚೆಯಲಿಪ್ಪ ಸರ್ವಜ್ಞ ೧೭೬. ಧಾರುಣಿ ನಡುಗುವುದು | ಮೇರುವಲ್ಲಾಡುವುದು ವಾರಿಧಿ ಬತ್ತಿ ಬರೆವುದು - ಶಿವಭಕ್ತಿ ಯೋರೆಯಾದಂದು ಸರ್ವಜ್ಞ ೧೭೭. ಮಂದಿಯಿಲ್ಲದರಸು | ತಂದೆ ಇಲ್ಲದ ಕಂದ ಬಂಧುಗಳಿಲ್ಲದಿಹ ಬಡತನ - ಇವು ತಾನು ಎಂದಿಗೂ ಬೇಡ ಸರ್ವಜ್ಞ ೧೭೮. ಅನ್ನವಿಕ್ಕದನಿಂದ | ಕುನ್ನಿ ತಾ ಕರ ಲೇಸು ಉನ್ನತವಪ್ಪತಿಥಿಗಿಕ್ಕದ ಬದುಕು - ನಾಯ ಕುನ್ನಿಯಿಂ ಕಷ್ಟ ಸರ್ವಜ್ಞ ೧೭೯. ಉರಿಯುದಕ ಶೀತವು | ಉರಗಪತಿ ಭೀಕರವು ಗುರುವಾಜ್ಞೆಗಂಜಿ ಕೆಡುವವು - ಇದ ನರ ರರಿಯದೆ ಕೆಡುಗು ಸರ್ವಜ್ಞ ೧೮೦. ಶೇಷನಿಂ ಹಿರಿದಿಲ್ಲ | ಆಸೆಯಿಂ ಕೀಳಿಲ್ಲ ರೋಷದಿಂದಧಮಗತಿಯಿಲ್ಲ - ಪರದೈವ ಈಶನಿಂದಿಲ

ಸರ್ವಜ್ಞನ ವಚನಗಳು - 161 ರಿಂದ 170

೧೬೧. ಸಿರಿ ಬಲ ಉಳ್ಳಾಗ | ಮರೆಯದವನೇ ಜಾಣ ಕೊರತೆಯಾದಾಗ ಕೊಡುವೆನಿದ್ದರೆ ಎಂದು ಅರಚುವವನೆ ಹೆಡ್ಡ ಸರ್ವಜ್ಞ ೧೬೨. ನಿತ್ಯ ನೀರೊಳು ಮುಳುಗಿ | ಹತ್ಯಾನೆ ಸ್ವರ್ಗಕ್ಕೆ ಹತ್ತೆಂಟು ಕಾಲ ಜಲದೊಳಗಿಹ ಕಪ್ಪೆ ಹತ್ತವ್ಯಾಕಯ್ಯ ಸರ್ವಜ್ಞ ೧೬೩. ಅನ್ನ ದೇವರ ಮುಂದೆ | ಇನ್ನು ದೇವರು ಉಂಟೆ ಅನ್ನವಿರುವನಕ ಪ್ರಾಣವು - ಜಗದೊಳ ಗನ್ನವೇ ದೈವ ಸರ್ವಜ್ಞ ೧೬೪. ನಂಬು ಪರಶಿವನೆಂದು | ನಂಬು ಗುರುಚರಣವನು ನಂಬಲಗಸ್ತ್ಯ ಕುಡಿದನು - ಶರಧಿಯನು ನಂಬು ಗುರುಪದವ ಸರ್ವಜ್ಞ ೧೬೫. ಬಂಧುಗಳಾದವರು ಮಿಂದುಂಡು ಹೋಹರು ಬಂಧನವ ಕಳೆಯಲರಿಯರು - ಗುರುವಿಂದ ಬಂಧನವಳಿಗು ಸರ್ವಜ್ಞ ೧೬೬. ಮೆಟ್ಟಿಪ್ಪುದಾಶೆಯನು | ಕಟ್ಟಿಪ್ಪುದಿಂದ್ರಿಯವ ತೊಟ್ಟಿಪ್ಪುದುಳ್ಳ ಸಮತೆಯನು - ಶಿವಪದವ ಮುಟ್ಟಿಪ್ಪುದಯ್ಯ ಸರ್ವಜ್ಞ ೧೬೭. ಚಿತ್ತೆಯ ಮಳೆ ಹೊಯ್ದು | ಮುತ್ತಾಗಬಲ್ಲುದೆ ಚಿತ್ತದ ನೆಲೆಯನರಿಯದೆ - ಬೋಳಾದ ರೆತ್ತಣ ಯೋಗ ಸರ್ವಜ್ಞ ೧೬೮. ಇಂದ್ರಿಯವ ತೊರೆದಾತ | ವಂದ್ಯನು ಜಗಕೆಲ್ಲ ಬಿಂದುವಿನ ಬೇಧವರಿದ ಮಹಾತ್ಮನು ಬೆಂದ ನುಲಿಯಂತೆ ಸರ್ವಜ್ಞ ೧೬೯. ಜ್ಞಾನಿ ಸಂಸಾರದೊಳು | ತಾನಿರಬಲ್ಲನು ಭಾನು ಮಂಡಲದಿ ಹೊಳೆವಂತೆ - ನಿರ್ಲೇಪ ಏನಾದಡೇನು ಸರ್ವಜ್ಞ ೧೭೦. ಸತ್ಯವ ನುಡಿವಾತ | ಸತ್ತವನೆನಬೇಡ ಹೆತ್ತ ತಾಯ್ ಮಗನ ಕರೆವಂತೆ - ಸ್ವರ್ಗದವ ರಿತ್ತ ಬಾಯೆಂಬ ಸರ್ವಜ

ಸರ್ವಜ್ಞನ ವಚನಗಳು - 151 ರಿಂದ 160

೧೫೧. ಬಲ್ಲವರ ಒಡನಾಡೆ | ಬೆಲ್ಲವನು ಸವಿದಂತೆ ಅಲ್ಲದಜ್ಞಾನಿಯೊಡನಾಡೆ - ಮೊಳಕೈಗೆ ಕಲ್ಲು ಹೊಡೆದಂತೆ ಸರ್ವಜ್ಞ ೧೫೨. ಬಂದುದನೆ ತಾ ಹಾಸಿ | ಬಂದುದನೆ ತಾ ಹೊದೆದು ಬಂದುದನೆ ಮೆಟ್ಟಿ ನಿಂತರೆ - ವಿಧಿ ಬಂದು ಮುಂದೇನ ಮಾಳ್ಕು ಸರ್ವಜ್ಞ ೧೫೩. ಸಿರಿ ಬಂದ ಕಾಲದಲಿ | ಕರೆದು ದಾನವ ಮಾಡು ಪರಿಣಾಮವಕ್ಕು ಪದವಕ್ಕು - ಕೈಲಾಸ ನೆರೆಮನೆಯಕ್ಕು ಸರ್ವಜ್ಞ ೧೫೪. ಏನ ಬೇಡುವಡೊಬ್ಬ | ದಾನಿಯನೆ ಬೇಡುವುದು ದೀನನ ಬೇಡಿ ಬಳಲಿದಡೆ - ಆ ದೀನ ನೇನ ಕೊಟ್ಟಾನು ಸರ್ವಜ್ಞ ೧೫೫. ಕೋಡಿಯನು ಕಟ್ಟಿದರೆ | ಕೇಡಿಲ್ಲವಾ ಕೆರೆಗೆ ಮಾಡು ಧರ್ಮಗಳ ಮನಮುಟ್ಟಿ - ಕಾಲನಿಗೆ ಈಡಾಗದ ಮುನ್ನ ಸರ್ವಜ್ಞ ೧೫೬. ಅನ್ನದಾನಗಳಿಗಿಂತ | ಇನ್ನು ದಾನಗಳಿಲ್ಲ ಅನ್ನಕ್ಕೆ ಮೇಲು ಹಿರಿದಿಲ್ಲ - ಲೋಕಕ್ಕೆ ಅನ್ನವೇ ಪ್ರಾಣ ಸರ್ವಜ್ಞ ೧೫೭. ಉಣ್ಣದೊಡವೆಯ ಗಳಿಸಿ | ಮಣ್ಣಾಗೆ ಬಚ್ಚಿಟ್ಟು ಚೆನ್ನಾಗಿ ಬಳಿದು ಮೆತ್ತಿದನ - ಬಾಯೊಳಗೆ ಮಣ್ಣು ಕಂಡಯ್ಯ ಸರ್ವಜ್ಞ ೧೫೮. ಕೊಟ್ಟಿರ್ದ ಕಾಲದಲಿ | ಅಟ್ಟುಣ್ಣಲರಿಯದೆ ಹುಟ್ಟಿಕ್ಕಿ ಜೇನು ಅನುಮಾಡಿ - ಪರರಿಗೆ ಕೊಟ್ಟು ಹೋದಂತೆ ಸರ್ವಜ್ಞ ೧೫೯. ಹೆಣ್ಣಿಂದ ಇಹವುಂಟು | ಹೆಣ್ಣಿಂದ ಪರವುಂಟು ಹೆಣ್ಣಿಂದ ಸಕಲ ಫಲವುಂಟು - ಮರೆದರೆ ಹೆಣ್ಣಿಂದ ಮರಣ ಸರ್ವಜ್ಞ ೧೬೦. ಮಜ್ಜಿಗೂಟಕೆ ಲೇಸು | ಮಜ್ಜನಕೆ ಮಡಿ ಲೇಸು ಕಜ್ಜಾಯ ತುಪ್ಪ ಉಣ

ಸರ್ವಜ್ಞನ ವಚನಗಳು - 141 ರಿಂದ 150

೧೪೧. ಅಂತಕ್ಕು ಇಂತಕ್ಕು | ಎಂತಕ್ಕು ಎನಬೇಡ ಚಿಂತಿಸಿ ಸುಯ್ವುತಿರಬೇಡ ಶಿವನಿರಿಸಿ ದಂತಿಹುದೆ ಲೇಸು ಸರ್ವಜ್ಞ ೧೪೨. ಸಿರಿಯು ಸಂಸಾರವು | ಸ್ಥಿರವೆಂದು ನಂಬದಿರು ಹಿರಿದೊಂದು ಸಂತೆ ನೆರೆದೊಂದು - ಜಾವಕ್ಕೆ ಹರೆದು ಹೋಹಂತೆ ಸರ್ವಜ್ಞ ೧೪೩. ದಂತಪಂಕ್ತಿಗಳೊಳಗೆ | ಎಂತಿಕ್ಕು ನಾಲಗೆಯು ಸಂತತ ಖಳರ ಒಡನಿರ್ದು - ಬಾಳುವು ದಂತೆ ಕಂಡಯ್ಯ ಸರ್ವಜ್ಞ ೧೪೪. ಹಸಿಯದಿರೆ ಕಡುಗಾದ | ಬಿಸಿನೀರ ಕೊಂಬುದು ಹಸಿವಕ್ಕು ಸಿಕ್ಕ ಮಲ ಬಿಡುಗು - ದೇಹ ತಾ ಸಸಿನವಾಗುವುದು ಸರ್ವಜ್ಞ ೧೪೫. ಹಸಿವಿಲ್ಲದುಣಬೇಡ | ಹಸಿದು ಮತ್ತಿರಬೇಡ ಬಿಸಿ ಬೇಡ ತಂಗುಳವು ಬೇಡ - ವೈದ್ಯನ ಗಸಣಿಸಿಯೇ ಬೇಡ ಸರ್ವಜ್ಞ ೧೪೬. ಜಾತಿ ಹೀನನ ಮನೆಯ | ಜ್ಯೋತಿ ತಾ ಹೀನವೇ ಜಾತಿ-ವಿಜಾತಿಯೆನಬೇಡ - ದೇವನೊಲಿ ದಾತನೇ ಜಾತ ಸರ್ವಜ್ಞ ೧೪೭. ಕ್ಷಣಮಾತ್ರವಾದರೂ | ಗುಣಿಗಳೊಡನಾಡುವುದು ಗುಣಹೀನರುಗಳ ಒಡನಾಟ - ಬಹುದುಃಖ ದಣಲೊಳಿರ್ದಂತೆ ಸರ್ವಜ್ಞ ೧೪೮. ಬಸವ ಗುರುವಿನ ಹೆಸರ | ಬಲ್ಲವರಾರಿಲ್ಲ ಪುಸಿಮಾತನಾಡಿ ಕೆಡದಿರಿ - ಲೋಕಕ್ಕೆ ಬಸವನೇ ಕರ್ತ ಸರ್ವಜ್ಞ ೧೪೯. ಹಸಿದೊಡಂಬಲಿ ಮುದ್ದು | ಬಿಸಿಲಿಗೆ ಕೊಡೆ ಮುದ್ದು ಬಸುರಲ್ಲಿ ಬಂದ ಶಿಶು ಮುದ್ದು - ಲೋಕಕ್ಕೆ ಬಸವಣ್ಣನೇ ಮುದ್ದು ಸರ್ವಜ್ಞ ೧೫೦. ಕತ್ತೆ ಬೂದಿಯ ಹೊರಳಿ | ಭಕ್ತನಂತಾಗುವುದೆ ತತ್ವವರಿಯದಲೆ ಭಸಿತವಿಟ್ಟರೆ

ಸರ್ವಜ್ಞನ ವಚನಗಳು - 131 ರಿಂದ 140

೧೩೧. ಅಂಗವನು ಲಿಂಗವನು | ಸಂಗೊಳಿಸಲೆಂತಕ್ಕು ? ಲಿಂಗದೆ ನೆನಹು ಘನವಾಗೆ - ಆ ಅಂಗ ಲಿಂಗವಾಗಿಕ್ಕು ಸರ್ವಜ್ಞ ೧೩೨. ಕಂಗಳಿಚ್ಛೆಗೆ ಪರಿದು | ಭಂಗಗೊಳದಿರು ಮನುಜ ಲಿಂಗದಲಿ ಮನವ ನಿಲ್ಲಿಸಿ - ಸತ್ಯದಿ ನಿಲೆ ಲಿಂಗವೇಯಹೆಯೊ ಸರ್ವಜ್ಞ ೧೩೩. ಓದುವಾದಗಳೇಕೆ | ಗಾದೆಯ ಮಾತೇಕೆ ವೇದ-ಪುರಾಣ ನಿನಗೇಕೆ - ಲಿಂಗದ ಹಾದಿಯನರಿದವಗೆ ಸರ್ವಜ್ಞ ೧೩೪. ನೋಟ ಶಿವಲಿಂಗದಲಿ | ಕೂಟ ಜಂಗಮದಲ್ಲಿ ನಾಟಿ ತನು ಗುರುವಿನಲಿ ಕೂಡೆ - ಭಕ್ತನ ಸ ಘಾಟವದು ನೋಡ ಸರ್ವಜ್ಞ ೧೩೫. ನಾನು-ನೀನುಗಳಳಿದು | ತಾನೆ ಲಿಂಗದಿ ನಿಂದು ನಾನಾ ಭ್ರಮೆಗಳ ನೆರೆ ಹಿಂಗಿ - ನಿಂದವನು ತಾನೈಕ್ಯ ನೋಡ ಸರ್ವಜ್ಞ ೧೩೬. ತನ್ನ ನೋಡಲಿಯೆಂದು | ಕನ್ನಡಿ ಕರೆವುದೇ ತನ್ನಲ್ಲಿ ಜ್ಞಾನ ಉದಿಸಿದ - ಮಹತುಮನು ಕನ್ನಡಿಯಂತೆ ಸರ್ವಜ್ಞ ೧೩೭. ಹೆಣ್ಣನು ಹೊನ್ನನು | ಹಣ್ಣಾದ ಮರವನು ಕಣ್ಣಲಿ ಕಂಡು - ಮನದಲಿ ಬಯಸದ ಅಣ್ಣಗಳಾರು ಸರ್ವಜ್ಞ ೧೩೮. ತಿರಿದು ತಂದಾದೊಡಂ | ಕರೆದು ಜಂಗಮಕಿಕ್ಕು ಪರಿಣಾಮವಕ್ಕು ಪದವಕ್ಕು - ಕೈಲಾಸ ನೆರೆಮನೆಯಕ್ಕು ಸರ್ವಜ್ಞ ೧೩೯. ಆಡದೆಲೆ ಕೊಡುವವನು | ರೂಢಿಯೊಳಗುತ್ತಮನು ಆಡಿ ಕೊಡುವವನು ಮಧ್ಯಮನು - ಅಧಮ ತಾನಾಡಿಯೂ ಕೊಡದವನು ಸರ್ವಜ್ಞ ೧೪೦. ಮಾನವನ ದುರ್ಗುಣವ | ನೇನೆಂದು ಬಣ್ಣಿಸುವೆ ದಾನಗೈಯಲು ಕನಲುವ - ದಂಡವನು ಮೋನದಿಂ ತೆರುವ ಸರ್ವಜ್ಞ

ಸರ್ವಜ್ಞನ ವಚನಗಳು - 121 ರಿಂದ 130

೧೨೧. ಓರ್ವನಲ್ಲದೆ ಮತ್ತೆ | ಈರ್ವರುಂಟೇ ಮರುಳೆ ಸರ್ವಜ್ಞನೋರ್ವ ಜಗಕೆಲ್ಲ - ಕರ್ತಾರ ನೋರ್ವನೇ ದೇವ ಸರ್ವಜ್ಞ ೧೨೨. ಎಂಜಲು ಶೌಚವು | ಸಂಜೆಯೆಂದೆನ ಬೇಡ ಕುಂಜರ ವನವ ನೆನೆವಂತೆ - ಬಿಡದೆ ನಿ ರಂಜನನ ನೆನೆಯ ಸರ್ವಜ್ಞ ೧೨೩. ಭೂತೇಶ ಶರಣೆಂಬ | ಜಾತಿ ಮಾದಿಗನಲ್ಲ ಜಾತಿಯಲಿ ಹುಟ್ಟಿ ಭೂತೇಶ - ಶರಣೆನ್ನ ದಾತ ಮಾದಿಗನು ಸರ್ವಜ್ಞ ೧೨೪. ಯಾತರ ಹೂವಾದರು | ನಾತರೆ ಸಾಲದೆ ಜಾತಿ-ವಿಜಾತಿ ಯೆನಬೇಡ - ಶಿವನೊಲಿ ದಾತನೇ ಜಾತಿ ಸರ್ವಜ್ಞ ೧೨೫. ಮಾಯಾಮೋಹವ ನೆಚ್ಚಿ | ಕಾಯವನು ಕರಗಿಸುತೆ ಆಯಾಸಗೊಳುತ ಇರಬೇಡ - ಓಂ ನಮಶ್ಯಿ ವಾಯವೆಂದೆನ್ನಿ ಸರ್ವಜ್ಞ ೧೨೬. ಮುನಿವಂಗೆ ಮುನಿಯದಿರು | ಕನೆವಂಗೆ ಕನೆಯದಿರು ಮನಸಿಜಾರಿಯನು ಮರೆಯದಿರು - ಶಿವನ ಕೃಪೆ ಘನಕೆ ಘನವಕ್ಕು ಸರ್ವಜ್ಞ ೧೨೭. ನರರ ಬೇಡುವ ದೈವ | ವರವೀಯ ಬಲ್ಲುದೇ ತಿರಿವವರನಡರಿ ತಿರಿವಂತೆ - ಅದನರಿ ಹರನನೆ ಬೇಡು ಸರ್ವಜ್ಞ ೧೨೮. ಲಿಂಗವ ಪೂಜಿಸುವಾತ | ಜಂಗಮಕೆ ನೀಡದೊಡೆ ಲಿಂಗದ ಕ್ಷೋಭೆ ಘನವಕ್ಕು - ಮಹಲಿಂಗ ಹಿಂಗುವುದು ಅವನ ಸರ್ವಜ್ಞ ೧೨೯. ಉಣ ಬಂದ ಲಿಂಗಕ್ಕೆ | ಉಣಲಿಕ್ಕದಂತಿರಿಸಿ ಉಣದಿರ್ಪ ಲಿಂಗಕ್ಕುಣ ಬಡಿಸಿ - ಕೈ ಮುಗಿವ ಬಣಗುಗಳ ನೋಡ ಸರ್ವಜ್ಞ ೧೩೦. ಒಮ್ಮನದಲ್ಲಿ ಶಿವಪೂಜೆಯ | ಗಮ್ಮನೆ ಮಾಡುವುದು ಇಮ್ಮನವಿಡಿದು ಕೆಡಬೇಡ - ವಿಧಿವಶವು ಸುಮ್ಮನೆ ಕೆಡಗು ಸರ್

ಸರ್ವಜ್ಞನ ವಚನಗಳು - 111 ರಿಂದ 120

೧೧೧. ಮೊಸರ ಕಡೆಯಲು ಬೆಣ್ಣೆ | ಒಸೆದು ತೋರುವ ತೆರದಿ ಹಸನುಳ್ಳ ಗುರುವಿನುಪದೇಶ - ದಿಂ ಮುಕ್ತಿ ವಶವಾಗದಿಹುದೆ ಸರ್ವಜ್ಞ ೧೧೨. ಗುರುಪಾದ ಸೇವೆ ತಾ ದೊರಕೊಂಡಿತಾದೊಡೆ ಹಿರಿದಪ್ಪ ಪಾಪ ಹರೆವುದು - ಕರ್ಪುರದ ಗಿರಿಯ ಸುಟ್ಟಂತೆ ಸರ್ವಜ್ಞ ೧೧೩. ಎತ್ತಾಗಿ ತೊತ್ತಾಗಿ | ಹಿತ್ತಿಲದ ಗಿಡವಾಗಿ ಮತ್ತೆ ಪಾದದ ಕೆರವಾಗಿ - ಗುರುವಿನ ಹತ್ತಿಲಿರು ಎಂದ ಸರ್ವಜ್ಞ ೧೧೪. ಸಾಣೆಕಲ್ಲೊಳು ಗಂಧ | ಮಾಣದೆ ಎಸೆವಂತೆ ಜಾಣ ಶ್ರೀಗುರುವಿನುಪದೇಶ - ದಿಂ ಮುಕ್ತಿ ಕಾಣಿಸುತಿಹುದು ಸರ್ವಜ್ಞ ೧೧೫. ಬೆಟ್ಟ ಕರ್ಪುರ ಉರಿದು | ಬೊಟ್ಟಿಡಲು ಬೂದಿಲ್ಲ ನೆಟ್ಟನೆ ಗುರುವಿನರಿದನ - ಕರ್ಮವು ಮುಟ್ಟಲಂಜುವವು ಸರ್ವಜ್ಞ ೧೧೬. ವಿಷಯಕ್ಕೆ ಕುದಿಯದಿರು | ಅಶನಕ್ಕೆ ಹದೆಯದಿರು ಅಸಮಾಕ್ಷನಡಿಯನಗಲದಿರು - ಗುರುಕರುಣ ವಶವರ್ತಿಯಹುದು ಸರ್ವಜ್ಞ ೧೧೭. ತಂದೆಗೆ ಗುರುವಿಗೆ | ಒಂದು ಅಂತರವುಂಟು ತಂದೆ ತೋರುವನು ಶ್ರೀಗುರುವ - ಗುರುರಾಯ ಬಂಧನವ ಕಳೆವ ಸರ್ವಜ್ಞ ೧೧೮. ಹಸಿಯ ಸೌದೆಯ ತಂದು | ಹೊಸೆದರುಂಟೇ ಕಿಚ್ಚು ವಿಷಯಂಗಳುಳ್ಳ ಮನುಜರಿಗೆ - ಗುರುಕರುಣ ವಶವರ್ತಿಯಹುದೆ ಸರ್ವಜ್ಞ ೧೧೯. ಒಂದೂರ ಗುರುವಿರ್ದು | ವಂದನೆಯ ಮಾಡದೆ ಸಂಧಿಸಿ ಕೂಳ ತಿನುತಿರ್ಪವನ - ಇರವು ಹಂದಿಯ ಇರವು ಸರ್ವಜ್ಞ ೧೨೦. ಲಿಂಗದ ಗುಡಿಯೆಲ್ಲಿ ? ಲಿಂಗಿಲ್ಲದೆಡೆಯೆಲ್ಲಿ ? ಲಿಂಗದೆ ಜ

ಸರ್ವಜ್ಞನ ವಚನಗಳು - 101 ರಿಂದ 110

೧೦೧. ಎಲುವಿನ ಕಾಯಕ್ಕೆ | ಸಲೆ ಚರ್ಮವನು ಹೊದಿಸಿ ಮಲ-ಮೂತ್ರ-ಕ್ರಿಮಿಯು ಒಳಗಿರ್ಪ - ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೧೦೨. ಹೊಲಸು ಮಾಂಸದ ಹುತ್ತು | ಎಲುವಿನ ಹಂಜರವು ಹೊಲೆ ಬಲಿದ ತನುವಿನೊಳಗಿರ್ದು - ಮತ್ತದರ ಕುಲವನೆಣಿಸುವರೆ ಸರ್ವಜ್ಞ ೧೦೩. ದಿಟವೆ ಪುಣ್ಯದ ಪುಂಜ | ಸಟೆಯೆ ಪಾಪದ ಬೀಜ ಕುಟಿಲ ವಂಚನೆಯ ಪೊಗದಿರು - ನಿಜವ ಪಿಡಿ ಘಟವ ನೆಚ್ಚದಿರು ಸರ್ವಜ್ಞ ೧೦೪. ಸುರತರು ಮರನಲ್ಲ | ಸುರಭಿಯೊಂದಾವಲ್ಲ ಪರುಷ ಪಾಷಾಣದೊಳಗಲ್ಲ - ಗುರುವು ತಾ ನರರೊಳಗಲ್ಲ ಸರ್ವಜ್ಞ ೧೦೫. ಜ್ಯೋತಿಯಿಂದವೆ ನೇತ್ರ | ರಾತ್ರಿಯಲಿ ಕಾಂಬಂತೆ ಸೂತ್ರದಲಿ ಧಾತನರಿವಂತೆ - ಶಿವನ ಗುರು ನಾಥನಿಂದರಿಗು ಸರ್ವಜ್ಞ ೧೦೬. ಮಂಡೆ ಬೋಳಾದೊಡಂ | ದಂಡು ಕೋಲ್ವಿಡಿದೊಡಂ ಹೆಂಡತಿಯ ಬಿಟ್ಟು ನಡೆದೊಡಂ - ಗುರುಮುಖವ ಕಂಡಲ್ಲದಿಲ್ಲ ಸರ್ವಜ್ಞ ೧೦೭. ಬ್ರಹ್ಮವೆಂಬುದು ತಾನು | ಒಮ್ಮಾರು ನೀಳವೇ ಒಮ್ಮೆ ಸದ್ಗುರುವಿನುಪದೇಶ - ವಾಲಿಸಲು ಗಮ್ಮನೆ ಮುಕ್ತಿ ಸರ್ವಜ್ಞ ೧೦೮. ಊರಿಂಗೆ ದಾರಿಯ | ನಾರು ತೋರಿದರೇನು ಸಾರಾಯಮಪ್ಪ ಮತವನರುಹಿಸುವ ಗುರು ಆರಾದೊಡೇನು ಸರ್ವಜ್ಞ ೧೦೯. ತುಪ್ಪವಾದಾ ಬಳಿಕ | ಹೆಪ್ಪನೆರೆದವರುಂಟೆ ನಿಃಪತ್ತಿಯಾದ ಗುರುವಿನುಪದೇಶದಿಂ ತಪ್ಪದೇ ಮುಕ್ತಿ ಸರ್ವಜ್ಞ ೧೧೦. ಪರುಷ ಲೋಹವ ಮುಟ್ಟಿ | ವರುಷವಿರಬಲ್ಲುದೇ ಪರುಷವೆಂತಂತೆ ಶಿಷ್ಯಂಗೆ

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಸರ್ವಜ್ಞನ ವಚನಗಳು - 81 ರಿಂದ 90

ಸರ್ವಜ್ಞನ ವಚನಗಳು -  81 ರಿಂದ 90 ೮೧. ಎಲ್ಲ ದೈವವ ಬೇಡಿ ಹುಲ್ಲು ಬಾಯ್ತೆರೆಯದೆಲೆ ಬಲ್ಲ ದಾಶಿವನ ಭಜಿಸಿ ಬೇಡಿದಾತ ಇಲ್ಲೆನಲಿಕರಿಯ ಸರ್ವಜ್ಞ ೮೨. ಆದಿ ದೈವವನು ತಾ ಭೇದಿಸಲಿ ಕರಿಯದಲೆ ಹಾದಿಯಾಕಲ್ಲಿಗೆಡೆಮಾಡಿ ನಮಿಸುವಾ ಮಾದಿಗರ ನೋಡು ಸರ್ವಜ್ಞ ೮೩. ತನ್ನಲಿಹ ಲಿಂಗವನು ಮನ್ನಿ ಸಲಿಕರಿಯದಲೆ ಬಿನ್ನಣದಿ ಕಟಿದ ಪ್ರತಿಮೆಗಳಿಗೆರಗುವಾ ಅನ್ಯಾಯ ನೋಡು ಸರ್ವಜ್ಞ ೮೪. ಉಣಬಂದ ಜಂಗಮಕೆ ಉಣಬಡಿಸಲೊಲ್ಲದಲೆ ಉಣದಿಪ್ಪ ಲಿಂಗಕುಣಬಡಿಸಿ ಕೈಮುಗಿವ ಬಣಗುಗಳ ನೋಡ ಸರ್ವಜ್ಞ ೮೫. ಕಲ್ಲು ಕಲ್ಲೆಂಬುವಿರಿ ಕಲ್ಲೊಳಗಿರ್ಪುದೇ ದೈವ ಕಲ್ಲಲ್ಲಿ ಕಳೆಯನಿಲಿಸಿದಾ ಗುರುವಿನಾ ಸೊಲ್ಲೇದೈವ ಸರ್ವಜ್ಞ ೮೬. ಗುಡಿಯ ಬೋದಿಗೆ ಕಲ್ಲು ನಡುರಂಗ ತಾ ಕಲ್ಲು ಕಡೆಮೂಲೆ ಸೆರಗು ತಾ ಕಲ್ಲು ವರವನ್ನು ಕೊಡುವಾತ ಬೇರೆ ಸರ್ವಜ್ಞ ೮೭. ಪ್ರಾಣನೂ ಪರಮಮನು ಕಾಣದಲೆ ಒಳಗಿರಲು ಮಾಣದೇ ಸಿಲೆಯ ಹಿಡಿದದಕೆ ಮೂರ್ಖ ತಾ ಪ್ರಾಣಾತ್ಮನೆಂಬ ಸರ್ವಜ್ಞ ೮೮. ಕಲ್ಲು ಗುಂಡಿನ ಮೇಲೆ ಮಲ್ಲಿಗೆಯ ಅರಳಿಕ್ಕಿ ನಿಲ್ಲದಲೆ ಹಣೆಯ ಬಡಿವರ್ಗೆ ಬುಗುಟಿಲ್ಲ ದಿಲ್ಲ ಕಾಣಯ್ಯ ಸರ್ವಜ್ಞ ೮೯. ಉತ್ಪತ್ತಿಗೆ ಬೊಮ್ಮಗಡ ಸ್ಥಿತಿಗೆ ವಿಷ್ಣುಗಡ ಹತವ ಗೈವುದಕ್ಕೆ ರುದ್ರಗಣ, ಇವರುಗಳ ಸ್ಥಿತಿಯನರಿಯೆಂದ ಸರ್ವಜ್ಞ ೯೦. ಬೊಮ್ಮನಿರ್ಮಿಪನೆಂಬ ಮರ್ಮತಿಯ ನೀ ಕೇಳು ಬೊಮ್ಮನಾ ಸತಿಗೆ ಮೂಗಿಲ್ಲವಾಮೂಗ ನಿರ್ಮಿಸನದೇಕೆ ಸರ್ವಜ್ಞ

ಸರ್ವಜ್ಞನ ವಚನಗಳು - 71 ರಿಂದ 80

ಸರ್ವಜ್ಞನ ವಚನಗಳು -  71 ರಿಂದ 80 ೭೧. ಲಿಂಗಕ್ಕೆ ತೋರಿಸುತ ನುಂಗುವಾತನೇ ಕೇಳು ಲಿಂಗವುಂಬುವದೆ ? ಇದನರಿದು ಕಪಿಯೆ ನೀ ಜಂಗಮಕೆ ನೀಡು ಸರ್ವಜ್ಞ ೭೨. ಲಿಂಗಪ್ರಸಾದವನು ಅಂಗಕ್ಕೆ ಕೊಂಬುವರು ಗಂಗಾಳದೊಳಗೆ ಕೈ ತೊಳೆದು ಚಲ್ಲುವಾ ಮಂಗಗಳ ನೋಡು ಸರ್ವಜ್ಞ ೭೩. ಹಲವನೋದಿದಡೇನು? ಚೆಲುವನಾದದಡೇನು ? ಕುಲವೀರನೆನೆಸಿ ಫಲವೇನು? ಲಿಂಗದಾ ಒಲುಮೆ ಇಲ್ಲದಲೆ ಸರ್ವಜ್ಞ ೭೪. ಓದುವಾದಗಳೇಕೆ ? ಗಾದೆಯ ಮಾತೇಕೆ? ವೇದ ಪುರಾಣವು ನಿನಗೇಕೆ ಲಿಂಗದಾ ಹಾದಿಯರಿಯದಲೆ ಸರ್ವಜ್ಞ ೭೫. ಕಂಡವರ ಕಂಡು ತಾ ಕೊಂಡ ಲಿಂಗವ ಕಟ್ಟಿ ಕೊಂಡಾಡಲರಿಯದಧಮಂಗೆ ಲಿಂಗವದು ಕೆಂಡದಂತಿಹುದು ಸರ್ವಜ್ಞ ೭೬. ಕಟ್ಟಲೂ ಬಿಡಲು ಶಿವ ಬಟ್ಟಲವ ಕದ್ದನೇ ಕಟ್ಟಲೂ ಬೇಡ ಬಿಡಲೂ ಬೇಡ ಕಣ್ಣು ಮನ ನಟ್ಟರೆ ಸಾಕು ಸರ್ವಜ್ಞ ೭೭. ಆ ದೇವ ಈ ದೇವ ಮಹಾದೇವನೆನಬೇಡ ಆ ದೇವರ ದೇವ ಭುವನದಾ ಪ್ರಾಣಿಗಳಿ ಗಾದವನೇ ದೇವ ಸರ್ವಜ್ಞ ೭೮. ಚಿತ್ರವನು ನವಿಲೊಳು ವಿ ಚಿತ್ರವನು ಗಗನದೊಳು ಪತ್ರ ಪುಷ್ಪಗಳ ವಿವಿಧವರ್ಣಗಳಿಂದ ಚಿತ್ರಿಸಿದರಾರು ಸರ್ವಜ್ಞ ೭೯. ಇಂಗಿನನೊಳು ನಾತವನು ತೆಂಗಿನೊಳಗೆಳೆ ನೀರು ಭ್ರಂಗ ಕೋಗಿಲೆಯ ಕಂಠದೊಳು ಗಾಯನವ ತುಂಬಿದವರಾರು ಸರ್ವಜ್ಞ ೮೦. ಕಳ್ಳಿಯೊಳು ಹಾಲು, ಮುಳು ಗಳ್ಳಿಯೊಳು ಹೆಜ್ಜೇನು ಎಳ್ಳಿನೊಳಗೆಣ್ಣೆ ಹನಿದಿರಲು, ಶಿವಲೀಲೆ ಸುಳ್ಳೆನ್ನಬಹುದೆ? ಸರ್ವಜ್ಞ

ಸರ್ವಜ್ಞನ ವಚನಗಳು - 61 ರಿಂದ 70

ಸರ್ವಜ್ಞನ ವಚನಗಳು -  61 ರಿಂದ 70 ೬೧. ಒಮ್ಮನದ ಶಿವಪೂಜೆ ಗಮ್ಮನೆ ಮಾಡುವದು ಇಮ್ಮನವ ಪಿಡಿದು ಕೆಡಬೇಡ ವಿಧಿವಶವು ಸರಿಮ್ಮನೇ ಕೆಡಗು ಸರ್ವಜ್ಞ ೬೨. ಅಷ್ಟವಿಧದರ್ಚನೆಯ ನೆಷ್ಟು ಮಾಡಿದರೇನು? ನಿಷ್ಠೆ ನೆಲೆಗೊಳದೆ ಭಜಿಸುವಾ ಪೂಜೆ ತಾ ನಷ್ಟ ಕಾಣಯ್ಯ ಸರ್ವಜ್ಞ ೬೩. ಇಷ್ಟಲಿಂಗದಿ ಮನವ ನೆಟ್ಟನೆಯ ನಿಲಿಸದಲೆ ಕಷ್ಟಭ್ರಮೆಗಳಲಿ ಮುಳುಗಿದನು ಕರ್ಮದಾ ಬಟ್ಟೆಗೆ ಹೋಹ ಸರ್ವಜ್ಞ ೬೪. ಎಷ್ಟು ಬಗೆಯಾರತಿಯ ಮುಟ್ಟಿಸಿದ ಫಲವೇನು? ನಿಷ್ಠೆಯಿಲ್ಲದವನ ಶಿವಪೂಜೆ ಹಾಳೂರ ಕೊಟ್ಟಗುರಿದಂತೆ ಸರ್ವಜ್ಞ ೬೫. ಒಸೆದೆಂಟು ದಿಕ್ಕಿನಲ್ಲಿ ಮಿಸುನಿ ಗಿಣ್ಣಲು ಗಿಂಡಿ ಹಸಿದು ಮಾಡುವನ ಪೂಜೆಯದು ಬೋಗಾರ ಪಸರ ವಿಟ್ಟಂತೆ ಸರ್ವಜ್ಞ ೬೬. ಬತ್ತಿ ಹೆತ್ತುಪ್ಪವನು ಹತ್ತಿಸಿದ ಫಲವೇನು? ನಿತ್ಯ ನೆಲೆಗೊಳದೆ ಭಜಿಸುವಾ ಪೂಜೆ ತಾ ಹತ್ತಿಗೇಡೆಂದ ಸರ್ವಜ್ಞ ೬೭. ಎಣಿಸುತಿರ್ಪುದು ಬಾಯಿ ಪೊಣರುತಿರ್ಪುದು ಬೆರಳು ಕ್ಷಣಕ್ಕೊಮ್ಮೆ ಒಂದನೆಣಿಸುವಾ ಜಪಕೊಂದು ಕುಣಿಕೆಯುಂಟೆಂದ ಸರ್ವಜ್ಞ ೬೮. ಎಣಿಸುತಿರ್ಪುದು ಬೆರಳು ಗುಣಿಸುತಿರ್ಪುದು ಜಿಹ್ವೆ ಮನಹೋಗಿ ಹಲವ ನೆನೆದರದು ಹಾಳೂರ ಶುನಕನಂತಕ್ಕು ಸರ್ವಜ್ಞ ೬೯. ಕೊಲುವ ಕೈಯೊಳು ಪೂಜೆ, ಮೆಲುವ ಬಾಯೊಳು ಮಂತ್ರ ಸಲೆ ಪಾಪವೆರೆದ ಮನದೊಳಗೆ ಪೂಜಿಪನೆ ಹೊಲೆಯ ಕಾಣಯ್ಯ ಸರ್ವಜ್ಞ ೭೦. ಲಿಂಗಪೂಜಿಸುವಾತ ಜಂಗಮಕ್ಕೆ ನೀಡಿದೊಡೆ ಲಿಂಗದಾ ಕ್ಷೇಮ ಘನವಾಗಿ ಆ ಲಿಂಗ ಹಿಂಗದಿರುತಿಹುದು ಸರ್ವಜ್ಞ

ಸರ್ವಜ್ಞನ ವಚನಗಳು - 51 ರಿಂದ 60

ಸರ್ವಜ್ಞನ ವಚನಗಳು -  51 ರಿಂದ 60 ೫೧. ಗಂಗೆಯಾ ತಡೆ ಲೇಸು, ಮಂಗಳನ ಬಲ ಲೇಸು ಜಂಗಮ ಭಕ್ತನಾ ನಡೆ ಲೇಸು, ಶರಣರಾ ಸಂಗವೇ ಲೇಸು ಸರ್ವಜ್ಞ ೫೨. ಆಕಾಶಪಥ ಮೀರಿ, ದೇಕವಸ್ತುವ ತಿಳಿದು ಸಾಕಾರವಳಿದು ನಿಜವಾದ ಐಕ್ಯಂಗೆ ಏಕತ್ರ ನೋಡು ಸರ್ವಜ್ಞ ೫೩. ನಾನು-ನೀನುಗಳದು, ತಾನು ಲಿಂಗದಿ ಉಳಿದು ನಾನಾ ಭ್ರಮೆಗಳ ಅತಿಗಳೆದು ನಿಂದಾತ ತಾನೈಕ್ಯ ನೋಡು ಸರ್ವಜ್ಞ ೫೪. ಹೀನಂಗೆ ಗತಿಯಿಲ್ಲ, ದೀನಗನುಚಿತವಲ್ಲ ಏನು ಇಲ್ಲದವಗೆ ಭಯವಿಲ್ಲ ಐಕ್ಯಂಗೆ ತಾನೆಂಬುದಿಲ್ಲ ಸರ್ವಜ್ಞ ೫೫. ಆಗಿಲ್ಲ ಹೋಗಿಲ್ಲ, ಮೇಗಿಲ್ಲ ಕೆಳಗಿಲ್ಲ ತಾಗಿಲ್ಲ ತಪ್ಪು ತಡೆಯಿಲ್ಲ ಲಿಂಗಕ್ಕೆ ದೇಗುಲವೆ ಇಲ್ಲ ಸರ್ವಜ್ಞ ೫೬. ಅಲಸದಾ ಶಿವಪೂಜೆ ಹುಲುಸುಂಟು ಕೇಳಯ್ಯ ಬಲುಕವಲು ಒಡೆದು ಬೇರಿಂದ ತುದಿತನಕ ಹಲಸು ಕಾತಂತೆ ಸರ್ವಜ್ಞ ೫೭. ಉಂಡುಂಡು ತಿರುಗುವಾ ಭಂಡರಾ ಕಳೆ ಬೇಡ ಕಂಡು ಲಿಂಗವನು ಪೂಜಿಸಿದವಗೆ ಯಮ ದಂಡ ಕಾಣಯ್ಯ ಸರ್ವಜ್ಞ ೫೮. ಆತುಮದ ಲಿಂಗವನು ಪ್ರೀತಿಯಲಿ ಪೂಜಿಪಗೆ ಆತಂಕವಿಲ್ಲ ಭಯವಿಲ್ಲ ದಶವಿಧದ ಪಾತಕಗಳಿಲ್ಲ ಸರ್ವಜ್ಞ ೫೯. ಲಿಂಗವನು ಅಂದವನ ಅಂಗ ಹಿಂಗಿರಬೇಕು ತೆಂಗಿನಕಾಯಿ ಪರಿಪೂರ್ಣ ಬಲಿದು ಜಲ ಹಿಂಗಿದಪ್ಪಂದ ಸರ್ವಜ್ಞ ೬೦. ಅಂಗವನು ಲಿಂಗವನು ಸಂಗೊಳಿಸಲೆಂತಕ್ಕು ಲಿಂಗದಾ ನೆನಹು ಘನವಾಗೆ ಶಿವಲಿಂಗ ಹಿಂಗಿರದು ಅವನ ಸರ್ವಜ್ಞ

ಸರ್ವಜ್ಞನ ವಚನಗಳು - 41 ರಿಂದ 50

ಸರ್ವಜ್ಞನ ವಚನಗಳು -  41 ರಿಂದ 50 ೪೧. ದೇಹಿಯನಬೇಡ, ನಿರ್ದೇಹಿ ಜಂಗಮಲಿಂಗ ದೇಹ ಗುಣದಾಸೆಯಳಿದೊಡೆ ಆತ ನೀರ್ದೇಹಿ ಕಾಣಯ್ಯ ಸರ್ವಜ್ಞ ೪೨. ವಂಶವನು ಪುಗನೆಂದಿ, ಗಾಶಿಸನು ಪರಧನವ ಸಂಶಯವನಳಿದ ನಿಜಸುಖಿ ಮಹಾತ್ಮನು ಹಿಂಸೆಗೊಡಬಡನು ಸರ್ವಜ್ಞ ೪೩. ಅರ್ಪಿತದ ಭೇದವನು ತಪ್ಪದೆಲೆ ತಿಳಿದಾತ ಸರ್ಪಭುಷಣನ ಸಮನಹನು ನಿಜಸುಖದೋ ಳೊಪ್ಪುತ್ತಲಿಹನು ಸರ್ವಜ್ಞ ೪೪. ಭೋಗಿಸುವ ವಸ್ತುಗಳ ಭೋಗಿಸು ಶಿವಗಿತ್ತು ರಾಗದಿಂ ಸತ್ಯವೆರಸಿಹ ಪ್ರಸಾದಿಯ ಶ್ರಿ ಗುರುವು ಎಂಬೆ ಸರ್ವಜ್ಞ ೪೫. ಲಿಂಗವಿರಹಿತನಾಗಿ ನುಂಗದಿರು ಏನುವನು ತಿಂಗಳಲಿ ಸತ್ತ ಕೊಳೆ ನಾಯಿ ಮಾಂಸವನು ನುಂಗಿದೆಂತಕ್ಕು ಸರ್ವಜ್ಞ ೪೬. ಅಂಜದಲೆ ಕೊಂಡಿಹರೆ, ನಂಜು ಅಮೃತವದಕ್ಕು ಅಂಜಿ, ಅಳುಕುತಲಿ ಕೊಂಡಿಹರೆ ಅಮೃತವು ನಂಜಿನಂತಕ್ಕು ಸರ್ವಜ್ಞ ೪೭. ಸಿರಿಯು ಬಂದರೆ ಲೇಸು, ತೀರದ ಜವ್ವನ ಲೇಸು ಮರಣವಿಲ್ಲದಾ ಮಗಲೇಸು ಲಿಂಗಕ್ಕೆ ಶರಣುವೆ ಲೇಸು ಸರ್ವಜ್ಞ ೪೮. ಸೋಕಿಡಾ ಸುಖಂಗಳ ನೇಕವನು ಶಿವಗಿತ್ತು ತಾ ಕಿಂಕರತೆಯ ಕೈಕೊಂಡ ಮನುಜನೇ ಲೋಕಕ್ಕೆ ಶರಣ ಸರ್ವಜ್ಞ ೪೯. ಮಲಯಜದ ಮರದೊಳಗೆ ಸಲೆ ಗಂಧವಿಪ್ಪಂತೆ ಸುಲಲಿತವು ಆದ ಶರಣರಾಹೃದಯದಲಿ ನೆಲಸಿಹನು ಶಿವನು ಸರ್ವಜ್ಞ ೫೦. ಕಿಚ್ಚಿನೊಳು ಸುಘೃತವು, ಒಚ್ಚತದಿ ಕರ್ಪುರವು ಅಚ್ಚಳಿದು ನಿಜದಿ ನಿಂದಂತೆ, ಭೇದವನು ಮುಚ್ಚುವನೆ ಶರಣ ಸರ್ವಜ್ಞ

ಸರ್ವಜ್ಞನ ವಚನಗಳು - 31 ರಿಂದ 40

ಸರ್ವಜ್ಞನ ವಚನಗಳು -  31 ರಿಂದ 40 ೩೧. ಕಾಯ ಕಮಲದ ಸಜ್ಜೆ, ಜೀವರತನುವೆ ಲಿಂಗ ಭವ ಪುಶ್ಪದಿಂ ಶಿವಪೂಜೆ ಮಾಡುವರ ದೇವರೆಂದೆಂಬೆ ಸರ್ವಜ್ಞ ೩೨. ಓದು ವಾದಗಳೇಕೆ, ಗಾದಿಯ ಮಾತೇಕೆ ವೇದ ಪುರಾಣ ನಿನಗೇಕೆ? ಲಿಂಗದಾ ಹಾದಿಯರಿದವಗೆ ಸರ್ವಜ್ಞ ೩೩. ಒಪ್ಪಾದ ನುಡಿಯೇಕೆ? ಪುಷ್ಪವೇರಿಸಲೇಕೆ? ಅರ್ಪಿತನ ಗೊಡವೆ ತನಗೇಕೆ? ಲಿಂಗದ ನೆಪ್ಪನರಿದವಗೆ ಸರ್ವಜ್ಞ ೩೪. ಗಂಗೆ ಗೋದಾವರಿಯು, ತುಂಗಭದ್ರೆಯು ಮತ್ತೆ ಹಿಂಗದೆ ಮುಳುಗಿ ಫಲವೇನು? ನಿನ್ನಲ್ಲೆ ಲಿಂಗದರುವಿಲ್ಲ ಸರ್ವಜ್ಞ ೩೫. ಮೆಟ್ಟಿದಾ ಕಲ್ಲಿಂಗೆ, ಮೊಟ್ಟೆ ಪತ್ರಿಯ ಹಾಕಿ ಕಟ್ಟಿದಾ ಲಿಂಗ ಅಡಿಮಾಡಿ ಶರಣೆಂಬ ಭ್ರಷ್ಟನ ಕಂಡ್ಯಾ ? ಸರ್ವಜ್ಞ ೩೬. ಗುರುವಿಂದ ಬಂಧುಗಳು, ಗುರುವಿಂದ ದೈವಗಳು ಗುರುವಿಂದಲಿಹುದು ಪುಣ್ಯವದು, ಜಗಕೆಲ್ಲ ಗುರುವಿಂದ ಮುಕ್ತಿ ಸರ್ವಜ್ಞ ೩೭. ಶಿವಪೂಜೆ ಮಾಡಿದಡೆ, ಶಿವನ ಕೊಂಡಾಡಿದಡೆ ಶಿವನಲ್ಲಿ ನೆನೆಹ ನಿಲಿಸಿದಡೆ ಶಿವಲೋಕ ವವಗೆ ಕಾಣಯ್ಯ ಸರ್ವಜ್ಞ ೩೮. ನಿಷ್ಠೆ ಇದ್ದಡೆ ಶಿವನು, ಗಟ್ಟಿಗೊಂಡೊಳಗಿರ್ಪ ನಿಷ್ಠೆಯಿಲ್ಲದಲೆ ಭಜಿಸಿದೊಡೆ ಶಿವನವನ ಬಿಟ್ಟು ಬಯಲಪ್ಪ ಸರ್ವಜ್ಞ ೩೯. ಇಟ್ಟಾವಿಭೂತಿ ತಾ ಪಟ್ಟಗಟ್ಟಿರುತಿಕ್ಕು ಇಟ್ಟಾವಿಭೂತಿಯರಿಯದಿರೆ ಸೀಳಿದಾ ಬಟ್ಟೆಯಂತಕ್ಕು ಸರ್ವಜ್ಞ ೪೦. ಲಿಂಗದಲಿ ಮನವಾಗಿ, ಲಿಂಗದಲಿ ನೆನಹಾಗಿ ಲಿಂಗದಲಿ ನೋಟ, ನುಡಿಕೂಟವಾದವನು ಲಿಂಗವೇ ಅಕ್ಕು ಸರ್ವಜ್ಞ

ಸರ್ವಜ್ಞನ ವಚನಗಳು - 21 ರಿಂದ 30

ಸರ್ವಜ್ಞನ ವಚನಗಳು -  21 ರಿಂದ 30 ೨೧. ಅಂಜದಲೆ ಕೊಂಡಿಹರೆ ನಂಜು ಅಮೃತವದಕ್ಕು ಅಂಜಿ ಅಳುಕುತಲಿ ಕೊಂಡಿಹರೆ, ಅಮೃತವು ನಂಜಿನಂತಕ್ಕು ಸರ್ವಜ್ಞ ೨೨. ಎಂಜಲೂ ಅಶೌಚ ಸಂಜೆಯೆಂದೆನಬೇಡ ಕುಂಜರವು ವನವ ನೆನವಂತೆ ಬಿಡದೆನಿ ರಂಜನನ ನೆನೆಯೊ ಸರ್ವಜ್ಞ ೨೩. ಭೂತೇಶಗೆರಗುವನು ಜಾತಿ ಮಾದಿಗನಲ್ಲ ಜಾತಿಯಲಿ ಹುಟ್ಟಿ ಶಿವನಿಗೆ ಶರಣೆನ್ನ ದಾತ ಮಾದಿಗನು ಸರ್ವಜ್ಞ ೨೪. ಕುಲಗೆಟ್ಟವರು ಚಿಂತೆ ಯೊಳಗಿಪ್ಪರಂತಲ್ಲ ಕುಲಗೆಟ್ಟು ಶಿವನ ಮರೆಹೊಕ್ಕ ಋಷಿಗಳಿಗೆ ಕುಲಗೋತ್ರವುಂಟೆ? ಸರ್ವಜ್ಞ ೨೫. ಜಾತಿಹೀನನ ಮನೆಯ ಜ್ಯೊತಿ ತಾ ಹೀನವೆ? ಜಾತಂಗೆ ಜಾತನೆನಲೇಕೆ? ಅರುವಿಡಿ ದಾತನೇ ಜಾತ ಸರ್ವಜ್ಞ ೨೬. ಯಾತರ ಹೂವೇನು ? ನಾತವಿದ್ದರೆ ಸಾಕು ಜಾತಿಯಲಿ ಜಾತಿಯೆನಬೇಡ ಶಿವನೊಲಿ ದಾತನೆ ಜಾತ ಸರ್ವಜ್ಞ ೨೭. ಅಕ್ಕರವು ತರ್ಕಕ್ಕೆ ಲೆಕ್ಕವು ಗಣಿತಕ್ಕೆ ಮಿಕ್ಕವೋದುಗಳು ತಿರುಪೆಗೆ ಮೋಕ್ಷಕಾ ರಕ್ಕರವೇ ಸಾಕು ಸರ್ವಜ್ಞ ೨೮. ಎಲ್ಲರನು ನೆರೆ ಬೇಡಿ, ಹಲ್ಲು ಬಾಯ್ದೆರೆಯುವರೇ? ಬಲ್ಲಿದಾ ಶಿವನ ಭಜಿಸಿದರೆ ಶಿವ ತಾನು ಇಲ್ಲೆನ್ನಲರಿಯನು ಸರ್ವಜ್ಞ ೨೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚಂದ್ರಶೇಖರನು ಮುದಿ ಎತ್ತನೇರಿ ಬೇ ಕೆಂದುದನು ಕೊಡುವ ಸರ್ವಜ್ಞ ೩೦. ಸಾರವನು ಬಯಸುವರೆ, ಕ್ಷಾರವನು ಬೆರಿಸುವುದು ಮಾರಸಂಹರನ ನೆನೆದರೆ ಮೃತ್ಯುವು ದೂರಕ್ಕೆ ದೂರ ಸರ್ವಜ್ಞ

ಸರ್ವಜ್ಞನ ವಚನಗಳು - 11 ರಿಂದ 20

೧೧. ಹರನಿಚ್ಛೆಯಿಲ್ಲದಲೆ ಹರಿದು ಹೋಗದು ಪಾಪ ಹರಭಕ್ತಿಯುಳ್ಳ ಗುರುವರನು ಓರ್ವನೇ ನರ  ದೈವವೆಂಬೆ ಸರ್ವಜ್ಞ ೧೨. ಬಂಧುಗಳು ಆದವರು ಬಂದುಂಡು ಹೋಗುವರು ಬಂಧನವ ಕಳೆಯಲರಿಯರಾ  ಗುರುವಿಗಿಂತ ಬಂಧುಗಳುಂಟೆ ಸರ್ವಜ್ಞ ೧೩. ಜೀವ, ಸದ್ಗುರುನಾಥ, ಕಾಯ ಪುಸಿಯನೆ ತೋರಿ ಮಾಯನಾಶವನು ಹರಿಸುತ್ತ  ಶಿಷ್ಯಂಗೆ ತಾಯಿಯಂತಾದ ಸರ್ವಜ್ಞ ೧೪. ತಂದೆಗೂ ಗುರುವಿಗೂ ಒಂದು ಅಂತರವುಂಟು ತಂದೆ ತೋರುವನು ಸದ್ಗುರುವ.  ಗುರುರಾಯ ಬಂಧನವ ಕಳೆವ ಸರ್ವಜ್ಞ ೧೫. ಗುರುವಿಂಗೆ ದೈವಕ್ಕೆ, ಹಿರಿದು ಅಂತರವುಂಟು ಗುರುತೋರ್ವ ದೈವದೆಡೆಯನು  ದೈವತಾ ಗುರುವ ತೋರುವನೇ? ಸರ್ವಜ್ಞ ೧೬. ಗುರುಪಾದಕೆರಗಿದರೆ, ಶಿರಸು ತಾ ಮಣಿಯಕ್ಕು ಪರಿಣಾಮವಕ್ಕು ಪದವಕ್ಕು  ಕೈಲಾಸ ನೆರಮನೆಯಕ್ಕು ಸರ್ವಜ್ಞ ೧೭. ಒಂದರೊಳಗೆಲ್ಲವು ಸಂದಿಸುವದನು ಗುರು ಚಂದದಿಂ ತೋರಿಕೊಡದಿರಲು  ಶೊಷ್ಯನವ ಕೊಂದನೆಂದರಿಗು ಸರ್ವಜ್ಞ ೧೮. ಲಿಂಗಕ್ಕೆ ಕಡೆ ಎಲ್ಲಿ, ಲಿಂಗದೆಡೆ ಎಲ್ಲಿ ಲಿಂಗದೊಳು ಜಗವು ಅಡಗಿಹುದು  ಲಿಂಗವನು ಹಿಂಗಿದವರುಂಟೆ? ಸರ್ವಜ್ಞ ೧೯. ದೆಶಕ್ಕೆ ಸಜ್ಜನನು, ಹಾಸ್ಯಕ್ಕೆ ಹನುಮಂತ ಕೇಶವನು ಭಕ್ತರೊಳಗೆಲ್ಲ ಮೂರು  ಕ ಣ್ಣೇಶನೆ ದೈವ ಸರ್ವಜ್ಞ ೨೦. ಉಂಬಳಿಯ ಇದ್ದವನು ಕಂಬಳಿಯ ಹೊದೆಯುವನೇ? ಶಂಭುವಿರಲಿಕ್ಕೆ ಮತ್ತೊಂದು  ದೈವವ ನಂಬುವನೇ ಹೆಡ್ಡ ಸರ್ವಜ್ಞ

ಅಲ್ಲಮಪ್ರಭುವಿನ ವಚನಗಳು : 111 ರಿಂದ 120

೧೧೧. ಅಱಿದಱಿದು ಅಱಿವು ಬಱುದೊಱಿವೋಯಿತ್ತು ! "ಕುಱುಹ[ತೋಱ]ದಡೆಂತೂ ನಂಬರು, ತೆಱಹಿಲ್ಲದ ಘನವ ನೆನೆದು ಗುರುಶರಣೆಂಬುದಲ್ಲದೆ ಮಱಹು ಬಂದೀತೆಂ"ದು ಗುರು ಕುಱುಹ ತೋಱಿದನಲ್ಲದೆ ಬಲ್ಲಡೆ ಗುಹೇಶ್ವರಲಿಂಗವು ಹೃದಯದಲೈದಾನೆ. ೧೧೨. ಉದಕ ಮೂರುತಿಯಾಗಿ ಉದಯವಾಯಿತ್ತು ಪಿಂಡಿಗೆಯಲ್ಲಿ ಮೂಲ ಸ್ಥಾನ ಸ್ಥಾಪ್ಯವಾಯಿತ್ತು ಸ್ವದೇಹಶಿವಪುರದಲ್ಲಿ ! ವಾಯು ಪೂಜಾರಿಯಾಗಿ ಪರಿಮಳದಿಂಡೆದಂಡೆಯ ಕಟ್ಟಿ ಪೂಜಿಸುತ್ತಿರ್ದುದೋ ನವದ್ವಾರಶಿವಾಲಯದಾದಿಮಧ್ಯಸ್ಥಾನದಲ್ಲಿ ಗುಹೇಶ್ವರನೆಂಬುದಲ್ಲಿಯೆ ನಿಂದಿತ್ತು. ೧೧೩. ಕಾಲೇ ಕಂಭಗಳಾದವೆನ್ನ ದೇಹವೇ ದೇಗುಲವಾದುವಯ್ಯ ! ಎನ್ನ ನಾಲಗೆಯೆ ಘಂಟೆ ಶಿರ ಸುವರ್ಣದ ಕಳಸವಿದೇನಯ್ಯ ! ಸ್ವರವೇ ಲಿಂಗಕ್ಕೆ ಸಿಂಹಾಸನವಾಗಿರ್ದುದು ! ಗುಹೇಶ್ವರ, ನಿಮ್ಮ ಪ್ರಾಣಲಿಂಗಪ್ರತಿಷ್ಠೆ ಪಲ್ಲಟವಾಗದಂತಿದ್ದೆನಯ್ಯ. ೧೧೪. ಪ್ರಾಣಲಿಂಗಕ್ಕೆ ಕಾಯವೇ ಸೆಜ್ಜೆ ಆಕಾಶಗಂಗೆಯಲ್ಲಿ ಮಜ್ಜನ ಹೂವಿಲ್ಲದ ಪರಿಮಳದ ಪೂಜೆ ಹೃದಯಕಮಲದಲ್ಲಿ ಶಿವಶಿವಾ ಎಂಬ ಶಬ್ದ ಇದು ಅದ್ವೈತ ಕಾಣಾ ಗುಹೇಶ್ವರ. ೧೧೫. ಹೊತ್ತಾರೆ ಪೂಜಿಸಲುಬೇಡ ಕಂಡಾ ! ಬೈಗೆ ಪೂಜಿಸಲುಬೇಡ ಕಂಡಾ ! ಇರುಳುವನೂ ಹಗಲುವನೂ ಕಳೆದು ಪೂಜಿಸಬೇಕು ಕಂಡಾ ! ಇಂತಪ್ಪ ಪೂಜೆಯ ಪೂಜಿಸುವರ ಎನಗೆ ತೋಱಯ್ಯ ಗುಹೇಶ್ವರ. ೧೧೬. ಅಂಗದಲ್ಲಿ ಮಾಡುವ ಸುಖವದು ಲಿಂಗಕ್ಕೆ ಭೂಷಣವಾಯಿತ್ತು. ಕಾಡುಗಿಚ್ಚಿನ ಕೈಯಲ್ಲಿ ಕರಡವ ಕೊಯ್ಸುವಂತೆ- ಹಿಂದೆ ಮೆದೆಯಿಲ್ಲ ! ಮು

ಅಲ್ಲಮಪ್ರಭುವಿನ ವಚನಗಳು : 101 ರಿಂದ 110

೧೦೧. ಪ್ರಣವಮಂತ್ರವ ಕರ್ಣದಲಿ ಹೇಳಿ ಶ್ರೀಗುರು ಶಿಷ್ಯನ ಅಂಗದ ಮೇಲೆ ಲಿಂಗಪ್ರತಿಷ್ಠೆಯ ಮಾಡಿದ ಬಳಿಕ ಪ್ರಾಣದಲಿ ಲಿಂಗವಿಪ್ಪುದೆಂಬ ವ್ರತಗೇಡಿಗಳ ಮಾತ ಕೇಳಲಾಗದು. ಒಳಗಿಪ್ಪನೇ ಲಿಂಗದೇವನು ಮಲ-ಮೂತ್ರ-ಮಾಂಸದ ಹೇಸಿಕೆಯೊಳಗೆ ? ಅಲ್ಲಿ ಪ್ರಾಣವಿಪ್ಪುದಲ್ಲದೆ ಲಿಂಗವಿಪ್ಪುದೇ ? ಆ ಪ್ರಾಣವ ತಂದು ತನ್ನ ಇಷ್ಟಲಿಂಗದಲ್ಲಿರಿಸಿ ನೆರೆಯ ಬಲ್ಲಡೆ ಆತನೆ ಪ್ರಾಣಲಿಂಗಸಂಬಂಧಿ ! ಅಲ್ಲದವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ? ೧೦೨. ಕದಳಿಯ ಬನವ ಹೊಕ್ಕು ಹೊಲಬ ತಿಳಿಯದನ್ನಕ್ಕ, ಬಯಲ ಗಾಳಿಯ ಹಿಡಿದು ಘಟ್ಟಿ ಮಾಡದನ್ನಕ್ಕ, ಬಱಿದೆ ಬಹುದೇ ಶಿವಜ್ಞಾನ ? ಷಡುವರ್ಗವಳಿಯದನ್ನಕ್ಕ ಅಷ್ಟಮದವಳಿಯದನ್ನಕ್ಕ ಬಱಿದೆ ಬಹುದೇ ಶಿವಸಂಪದ ? ಮದಮತ್ಸರವ ಮಾಡಲಿಲ್ಲ ! ಹೊದಕುಳಿಗೊಳಲಿಲ್ಲ ಗುಹೇಶ್ವರಲಿಂಗ ಕಲ್ಪಿತದೊಳಗಲ್ಲ ! ೧೦೩. ಶಬ್ದ ಸ್ಪರ್ಶ ರೂಪ ರಸ ಗಂಧ ಪಂಚೇಂದ್ರಿಯ ಸಪ್ತಧಾತು ಅಷ್ಟಮದದಿಂದ ಮುಂದುಗಾಣದವರು ನೀವು ಕೇಳಿರೇ ! ಲಿಂಗವಾರ್ತೆಯ ವಚನರಚನೆಯ ಮಾತನಾಡುವಿರಯ್ಯ ! ಸಂಸಾರದ ಮುಚ್ಚು ಬಿಡದನ್ನಕ್ಕರ ಸೂಕ್ಷ್ಮಶಿವಪಥವು ಸಾಧ್ಯವಾಗದು. ಗುಹೇಶ್ವರಲಿಂಗದಲಿ ವಾಕು ಪಾಕವಾದಡೇನು ? ಮನ ಪಾಕವಾಗದನ್ನಕ್ಕರ ?! ೧೦೪. ಮರ್ತ್ಯಲೋಕದ ಮಾನವರು ದೇಗುಲದೊಳಗೊಂದು ದೇವರ ಮಾಡಿದಡೆ ಆನು ಬೆಱಗಾದೆನಯ್ಯ ! ನಿಚ್ಚಕ್ಕೆ ನಿಚ್ಚ ಅರ್ಚನೆಪೂಜನೆಯ ಮಾಡಿಸಿ ಭೋಗವ ಮಾಡುವರ ಕಂಡು ನಾನು ಬೆಱಗಾದೆನು ಗುಹೇಶ್ವರ, ನಿಮ್ಮ ಶರಣರು ಹಿಂದೆ ಲಿಂಗ

ಅಲ್ಲಮಪ್ರಭುವಿನ ವಚನಗಳು : 91 ರಿಂದ 100

ಅಲ್ಲಮಪ್ರಭುವಿನ ವಚನಗಳು : 91 ರಿಂದ 100 ೯೧. ಲಿಂಗ ಒಳಗೋ ಹೊಱಗೋ ? ಬಲ್ಲಡೆ ನೀವು ಹೇಳಿರೇ ! ಲಿಂಗ ಎಡನೋ ಬಲನೋ ? ಬಲ್ಲಡೆ ನೀವು ಹೇಳಿರೇ ! ಲಿಂಗ ಮುಂದೋ ಹಿಂದೋ ? ಬಲ್ಲಡೆ ನೀವು ಹೇಳಿರೇ ! ಲಿಂಗ ಸ್ಥೂಲವೋ ಸೂಕ್ಷ್ಮವೋ ? ಬಲ್ಲಡೆ ನೀವು ಹೇಳಿರೇ ! ಲಿಂಗ ಪ್ರಾಣವೋ, ಪ್ರಾಣ ಲಿಂಗವೋ ? ಬಲ್ಲಡೆ ನೀವು ಹೇಳಿರೇ ? ಗುಹೇಶ್ವರ. ೯೨. ತನುವಿಂಗೆ ತನುವಾಗಿ ಮನಕ್ಕೆ ಮನವಾಗಿ ಜೀವಕ್ಕೆ ಜೀವವಾಗಿ ಇದ್ದುದನಾರು ಬಲ್ಲರೋ ?! ಅದು ದೂರವೆಂದು ಸಮೀಪವೆಂದು ಮಹಂತ ಗುಹೇಶ್ವರನೊಳಗೆಂದು ಹೊಱಗೆಂದು ಬಱುಸೂಱೆವೋದರು ! ಪ್ರಸಾದಿ ಸ್ಥಲ ೯೩. ಲಿಂಗಾರ್ಚನೆಯಿಲ್ಲದ ಮುನ್ನ ಸಿಂಗಿಯಾನಾರೋಗಿಸಿದಿರಿ ಸಂಜೆ ಸಮಾಧಿಗಳಿಲ್ಲದ ಮುನ್ನ ಉಂಡಿರಿ ಚೆನ್ನನ ಮನೆಯಲ್ಲಿ ಚಿತ್ರಗುಪ್ತರಱಿಯದ ಮುನ್ನ ಎತ್ತಿದಿರಿ ಕಾಂಚಿಯ ಪುರವ ಬೈಚಿಟ್ಟಿರಿ ಕೈಲಾಸವ ನಿಮ್ಮ ಚಿಕ್ಕುಟಾಧಾರದಲ್ಲಿ ಈರೇಳು ಭುವನಂಗಳೆಲ್ಲವೂ ನಿಮ್ಮ ರೋಮಕೂಪದಲ್ಲಡಗಿದವು ಪ್ರಾಣಾಪಾನ ವ್ಯಾನೋದಾನ ಸಮಾನರಹಿತ ಗುಹೇಶ್ವರ. ೯೪. ತ್ರಿವಿಧ ನಿತ್ಯವ ತ್ರಿವಿಧ ಅನಿತ್ಯವ ಬಲ್ಲವರಾರೋ ? ತ್ರಿವಿಧಕ್ಕೆ ತ್ರಿವಿಧವನಿತ್ತು ತ್ರಿವಿಧಪ್ರಸಾದದ ಕೊಳಬಲ್ಲಡೆ ಆತನ ಧೀರನೆಂಬೆ ! ಆತನ ಗುಹೇಶ್ವರಲಿಂಗದಲ್ಲಿ ಅಚ್ಚಪ್ರಸಾದಿಯೆಂಬೆ ! ೯೫. ಬೇಡದ ಮುನ್ನ ಮಾಡಬಲ್ಲಡೆ ಭಕ್ತ ಬೇಡುವನೆ ಲಿಂಗಜಂಗಮ ? ಬೇಡುವರಿಗೆಯೂ ಬೇಡಿಸಿಕೊಂಬವರಿಗೆಯೂ ಪ್ರಸಾದವಿಲ್ಲ ಗುಹೇಶ್ವರ. ೯೬. ಒಳಗ ತೊಳ

ಅಲ್ಲಮಪ್ರಭುವಿನ ವಚನಗಳು : 81 ರಿಂದ 90

ಅಲ್ಲಮಪ್ರಭುವಿನ ವಚನಗಳು : 81 ರಿಂದ 90 ೮೧. ಮಜ್ಜನಕ್ಕೆಱೆವರೆಲ್ಲಾ ಇದ್ದಲ್ಲಿ ಫಲವೇನು ? ಮುದ್ರೆಧಾರಿಗಳಪ್ಪರಯ್ಯ ! ಲಿಂಗದಲ್ಲಿ ನಿಷ್ಠೆಯಿಲ್ಲ ಜಂಗಮದಲ್ಲಿ ಪ್ರೇಮಿಗಳಲ್ಲ ವೇಷಲಾಂಛನಧಾರಿಗಳಪ್ಪರಯ್ಯ ! ನೋಡಿ ಮಾಡುವ ಭಕ್ತಿ ಸಜ್ಜನಸಾರಾಯವಲ್ಲ ಗುಹೇಶ್ವರ ಮೆಚ್ಚನಯ್ಯ ! ೮೨. ಕೊಟ್ಟ ಕುದುರೆಯನೇಱಲಱಿಯದೆ ಮತ್ತೊಂದು ಕುದುರೆಯ ಬಯಸುವರು ವೀರರೂ ಅಲ್ಲ ! ಧೀರರೂ ಅಲ್ಲ !! ಇದು ಕಾರಣ ನೆಱೆ ಮೂಱು ಲೋಕವೆಲ್ಲವೂ ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ ಗುಹೇಶ್ವರನೆಂಬ ಲಿಂಗವನವರೆತ್ತಬಲ್ಲರೋ ? ೮೩. ಜೀವವಿಲ್ಲದ ಹೆಣನ ಹಿಡಿದಾರುವರಯ್ಯ ಪ್ರತಿಯಿಲ್ಲದ ಪ್ರತಿಗೆ ಪ್ರತಿಯ ಮಾಡುವರಯ್ಯ ಶಿರವಿಲ್ಲದ ಮುಂಡಕ್ಕೆ ಸೇಸೆಯನಿಕ್ಕುವರು ಗುಹೇಶ್ವರ ! ೮೪. ಆದ್ಯರಲ್ಲ ! ವೇದ್ಯರಲ್ಲ ! ಸಾಧ್ಯರಲ್ಲದ ಹಿರಿಯರ ನೋಡಾ ! ತನುವಿಕಾರ ! ಮನವಿಕಾರ ! ಇಂದ್ರಿಯವಿಕಾರದ ಹಿರಿಯರ ನೋಡಾ ! ಶಿವಚಿಂತೆ ಶಿವಜ್ಞಾನಿಗಳ ಕಂಡರೆ ಅಳವಾಡಿ ನುಡಿವರು ಗುಹೇಶ್ವರನಱಿಯದ ಕರ್ಮಿಗಳಯ್ಯ ! ೮೫. ಆಳವಱಿಯದ ಭಾಷೆ ಬಹುಕುಳವಾದ ನುಡಿ ಇಂತೆರಡಱ ನುಡಿ ಹುಸಿಯಯ್ಯ ! ಬಹುಭಾಷಿತರು, ಸುಭಾಷಿತವರ್ಜಿತರು "ಶರಣಸತಿ ಲಿಂಗಪತಿ" ಎಂಬರು ಹುಸಿಯಯ್ಯ ! ಇಂತಪ್ಪವರ ಕಂಡು ನಾಚಿದೆನಯ್ಯ ಗುಹೇಶ್ವರ. ೮೬. ದೇಶ ಗುಱಿಯಾಗಿ ಲಯವಾಗಿ ಹೋದವರ ಕಂಡೆ ! ತಮಂಧ ಗುಱಿಯಾಗಿ ಲಯವಾಗಿ ಹೋದವರ ಕಂಡೆ ! ಕಾಮ ಗುಱಿಯಾಗಿ ಬೆಂದುಹೋದವರ ಕಂಡೆ ! ನೀ

ಅತ್ತಿತ್ತ ನೋಡದಿರು by MD Pallavi

ದೀಪು ನಿನ್ನದೇ

hinde hege

ಅಕ್ಕನ ವಚನಗಳು - 191 ರಿಂದ 200 ರವರೆಗೆ

೧೯೧. ಆವ ವಿದ್ಯೆಯ ಕಲಿತಡೇನು ಶವ ವಿದ್ಯೆ ಮಾಣದನ್ನಕ? ಅಶನವ ತೊಡೆದಡೇನು? ವ್ಯಸನವ ಮರೆದೆಡೇನು? ಉಸಿರಗಿಡಿದರೇನು? ಬಸಿರ ಕಟ್ಟಿದರೇನು? ಚೆನ್ನಮಲ್ಲಿಕಾರ್ಜುನದೇವಯ್ಯ ನೆಲದಳವಾರನಾದಡೆ ಕಳ್ಳನೆಲ್ಲಿ ಅಡಗುವ? ೧೯೨. ಹಡೆವುದರಿದು ನರಜನ್ಮವ ಹಡೆವುದರಿದು ಗುರುಕಾರುಣ್ಯವ ಹಡೆವುದರಿದು ಲಿಂಗಜಂಗಮಸೇವೆಯ ಚೆನ್ನಮಲ್ಲಿಕಾರ್ಜುನಯ್ಯನ ಶರಣ ಸಂಗದಲ್ಲಿ ನಲಿದಾಡು ಕಂಡೆಯಾ ಎಲೆ ಮನವೇ ೧೯೩. ಮಾಟಕೂಟ ಬಸವಣ್ಣಂಗಾಯಿತ್ತು ನೋಟಕೂಟ ಪ್ರಭುದೇವರಿಗಾಯಿತ್ತು ಭಾವಕೂಟ ಅಜಗಣ್ಣಂಗಾಯಿತ್ತು ಸ್ನೇಹಕೂಟ ಬಾಚಿರಾಜಂಗಾಯಿತ್ತು ಇವರೆಲ್ಲರ ಕೂಟ ಬಸವಣ್ಣಂಗಾಯಿತ್ತು ಎನಗೆ ನಿಮ್ಮಲ್ಲಿ ಅವಿರಳದ ಕೂಟ ಚೆನ್ನಮಲ್ಲಿಕಾರ್ಜುನಯ್ಯ ೧೯೪. ಮಾಟಕೂಟದಲ್ಲಿ ಬಸವಣ್ಣನಿಲ್ಲ ನೋಟಕೂಟದಲ್ಲಿ ಪ್ರಭುದೇವರಿಲ್ಲ ಭಾವಕೂಟದಲ್ಲಿ ಅಜಗಣ್ಣನಿಲ್ಲ ಸ್ನೇಹಕೂಟದಲ್ಲಿ ಬಾಚಿರಾಜನಿಲ್ಲ ಇವರೆಲ್ಲರ ಕೂಟದಲ್ಲಿ ಬಸವಣ್ಣನಿಲ್ಲ ಎನಗಿನ್ನೇವೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ? ೧೯೫. ಕದಳಿಯೆಂಬುದು ತನು! ಕದಳಿಯೆಂಬುದು ಮನ! ಕದಳಿಯೆಂಬುದು ವಿಷಯಂಗಳು ಕದಳಿಯೆಂಬುದು ಭವಘೋರಾರಣ್ಯ ಕದಳಿಯೆಂಬುದ ಗೆದ್ದು ತವ ಬದುಕೆ ಬಂದು ಕದಳಿಯ ಬನದಲ್ಲಿ ಭವಹರನ ಕಂಡೆನು ಭವಗೆಟ್ಟು ಬಂದ ಮಗಳೆಂದು ಕರುಣದಿಂ ತೆಗೆದು ಬಿಗಿಯಪ್ಪಿದರೆ ಚೆನ್ನಮಲ್ಲಿಕಾರ್ಜುನನ ಹೃದಯಕಮಲದಲ್ಲಿ ಅಡಗಿದೆನು ೧೯೬. ಕರ್

ಅಕ್ಕನ ವಚನಗಳು - 181 ರಿಂದ 190 ರವರೆಗೆ

೧೮೧. ಗಟ್ಟಿದುಪ್ಪಕ್ಕೆ ತಿಳಿದುಪ್ಪಕ್ಕೆ ಭೇದವುಂಟೇ ಅಯ್ಯ? ದೀಪಕ್ಕೆ ದೀಪ್ತಿಗೆ ಭೇದವುಂಟೇ ಅಯ್ಯ? ಆತ್ಮಕ್ಕೆ ಅಂಗಕ್ಕೆ ಭೇದವುಂಟೇ ಅಯ್ಯ ಎನ್ನಂಗವನು ಶ್ರೀಗುರು ಮಂತ್ರವ ಮಾಡಿ ತೋರಿದನಾಗಿ ಸಾವಯವಕ್ಕೆ ನಿರವಯವಕ್ಕೆ ಭಿನ್ನವಿಲ್ಲವಯ್ಯ! ಚೆನ್ನಮಲ್ಲಿಕಾರ್ಜುನದೇವರ ಬೆರೆಸಿ ಮತಿಗೆಟ್ಟವಳ ಏನ ನುಡಿಸುವಿರಯ್ಯ? ೧೮೨. ಕೆಂಡವ ಶವದಂತೆ ಸೂತ್ರ ತಪ್ಪಿದ ಬೊಂಬೆಯಂತೆ ಜಲವರತ ತಟಾಕದಂತೆ ಬೆಂದ ನುಲಿಯಂತೆ- ಮತ್ತೆ ಹಿಂದಣಂಗ ಉಂಟೇ ಅಣ್ಣ ಚೆನ್ನಮಲ್ಲಿಕಾರ್ಜುನನಂಗವೇ ಆಶ್ರಯವಾದವಳಿಗೆ?! ೧೮೩. ಫಲ ಒಳಗೆ ಪಕ್ವವಾಗಿಯಲ್ಲದೆ ಹೊರಗಣ ಸಿಪ್ಪೆ ಒಪ್ಪಗೆಡದು ಕಾಮನ ಮುದ್ರೆಯ ಕಂಡು ನಿಮಗೆ ನೋವಾದೀತೆಂದು ಆ ಭಾವದಿಂದ ಮುಚ್ಚಿದೆ ಇದಕೆ ನೋವೇಕೆ? ಕಾಡದಿರಣ್ಣ ಚೆನ್ನಮಲ್ಲಿಕಾರ್ಜುನದೇವನ ಒಳಗಾದವಳ ೧೮೪. ನಾಣ ಮರೆಯ ನೂಲು ಸಡಿಲೆ ನಾಚುವರು ನೋಡಾ ಗಂಡು-ಹೆಣ್ಣೆಂಬ ಜಾತಿ ಪ್ರಾಣದೊಡೆಯ ಜಗದೊಳಗೆ ಮುಳುಗುತ್ತ ತೆರಹಿಲ್ಲದಿರಲು ದೇವರ ಮುಂದೆ ನಾಚಲುಂಟೆ? ಚೆನ್ನಮಲ್ಲಿಕಾರ್ಜುನಂಗೆ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು ಮುಚ್ಚಿ ಮೆರೆಸಬಹುದೆ ಹೇಳಯ್ಯ ೧೮೫. ಎಲ್ಲಿ ಹೋದರೂ ಕಲಿಗೆ ಭಯವಿಲ್ಲ ಹಂದೆಗೆ ಸುಖವಿಲ್ಲ ಕೇಳಿರಣ್ಣ! ಈವಂಗವಗುಣವಿಲ್ಲ, ಕರುಣ ಉಳ್ಳವಂಗೆ ಪಾಪವಿಲ್ಲ ಇನ್ನು ಪರಧನ-ಪರಸ್ತ್ರೀಯ ತೊರೆದಾತಂಗೆ ಮುಂದೆ ಭವವಿಲ್ಲ, ಚೆನ್ನಮಲ್ಲಿಕಾರ್ಜುನ

ಅಕ್ಕನ ವಚನಗಳು - 171 ರಿಂದ 180 ರವರೆಗೆ

೧೭೧. ಮರ ಮರ ಮಥನಿಸಿ ಕಿಚ್ಚು ಹುಟ್ಟಿ ಸುತ್ತಣ ತರುಮರಾದಿಗಳ ಸುಡಲಾಯಿತ್ತು ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು ಇಂತಪ್ಪ ಮಹಾನುಭಾವರ ಅನುಭಾವವ ತೋರಿ ಎನ್ನನುಳುಹಿಕೊಳ್ಳಾ, ಚೆನ್ನ ಮಲ್ಲಿಕಾರ್ಜುನ ೧೭೨. ಸಂಗದಿಂದಲ್ಲದೇ ಅಗ್ನಿ ಹುಟ್ಟದು ಸಂಗದಿಂದಲ್ಲದೇ ಬೀಜ ಮೊಳೆದೋರದು ಸಂಗದಿಂದಲ್ಲದೇ ದೇಹವಾಗದು ಸಂಗದಿಂದಲ್ಲದೇ ಸರ್ವಸುಖದೋರದು ಚೆನ್ನಮಲ್ಲಿಕಾರ್ಜುನದೇವಯ್ಯ, ನಿಮ್ಮ ಶರಣರ ಅನುಭವದ ಸಂಗದಿಂದಾನು ಪರಮಸುಖಿಯಯ್ಯಾ ೧೭೩. ಶಿವಭಕ್ತನ ಮನೆಯಂಗಳ ವಾರಣಾಸಿ ಎಂಬುದು ಹುಸಿಯೆ? ಶಿವಭಕ್ತನ ಮನೆಯಂಗಳದಲ್ಲಿ ಅಷ್ಟಷಷ್ಟಿ ತೀರ್ಥಂಗಳು ನೆಲಸಿಪ್ಪವಾಗಿ ಸುತ್ತಿಬರಲು ಶ್ರೀಶೈಲ, ಕಲಬಲದಲ್ಲಿ ಕೇದಾರ, ಅಲ್ಲಿಂದ ಹೊರಗೆ ಶ್ರೀ ವಾರಣಾಸಿ ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ ಎನ್ನ ದೇವ ಚೆನ್ನಮಲ್ಲಿಕಾರ್ಜುನ, ನಿಮ್ಮ ಭಕ್ತನ ಮನೆಯಂಗಳ ವಾರಣಾಸಿಯಿಂದಧಿಕ ನೋಡಾ! ೧೭೪. ಕಾಮನ ಗೆಲಿದೆನು, ಬಸವ, ನಿಮ್ಮ ದಯೆಯಿಂದ ಸೋಮಧರನ ಹಿಡಿಪ್ಪೆತನು, ಬಸವ, ನಿಮ್ಮ ಕೃಪೆಯಿಂದ ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು? ಭಾವಿಸಲು ಗಂಡು-ರೂಪು, ಬಸವ, ನಿಮ್ಮ ದಯದಿಂದದ ಅತಿಕಾಮಿ ಚೆನ್ನಮಲ್ಲಿಕಾರ್ಜುನಯ್ಯಂಗೆ ತೊಡರನಿಕ್ಕಿ ಎರಡರಿಯೆದೆ ಕೂಡಿದೆನು, ಬಸವ, ನಿಮ್ಮ ಕೃಪೆಯಿಂದ ೧೭೫. ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ ಮನದ ಭಂಗವ ಅರಿವಿನ ಮುಖದಿಂದ ಗೆಲಿದೆ ಜೀವದ ಭಂಗವ ಶಿವಾನುಭವದಿಂದ ಗೆಲಿದೆ

ಅಕ್ಕನ ವಚನಗಳು - 161 ರಿಂದ 170 ರವರೆಗೆ

೧೬೧. ಆಯತ-ಸ್ವಾಯತ-ಅನುಭಾವವ ನಾನೆತ್ತ ಬಲ್ಲೆನಯ್ಯಾ ಗುರು-ಲಿಂಗ-ಜಂಗಮಕ್ಕೆ ಅರ್ಥಪ್ರಾಣಾಭಿಮಾನಂಗಳನಿತ್ತ ನಿನ್ನ ಭಕ್ತರ ಭೃತ್ಯರಿಗಾಳಾಗಿಪ್ಪೆನಯ್ಯಾ ನಿಮ್ಮ ಶರಣರ ಸಂಗವನಲ್ಲದೆ ಬೇರೊಂದ ಬಯಸೆನಯ್ಯ ಚೆನ್ನಮಲ್ಲಿಕಾರ್ಜುನ ೧೬೨. ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ [ಕೂರುಮ ದಿಗುದಂತಿ] ದಿಗುವಳಯವ ನುಂಗಿ ನಿಜ ಶೂನ್ಯ ತಾನಾದ ಬಳಿಕ ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬರಬಹುದೇ? ಕಂಗಳ ನೋಟದಲ್ಲಿ ಮನ ಸೊಗಸಿನಲ್ಲಿ ಅನಂಗನ ಧಾಳಿಯನಗಲಿದೆವಣ್ಣ ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಗೊಳಗಹುದೇ? ಎನ್ನ ದೇವ ಚೆನ್ನಮಲ್ಲಿಕಾರ್ಜುನನಲ್ಲದ ಪರಪುರುಷರು ನಮಗಾಗದಣ್ಣ! ೧೬೩. ನಮಗೆ ನಮ್ಮ ಲಿಂಗದ ಚಿಂತೆ ನಮಗೆ ನಮ್ಮ ಭಕ್ತರ ಚಿಂತೆ, ಮನಗೆ ನಮ್ಮ ಆದ್ಯರ ಚಿಂತೆ ನಮಗೆ ನಮ್ಮ ಚೆನ್ನಮಲ್ಲಿಕಾರ್ಜುನನ ಚಿಂತೆಯಲ್ಲದೆ ಲೋಕದ ಮಾತು ನಮಗೇಕಣ್ಣ? ೧೬೪. ನಿಮ್ಮ ನಿಲುವಿಂಗೆ ನೀವು ನಾಚಬೇಡವೆ? ಅನ್ಯರ ಕೈಲಿ ಅಲ್ಲ ಎನಿಸಿಕೊಂಬ ನಡೆ-ನುಡಿಯೇಕೆ? ಅಲ್ಲ ಎನಿಸಿಕೊಂಬುದರಿಂದ, ಆ ಕ್ಷಣವೇ ಸಾವುದು ಲೇಸು ಕಾಣಾ ಚೆನ್ನಮಲ್ಲಿಕಾರ್ಜುನ ೧೬೫. ಶಿವಭಕ್ತರ ರೋಮ ನೊಂದರೆ ಒಡನೆ ಶಿವನು ನೋವ ನೋಡಾ ಶಿವಭಕ್ತರು ಪರಿಣಾಮಿಸಿದರೆ, ಒಡನೆ ಶಿವ ಪರಿಣಆಮಿಸುವ ನೋಡಾ ! ಭಕ್ತದೇಹಿಕ ದೇವ ಎಂಬ ಶ್ರುತಿ ಹೊಗಳುವ ಕಾರಣ ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು ತಾಯಿ ನೊಂದರೆ ಒಡಲ ಶಿಶು ನೋವ ತೆರನಂತೆ ಚೆನ್ನಮಲ್ಲಿಕಾರ್ಜುನ-ತನ್ನ ಭಕ್ತ

ಅಕ್ಕನ ವಚನಗಳು - 151 ರಿಂದ 160 ರವರೆಗೆ

೧೫೧. ಎನ್ನಂಗದಲಿ ಆಚಾರವ ತೋರಿದನಯ್ಯ ಬಸವಣ್ಣನು [ಆ] ಆಚಾರವೇ ಲಿಂಗವೆಂದರುಹಿದನಯ್ಯ ಬಸವಣ್ಣನು ಎನ್ನ ಪ್ರಾಣದಲ್ಲಿ ಅರುಹ ತೋರಿದನಯ್ಯ ಬಸವಣ್ಣನು ಆ ಅರುಹೇ ಜಂಗಮವೆಂದರುಹಿದನಯ್ಯ ಬಸವಣ್ನನು [ಚೆನ್ನಮಲ್ಲಿಕಾರ್ಜುನ] [ಎನ್ನ] ಹೆತ್ತ ತಂದೆ ಸಂಗಬಸವಣ್ನನು ಎನಗೀ ಕ್ರಮವನರುಹಿದನಯ್ಯ ೧೫೨. ಗಂಗೆಯೊಡನಾಡಿದ ಗಟ್ಟ-ಬೆಟ್ಟಂಗಳು ಕೆಟ್ಟ ಕೇಡ ನೋಡಯ್ಯ ಅಗ್ನಿಯೊಡನಾಡಿದ ಕಾಷ್ಟಂಗಳು ಕೆಟ್ಟ ಕೇಡ ನೋಡಯ್ಯ ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಯ್ಯ ಇಂತೀ ಪರಶಿವಮೂರ್ತಿ ಹರನೇ ನಿಮ್ಮ ಜಂಗಮಲಿಂಗದೊಡನಾಡಿ ಎನ್ನ ಭವಾದಿಭವಂಗಳು ಕೆಟ್ಟ ಕೇಡ ನೋಡಾ ಚೆನ್ನಮಲ್ಲಿಕಾರ್ಜುನ ೧೫೩. ಮರ್ತ್ಯಲೋಕದ ಭಕ್ತರ ಮನವ ಬೆಳಗಲೆಂದು ಇಳಿತಂದನಯ್ಯ ಶಿವನು ಕತ್ತಲೆಯ ಪಾತಾಳವ ರವಿ ಹೊಕ್ಕಂತಾಯಿತಯ್ಯ ಚಿತ್ತದ ಪ್ರವೃತ್ತಿಯ ಹಿಂಗಿಸಿ ಮುಕ್ತಿಪಥವ ತೋರಿದನಲ್ಲಾ ಅಸಂಖ್ಯಾತರುಗಳಿಗೆ ತನುವೆಲ್ಲ ಸ್ವಯಂಲಿಂಗ, ಮನವೆಲ್ಲ ಚರಲಿಂಗ ಭಾವವೆಲ್ಲ ಮಹಾಘನದ ಬೆಳಗು ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣಸಮ್ಯಜ್ಞಾನಿ ಚೆನ್ನಬಸವಣ್ಣನ ಶ್ರೀಪಾದಕ್ಕೆ ಶರಣೆಂದು ಎನ್ನ ಭಾವಂ ನಾಸ್ತಿಯಾಯಿತ್ತಯ್ಯ ಪ್ರಭುವೇ ೧೫೪. ಕಲ್ಯಾಣವೆಂಬುದಿನ್ನಾರಿಗೂ ಹೊಗಬಾರದು ಆಶೆ-ಆಮಿಷವನಳಿದವಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು ಒಳಗು-ಹೊರಗೂ ಶುದ್ಧವಾದಂಗಲ್ಲದೆ ಕಲ್ಯಾಣವ ಹೊಗಬಾರದು ನಾನೆಂಬುದು ಹರಿದವಂಗಲ್ಲದೆ ಕಲ್ಯಾಣವ ಹೊಗಬಾರದು ಒಳಗು ತಿಳಿದು ಚೆನ್ನಮಲ್ಲಿಕಾರ್ಜುನಂಗೊಲಿದು

ಅಕ್ಕನ ವಚನಗಳು - 141 ರಿಂದ 150 ರವರೆಗೆ

೧೪೧. ಐದು ಪರಿಯ ಬಣ್ಣವ ತಂದುಕೊಟ್ಟರೆ ನಾಲ್ಕು ಮೊಲೆಯ ಹಸುವಾಯಿತ್ತು ಹಸುವಿನ ಬಸರಲ್ಲಿ ಕರು ಹುಟ್ಟಿತ್ತು ಕರುವ ಮುಟ್ಟಲೀಯದೆ ಹಾಲು ಕರೆದುಕೊಂಡರೆ ಕರ ರುಚಿಯಾಗಿತ್ತು ಮಧುರ ತಲೆಗೇರಿ, ಅರ್ಥ ನೀಗಾಡಿ ಆ ಕರುವಿನ ಬೆಂಬಳಿವಿಡಿದು ಭವ ಹರಿಯಿತ್ತು ಚೆನ್ನಮಲ್ಲಿಕಾರ್ಜುನ ೧೪೨. ರವಿಯ ಕಾಳಗವ ಗೆಲಿದು ಒಂಬತ್ತು ಬಾಗಿಲ ಮುರಿದು ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ ಅಲ್ಲ-ಅಹುದು, ಉಂಟು-ಇಲ್ಲ, ಬೇಕು-ಬೇಡ ಎಂಬ ಆರರತಾತನೇ ಗುರು ಗುರು ತಾನೇ ಬೇರಿಲ್ಲ ದ್ವಯಕಮಲದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣ ಸಂಗನ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು ೧೪೩. ಹುಟ್ಟದ ಯೋನಿಯಲ್ಲಿ ಹುಟ್ಟಿಸಿ, ಬಾರದ ಭವಂಗಳಲಿ ಬರಿಸಿ, ಉಣ್ಣದ ಊಟವನುಣಿಸಿ ವಿಧಿಯೊಳಗಾಗಿಸುವ ಕೇಳಿರಣ್ಣ! ತನ್ನವರೆಂದರೆ ಮನ್ನಿಸುವನೇ ಶಿವನು? ಹತ್ತಿರಿದ್ದ ಭೃಂಗಿಯ ಚರ್ಮವ ಕಿತ್ತೀಡಾಡಿಸಿದನು ಮತ್ತೆ ಕೆಲವರ ಬಲ್ಲನೇ? ಇದನರಿದು ಬಿಡದಿರು ಚೆನ್ನಮಲ್ಲಿಕಾರ್ಜುನನಿಂತಹ ಸಿತಗನವ್ವ! ೧೪೪. ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ ಐವರು ಮಕ್ಕಳು ಜನಿಸಿದರೆಂತೆಂಬೆ?! ಒಬ್ಬ ಭಾವದರೂಪ, ಒಬ್ಬ ಪ್ರಾಣದರೂಪ, ಒಬ್ಬನೈಮುಖನಾಗಿ ವಿಶ್ವಕ್ಕೆ ಕಾಯರೂಪಾದ ಇಬ್ಬರು ಉತ್ಪತ್ತಿಸ್ಥಿತಿಗೆ ಕಾರಣರಾದರು ಐಮುಗನರಮನೆ ಸುಖವಿಲ್ಲೆಂದರಿದವನಾಗಿ ಇನ್ನು ಕೈಲಾಸವನು ಹೊಗೆ ಹೊಗೆ! ಮರ್ತ್ಯಕ್ಕೆ ಅಡಿಯಿಡೆನು ಚೆನ್ನಮಲ್ಲಿಕಾರ್ಜುನದೇವ ನೀನೆ ಸಾ

ಅಕ್ಕನ ವಚನಗಳು - 131 ರಿಂದ 140 ರವರೆಗೆ

೧೩೧. ದೃಶ್ಯವಾದ ರವಿಯ ಬೆಳಗು, ಆಕಾಶದ ವಿಸ್ತೀರ್ಣ, ವಾಯುವಿನ ಚಲನೆ, ತರುಗುಲ್ಮಲತಾದಿಗಳಲ್ಲಿಯ ತಳಿರು ಪುಷ್ಪ ಷಡುವರ್ಣಂಗಳೆಲ್ಲ ಹಗಲಿನ [ಪೂಜೆ] ಚಂದ್ರಪ್ರಕಾಶ, ನಕ್ಷತ್ರ, ಅಗ್ನಿ, ವಿದ್ಯುದ್ ಆದಿಗಳು ದೀಪ್ತಿಮಯವೆನಿಸಿಪ್ಪುವುಗಳೆಲ್ಲ ಇರುಳಿನ ಪೂಜೆ; ಹಗಲಿರುಳು ನಿನ್ನ ಪೂಜೆಯಲ್ಲಿ ಎನ್ನ ಮರೆದಿಪ್ಪೆನಯ್ಯ ಚೆನ್ನಮಲ್ಲಿಕಾರ್ಜುನ ೧೩೨. ಸಂಸಾರವ ನಿರ್ವಾಣವ ಮಾಡಿ, ಮನವ ವಜ್ರತುರಗವ ಮಾಡಿ, ಜೀವನ ರಾವುತನ ಮಾಡಿ, ಮೇಲಕ್ಕುಪ್ಪುವಡಿಸಲೀಯದೆ, ಮುಂದಕ್ಕೆ ಮುಗ್ಗರಿಸಲೀಯದೆ, ಈ ವಾರುವನ ದಳದ ಮೇಲೆ ಅಟ್ಟಿ ಮುಟ್ಟಿ ಹಾರಿ ಬರಸೆಳೆದು ನಿಲಿಸಲರಿಯದೆ ಪವನಬಣ್ಣದ ಕೇಸರಿಯ ತೊತ್ತಳದುಳಿವುತ್ತಿಪ್ಪುದಿದಾರಯ್ಯ? ಅಂಗಡಿಯ ರಾಜಬೀದಿಯೋಳಗೆ ರತ್ನಶೆಟ್ಟಿಯ ಮಾಣಿಕ್ಯ ಬಿದ್ದರೆ ಥಳಥಳನೆ ಹೊಳೆವ ಪ್ರಜ್ವಳಿತವ ಕಾಣದೆ ಹಳಹಳನೆ ಹಳಚುತ್ತಿಪ್ಪುದಿದಾರಯ್ಯ? ಹೃದಯಸ್ಥಾನದ ಧೂಪಗುಂಡಿಗೆಯಲ್ಲಿ ಆಧಾರಸ್ಥಾನದಿಂಗಳ ಮತ್ತೊಂದು ಬಂದು, ಪರಿಣಾಮವೆಂಬ ಧೂಪವನಿಕ್ಕಿ ವಾಯುವಿನ ಸಂಬಂಧವರಿಯದೆ ವಾಯುವ ಮೇಲಕ್ಕೆತ್ತಲು ಗಗನಕ್ಕೆ ತಾಗುವುದು, ತಾಗಲಿಕೆ ಅಲ್ಲಿರ್ದ ಅಮೃತದ ಕೊಡನೊಡೆದು ಕೆಳಗಣ ಹೃದಯಸ್ಥಾನದ ಮೇಲೆ ಬೀಳೆ, ಮರೆಸಿದ ಮಾಣಿಕ್ಯವ ಕಾಣಬಹುದು, ಇದನಾರು ಬಲ್ಲರೆಂದರೆ ಹಮ್ಮಳಿದು ಇಹಪರವನರಿದು ಪಂಚೇಂದ್ರಿಯದ ಇಂಗಿತವನರಿದ ಶರಣ ಬಸವಣ್ಣನಲ್ಲದೆ ಈ ಪ್ರಾಣಘಾತವ ಮಾಡುವರೆತ್ತ ಬಲ್ಲರಯ್ಯ, ಚೆನ್ನಮಲ್ಲಿಕಾರ್ಜುನ ೧೩೩. ಲಿಂಗಕ್ಕೆ ಶರಣೆಂದು ಪೂಜಿ

ಅಕ್ಕನ ವಚನಗಳು - 121 ರಿಂದ 130 ರವರೆಗೆ

೧೨೧. ಹಸಿವೇ ನೀನು ನಿಲ್ಲು, ನಿಲ್ಲು, ತೃಷೆಯೇ ನೀನು ನಿಲ್ಲು ನಿಲ್ಲು ನಿದ್ರೆಯೇ ನೀನು ನಿಲ್ಲು ನಿಲ್ಲು, ಕಾಮವೇ ನೀನು ನಿಲ್ಲು ನಿಲ್ಲು ಕ್ರೋಧವೇ ನೀನು ನಿಲ್ಲು ನಿಲ್ಲು, ಮೋಹವೇ ನೀನು ನಿಲ್ಲು ನಿಲ್ಲು ಲೋಭವೇ ನೀನು ನಿಲ್ಲು ನಿಲ್ಲು, ಮದವೇ ನೀನು ನಿಲ್ಲು ನಿಲ್ಲು ಮಚ್ಚರವೇ ನೀನು ನಿಲ್ಲು ನಿಲ್ಲು, ಸಚರಾಚರವೇ ನೀನು ನಿಲ್ಲು ನಿಲ್ಲು ನಾನು ಚೆನ್ನಮಲ್ಲಿಕಾರ್ಜುನದೇವರ ಅವಸರದ ಓಲೆಯನೊಯ್ಯುತ್ತಲಿದ್ದೇನೆ ಶರಣಾರ್ಥಿ ೧೨೨. ಹೆದರದಿರು ಮನವೇ, ಬೆದರದಿರು ಮನವೇ ನಿಜವನರಿತು ನಿಶ್ಚಿಂತವಾಗಿರು ಫಲವಾದ ಮರನ ಇಡುವುದೊಂದು ಕೋಟಿ ಎಲವದ ಮರನ ಇಡುವರೊಬ್ಬರ ಕಾಣೆ ಭಕ್ತಿಯುಳ್ಳವರ ಬೈವರೊಂದು ಕೋಟಿ, ಭಕ್ತಿಯಿಲ್ಲದವ ಬೈವರೊಬ್ಬರ ಕಾಣೆ ನಿಮ್ಮ ಶರಣರ ನುಡಿಯೆ ಎನಗೆ ಗತಿಸೋಪಾನ, ಚೆನ್ನಮಲ್ಲಿಕಾರ್ಜುನ ೧೨೩. ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದರೆ ಕನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ! ಬೊಬ್ಬುಲಿಯನೇರಿದ ಮರ್ಕಟನಂತೆ ಹಣ್ಣ ಮೆಲಲಿಲ್ಲ, ಕುಳ್ಳಿರೆ ಠಾವಿಲ್ಲ! ನಾನು ಸರ್ವಸಂಗಪರಿತ್ಯಾಗ ಮಾಡಿದವಳಲ್ಲ ನಿಮ್ಮ ಕೂಡಿ ಕುಲವಳಿದವಳಲ್ಲ ಚೆನ್ನಮಲ್ಲಿಕಾರ್ಜುನ ೧೨೪. ಕೈಸಿರಿಯ ದಂಡವ ಕೊಳಬಹುದಲ್ಲದೆ ಮೈಸಿರಿಯ ದಂಡವ ಕೊಳಲುಂಟೆ? ಉಟ್ಟಂತ ಉಡಿಗೆತೊಡಿಗೆಯನೆಲ್ಲ ಸೆಳೆದುಕೊಳಬಹುದಲ್ಲದೆ ಮುಚ್ಚಿ ಮುಸುಕಿರ್ದ ನಿರ್ವಾಣವ ಸೆಳೆದುಲೊಳಬಹುದೇ? ಚೆನ್ನಮಲ್ಲಿಕಾರ್ಜುನದೇವರ ಬೆಳಗನುಟ್ಟು ಲಜ್ಜೆಗೆಟ್ಟವಳಿಗೆ ಉಡಿಗೆತೊಡಿಗೆಯ ಹಂಗೇಕೊ ಮರುಳ

ಅಕ್ಕನ ವಚನಗಳು - 111 ರಿಂದ 120 ರವರೆಗೆ

೧೧೧. ಭವಿಸಂಗವಳಿದು ಶಿವಭಕ್ತನಾದ ಬಳಿಕ ಭಕ್ತಂಗೆ ಭವಿಸಂಗವತಿ ಘೋರ ನರಕ ಶರಣಸತಿ-ಲಿಂಗಪತಿಯಾದ ಬಳಿಕ ಶರಣಂಗೆ ಸತಿಸಂಗವತಿಘೋರ ನರಕ ಚೆನ್ನಮಲ್ಲಿಕಾರ್ಜುನ, ಲಿಂಗೈಕ್ಯಂಗೆ ಪ್ರಾಣಗುಣವಳಿಯದವರ ಸಂಗವೇ ಭಂಗ ೧೧೨. ಹೂವು ಕಂದಿದಲ್ಲಿ ಪರಿಮಳವನರಸುವರೇ? [ಎನ್ನ ತಂದೆ] ಕಂದನಲ್ಲಿ ಕುಂದನರಸುವರೇ? ಎಲೆ ದೇವ, ಸ್ನೇಹವಿದ್ದ ಠಾವಿನೊಳು ದ್ರೋಹವಾದ ಬಳಿಕ ಮರಳಿ ಸದ್ಗುಣವನರಸುವರೇನಯ್ಯ? ನೀ ಎನ್ನ ತಂದೆ, ಹೂವು ಕಂದಿದಲ್ಲಿ [ಪರಿಮಳವನರಸುವರೇ?] ಕಂದನಲ್ಲಿ [ಕುಂದನರಸುವರೇ?] ಎಲೆ ದೇವ, ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೇ? ಗುರುವೇ ಹೂವು ಕಂದಿದಲ್ಲಿ [ಪರಿಮಳವನರಸುವರೇ?] [ಕಂದನಲ್ಲಿ ಕುಂದನರಸುವರೇ?] ಕೇಳಯ್ಯ ಶ್ರೀಶೈಲ ಚೆನ್ನಮಲ್ಲಿಕಾರ್ಜುನ, ಹೊಳೆಯಳಿದ ಬಳಿಕ ಅಂಬಿಗಂಗೇನುಂಟು? ಹೂವು ಕಂದಿದಲ್ಲಿ [ಪರಿಮಳವನರಸುವರೇ?] [ಕಂದನಲ್ಲಿ ಕುಂದನರಸುವರೇ?] ೧೧೩. ಕಂಗಳಲ್ಲಿ ಕಾಂಬೆನೆಂದು ಕತ್ತಲೆಯ ಹೊಕ್ಕುಡೆಂತಹುದಯ್ಯ? ಬೆಟ್ಟದ ತುದಿಯ ಮೆಟ್ಟಿಲೆಂದು ಹಳ್ಳಕೊಳ್ಳಂಗಳಲ್ಲಿ ಇಳಿದೊಡೆಂತಹುದಯ್ಯ? ನೀನಿಕ್ಕಿದ ಸಯಿದಾನವನೊಲ್ಲದೆ ಬೇರೆ ಬಯಸಿದೊಡೆಂತಹುದಯ್ಯ? ಚೆನ್ನಮಲ್ಲಿಕಾರ್ಜುನನ ಘನವನರಿಯಲೆಂದು ಕಿರುಕುಳಕ್ಕೆ ಸಂದೊಡೆಂತಹುದಯ್ಯ? ೧೧೪. ಒಳಗಣ ಗಂಡನವ್ವಾ, ಹೊರಗಣ ಮಿಂಡನವ್ವಾ! ಎರಡನೂ ನಡೆಸಲು [ಬಾರದವ್ವ]! ಚೆನ್ನಮಲ್ಲಿಕಾರ್ಜುನಯ್ಯ, ಬಿಲ್ಲು [ಬೆಳವಲಕಾಯನೊಂದಾಗಿ] ಹಿಡಿಯಲು ಬಾರದಯ್ಯ!! ೧೧೫. ಚಿನ್ನಕ್ಕರಿಸಿನ ಚಿನ್ನಕ್

ಅಕ್ಕನ ವಚನಗಳು - 101 ರಿಂದ 110 ರವರೆಗೆ

೧೦೧. ಕಂಗಳೊಳಗೆ ತೊಳಗಿ ಬೆಳಗುವ ದಿವ್ಯರೂಪನ ಕಂಡು ಮೈಮರೆದೆನವ್ವ ಮಣಿಮುಕುಟದ ಫಣಿ-ಕಂಕಣದ ನಗೆಮೊಗದ ಸುಲಿಪಲ್ಲ ಸೊಬಗನ ಕಂಡು ಮನಸೋತೆನವ್ವ ಇಂತಾಗಿ ಚೆನ್ನಮಲ್ಲಿಕಾರ್ಜುನನೆನ್ನ ಮದುವಣಿಗ ಆನು ಮದುವಣಿಗಿ ಕೇಳಾ ತಾಯೆ ೧೦೨. ಮನಮನ ತಾರ್ಕಣೆಯ ಕಂಡು ಅನುಭವಿಸಲು ನೆನಹೇ ಘನವಹುದಲ್ಲದೆ ಅದು ಹವಣದಲ್ಲಿ ನಿಲ್ಲುವುದೇ? ಎಲೆ ಅವ್ವ, ನೀನು ಮರುಳವ್ವೆ! ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಗೊಲಿದು ಸಲೆ ಮಾರುವೋದೇನು ನಿನ್ನ ತಾಯಿತನವನೊಲ್ಲೆ ಹೋಗೇ! ೧೦೩. ಲಿಂಗವನೂ ಪುರಾತನರನೂ ಅನ್ಯರ ಮನೆಯೊಳಯಿಂಕೆ ಹೋಗಿ ಹೊಗಳುವರು ತಮ್ಮದೊಂದು ಉದರ ಕಾರಣ ಲಿಂಗವೂ ಪುರಾತನರೂ ಅಲ್ಲಿಗೆ ಬರಬಲ್ಲರೆ? ಅನ್ಯವನೆ ಮರೆದು, ನಿಮ್ಮ ನೆನೆವರ ಎನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನಯ್ಯ! ೧೦೪. ಗುಣ-ದೋಷ ಸಂಪಾದನೆಯ ಮಾಡುವನ್ನಕ್ಕ ಕಾಮದ ಒಡಲು ಕ್ರೋಧದ ಗೊತ್ತು ಲೋಭದ ಇಕ್ಕೆ ಮೋಹದ ಮಣ್ದಿರ ಮದದಾವರಣ ಮತ್ಸರದ ಹೊದಿಕೆ ಆ ಭಾವವರತಲ್ಲದೆ ಚೆನ್ನಮಲ್ಲಿಕಾರ್ಜುನನ ಅರಿವುದಕ್ಕೆ ಇಂಬಿಲ್ಲ ಕಾಣಿರಣ್ಣ ೧೦೫. ಕಡೆಗೆ ಮಾಡದ ಭಕ್ತಿ ಧೃಡವಿಲ್ಲದಾಳುತನ ಮೃಡನೊಲಿಯ ಹೇಳಿದರೆ ಎಂತೊಲಿವನಯ್ಯ? ಮಾಡಲಾಗದಳಿಮನವ ಮಾಡಿದರೆ ಮನದೊಡೆಯ ಬಲ್ಲನೈಸೆ ವಿರಳವಿಲ್ಲದ ಮಣಿಯ ಪವಣಿಸಿಹೆನೆಂದೆಡೆ ದುರುಳ ಚೆನ್ನಮಲ್ಲಿಕಾರ್ಜುನಯ್ಯನೆಂತೊಲಿವನಯ್ಯ ೧೦೬. ಬೆಟ್ಟದ ಮೇಲೊಂದು ಮನೆಯ ಮ

ಅಕ್ಕನ ವಚನಗಳು - 91 ರಿಂದ 100 ರವರೆಗೆ

೯೧. ಇಹಕೊಬ್ಬ ಗಂಡನೆ? ಪರಕೊಬ್ಬ ಗಂಡನೆ? ಲೌಕಿಕಕ್ಕೊಬ್ಬ ಗಂಡನೆ? ಪಾರಮಾರ್ಥಕ್ಕೊಬ್ಬ ಗಂಡನೆ? ನನ್ನ ಗಂಡ ಚೆನ್ನಮಲ್ಲಿಕಾರ್ಜುನದೇವರಲ್ಲದೆ ಮಿಕ್ಕಿದ ಗಂಡರೆಲ್ಲ ಮುಗಿಲ ಮರೆಯ ಬಣ್ಣದ ಬೊಂಬೆಯಂತೆ ೯೨. ರತ್ನದ ಸಂಕೋಲೆಯಾದರೆ ತೊಡರಲ್ಲವೆ? ಮುತ್ತಿನ ಬಲೆಯಾದರೆ ಬಂಧನವಲ್ಲವೆ? ಚಿನ್ನದ ಕತ್ತಿಯಲ್ಲಿ ತಲೆಯ ಹೊಯ್ದರೆ ಸಾಯದಿಪ್ಪರೆ? ಲೋಕದ ಭಜನೆಯ ಭಕ್ತಿಯಲ್ಲಿ ಸಿಲುಕಿದರೆ ಜನನಮರಣ ಬಿಡುವುದೇ ಚೆನ್ನಮಲ್ಲಿಕಾರ್ಜುನ? ೯೩. ಎರದ ಮುಳ್ಳಿನಂತೆ ಪರಗಂಡರೆನಗವ್ವ ಸೋಂಕಲಮ್ಮೆ ಸುಳಿಯಲಮ್ಮೆ ನಂಬಿ ನೆಚ್ಚಿ ಮಾತಾಡಲಮ್ಮೆನವ್ವ ಚೆನ್ನಮಲ್ಲಿಕಾರ್ಜುನನಲ್ಲದುಳಿದ ಗಂಡರ ಉರದಲ್ಲಿ ಮುಳ್ಳುಂಟೆಂದು ನಾನಪ್ಪಲಮ್ಮೆನವ್ವ ೯೪. ಗುರುವಿನಿಂದ ಲಿಂಗವ ಕಂಡೆ, ಜಂಗಮವ ಕಂಡೆ ಗುರುವಿನಿಂದ ಪಾದೋದಕವ ಕಂಡೆ, ಪ್ರಸಾದವ ಕಂಡೆ ಗುರುವಿನಿಂದ ನನ್ನ ನಾ ಕಂಡೆ, ಚೆನ್ನಮಲ್ಲಿಕಾರ್ಜುನ ೯೫. ತರಳಿಯ ಹುಳು ತನ್ನ ಸ್ನೇಹಕ್ಕೆ ಮನೆಯ ಮಾಡಿ ತನ್ನ ನೂಲು ತನ್ನನೇ ಸುತ್ತಿ ಸಾವಂತೆ- ಎನಗೂ ಮನೆಯೇ? ಎನಗೂ ಧನವೇ? ಎನ್ನ ಮನೆಮಠ ಕನಸ ಕಂಡುಕಣ್ತೆರೆದಂತಾಯಿತ್ತು ಎನ್ನ ಮನದ ಸಂಸಾರವ ಮಾಣಿಸಾ ಚೆನ್ನಮಲ್ಲಿಕಾರ್ಜುನ ೯೬. ತನುವನುವಾಯಿತ್ತು, ಮನವನುವಾಯಿತ್ತು ಪ್ರಾಣವನುವಾಯಿತ್ತು ಮುನಿದು ಬಾರದ ಪರಿಯಿನ್ನೆಂತು ಹೇಳಾ! ಎನ್ನ ಪ್ರಾಣದಲ್ಲಿ ಸಂದು, ಎನ್ನ ಮನಕ್ಕೆ ಮನವಾಗಿ ನಿಂದ ಎನ್

ಅಕ್ಕನ ವಚನಗಳು - 81 ರಿಂದ 90 ರವರೆಗೆ

೮೧. ಅಯ್ಯ ದೂರದಲಿರ್ದೆಹೆಯೆಂದು ಬಾಯಾರಿ ಬಳಲುತ್ತಿದ್ದೆನಯ್ಯ ನಾನು ಅಯ್ಯ ಸಾರೆ ಬಂದು ನೀನೆನ್ನ ಕರಸ್ಥಲದಲಿ ಮೂರ್ತಿಗೊಂಡರೆ ಇನ್ನಾರತಿಯೆಲ್ಲ ನಿನ್ನಲ್ಲಿ ಲಿಂಗಯ್ಯ ಆಲಿ ನಿಮ್ಮಲ್ಲಿ ನೆಟ್ಟವು ನೋಡಯ್ಯ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮನೆನ್ನ ಕರಸ್ಥಲದಲ್ಲಿ ನೋಡಿ ನೋಡಿ ಕಂಗಳೇ ಪ್ರಾಣವಾಗಿದ್ದೆನಯ್ಯ ೮೨. ನಾನು ನಿನಗೊಲಿದೆ, ನೀನು ಎನಗೊಲಿದೆ ನೀನೆನ್ನನಗಲದಿಪ್ಪೆ, ನಾನಿನ್ನಗಲದಿಪ್ಪೆನಯ್ಯಾ ನಿನಗೆ ಎನಗೆ ಬೇರೊಂದು ಠಾವುಂಟೆ ನೀನು ಕರುಣಿಯೆಂಬುದು ಬಲ್ಲೆನು ನೀನಿರಿಸಿದ ಗತಿಯೊಳಗಿಪ್ಪವಳಾನು ನೀನೆ ಬಲ್ಲೆ ಚೆನ್ನಮಲ್ಲಿಕಾರ್ಜುನ ೮೩. ಅಯ್ಯ ನೀ ಕೇಳಿದರೆ ಕೇಳು, ಕೇಳದಿದ್ದರೆ ಮಾಣು ನಾ ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯ ಅಯ್ಯ ನೀನೊಲಿದರೆ ಒಲಿ, ಒಲಿಯದಿದ್ದರೆ ಮಾಣು ನಾ ನಿನ್ನ ಪೂಜಿಸಿದಲ್ಲದೆ ಸೈರಿಸಲಾರೆನಯ್ಯ ಅಯ್ಯ ನೀ ಮೆಚ್ಚಿದರೆ ಮೆಚ್ಚು, ಮೆಚ್ಚದಿದ್ದರೆ ಮಾಣು ನಾ ನಿನ್ನನಪ್ಪಿದಲ್ಲದೆ ಸೈರಿಸಲಾರೆನಯ್ಯ ಅಯ್ಯ ನೀ ನೋಡಿದರೆ ನೋಡು, ನೋಡದಿದ್ದರೆ ಮಾಣು ನಾ ನಿನ್ನ ನೋಡಿ ಹಿಗ್ಗಿ ಹಾರೈಸಿದಲ್ಲದೆ ಸೈರಿಸಲಾರೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ ನಾ ನಿಮ್ಮ ಪೂಜಿಸಿ ಹರುಷದಲೋಲಾಡುವೆನಯ್ಯ ೮೪. ಕಾಣುತ್ತ ಕಾಣುತ್ತ ಕಂಗಳ ಮುಚ್ಚಿದೆ ನೋಡವ್ವ ಕೇಳುತ್ತ ಕೇಳುತ್ತ ಮೈಮರೆದೊರಗಿದೆ ನೋಡವ್ವ ಹಾಸಿದ ಹಾಸಿಗೆ ಹಂಗಿಲ್ಲದೇ ಹೋಯಿತ್ತು ಕೇಳವ್ವ ಚೆನ್ನಮಲ್ಲಿಕಾರ್ಜುನ ದೇವರ ದೇವನಂ ಕೂಡುವ ಕೂಟವ ನಾನೇನಂದರಿಯದೇ ಮರೆದೆ

ಅಕ್ಕನ ವಚನಗಳು - 71 ರಿಂದ 80 ರವರೆಗೆ

೭೧. ಬಲ್ಲಿದ ಹಗೆಹ ತೆಗೆವನ್ನಬರ ಬಡವರ ಹರಣ ಹಾರಿ ಹೋದ ತೆರನಂತಾಯಿತ್ತು ನೀ ಕಾಡಿ ಕಾಡಿ ನೋಡವನ್ನಬರ ಎನಗಿದು ವಿಧಿಯೇ ಹೇಳಾ ತಂದೆ ! ತೂರುವಾರುವನ್ನಬರ ಒಮ್ಮೆ ಗಾಳಿಗೆ ಹಾರಿ ಹೋದ ತೆರನಂತಾಯಿತ್ತು ಎನಗೆ ನೀನಾವ ಪರಿಯಲ್ಲಿ ಕರುಣಿಸುವೆಯಯ್ಯ ಚೆನ್ನಮಲ್ಲಿಕಾರ್ಜುನ ? ೭೨. ಒಮ್ಮೆ ಕಾಮನ ಕಾಲಹಿಡಿವೆ, ಮತ್ತೂಮ್ಮೆ ಚಂದ್ರಮಂಗೆ ಸೆರಗೊಡ್ಡಿ ಬೇಡುವೆ ಸುಡಲೀ ವಿರಹವ ! ನಾನಾರಿಗೆ ಧೃತಿಗೆಡುವೆ ಚೆನ್ನಮಲ್ಲಿಕಾರ್ಜುನದೇವನೆನ್ನನೊಲ್ಲದ ಕಾರಣ ಎಲ್ಲರಿಗೆ ಹಂಗಿತಿಯಾದೆನವ್ವ ! ೭೩. ಚಿಲಿಮಿಲಿ ಎಂದೋದುವ ಗಿಳಿಗಳಿರಾ! ನೀವು ಕಾಣಿರೆ? ನೀವು ಕಾಣಿರೆ? ಸರವೆತ್ತಿ ಪಾಡುವ ಕೋಗಿಲೆಗಳಿರಾ ! ನೀವು ಕಾಣಿರೆ? ನೀವು ಕಾಣಿರೆ? ಎರಗಿ ಬಂದಾಡುವ ತುಂಬಿಗಳಿರಾ ! ನೀವು ಕಾಣಿರೆ? ನೀವು ಕಾಣಿರೆ? ಕೊಳನ ತಡಿಯಾಡುವ ಹಂಸಗಳಿರಾ ! ನೀವು ಕಾಣಿರೆ? ನೀವು ಕಾಣಿರೆ? ಗಿರಿಗಹ್ವರದೊಳಗಾಡುವ ನವಿಲುಗಳಿರಾ ! ನೀವು ಕಾಣಿರೆ? ನೀವು ಕಾಣಿರೆ? ಚೆನ್ನಮಲ್ಲಿಕಾರ್ಜುನನೆಲ್ಲಿದ್ದಹನೆಂಬುದ ಬಲ್ಲೆಡೆ ನೀವು ಹೇಳಿರೇ ! ೭೪. ಅಳಿಸಂಕುಳವೆ, ಮಾಮರವೇ, ಬೆಳದಿಂಗಳೇ, ಕೋಗಿಲೆಯೇ, ನಿಮ್ಮನ್ನೆಲ್ಲರನೂ ಒಂದು ಬೇಡುವೆನು ಎನ್ನೊಡೆಯ ಚೆನ್ನಮಲ್ಲಿಕಾರ್ಜುನ ದೇವರ ಕಂಡಡೆ ಕರೆದು ತೋರಿರೆ ೭೫. ವನವೆಲ್ಲ ನೀವೆ ವನದೊಳಗಣ ದೇವತರುವೆಲ್ಲ ನೀವೆ ತರುವಿನೊಳಗಾಡುವ ಖಗಮೃಗವೆಲ್ಲ ನೀವೆ ಚೆನ್ನಮಲ್ಲಿಕಾರ್ಜುನ ಸರ್ವಭರಿತನಾಗಿ ಎನಗೇಕೆ ಮುಖದೋರೆ?

ಅಕ್ಕನ ವಚನಗಳು - 61 ರಿಂದ 70 ರವರೆಗೆ

೬೧. ಪೃಥ್ವಿಯ ಗೆಲಿದ ಏಲೇಶ್ವರನ ನಾನು ಕಂಡೆ ಭಾವಭ್ರಮೆಯ ಗೆಲಿದ ಬ್ರಹ್ಮೇಶ್ವರನ ನಾನು ಕಂಡೆ ಸತ್ವ-ರಜ-ತಮ-ತ್ರಿವಿಧವ ಗೆಲಿದ ತ್ರಿಪುರಾಂತಕನ ಕಂಡೆ ಅಂತರಂಗ-ಆತ್ಮಜ್ಞಾನದಿಂದ ಜ್ಯೋತಿಸಿದ್ಧಯ್ಯನ ನಾನು ಕಂಡೆ ಇವರೆಲ್ಲರ ಮಧ್ಯಸ್ಥಾನ ಪ್ರಾಣಲಿಂಗವೆಂದು ಸುಜ್ಞಾನದಲ್ಲಿ ತೋರಿದ ಆ ಬಸವಣ್ಣನ ಪ್ರಸಾದದಿಂದ ಚೆನ್ನಮಲ್ಲಿಕಾರ್ಜುನನ ಕಂಡೆನಯ್ಯ ೬೨. ಅಪಾರ ಗಂಭೀರದ ಅಂಬುಧಿಯಲ್ಲಿ ತಾರಾಪಥವ ನೋಡಿ ನಡೆಯೆ ಭೈತ್ರದಿಂದ ದ್ವೀಪಾಂತರಕ್ಕೆ ಸಕಲಪದಾರ್ಥನವೆಯ್ದಿಸುವುದು ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ ತುರ್ಯಸಂಭಾಷಣೆಯನರಿದಡೆ ಮುನ್ನಿನಲ್ಲಿಗೆಯ್ದಿಸುವುದು ೬೩. ಕ್ರೀಯೊಳ್ಳುಡೊಂತೊಂದಾಸೆ ಸದ್ಭಕ್ತರ ನುಡಿಗಡಣ ಉಳ್ಳೊಡಂತೊಂದಾಸೆ ಶ್ರೀಗಿರಿಯನೇರಿ ನಿಮ್ಮ ಬೆರೆಸಿದರೆ ಎನ್ನಾಸೆಗೆ ಕಡೆಯೇ ಅಯ್ಯ? ಆವಾಸೆಯೂ ಇಲ್ಲದೆ ನಿಮ್ಮ ನಂಬಿ ಬಂದು ಕೆಟ್ಟೆನಯ್ಯ ೬೪. ಆರೂ ಇಲ್ಲದವಳೆಂದು ಅಳಿಗೊಳಲು ಬೇಡ ಕಂಡಯ್ಯ ಏನ ಮಾಡಿದೆಡೆಯೂ ನಾನಂಜುವಳಲ್ಲ! ತರಗೆಲೆಯ ಮೆಲಿದು ನಾನಿಹೆನು ಸುರಗಿಯ ಮೇಲೆರಗಿ ನಾನಿಹೆನು ಚೆನ್ನಮಲ್ಲಿಕಾರ್ಜುನಯ್ಯ ಕರ ಕಡೆ ನೋಡಿದಡೆ ಒಡಲನೂ ಪ್ರಾಣವನೂ ನಿಮಗೊಪ್ಪಿಸಿ ಶುದ್ಧಳಿಹೆನು ೬೫. ಕಿಡಿಕಿಡಿ ಕೆದರಿದಡೆ ಎನಗೆ ಹಸಿವು ತೃಷೆ ಅಡಗಿತ್ತೆಂಬೆನು ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು ಚೆನ್ನಮಲ್ಲಿಕಾರ್ಜುನಯ್ಯ, ಶಿರ ಹರಿದು ಬಿದ್ದಡೆ ಪ್ರಾಣ ನ