Skip to main content

ಬಸವಣ್ಣನ ವಚನಗಳು - 151 ರಿಂದ 160 ರವರೆಗೆ


೧೫೧.
ಬರಬರ ಭಕ್ತಿ ಅರೆಯಾಯಿತ್ತು ಕಾಣಿರಣ್ಣ!
ಮೊದಲ ದಿನ ಹಣೆ ಮುಟ್ಟಿ,
ಮರುದಿನ ಕೈ ಮುಟ್ಟಿ,
ಮೂರೆಂಬ ದಿನಕೆ ತೂಕಡಿಕೆ ಕಾಣಿರಣ್ಣಾ.
ಹಿಡಿದುದ ಬಿಡದಿದ್ದರೆ ತಡಿಗೆ ಚಾಚುವ

ಅಲ್ಲದಿದ್ದರೆ ನಡುನೀರಲದ್ದುವ
ನಮ್ಮ ಕೂಡಲಸಂಗ್ದೇವ.

೧೫೨.
ಬೆಟ್ಟದ ಬಿದಿರೇ ನೀನು ಅಟ್ಟಕ್ಕೆ ಏಣಿಯಾದೆ!
ಕಾಲು ಮುರಿದವರಿಗೆ ಊರುಗೋಲಾದೆ!
ಬಿದಿರಿಂ ಭೋ! ಅಯ್ಯ, ಬಿದಿರಿಂ ಭೋ!
ಬಿದಿರ ಫಲವನುಂಬರೆ ಬಿದಿರಿಂ ಭೊ;
ಬಿದಿರಲಂದಣವಕ್ಕು
ಬಿದಿರೆ ಸತ್ತಿಗೆಯಕ್ಕು,
ಬಿದಿರಲೀ ಗುಡಿಯು ಗುಡಾರಂಗಳಕ್ಕು,
ಬಿದಿರಲೀ ಸಕಲಸಂಪದವೆಲ್ಲ!
ಬಿದಿರದವರ ಮೆಚ್ಚ ನಮ್ಮ ಕೂಡಲಸಂಗಮದೇವ.

೧೫೩.
ಉಂಬಾಗಳಿಲ್ಲೆನ್ನ, ಉಡುವಾಗಳಿಲ್ಲೆನ್ನ
ಬಂಧುಗಳು ಬಂದಾಗಳಿಲ್ಲೆನ್ನ;
ಲಿಂಗಕ್ಕೆ ಇಲ್ಲೆಂಬ, ಜಂಗಮಕ್ಕೆ ಇಲ್ಲೆಂಬ,
ಬಂದ ಪುರಾತರಿಗೆ ಇಲ್ಲೆಂಬ;
ಸಾವಾಗ ದೇಹವ ದೇಗುಲಕ್ಕೊಯ್ಯೆಂಬ
ದೇವರಿಗೆ ಹೆಣ ಬಿಟ್ಟಿ ಹೇಳಿತ್ತೆ, ಕೂಡಲಸಂಗಮದೇವ ?

೧೫೪.
ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ,
ಸತ್ಪಾತ್ರಕ್ಕೆ ಸಲ್ಲದಯ್ಯ!
ನಾಯ ಹಾಲು ನಾಯಿಂಗಲ್ಲದೆ,
ಪಂಚಾಮೃತಕ್ಕೆ ಸಲ್ಲದಯ್ಯ!
ನಮ್ಮ ಕೂಡಲಸಂಗನ ಶರಣರಿಗಲ್ಲದೆ
ಮಾಡುವ ಅರ್ಥ ವ್ಯರ್ಥ ಕಂಡಯ್ಯ.

೧೫೫.
ಹತ್ತು ಮತ್ತರ ಭೂಮಿ,
ಬತ್ತುವ ಹಯನ, ನಂದಾದೀವಿಗೆಯ
ನಡೆಸಿಹೆನೆಂಬವರ ಮುಖವ ನೋಡಲಾಗದು!
ಅವರ ನುಡಿಯ ಕೇಳಲಾಗದು;
ಅಂಡಜ-ಸ್ವೇದಜ-ಉದ್ಬಿಜ-ಜರಾಯುಜವೆಂಬ
ಚತುರಶೀತಿ ಲಕ್ಷಪ್ರಾಣಿಗಳಿಗೆ ಭವಿತವ್ಯವ ಕೊಟ್ಟವರಾರೋ ?!
ಒಡೆಯರಿಗೆ ಉಂಡೆಯ ಮುರಿದಿಕ್ಕಿದಂತೆ
"ಎನ್ನಿಂದಲೇ ಆಯಿತು, ಎನ್ನಿಂದಲೇ ಹೋಯಿತು"
ಎಂಬುವನ ಬಾಯಲ್ಲಿ
ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ ಕೂಡಲಸಂಗಮದೇವ!








೧೫೬.
ಅನವರತ ಮಾಡಿಹೆನೆಂದು ಉಪ್ಪರ ಗುಡಿಯ ಕಟ್ಟಿ
ಮಾಡುವ ಭಕ್ತನ ಮನೆಯದು ಲಂದಣಗಿತ್ತಿಯ ಮನೆ,
ಸರ್ವಜೀವದಯಾಪಾರಿಯೆಂದು
ಭೂತದಯಕಿಕ್ಕುವನ ಮನೆ ಸಯಿದಾನದ ಕೇಡು.
ಸೂಳೆಯ ಮಗ ಮಾಳವ ಮಾಡಿದರೆ
ತಾಯ ಹೆಸರಾಯಿತ್ತಲ್ಲದೆ ತಂದೆಯ ಹೆಸರಿಲ್ಲ
ಕೂಡಲಸಂಗಮದೇವ.

೧೫೭.
ಓಡಲಾರದ ಮೃಗವು
ಸೊಣಗಂಗೆ ಮಾಂಸವ ಕೊಡುವಂತೆ,
ಮಾಡಲಾಗದು ಭಕ್ತನು, ಕೊಳಲಾಗದು ಜಂಗಮ;
ಹಿರಿಯರು ನರಮಾಂಸವ ಭುಂಜಿಸುವರೆ ?!
ತನು ಉಕ್ಕಿ ಮನ ಉಕ್ಕಿ ಮಾಡಬೇಕು ಭಕ್ತಿಯ,
ಮಾಡಿಸಿಕೊಳ್ಳಬೇಕು ಜಂಗಮ, ಕೂಡಲಸಂಗಮದೇವ.

೧೫೮.
ಬಂದುದ ಕೈಕೊಳಬಲ್ಲಡೆ ನೇಮ.
ಇದ್ದುದ ವಂಚನೆ ಮಾಡದಿದ್ದರೆ ಅದು ನೇಮ.
ನಡೆದು ತಪ್ಪದಿದ್ದರೆ ಅದು ನೇಮ.
ನುಡಿದು ಹುಸಿಯದಿದ್ದರೆ ಅದು ಮುನ್ನವೆ ನೇಮ.
ನಮ್ಮ ಕೂಡಲಸಂಗನ ಶರಣರು ಬಂದರೆ
ಒಡೆಯರಿಗೊಡವೆಯನೊಪ್ಪಿಸುವುದೇ ನೇಮ.

೧೫೯.
ಹಾಲ ನೇಮ, ಹಾಲ ಕೆನೆಯ ನೇಮ;
ಕೆನೆ ತಪ್ಪಿದ ಬಳಿಕ ಕಿಚ್ಚಡಿಯ ನೇಮ;
ಬೆಣ್ಣೆಯ ನೇಮ, ಬೆಲ್ಲದ ನೇಮ-
ಅಂಬಲಿಯ ನೇಮದವರನಾರನೂ ಕಾಣೆ,
ಕೂಡಲಸಂಗನ ಶರಣರಲ್ಲಿ
ಅಂಬಲಿಯ ನೇಮದಾತ ಮಾದರ ಚನ್ನಯ್ಯ

೧೬೦.
ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ.
ನೀಡ ನೀಡಿ ಕೆಟ್ಟರು ನಿಜವಿಲ್ಲದೆ.
ಮಾಡುವ ನೀಡುವ ನಿಜಗುಣವುಳ್ಳಡೆ.
ಕೂಡಿಕೊಂಬ ನಮ್ಮ ಕೂಡಲಸಂಗಮದೇವ.

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ