ಬಸವಣ್ಣನ ವಚನಗಳು - 71 ರಿಂದ 80 ರವರೆಗೆ
೭೧.
ಅಳೆಯುತ್ತ ಅಳೆಯುತ್ತ ಬಳಲುವರಲ್ಲದೆ
ಕೊಳಗ ಬಳಲುವುದೇ ?
ನಡೆಯುತ್ತ ನಡೆಯುತ್ತ ಬಳಲುವರಲ್ಲದೆ, ಬಟ್ಟೆ ಬಳಲುವುದೆ ?
ಶ್ರವವ ಮಾಡುತ್ತ ಮಾಡುತ್ತ ಬಳಲುವರಲ್ಲದೆ
ಕೋಲು ಬಳಲುವುದೆ ?
ನಿಜವನರಿಯದ ಭಕ್ತ ಬಳಲುವನಲ್ಲದೆ, ಲಿಂಗ ಬಳಲುವುದೆ ?
ಕೂಡಲಸಂಗಮದೇವ, ಅರಸರಿಯದ ಬಿಟ್ಟಿಯೋಪಾದಿ!
೭೨.
ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ
ಹರದ ಕುಳ್ಳಿರ್ದ ನಮ್ಮ ಮಹದೇವಸೆಟ್ಟಿ.
ಒಮ್ಮನವಾದರೆ ಒಡನೆ ನುಡಿವನು;
ಇಮ್ಮನವಾದರೆ ನುಡಿಯನು.
ಕಾಣಿಯ ಸೋಲ; ಅರ್ಧ ಕಾಣಿಯ ಗೆಲ್ಲ.
ಜಾಣ ನೋಡವ್ವ ನಮ್ಮ ಕೂಡಲಸಂಗಮದೇವ.
೭೩.
ನಂಬರು, ನಚ್ಚರು; ಬರಿದೆ ಕರೆವರು;
ನಂಬಲರಿಯರೀ ಲೋಕದ ಮನುಜರು!
ನಂಬಿ ಕರೆದಡೆ, "ಓ" ಎನ್ನನೇ ಶಿವನು ?
ನಂಬದೆ, ನಚ್ಚದೆ ಬರಿದೆ ಕರೆವರ
ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ.
೭೪.
ಹುತ್ತವ ಬಡಿದರೆ ಉರಗ ಸಾವುದೆ
ಘೋರತಪವ ಮಾಡಿದರೇನು
ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ
ಕೂಡಲಸಂಗಮದೇವ ?
೭೫.
ಮೇರು ಗುಣವನರಸುವುದೇ ಕಾಗೆಯಲ್ಲಿ ?
ಪರುಷ ಗುಣವನರಸುವುದೇ ಕಬ್ಬುನದಲ್ಲಿ ?
ಸಾಧು ಗುಣವನರಸುವನೇ ಅವಗುಣಿಯಲ್ಲಿ ?
ಚಂದನ ಗುಣವನರಸುವುದೇ ತರುಗಳಲ್ಲಿ ?
ಸರ್ವಗುಣಸಂಪನ್ನ ಲಿಂಗವೇ,
ನೀನೆನ್ನಲ್ಲಿ ಅವಗುಣವನರಸುವುದೇ, ಕೂಡಲಸಂಗಮದೇವ!
೭೬
ಸಾರ, ಸಜ್ಜನರ ಸಂಗವ ಮಾಡುವುದು!
ದೂರ, ದುರ್ಜನರ ಸಂಗ ಬೇಡವಯ್ಯ!
ಆವ ಹಾವಾದರೇನು ? ವಿಷವೊಂದೆ!
ಅಂಥವರ ಸಂಗ ನಮಗೆ ಬೇಡವಯ್ಯ.
ಅಂತರಂಗಶುದ್ಧವಿಲ್ಲದವರ ಸಂಗ
ಸಿಂಗಿ ಕಾಳಕೂಟ ವಿಷವೋ ಕೂಡಲಸಂಗಯ್ಯ.
೭೭.
ಹಸಿದು ಎಕ್ಕೆಯ ಕಾಯ ಮೆಲಬಹುದೆ ?
ನೀರಡಸಿ ವಿಷವನೀಂಟಬಹುದೆ ?
ಸುಣ್ಣದ, ತುಯ್ಯಲ ಬಣ್ಣವೊಂದೆ ಎಂದರೆ
ನಂಟುತನಕ್ಕೆ ಉಣ್ಣಬಹುದೆ ?
ಲಿಂಗಸಾರಾಯ ಸಜ್ಜನರಲ್ಲದವರ
ಕೂಡಲಸಂಗಮ ದೇವರೆಂತೊಲಿವ!
೭೮.
ಎಲವದ ಮರ ಹೂತು ಫಲವಾದ ತೆರನಂತೆ
ಸಿರಿಯಾದರೇನು ಶಿವಭಕ್ತಿಯಿಲ್ಲದನ್ನಕ ?
ಫಲವಾದರೇನು, ಹೇಳಾ, ಹಾವುಮೆಕ್ಕೆಯ ಕಾಯಿ ?
ಕುಲವಿಲ್ಲದ ರೂಹು ಎಲ್ಲಿದ್ದರೇನು ?
ಬಚ್ಚಲ ನೀರು ತಿಳಿದಲ್ಲಿ ಫಲವೇನು ?
ಅವಗುಣಿಗಳ ಮೆಚ್ಚ ಕೂಡಲಸಂಗಮದೇವ.
೭೯.
ಗಿಳಿಯೋದಿ ಫಲವೇನು
ಬೆಕ್ಕು ಬಹುದ ಹೇಳಲರಿಯದು!
ಜಗವೆಲ್ಲವ ಕಾಂಬ ಕಣ್ಣು
ತನ್ನ ಕೊಂಬ ಕೊಯಿಲೆಯ ಕಾಣಲರಿಯದು!
ಇದಿರ ಗುಣವ ಬಲ್ಲೆವೆಂಬರು
ತಮ್ಮ ಗುಣವ ತಾವರಿಯರು ಕೂಡಲಸಂಗಮದೇವ.
೮೦.
ಲೋಕದ ಡೊಂಕ ನೀವೇಕೆ ತಿದ್ದುವಿರಿ ?
ನಿಮ್ಮ ನಿಮ್ಮ ತನವ ಸಂತೈಸಿಕೊಳ್ಳಿ;
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ.
ನೆರೆಮನೆಯ ದುಃಖಕ್ಕೆ ಅಳುವರ ಮೆಚ್ಚ
ನಮ್ಮ ಕೂಡಲಸಂಗಮದೇವ.
೭೧.
ಅಳೆಯುತ್ತ ಅಳೆಯುತ್ತ ಬಳಲುವರಲ್ಲದೆ
ಕೊಳಗ ಬಳಲುವುದೇ ?
ನಡೆಯುತ್ತ ನಡೆಯುತ್ತ ಬಳಲುವರಲ್ಲದೆ, ಬಟ್ಟೆ ಬಳಲುವುದೆ ?
ಶ್ರವವ ಮಾಡುತ್ತ ಮಾಡುತ್ತ ಬಳಲುವರಲ್ಲದೆ
ಕೋಲು ಬಳಲುವುದೆ ?
ನಿಜವನರಿಯದ ಭಕ್ತ ಬಳಲುವನಲ್ಲದೆ, ಲಿಂಗ ಬಳಲುವುದೆ ?
ಕೂಡಲಸಂಗಮದೇವ, ಅರಸರಿಯದ ಬಿಟ್ಟಿಯೋಪಾದಿ!
೭೨.
ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ
ಹರದ ಕುಳ್ಳಿರ್ದ ನಮ್ಮ ಮಹದೇವಸೆಟ್ಟಿ.
ಒಮ್ಮನವಾದರೆ ಒಡನೆ ನುಡಿವನು;
ಇಮ್ಮನವಾದರೆ ನುಡಿಯನು.
ಕಾಣಿಯ ಸೋಲ; ಅರ್ಧ ಕಾಣಿಯ ಗೆಲ್ಲ.
ಜಾಣ ನೋಡವ್ವ ನಮ್ಮ ಕೂಡಲಸಂಗಮದೇವ.
೭೩.
ನಂಬರು, ನಚ್ಚರು; ಬರಿದೆ ಕರೆವರು;
ನಂಬಲರಿಯರೀ ಲೋಕದ ಮನುಜರು!
ನಂಬಿ ಕರೆದಡೆ, "ಓ" ಎನ್ನನೇ ಶಿವನು ?
ನಂಬದೆ, ನಚ್ಚದೆ ಬರಿದೆ ಕರೆವರ
ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ.
೭೪.
ಹುತ್ತವ ಬಡಿದರೆ ಉರಗ ಸಾವುದೆ
ಘೋರತಪವ ಮಾಡಿದರೇನು
ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ
ಕೂಡಲಸಂಗಮದೇವ ?
೭೫.
ಮೇರು ಗುಣವನರಸುವುದೇ ಕಾಗೆಯಲ್ಲಿ ?
ಪರುಷ ಗುಣವನರಸುವುದೇ ಕಬ್ಬುನದಲ್ಲಿ ?
ಸಾಧು ಗುಣವನರಸುವನೇ ಅವಗುಣಿಯಲ್ಲಿ ?
ಚಂದನ ಗುಣವನರಸುವುದೇ ತರುಗಳಲ್ಲಿ ?
ಸರ್ವಗುಣಸಂಪನ್ನ ಲಿಂಗವೇ,
ನೀನೆನ್ನಲ್ಲಿ ಅವಗುಣವನರಸುವುದೇ, ಕೂಡಲಸಂಗಮದೇವ!
೭೬
ಸಾರ, ಸಜ್ಜನರ ಸಂಗವ ಮಾಡುವುದು!
ದೂರ, ದುರ್ಜನರ ಸಂಗ ಬೇಡವಯ್ಯ!
ಆವ ಹಾವಾದರೇನು ? ವಿಷವೊಂದೆ!
ಅಂಥವರ ಸಂಗ ನಮಗೆ ಬೇಡವಯ್ಯ.
ಅಂತರಂಗಶುದ್ಧವಿಲ್ಲದವರ ಸಂಗ
ಸಿಂಗಿ ಕಾಳಕೂಟ ವಿಷವೋ ಕೂಡಲಸಂಗಯ್ಯ.
೭೭.
ಹಸಿದು ಎಕ್ಕೆಯ ಕಾಯ ಮೆಲಬಹುದೆ ?
ನೀರಡಸಿ ವಿಷವನೀಂಟಬಹುದೆ ?
ಸುಣ್ಣದ, ತುಯ್ಯಲ ಬಣ್ಣವೊಂದೆ ಎಂದರೆ
ನಂಟುತನಕ್ಕೆ ಉಣ್ಣಬಹುದೆ ?
ಲಿಂಗಸಾರಾಯ ಸಜ್ಜನರಲ್ಲದವರ
ಕೂಡಲಸಂಗಮ ದೇವರೆಂತೊಲಿವ!
೭೮.
ಎಲವದ ಮರ ಹೂತು ಫಲವಾದ ತೆರನಂತೆ
ಸಿರಿಯಾದರೇನು ಶಿವಭಕ್ತಿಯಿಲ್ಲದನ್ನಕ ?
ಫಲವಾದರೇನು, ಹೇಳಾ, ಹಾವುಮೆಕ್ಕೆಯ ಕಾಯಿ ?
ಕುಲವಿಲ್ಲದ ರೂಹು ಎಲ್ಲಿದ್ದರೇನು ?
ಬಚ್ಚಲ ನೀರು ತಿಳಿದಲ್ಲಿ ಫಲವೇನು ?
ಅವಗುಣಿಗಳ ಮೆಚ್ಚ ಕೂಡಲಸಂಗಮದೇವ.
೭೯.
ಗಿಳಿಯೋದಿ ಫಲವೇನು
ಬೆಕ್ಕು ಬಹುದ ಹೇಳಲರಿಯದು!
ಜಗವೆಲ್ಲವ ಕಾಂಬ ಕಣ್ಣು
ತನ್ನ ಕೊಂಬ ಕೊಯಿಲೆಯ ಕಾಣಲರಿಯದು!
ಇದಿರ ಗುಣವ ಬಲ್ಲೆವೆಂಬರು
ತಮ್ಮ ಗುಣವ ತಾವರಿಯರು ಕೂಡಲಸಂಗಮದೇವ.
೮೦.
ಲೋಕದ ಡೊಂಕ ನೀವೇಕೆ ತಿದ್ದುವಿರಿ ?
ನಿಮ್ಮ ನಿಮ್ಮ ತನವ ಸಂತೈಸಿಕೊಳ್ಳಿ;
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ.
ನೆರೆಮನೆಯ ದುಃಖಕ್ಕೆ ಅಳುವರ ಮೆಚ್ಚ
ನಮ್ಮ ಕೂಡಲಸಂಗಮದೇವ.
Thumba valleya kelasa .. munduvaresi ...
ReplyDeleteinnu jasti vachanagalu barali ....
inti,
Vivek
Sure ನಿಮ್ಮ ಗೆಳೆಯರನು ಹಾಗು ಎಲ್ಲ ಕನ್ನಡಿಗರನು ಆಹ್ವಾನಸಿ !!!
ReplyDelete