Skip to main content

ಬಸವಣ್ಣನ ವಚನಗಳು - 131 ರಿಂದ 140 ರವರೆಗೆ


೧೩೧.
ಎರೆದರೆ ನೆನೆಯದು, ಮರೆದರೆ ಬಾಡದು
ಹುರುಳಿಲ್ಲ ಹುರುಳಿಲ್ಲ ಲಿಂಗಾರ್ಚನೆ!
ನೋಡಯ್ಯ, ಕೂಡಲಸಂಗಮದೇವಯ್ಯ,
"ಜಂಗಮ"ಕ್ಕೆರೆದರೆ, "ಸ್ಥಾವರ" ನೆನೆಯಿತ್ತು.

೧೩೨.
ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯ;
ಭೂಮಿಯಧಾರದಲ್ಲಿ ವೃಕ್ಷ ನೀರುಂಬುದಯ್ಯ.
ಜಂಗಮಾಪ್ಯಾಯನವಾದರೆ ಲಿಂಗಸಂತುಷ್ಟಿಯಹುದಯ್ಯ
"ವೃಕ್ಷಸ್ಯ ವದನಂ ಭೂಮಿಃ
ಸ್ಥಾವರಸ್ಯ ತು ಜಂಗಮಃ!
ಅಹಂ ತುಷ್ಟಿರುಮೇ ದೇವ್ಯು-
ಭಯೋರ್ಜಂಗಮಲಿಂಗಯೋಃ ||"
ಇದು ಕಾರಣ ಕೂಡಲಸಂಗನ ಶರಣರಲ್ಲಿ
ಜಂಗಮಾಪ್ಯಾಯನವಾದರೆ ಲಿಂಗಸಂತುಷ್ಟಿ.

೧೩೩.
ಬಂಡವ ತುಂಬಿದ ಬಳಿಕ
ಸುಂಕವ ತೆತ್ತಲ್ಲದೆ ಹೊಗಬಾರದು.
ಕಳ್ಳನಾಣ್ಯ ಸಲಿಕೆಗೆ ಸಲ್ಲದು,
ಕಳ್ಳನಾಣ್ಯವ ಸಲಲೀಯರಯ್ಯ.
ಭಕ್ತಿಯೆಂಬ ಬಂಡಕ್ಕೆ ಜಂಗಮವೇ ಸುಂಕಿಗ
ಕೊಡಲಸಂಗಮದೇವ.

೧೩೪.
ಮಾಡಿ, ನೀಡಿ, ಲಿಂಗವ ಪೂಜಿಸಿಹೆವೆಂಬವರು
ನೀವೆಲ್ಲ ಕೇಳಿರಣ್ಣ;
ಹಾಗದ ಕೆರಹ ಹೊರಗೆ ಕಳೆದು
ದೇಗುಲಕ್ಕೆ ಹೋಗಿ,
ನಮಸ್ಕಾರವ ಮಾಡುವನಂತೆ,
ತನ್ನ ಕೆರಹಿನ ಧ್ಯಾನವಲ್ಲದೆ,
ದೇವರ ಧ್ಯಾನವಿಲ್ಲ;
ಧನವನಿರಿಸದಿರಾ ! ಇರಿಸಿದರೆ ಭವ ಬಪ್ಪುದು ತಪ್ಪದು!
ಕೂಡಲಸಂಗನ ಶರಣರಿಗೆ ಸವೆಸಲೇಬೇಕು.

೧೩೫.
ಉಂಡುದು ಬಂದೀತೆಂಬ ಸಂದೇಹಿಮಾನವ ನೀ ಕೇಳ!
ಉಂಡುದೇನಾಯಿತೆಂಬುದ ನಿನ್ನ ನೀ ತಿಳಿದು ನೋಡಾ!
ಉಂಡುದಾಗಳೇ ಆ ಪೀಯವಾಯಿತ್ತು!
ಆ ಉಂಡುದನುಣಬಂದ ಹಂದಿಯ ಬಾಳುವೆಯವರ
ಕಂಡು ಆನು ಮರುಗುವೆನಯ್ಯ ಕೂಡಲಸಂಗಮದೇವ.







೧೩೬.
ಆಯುಷ್ಯವುಂಟು ಪ್ರಳಯವಿಲ್ಲೆಂದು,
ಅರ್ಥವ ಮಡಗುವಿರಿ:
ಆಯುಷ್ಯ ತೀರಿ ಪ್ರಳಯ ಬಂದರೆ
ಆ ಅರ್ಥವನುಂಬವರಿಲ್ಲ:
ನೆಲನನಗೆದು ಮಡಗದಿರಾ!
ನೆಲ ನುಂಗಿದರುಗುಳುವುದೇ ?
ಕಣ್ಣಿನಲ್ಲಿ ನೋಡಿ, ಮಣ್ಣಿನಲ್ಲಿ ನೆರಹಿ
ಉಣ್ಣದೆ ಹೋಗದಿರಾ;
ನಿನ್ನ ಮಡದಿಗಿರಲೆಂದರೆ--ಮಡದಿಯ ಕೃತಕ ಬೇರೆ!
ನಿನ್ನೊಡಲು ಕೆಡೆಯಲು
ಮತ್ತೊಬ್ಬನಲ್ಲಿಗೆ ಅಡಕದೆ ಮಾಬಳೆ ?
ಹೆರರಿಗಿಕ್ಕಿ ಹೆಗ್ಗುರಿಯಾಗಿ ಕೆಡಬೇಡ.
ಕೂಡಲಸಂಗನ ಶರಣರಿಗೆ ಒಡನೆ ಸೆವೆಸುವುದು.

೧೩೭.
ಅವಳ ವಚನ ಬೆಲ್ಲದಂತೆ!
ಹೃದಯದಲಿಪ್ಪುದೆಲ್ಲಾ ನಂಜು ಕಂಡಯ್ಯ!!
ಕಂಗಳಲೊಬ್ಬನ ಕರೆವಳು ಮನದಲೊಬ್ಬನ ನೆನೆವಳು,
ವಚನದಲೊಬ್ಬನ ನೆರೆವಳು!
ಇಂತಿವಳ ತನು ಒಂದೆಸೆ, ಮನ ಒಂದೆಸೆ, ಮಾತೊಂದೆಸೆ!!
ಈ ಮಾನಿಸಗಳ್ಳಿಯ ನನ್ನವಳೆಂದು ನಂಬುವ
ಕುರಿನರರನೇನೆಂಬೆನಯ್ಯ ಕೂಡಲಸಂಗಮದೇವ.

೧೩೮.
ತನು-ಮನ-ಧನವ ಹಿಂದಿಕ್ಕಿಕೊಂಡು
ಮಾತಿನ ಬಣಬೆಯ ಒಳಲೊಟ್ಟೆಯ ನುಡಿವರು
ನೀವೆಲ್ಲ ಕೇಳಿರೆ:
ತಲಹಿಲ್ಲದ ಕೋಲು ಪೊಳ್ಳುಹಾರುವುದಲ್ಲದೆ
ಗುರಿಯ ತಾಗಬಲ್ಲುದೆ ?
ಮಾಯಾಪಾಶ ಹಿಂಗಿ, ಮನದ ಗಂಟು ಬಿಡದನ್ನಕ
ಕೂಡಲಸಂಗಮದೇವನೆಂತೊಲಿವನಯ್ಯ.

೧೩೯.
ಹಲವು ಮಣಿಯ ಕಟ್ಟಿ ಕುಣಿಕುಣಿದಾಡಿ,
ಹಲವು ಪರಿಯಲಿ ವಿಭೂತಿಯ ಪೂಸಿ,
ಗಣಾಡಂಬರದ ನಡುವೆ ನಲಿನಲಿದಾಡಿ
ಉಂಡು ತಂಬುಲಗೊಂಡು ಹೋಹುದಲ್ಲ!
ತನು-ಮನ-ಧನವ ಸಮರ್ಪಿಸದವರ
ಕೂಡಲಸಂಗಮದೇವನೆಂತೊಲಿವ ?

೧೪೦.
ತನುವ ಕೊಟ್ಟು ಗುರುವನೊಲಿಸಲೆ ಬೇಕು.
ಮನವ ಕೊಟ್ಟು ಲಿಂಗವನೊಲಿಸಲೆ ಬೇಕು.
ಧನವ ಕೊಟ್ಟು ಜಂಗಮವನೊಲಿಸಲೆ ಬೇಕು.
ಈ ತ್ರಿವಿಧವ ಮರೆಸಿಕೊಂಡು,
ಹರೆಯ ಹೊಯಿಸಿ, ಕುರುಹ ಪೂಜಿಸುವ ಡಂಬಕರ ಮೆಚ್ಚ
ಕೂಡಲಸಂಗಮದೇವ.

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ...

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...