೧೦೧.
ಕಂಗಳೊಳಗೆ ತೊಳಗಿ ಬೆಳಗುವ
ದಿವ್ಯರೂಪನ ಕಂಡು ಮೈಮರೆದೆನವ್ವ
ಮಣಿಮುಕುಟದ ಫಣಿ-ಕಂಕಣದ
ನಗೆಮೊಗದ ಸುಲಿಪಲ್ಲ ಸೊಬಗನ ಕಂಡು ಮನಸೋತೆನವ್ವ
ಇಂತಾಗಿ ಚೆನ್ನಮಲ್ಲಿಕಾರ್ಜುನನೆನ್ನ ಮದುವಣಿಗ
ಆನು ಮದುವಣಿಗಿ ಕೇಳಾ ತಾಯೆ
೧೦೨.
ಮನಮನ ತಾರ್ಕಣೆಯ ಕಂಡು ಅನುಭವಿಸಲು
ನೆನಹೇ ಘನವಹುದಲ್ಲದೆ
ಅದು ಹವಣದಲ್ಲಿ ನಿಲ್ಲುವುದೇ?
ಎಲೆ ಅವ್ವ, ನೀನು ಮರುಳವ್ವೆ!
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಗೊಲಿದು
ಸಲೆ ಮಾರುವೋದೇನು
ನಿನ್ನ ತಾಯಿತನವನೊಲ್ಲೆ ಹೋಗೇ!
೧೦೩.
ಲಿಂಗವನೂ ಪುರಾತನರನೂ
ಅನ್ಯರ ಮನೆಯೊಳಯಿಂಕೆ ಹೋಗಿ ಹೊಗಳುವರು
ತಮ್ಮದೊಂದು ಉದರ ಕಾರಣ
ಲಿಂಗವೂ ಪುರಾತನರೂ ಅಲ್ಲಿಗೆ ಬರಬಲ್ಲರೆ?
ಅನ್ಯವನೆ ಮರೆದು, ನಿಮ್ಮ ನೆನೆವರ ಎನಗೊಮ್ಮೆ ತೋರಾ
ಚೆನ್ನಮಲ್ಲಿಕಾರ್ಜುನಯ್ಯ!
೧೦೪.
ಗುಣ-ದೋಷ ಸಂಪಾದನೆಯ ಮಾಡುವನ್ನಕ್ಕ
ಕಾಮದ ಒಡಲು ಕ್ರೋಧದ ಗೊತ್ತು
ಲೋಭದ ಇಕ್ಕೆ ಮೋಹದ ಮಣ್ದಿರ
ಮದದಾವರಣ ಮತ್ಸರದ ಹೊದಿಕೆ
ಆ ಭಾವವರತಲ್ಲದೆ
ಚೆನ್ನಮಲ್ಲಿಕಾರ್ಜುನನ ಅರಿವುದಕ್ಕೆ ಇಂಬಿಲ್ಲ ಕಾಣಿರಣ್ಣ
೧೦೫.
ಕಡೆಗೆ ಮಾಡದ ಭಕ್ತಿ ಧೃಡವಿಲ್ಲದಾಳುತನ
ಮೃಡನೊಲಿಯ ಹೇಳಿದರೆ ಎಂತೊಲಿವನಯ್ಯ?
ಮಾಡಲಾಗದಳಿಮನವ ಮಾಡಿದರೆ ಮನದೊಡೆಯ ಬಲ್ಲನೈಸೆ
ವಿರಳವಿಲ್ಲದ ಮಣಿಯ ಪವಣಿಸಿಹೆನೆಂದೆಡೆ
ದುರುಳ ಚೆನ್ನಮಲ್ಲಿಕಾರ್ಜುನಯ್ಯನೆಂತೊಲಿವನಯ್ಯ
೧೦೬.
ಬೆಟ್ಟದ ಮೇಲೊಂದು ಮನೆಯ ಮಾಡಿ
ಮೃಗಂಗಳಿಗಂಜಿದೊಡೆಂತಯ್ಯ?
ಸಮುದ್ರದ ತಡಿಯಲೊಂದು ಮನೆಯ ಮಾಡಿ
ನೊರೆತೆರೆಗಳಿಗಂಜಿದೊಡೆಂತಯ್ಯ?
ಸಂತೆಯೊಳಗೊಂದು ಮನೆಯ ಮಾಡಿ
ಶಬ್ದಕ್ಕೆ ನಾಚಿದೊಡೆಂತಯ್ಯ?
ಚೆನ್ನಮಲ್ಲಿಕಾಜುನದೇವ ಕೇಳಯ್ಯ
ಲೋಕದೊಳಗೆ ಹುಟ್ಟಿದ ಬಳಿಕ
ಸ್ತುತಿ-ನಿಂದೆಗಳು ಬಂದರೆ
ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು
೧೦೭.
ವೇದಶಾಸ್ತ್ರಾಗಮ ಪುರಾಣಗಳೆಂಬುವ
ಕೊಟ್ಟಣವ ಕುಟ್ಟುತ್ತ ನುಚ್ಚು ತೌಡು ಕಾಣಿ ಭೋ!
ಅವ ಕುಟ್ಟಲೇಕೆ?
ಅತ್ತಲಿತ್ತ ಹರಿವ ಮನದ ಶಿವನರಿಯಬಲ್ಲಡೆ
ಬಚ್ಚಬರಿಯ ಬಯಲು ಚೆನ್ನಮಲ್ಲಿಕಾರ್ಜುನ
೧೦೮.
ಅಮೇಧ್ಯದ ಮಡಕೆ ಮೂತ್ರದ ಕುಡಿಕೆ
ಎಲುವಿನ ತಡಿಕೆ ಕೀವಿನ ಹಡಿಕೆ
ಸುಡಲೀ ದೇಹವ
ಒಡಲುವಿಡಿದು ಕೆಡದಿರು
ಚೆನ್ನಮಲ್ಲಿಕಾರ್ಜುನನರಿ ಮರುಳೇ!
೧೦೯.
ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ
ಹಲವು ಪ್ರಾಣಿಗಳ ಕೊಂದು ನಲಿದಾಡುವ
ತನ್ನ ಮನೆಯಲೊಂದು ಶಿಶು ಸತ್ತರೆ
ಅದಕೆ ಮರುಗುವಂತೆ ಅವಕೇಕೆ ಮರುಗನು?
ಸ್ವಾತ್ಮಾನಮಿತರಾಂಶ್ಚೈವ
ದೃಷ್ಟ್ವಾ ಧೃಷ್ಟ್ವಾ ನ ಭಿದ್ಯತೇ
ಸರ್ವಂ ಚಿಜ್ಜ್ಯೋತಿರೇವೇತಿ
ಯಃ ಪಶ್ಯತಿ ಸ ಪಶ್ಯತಿ
ಎಂದುದಾಗಿ-ಜಾಲಗಾರನ ದುಃಖ ಜಗಕೆಲ್ಲ ನಗೆಗೆಡೆ
ಇದು ಕಾರಣ ಚೆನ್ನಮಲ್ಲಿಕಾರ್ಜುನಯ್ಯನ ಭಕ್ತನಾಗಿರ್ದು
ಜೀವ-ಹಿಂಸೆಯ ಮಾಡುವ ಮಾದಿಗರನೇನೆಂಬೆನಯ್ಯ
೧೧೦.
ಶೀಲ! ಶೀಲ! ಎಂತೆಬಿರಯ್ಯ?
ಶೀಲದ ನೆಲೆಯ ಒಲ್ಲಡೆ ಹೇಳಿರೋ
ಅರಿಯದಿರ್ದೊಡೆ ಕೇಳಿರೋ
ಕಾಮ [ಒಂದನೇ] ಭವಿ, ಕ್ರೋಧ ಎರಡನೇ ಭವಿ
ಲೋಭ ಮೂರನೇ ಭವಿ, ಮೋಹ ನಾಲ್ಕನೇ ಭವಿ
ಮದ ಐದನೇ ಭವಿ, ಮತ್ಸರ ಆರನೇ ಭವಿ
ಆಮಿಷ ಏಳನೇ ಭವಿ
ಇಂತೀ ಏಳು ಭವಿಗಳ ತಮ್ಮೊಳಗಿಟ್ಟುಕೊಂಡು
ಲಿಂಗವಿಲ್ಲದವರ ಭವಿ ಭವಿ ಎಂಬರು
ತಮ್ಮಂತರಂಗದಲ್ಲಿದ್ದ ಲಿಂಗಾಂಗದ ಸುದ್ದಿಯನ್ನರಿಯದೆ
ಅಚ್ಚಪ್ರಸಾದಿ-ನಿಚ್ಚಪ್ರಸಾದಿ-ಸಮಯಪ್ರಸಾದಿಗಳೆಂದು
ಜಲಕ್ಕೆ ಕನ್ನವನಿಕ್ಕಿ ಉದಕವ ತಂದು
ಲಿಂಗಮಜ್ಜನಕ್ಕೆರೆವ ಹಗಲುಗಳ್ಳರಿಗೆ ಮೆಚ್ಚುವನೆ
ಚೆನ್ನಮಲ್ಲಿಕಾರ್ಜುನ?
ಕಂಗಳೊಳಗೆ ತೊಳಗಿ ಬೆಳಗುವ
ದಿವ್ಯರೂಪನ ಕಂಡು ಮೈಮರೆದೆನವ್ವ
ಮಣಿಮುಕುಟದ ಫಣಿ-ಕಂಕಣದ
ನಗೆಮೊಗದ ಸುಲಿಪಲ್ಲ ಸೊಬಗನ ಕಂಡು ಮನಸೋತೆನವ್ವ
ಇಂತಾಗಿ ಚೆನ್ನಮಲ್ಲಿಕಾರ್ಜುನನೆನ್ನ ಮದುವಣಿಗ
ಆನು ಮದುವಣಿಗಿ ಕೇಳಾ ತಾಯೆ
೧೦೨.
ಮನಮನ ತಾರ್ಕಣೆಯ ಕಂಡು ಅನುಭವಿಸಲು
ನೆನಹೇ ಘನವಹುದಲ್ಲದೆ
ಅದು ಹವಣದಲ್ಲಿ ನಿಲ್ಲುವುದೇ?
ಎಲೆ ಅವ್ವ, ನೀನು ಮರುಳವ್ವೆ!
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಗೊಲಿದು
ಸಲೆ ಮಾರುವೋದೇನು
ನಿನ್ನ ತಾಯಿತನವನೊಲ್ಲೆ ಹೋಗೇ!
೧೦೩.
ಲಿಂಗವನೂ ಪುರಾತನರನೂ
ಅನ್ಯರ ಮನೆಯೊಳಯಿಂಕೆ ಹೋಗಿ ಹೊಗಳುವರು
ತಮ್ಮದೊಂದು ಉದರ ಕಾರಣ
ಲಿಂಗವೂ ಪುರಾತನರೂ ಅಲ್ಲಿಗೆ ಬರಬಲ್ಲರೆ?
ಅನ್ಯವನೆ ಮರೆದು, ನಿಮ್ಮ ನೆನೆವರ ಎನಗೊಮ್ಮೆ ತೋರಾ
ಚೆನ್ನಮಲ್ಲಿಕಾರ್ಜುನಯ್ಯ!
೧೦೪.
ಗುಣ-ದೋಷ ಸಂಪಾದನೆಯ ಮಾಡುವನ್ನಕ್ಕ
ಕಾಮದ ಒಡಲು ಕ್ರೋಧದ ಗೊತ್ತು
ಲೋಭದ ಇಕ್ಕೆ ಮೋಹದ ಮಣ್ದಿರ
ಮದದಾವರಣ ಮತ್ಸರದ ಹೊದಿಕೆ
ಆ ಭಾವವರತಲ್ಲದೆ
ಚೆನ್ನಮಲ್ಲಿಕಾರ್ಜುನನ ಅರಿವುದಕ್ಕೆ ಇಂಬಿಲ್ಲ ಕಾಣಿರಣ್ಣ
೧೦೫.
ಕಡೆಗೆ ಮಾಡದ ಭಕ್ತಿ ಧೃಡವಿಲ್ಲದಾಳುತನ
ಮೃಡನೊಲಿಯ ಹೇಳಿದರೆ ಎಂತೊಲಿವನಯ್ಯ?
ಮಾಡಲಾಗದಳಿಮನವ ಮಾಡಿದರೆ ಮನದೊಡೆಯ ಬಲ್ಲನೈಸೆ
ವಿರಳವಿಲ್ಲದ ಮಣಿಯ ಪವಣಿಸಿಹೆನೆಂದೆಡೆ
ದುರುಳ ಚೆನ್ನಮಲ್ಲಿಕಾರ್ಜುನಯ್ಯನೆಂತೊಲಿವನಯ್ಯ
೧೦೬.
ಬೆಟ್ಟದ ಮೇಲೊಂದು ಮನೆಯ ಮಾಡಿ
ಮೃಗಂಗಳಿಗಂಜಿದೊಡೆಂತಯ್ಯ?
ಸಮುದ್ರದ ತಡಿಯಲೊಂದು ಮನೆಯ ಮಾಡಿ
ನೊರೆತೆರೆಗಳಿಗಂಜಿದೊಡೆಂತಯ್ಯ?
ಸಂತೆಯೊಳಗೊಂದು ಮನೆಯ ಮಾಡಿ
ಶಬ್ದಕ್ಕೆ ನಾಚಿದೊಡೆಂತಯ್ಯ?
ಚೆನ್ನಮಲ್ಲಿಕಾಜುನದೇವ ಕೇಳಯ್ಯ
ಲೋಕದೊಳಗೆ ಹುಟ್ಟಿದ ಬಳಿಕ
ಸ್ತುತಿ-ನಿಂದೆಗಳು ಬಂದರೆ
ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು
೧೦೭.
ವೇದಶಾಸ್ತ್ರಾಗಮ ಪುರಾಣಗಳೆಂಬುವ
ಕೊಟ್ಟಣವ ಕುಟ್ಟುತ್ತ ನುಚ್ಚು ತೌಡು ಕಾಣಿ ಭೋ!
ಅವ ಕುಟ್ಟಲೇಕೆ?
ಅತ್ತಲಿತ್ತ ಹರಿವ ಮನದ ಶಿವನರಿಯಬಲ್ಲಡೆ
ಬಚ್ಚಬರಿಯ ಬಯಲು ಚೆನ್ನಮಲ್ಲಿಕಾರ್ಜುನ
೧೦೮.
ಅಮೇಧ್ಯದ ಮಡಕೆ ಮೂತ್ರದ ಕುಡಿಕೆ
ಎಲುವಿನ ತಡಿಕೆ ಕೀವಿನ ಹಡಿಕೆ
ಸುಡಲೀ ದೇಹವ
ಒಡಲುವಿಡಿದು ಕೆಡದಿರು
ಚೆನ್ನಮಲ್ಲಿಕಾರ್ಜುನನರಿ ಮರುಳೇ!
೧೦೯.
ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ
ಹಲವು ಪ್ರಾಣಿಗಳ ಕೊಂದು ನಲಿದಾಡುವ
ತನ್ನ ಮನೆಯಲೊಂದು ಶಿಶು ಸತ್ತರೆ
ಅದಕೆ ಮರುಗುವಂತೆ ಅವಕೇಕೆ ಮರುಗನು?
ಸ್ವಾತ್ಮಾನಮಿತರಾಂಶ್ಚೈವ
ದೃಷ್ಟ್ವಾ ಧೃಷ್ಟ್ವಾ ನ ಭಿದ್ಯತೇ
ಸರ್ವಂ ಚಿಜ್ಜ್ಯೋತಿರೇವೇತಿ
ಯಃ ಪಶ್ಯತಿ ಸ ಪಶ್ಯತಿ
ಎಂದುದಾಗಿ-ಜಾಲಗಾರನ ದುಃಖ ಜಗಕೆಲ್ಲ ನಗೆಗೆಡೆ
ಇದು ಕಾರಣ ಚೆನ್ನಮಲ್ಲಿಕಾರ್ಜುನಯ್ಯನ ಭಕ್ತನಾಗಿರ್ದು
ಜೀವ-ಹಿಂಸೆಯ ಮಾಡುವ ಮಾದಿಗರನೇನೆಂಬೆನಯ್ಯ
೧೧೦.
ಶೀಲ! ಶೀಲ! ಎಂತೆಬಿರಯ್ಯ?
ಶೀಲದ ನೆಲೆಯ ಒಲ್ಲಡೆ ಹೇಳಿರೋ
ಅರಿಯದಿರ್ದೊಡೆ ಕೇಳಿರೋ
ಕಾಮ [ಒಂದನೇ] ಭವಿ, ಕ್ರೋಧ ಎರಡನೇ ಭವಿ
ಲೋಭ ಮೂರನೇ ಭವಿ, ಮೋಹ ನಾಲ್ಕನೇ ಭವಿ
ಮದ ಐದನೇ ಭವಿ, ಮತ್ಸರ ಆರನೇ ಭವಿ
ಆಮಿಷ ಏಳನೇ ಭವಿ
ಇಂತೀ ಏಳು ಭವಿಗಳ ತಮ್ಮೊಳಗಿಟ್ಟುಕೊಂಡು
ಲಿಂಗವಿಲ್ಲದವರ ಭವಿ ಭವಿ ಎಂಬರು
ತಮ್ಮಂತರಂಗದಲ್ಲಿದ್ದ ಲಿಂಗಾಂಗದ ಸುದ್ದಿಯನ್ನರಿಯದೆ
ಅಚ್ಚಪ್ರಸಾದಿ-ನಿಚ್ಚಪ್ರಸಾದಿ-ಸಮಯಪ್ರಸಾದಿಗಳೆಂದು
ಜಲಕ್ಕೆ ಕನ್ನವನಿಕ್ಕಿ ಉದಕವ ತಂದು
ಲಿಂಗಮಜ್ಜನಕ್ಕೆರೆವ ಹಗಲುಗಳ್ಳರಿಗೆ ಮೆಚ್ಚುವನೆ
ಚೆನ್ನಮಲ್ಲಿಕಾರ್ಜುನ?
Comments
Post a Comment