Skip to main content

ಬಸವಣ್ಣನ ವಚನಗಳು - 1 ರಿಂದ 10 ರವರೆಗೆ

ಬಸವಣ್ಣನ ವಚನಗಳು - 1 ರಿಂದ 10 ರವರೆಗೆ


೧.
ಉದಕದೊಳಗೆ ಬೈಚಿಟ್ಟ
ಬೈಕೆಯ ಕಿಚ್ಚಿನಂತೆ ಇದ್ದಿತ್ತು;
ಸಸಿಯೊಳಗಣ
ರಸದ ರುಚಿಯಂತೆ ಇದ್ದಿತ್ತು;
ನನೆಯೊಳಗಣ
ಪರಿಮಳದಂತೆ ಇದ್ದಿತ್ತು;
ಕೂಡಲಸಂಗಮದೇವರ ನಿಲವು
ಕನ್ನೆಯ ಸ್ನೇಹದಂತೆ ಇದ್ದಿತ್ತು.
೨.
ಕಾಳಿಯ ಕಂಕಾಳದಿಂದ ಮುನ್ನ
ತ್ರಿಪುರ ಸಂಹಾರದಿಂದ ಮುನ್ನ
ಹರಿವಿರಿಂಚಿಗಳಿಂದ ಮುನ್ನ
ಉಮೆಯ ಕಲ್ಯಾಣದಿಂದ ಮುನ್ನ
ಮುನ್ನ, ಮುನ್ನ, ಮುನ್ನ,
ಅಂದಂದಿಗೆ ಎಳೆಯ ನೀನು, ಹಳೆಯ ನಾನು
ಮಹಾದಾನಿ ಕೂಡಲಸಂಗಮದೇವ.
೩.
ಅಯ್ಯಾ, ನೀನು ನಿರಾಕಾರವಾದಲ್ಲಿ
ನಾನು ಜ್ಞಾನವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ನಾಂಟ್ಯಕ್ಕೆ ನಿಂದಲ್ಲಿ
ನಾನು ಚೈತನ್ಯವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ಸಾಕಾರವಾಗಿದ್ದಲ್ಲಿ
ನಾನು ವೃಷಭನೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು
ಜಂಗಮಲಾಂಛನವಾಗಿ ಬಂದಲ್ಲಿ
ನಾನು ಭಕ್ತನೆಂಬ ವಾಹನವಾಗಿದ್ದೆ ಕಾಣಾ ಕೂಡಲಸಂಗಮದೇವ.
೪.
ಕರಿ ಘನ, ಅಂಕುಶ ಕಿರಿದೆನ್ನಬಹುದೆ ? ಬಾರದಯ್ಯ!
ಗಿರಿ ಘನ, ವಜ್ರ ಕಿರಿದೆನ್ನಬಹುದೆ ? ಬಾರದಯ್ಯ!
ತಮಂಧ ಘನ, ನಿಮ್ಮ ನೆನೆವ ಮನ ಕಿರಿದೆನ್ನಬಹುದೆ ? ಬಾರದಯ್ಯ!
ಮರಹು ಘನ, ನಿಮ್ಮ ನೆನೆವ ಮನ ಕಿರಿದೆನ್ನಬಹುದೆ ? ಬಾರದಯ್ಯ!
ಕೂಡಲಸಂಗಮದೇವ.
೫.
ಸಂಸಾರಸಾಗರದ ತೆರೆ ಕೊಬ್ಬಿ
ಮುಖದ ಮೇಲೆ ಅಲೆವುತ್ತಿದೆ ನೋಡಾ!
ಸಂಸಾರಸಾಗರ ಉರದುದ್ದವೇ ಹೇಳಾ ?
ಸಂಸಾರಸಾಗರ ಕೊರಲುದ್ದವೇ ಹೇಳಾ ?
ಸಂಸಾರಸಾಗರ ಶಿರದುದ್ದವಾದ ಬಳಿಕ ಏನ ಹೇಳುವೆನಯ್ಯ ?
ಅಯ್ಯ; ಅಯ್ಯ, ಎನ್ನ ಹುಯ್ಯಲ ಕೇಳಯ್ಯ!
ಕೂಡಲಸಂಗಮದೇವ, ನಾನೇವೆನೇವೆನಯ್ಯ!
೬.
ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯ,
ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು.
ಇನ್ನೆಂದಿಂಗೆ ಮೋಕ್ಷವಹುದೋ ?! ಕೂಡಲಸಂಗಮದೇವ.
೭.
ನಾನೊಂದ ನೆನೆದರೆ, ತಾನೊಂದ ನೆನೆವುದು;
ನಾನಿತ್ತಲೆಳೆದರೆ, ತಾನತ್ತಲೆಳೆವುದು;
ತಾ ಬೇರೆ ಎನ್ನನಳಲಿಸಿ ಕಾಡಿತ್ತು;
ತಾ ಬೇರೆ ಎನ್ನ ಬಳಲಿಸಿ ಕಾಡಿತ್ತು;
ಕೂಡಲಸಂಗನ ಕೂಡಿಹೆನೆಂದರೆ
ತಾನೆನ್ನ ಮುಂದುಗೆಡಿಸಿತ್ತು ಮಾಯೆ.
೮.
ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ,
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ,
ಕೂಟಕ್ಕೆ ಸ್ತ್ರಿಯಾಗಿ ಕೂಡಿದಳು ಮಾಯೆ,
ಇದಾವಾವ ಪರಿಯಲ್ಲು ಕಾಡಿತ್ತು ಮಾಯೆ.
ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೇ ಬಲ್ಲಿರಿ ಕೂಡಲಸಂಗಮದೇವ.
೯.
ಇಂದಿಂಗೆಂತು ನಾಳಿಂಗೆಂತೆಂದು
ಬೆಂದೊಡಲ ಹೊರೆಯ ಹೋಯಿತ್ತೆನ್ನ ಸಂಸಾರ!
ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲ!
ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲ!
ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ
ಕೊಂದಹುದೀ ಮಾಯೆ ಕೂಡಲಸಂಗಮದೇವ!
೧೦.
ಆಸತ್ತೆನಲಸಿದೆನೆಂದರೆ ಮಾಣದು,
ಬೇಸತ್ತೆ ಬೆಂಬಿದ್ದೆನೆಂದರೆ ಮಾಣದು,
ಏವೆನೇವೆನೆಂದರೆ ಮಾಣದು-
ಕಾಯದ ಕರ್ಮದ ಫಲಭೋಗವು.
ಕೂಡಲಸಂಗನ ಶರಣರು ಬಂದು
"ಹೋ ಹೋ ಅಂಜದಿರಂಜದಿರು" ಎಂದರಾನು ಬದುಕುವೆನು.

Comments

  1. ಆತ್ಮೀಯ
    ವಚನಗಳನ್ನು ಅ೦ತರ್ಜಾಲದಲ್ಲಿ ಪೇರಿಸಿರುವುದು ಸ೦ತೋಷದ ವಿಷಯ. ಅದರ ಜೊತೆಗೆ ಪ್ರತಿಯೊ೦ದು ವಚನದ ಸಾರವನ್ನೂ ವಿವರಿಸಿದ್ದರೆ ಚರ್ಚೆಗಳಿಗೆ ಮತ್ತು ಜ್ಞಾನವ್ರುದ್ಧಿಗೆ ಸಹಾಯವಾಗುತ್ತಿತ್ತು. ನಿಮ್ಮ ಪ್ರಯತ್ನಕ್ಕೆ ಮೆಚ್ಚತಕ್ಕದ್ದು.
    ಮು೦ದುವರೆಯಲಿ ನಿಮ್ಮ ವಚನಗಳ ಅಭಿಯಾನ
    ನಿಮ್ಮವ
    ಹರಿ

    ReplyDelete
  2. ಪ್ರಿಯ ಗೆಳೆಯ ನಿಮ್ಮ ಟಿಪ್ಪಣಿಗೆ ಧನ್ಯವಾದಗಳು.
    ನಿಮ್ಮ ಗೆಳೆಯರನು ಆಹ್ವಾನಿ ಕನ್ನಡ ಉಳಿಸಲು ಪ್ರೋಸಹಿಸು
    ಧನ್ಯವಾದಗಳು.

    ReplyDelete

Post a Comment

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ