Skip to main content

ಬಸವಣ್ಣನ ವಚನಗಳು - 21 ರಿಂದ 30 ರವರೆಗೆ

ಬಸವಣ್ಣನ ವಚನಗಳು - 21 ರಿಂದ 30 ರವರೆಗೆ
೨೧.
ಅಂದಣವನೇರಿದ ಸೊಣಗನಂತೆ
ಕಂಡರೆ ಬಿಡದು ತನ್ನ ಮುನ್ನಿನ ಸ್ವಭಾವವನು
ಸುಡು, ಸುಡು; ಮನವಿದು ವಿಷಯಕ್ಕೆ ಹರಿವುದು,
ಮೃಡ, ನಿಮ್ಮನನುದಿನ ನೆನೆಯಲೀಯದು.
ಎನ್ನೊಡೆಯನೇ, ಕೂಡಲಸಂಗಮದೇವ,
ನಿಮ್ಮ ಚರಣವ ನೆನೆವಂತೆ ಕರುಣಿಸು,
ಸೆರಗೊಡ್ಡಿ ಬೇಡುವೆ ನಿಮ್ಮ ಧರ್ಮ.
೨೨.
ತುಪ್ಪದ ಸವಿಗೆ ಅಲಗ ನೆಕ್ಕುವ
ಸೊಣಗನಂತೆನ್ನ ಬಾಳುವೆ
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು
ಕೂಡಲಸಂಗಮದೇವಯ್ಯ ನಿಮ್ಮ ಧರ್ಮ.
೨೩.
ಒಂದು ಮೊಲಕ್ಕೆ ನಾಯನೊಂಬತ್ತ ಬಿಟ್ಟಂತೆ
ಎನ್ನ ಬಿಡು, ತನ್ನ ಬಿಡೆಂಬುದು ಕಾಯವಿಕಾರ;
ಎನ್ನ ಬಿಡು, ತನ್ನ ಬಿಡೆಂಬುದು ಮನೋವಿಕಾರ.
ಕರಣೇಂದ್ರಿಯಗಳೆಂಬ ಸೊಣಗ ಮುಟ್ಟದ ಮುನ್ನ
ಮನ ನಿಮ್ಮನೆಯ್ದುಗೆ ಕೂಡಲಸಂಗಮದೇವ.
೨೪.
ತನ್ನ ವಿಚಾರಿಸಲೊಲ್ಲದು
ಇದಿರ ವಿಚಾರಿಸ ಹೋಹುದೀ ಮನವು.
ಏನು ಮಾಡುವೆನೀ ಮನವನು:
ಎಂತು ಮಾಡುವೆನೀ ಮನವನು-
ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಬೆಂದ ಮನವನು ?
೨೫.
ತನ್ನಿಚ್ಛೆಯ ನುಡಿದರೆ ಮೆಚ್ಚುವುದೀ ಮನವು.
ಇದಿರಿಚ್ಛೆಯ ನುಡಿದರೆ ಮೆಚ್ಚದೀ ಮನವು
ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಮನವನು
ಕಿಚ್ಚಿನೊಳಿಕ್ಕುವೆನು.
೨೬.
ಸುಡಲೀ ಮನವೆನ್ನ (ಮುಡುಬನ) ಮಾಡಿತ್ತು ನಡೆವಲ್ಲಿ;
ನುಡಿವಲ್ಲಿ ಅಧಿಕನೆಂದೆನಿಸಿತ್ತು.
ಬೆಡಗಿನ ಕೀಲು ಕಳೆದು, ಕೆಡೆದ ಬಳಿಕ,
ಕಡುಗೂಪ ಮಡದಿ ತಾ ಮುಟ್ಟಲಮ್ಮಳು;
ಒಡಲನುರಿಗೊಂಬುದು: ಒಡವೆಯನರಸು ಕೊಂಬ;
ಕಡುಗೂಪ ಮಡದಿಯ ಮತ್ತೊಬ್ಬ ಚೆನ್ನಿಗ ಕೊಂಬ.
ಮುನ್ನ ಮಾಡಿದ ಪಾಪ ತನ್ನ ಬೆನ್ನ ಬಿಡದನ್ನಕ
ಇನ್ನು ಬಯಸಿದರೊಳವೆ ಕೂಡಲಸಂಗಮದೇವ ?
೨೭.
ವಚನದ ಹುಸಿ-ನುಸುಳೆಂತು ಮಾಬುದೆನ್ನ ?
ಮನದ ಮರ್ಕಟತನವೆಂತು ಮಾಬುದೆನ್ನ ?
ಹೃದಯದ ಕಲ್ಮಷವೆಂತು ಮಾಬುದೆನ್ನ ?
ಕಾಯವಿಕಾರಕ್ಕೆ ತರಿಸಲುವೋದೆನು!
ಎನಗಿದು ವಿಧಿಯೇ, ಕೂಡಲಸಂಗಮದೇವ ?
೨೮.
ಮುನಿದೆಯಾದರೆ ಒಮ್ಮೆ ಜರಿದರೆ ಸಾಲದೆ ?
ಅಕಟಕಟ, ಮದನಂಗೆ ಮಾರುಗೊಡುವರೆ ?
ಹಗೆಗೆ ಮಾರುಗೊಟ್ಟು ನಿನ್ನವರನೊಪ್ಪಿಸುವರೆ ?
ಕೂಡಲಸಂಗಮದೇವ ?
೨೯.
ವಿಕಳನಾದೆನು ಪಂಚೇಂದ್ರಿಯಧಾತುವಿಂದ!
ಮತಿಗೆಟ್ಟನು ಮನದ ವಿಕಾರದಿಂದ!
ಧೃತಿಗೆಟ್ಟೆನು ಕಾಯವಿಕಾರದಿಂದ!
ಶರಣುವೊಕ್ಕೆನು ಕೂಡಲಸಂಗಮದೇವಯ್ಯ
ಎನ್ನುವನು ಕಾಯಯ್ಯ.
೩೦.
ಕಾಯವಿಕಾರ ಕಾಡಿಹುದಯ್ಯ!
ಮನೋವಿಕಾರ ಕೂಡಿಹುದಯ್ಯ!
ಇಂದ್ರಿಯವಿಕಾರ ಸುಳಿದಿಹುದಯ್ಯ!
ಆ ಸುಳುಹಿನೊಳಗೆ ಸುಳಿವುತ್ತಲಿದ್ದೇನೆ-ಸಿಲುಕಿಸದಿರಯ್ಯ!
ಅನ್ಯಚಿತ್ತವಿರಿಸದಿರಯ್ಯ, ನಿಮ್ಮ ಚಿತ್ತವಿರಿಸಯ್ಯ!
ಅನುಪಮಸುಖ ಸಾರಾಯ ಶರಣರಲ್ಲಿ,
ಕೂಡಲಸಂಗಮದೇವ, ನಿಮ್ಮಲ್ಲಿ ಇದೇ ವರವ ಬೇಡುವೆನಯ್ಯ ?

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ