Skip to main content

ಬಸವಣ್ಣನ ವಚನಗಳು - 161 ರಿಂದ 170 ರವರೆಗೆ


೧೬೧.
ಮಾಡಿದೆನೆಂಬುದು ಮನದಲ್ಲಿ ಹೊಳೆದರೆ
ಏಡಿಸಿ ಕಾಡಿತ್ತು ಶಿವನ ಡಂಗುರ.
ಮಾಡಿದೆನೆನ್ನದಿರಾ ಲಿಂಗಕ್ಕೆ!
ಮಾಡಿದೆನೆನ್ನದಿರಾ ಜಂಗಮಕ್ಕೆ!
ಮಾಡಿದೆನೆಂಬುದು ಮನದಲಿಲ್ಲದಿದ್ದರೆ
ಬೇಡಿದ್ದನೀವ ಕೂಡಲಸಂಗಮದೇವ!!
೧೬೨.
ಮಾಡುವಂತಿರಬೇಕು ಮಾಡದಂತಿರಬೇಕು!
ಮಾಡುವ ಮಾಟದೊಳಗೆ ತಾನಿಲ್ಲದಿರಬೇಕು!!
ನೋಡುವಂತಿರಬೇಕು, ನೋಡದಂತಿರಬೇಕು!
ನೋಡುವ ನೋಟದೊಳಗೆ ತಾನಿಲ್ಲದಿರಬೇಕು!!
ನಮ್ಮ ಕೂಡಲಸಂಗಮದೇವರ
ನೆನೆವುತ್ತ ನೆನೆವುತ್ತ ನೆನೆಯದಂತಿರಬೇಕು!
೧೬೩.
ಭಕ್ತನು ಶಾಂತನಾಗಿರಬೇಕು.
ತನ್ನ ಕುರಿತು ಬಂದ ಠಾವಿನಲ್ಲಿ ಸತ್ಯನಾಗಿರಬೇಕು.
ಭೂತಹಿತವಹ ವಚನವ ನುಡಿಯಬೇಕು.
ಲಿಂಗ-ಜಂಗಮದಲ್ಲಿ ನಿಂದೆಯಿಲ್ಲದಿರಬೇಕು.
ಸಕಲ ಪ್ರಾಣಿಗಳ ತನ್ನಂತೆ ಭಾವಿಸಬೇಕು.
ತನು-ಮನ-ಧನವ ಗುರು-ಲಿಂಗ-ಜಂಗಮಕ್ಕೆ ಸವೆಸಬೇಕು.
ಅಪಾತ್ರದಾನವಂ ಗೆಯ್ಯದಿರಬೇಕು.
ಸಕಲೇಂದ್ರಿಯಂಗಳೂ ತನ್ನ ವಶಗತವಾಗಿರಬೇಕು.
ಇದೇ ಮೊದಲಲ್ಲಿ ಬೇಹ ಶೌಚ ನೋಡಾ!
ಲಿಂಗವ ಪೂಜಿಸಿ ಪ್ರಸಾದವ ಪಡೆವಡೆ
ಎನಗಿದೇ ಸಾಧನ ಕೂಡಲಸಂಗಮದೇವ!
೧೬೪
ಕಳಬೇಡ ಕೊಲಬೇಡ,
ಹುಸಿಯ ನುಡಿಯಲು ಬೇಡ,
ಮುನಿಯ ಬೇಡ,
ಅನ್ಯರಿಗೆ ಅಸಹ್ಯಪಡಬೇಡ.
ತನ್ನ ಬಣ್ಣಿಸಬೇಡ,
ಇದಿರ ಹಳಿಯಲು ಬೇಡ.
ಇದೇ ಅಂತರಂಗಶುದ್ಧಿ!
ಇದೇ ಬಹಿರಂಗಶುದ್ಧಿ!
ಇದೆ ನಮ್ಮ ಕೂಡಲಸಂಗನನೊಲಿಸುವ ಪರಿ.
೧೬೫.
ದೇವಲೋಕ ಮರ್ತ್ಯಲೋಕವೆಂಬುದು
ಬೇರಿಲ್ಲ ಕಾಣಿರಣ್ಣ.
ಸತ್ಯವ ನುಡಿವುದೇ ದೇವಲೋಕ!
ಮಿಥ್ಯವ ನುಡಿವುದೇ ಮರ್ತ್ಯಲೋಕ!
ಆಚಾರವೇ ಸ್ವರ್ಗ! ಅನಾಚಾರವೇ ನರಕ!
ನೀವೇ ಪ್ರಮಾಣ ಕೂಡಲಸಂಗಮದೇವ.







೧೬೬.
ಪುಣ್ಯಪಾಪಂಗಳೆಂಬವು
ತಮ್ಮಿಷ್ಟ ಕಂಡಿರೇ!
'ಅಯ್ಯ' ಎಂದರೆ ಸ್ವರ್ಗ,
'ಎಲವೋ' ಎಂದರೆ ನರಕ.
"ದೇವ, ಭಕ್ತ, ಜಯ, ಜೀಯ" ಎಂಬ
ನುಡಿಯೊಳಗೆ ಕೈಲಾಸವೈದುವುದು ಕೂಡಲಸಂಗಮದೇವ.
೧೬೭.
ಏನಿ ಬಂದಿರಿ, ಹದುಳಿದ್ದಿರೆಂದರೆ
ನಿಮ್ಮ ಮೈಸಿರಿ ಹಾರಿಹೋಹುದೇ ?
ಕುಳ್ಳಿರೆಂದರೆ ನೆಲ ಕುಳಿಹೋಹುದೇ ?
ಒಡನೆ ನುಡಿದರೆ ಶಿರಹೊಟ್ಟೆ ಒಡೆವುದೆ ?
ಕೊಡಲಿಲ್ಲದಿದ್ದರೊಂದು
ಗುಣವಿಲ್ಲದಿದ್ದರೆ
ಕೆಡಹಿ ಮೂಗ ಕೊಯ್ವುದ ಮಾಬನೆ ಕೂಡಲಸಂಗಯ್ಯ ?
೧೬೮.
ಭಕ್ತಿಯೆಂಬ ನಿಧಾನವ ಸಾಧಿಸುವಡೆ
ಶಿವಪ್ರೇಮವೆಂಬಂಜನವನೆಚ್ಚಿ ಕೊಂಬುದು ?
ಭಕ್ತನಾದವಂಗಿದೇ ಪಥವಾಗಿರಬೇಕು.
ನಮ್ಮ ಕೂಡಲಸಂಗನ ಶರಣರನುಭಾವ ಗಜವೈದ್ಯ.
೧೬೯.
ಕಂಡ ಭಕ್ತರಿಗೆ ಕೈಮುಗಿವಾತನೇ ಭಕ್ತ
ಮೃದುವಚನವೇ ಸಕಲ ಜಪಂಗಳಯ್ಯ!
ಮೃದುವಚನವೇ ಸಕಲ ತಪಂಗಳಯ್ಯ ?
ಸದುವಿನಯವೇ ಸದಾಶಿವನೊಲುಮೆಯಯ್ಯ!
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯ.
೧೭೦.
ದಯವಿಲ್ಲದ ಧರ್ಮವದೇವುದಯ್ಯ,
ದಯವೇ ಬೇಕು ಸರ್ವಪ್ರಾಣಿಗಳೆಲ್ಲರಲ್ಲಿ!
ದಯವೇ ಧರ್ಮದ ಮೂಲವಯ್ಯ.
ಕೂಡಲಸಂಗಯ್ಯನಂತಲ್ಲದೊಲ್ಲ ಕಂಡಯ್ಯ.

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...