Skip to main content

ಬಸವಣ್ಣನ ವಚನಗಳು - 141 ರಿಂದ 150 ರವರೆಗೆ


೧೪೧.
ಆಡಿದರೇನೋ, ಹಾಡಿದರೇನೋ, ಓದಿದರೇನೋ-
ತ್ರಿವಿಧ ದಾಸೋಹವಿಲ್ಲದನ್ನಕ ?
ಆಡದೇ ನವಿಲು ? ಹಾಡದೇ ತಂತಿ ? ಓದದೇ ಗಿಳಿ ?
ಭಕ್ತಿಯಿಲ್ಲದವರನೊಲ್ಲ ಕೂಡಲಸಂಗಮದೇವ!

೧೪೨.
ವೇದದಂತುಟಲ್ಲ, ಶಾಸ್ತ್ರದಂತುಟಲ್ಲ,
ಗೀತ-ಮಾತಿನಂತುಟಲ್ಲ ಕೇಳಿರಯ್ಯ !
ಮಾತಿನ ಮಾತಿನ ಕೌಳುಗೋಲ ಶ್ರವದಲ್ಲಿ
ಸತ್ತವರೊಳರೇ ಅಯ್ಯ ?
ದಿಟದಲಗಿನ ಕಾಳೆಗವಿತ್ತಲಿದ್ದುದೇ
ಕೂಡಲಸಂಗನ ಶರಣರು ಬಂದಲ್ಲಿ !?

೧೪೩.
ಮಾತಿನ ಮಾತಿನಲಪ್ಪುದೇ ಭಕ್ತಿ ?
ಮಾಡಿ ತನು ಸವೆಯದನ್ನಕ,
ಧನ ಸವೆಯದನ್ನಕ,
ಮನ ಸವೆಯದನ್ನಕ,
ಅಪ್ಪುದೇ ಭಕ್ತಿ ?
ಕೂಡಲಸಂಗಮದೇವನೆಲುದೋರ ಸರಸವಾಡುವನು;
ಸೈರಿಸದನ್ನಕ ಅಪ್ಪುದೇ ಭಕ್ತಿ ?

೧೪೪.
ಹಾವಸೆಗಲ್ಲ ಮೆಟ್ಟಿ ಹರಿದು
ಗೊತ್ತ ಮುಟ್ಟ ಬಾರದಯ್ಯ.
ನುಡಿದಂತೆ ನಡೆಯಲು ಬಾರದಯ್ಯ.
ಕೂಡಲಸಂಗನ ಶರಣರ ಭಕ್ತಿ ಬಾಳ ಬಾಯಿಧಾರೆ.

೧೪೫.
ಭಕ್ತಿಯೆಂಬುದ ಮಾಡಬಾರದು.
ಗರಗಸದಂತೆ ಹೋಗುತ್ತ ಕೊರೆವುದು;
ಬರುತ್ತ ಕೊಯ್ವುದು.
ಘಟಸರ್ಪನಲ್ಲಿ ಕೈದುಡುಕಿದರೆ ಹಿಡಿಯದೆ ಮಾಬುದೆ ?
ಕೂಡಲಸಂಗಮದೇವ.







೧೪೬.
ಹಲವು ಕಾಲ ಧಾವತಿಗೊಂಡು ಒಟ್ಟಿದ ಹಿದಿರೆಯು
ಒಂದು ಮಿಡುಕುರಲ್ಲಿ ಬೇವಂತೆ
ಸಲೆನೆಲೆ ಸನ್ನಿಹಿತನಾಗಿಪ್ಪ ಶರಣನ ಭಕ್ತಿ
ಒಂದನಾಯತದಿಂದ ಕೆಡುವುದು!
ಸ್ವಧರ್ಮದಲ್ಲಿ ಗಳಿಸಿದ ಪಿತನ ಧನವ
ಅಧರ್ಮದಲ್ಲಿ ಕೆಡಿಸುವ ಸುತನಂತೆ
ಶಿವನ ಸೊಮ್ಮ ಶಿವಂಗೆ ಮಾಡದೆ ಅನ್ಯಕ್ಕೆ ಮಾಡಿದರೆ
ತನ್ನ ಭಕ್ತಿ ತನ್ನನೇ ಕೆಡಿಸುವುದು ಕೂಡಲಸಂಗಮದೇವ!

೧೪೭.
ನೆಚ್ಚಿದೆನೆಂದರೆ, ಮೆಚ್ಚಿದೆನೆಂದರೆ,
ಸಲೆ ಮಾರುವೋದೆನೆಂದರೆ;
ತನುವನಲ್ಲಾಡಿಸಿ ನೋಡುವೆ ನೀನು!
ಮನವನಲ್ಲಾಡಿಸಿ ನೋಡುವೆ ನೀನು!
ಧನವನಲ್ಲಾಡಿಸಿ ನೋಡುವೆ ನೀನು!
ಇವೆಲ್ಲಕಂಜದಿದ್ದರೆ
ಭಕ್ತಿಕಂಪಿತ ನಮ್ಮ ಕೂಡಲಸಂಗಮದೇವ.

೧೪೮.
ಕೌಳುಗೋಲ ಹಿಡಿದು ಶ್ರವವ ಮಾಡಬಹುದಲ್ಲದೆ
ಕಳನೇರಿ ಕಾದುವುದರಿದು ನೋಡಾ!
ಬಣ್ಣವಿಟ್ಟು ನುಡಿದಲ್ಲಿ ಫಲವೇನು ಚಿನ್ನಗೆಯ್ಕನಾಡುವಂತೆ ?
ಬಂದ ಸಮಯೋಚಿತವನರಿತು
ಇದ್ದುದ ವಂಚಿಸದಿದ್ದರೆ
ಕೂಡಲಸಂಗಮದೇವನೊಲಿದು ಸಲಹುವ!

೧೪೯.
ಹಸಿದು ಬಂದ ಗಂಡನಿಗೆ ಉಣಲಿಕ್ಕದೆ
ಬಡವಾದನೆಂದು ಮರುಗುವ ಸತಿಯ ಸ್ನೇಹದಂತೆ
ಬಂದುದನರಿಯಳು, ಇದ್ದುದ ಸವಿಸಳು!
ದುಃಖವಿಲ್ಲದಕ್ಕೆ ಹಗರಣಿಗನ ತೆರನಂತೆ!
ಕೂಡಲಸಂಗನ ಶರಣರಿಗೆ ತ್ರಿವಿಧವ ವಂಚಿಸಿ
ಬಣ್ಣಿಸುವ ಭಕ್ತಿಯ ಕಂಡು ನಾನು ನಾಚಿದೆನು!

೧೫೦.
ಉದಯದ ಮಾಗಿಯ ಬಿಸಿಲು
ಅಂಗಕ್ಕೆ ಹಿತವಾಯಿತ್ತು!
ಮಧ್ಯಾಹ್ನದ ಬಿಸಿಲು
ಅಂಗಕ್ಕೆ ಕರ ಕಠಿನವಾಯಿತ್ತು!
ಮೊದಲಲ್ಲಿ ಲಿಂಗಭಕ್ತಿ ಹಿತವಾಯಿತ್ತು!
ಕಡೆಯಲ್ಲಿ ಜಂಗಮಭಕ್ತಿ ಕಠಿನವಾಯಿತ್ತು!
ಇದು ಕಾರಣ,
ಕೂಡಲಸಂಗಮದೇವನವರ
ಬಲ್ಲನಾಗಿ ಒಲ್ಲನಯ್ಯ.

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ...

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...