೧೨೧.
ಹಸಿವೇ ನೀನು ನಿಲ್ಲು, ನಿಲ್ಲು, ತೃಷೆಯೇ ನೀನು ನಿಲ್ಲು ನಿಲ್ಲು
ನಿದ್ರೆಯೇ ನೀನು ನಿಲ್ಲು ನಿಲ್ಲು, ಕಾಮವೇ ನೀನು ನಿಲ್ಲು ನಿಲ್ಲು
ಕ್ರೋಧವೇ ನೀನು ನಿಲ್ಲು ನಿಲ್ಲು, ಮೋಹವೇ ನೀನು ನಿಲ್ಲು ನಿಲ್ಲು
ಲೋಭವೇ ನೀನು ನಿಲ್ಲು ನಿಲ್ಲು, ಮದವೇ ನೀನು ನಿಲ್ಲು ನಿಲ್ಲು
ಮಚ್ಚರವೇ ನೀನು ನಿಲ್ಲು ನಿಲ್ಲು, ಸಚರಾಚರವೇ ನೀನು ನಿಲ್ಲು ನಿಲ್ಲು
ನಾನು ಚೆನ್ನಮಲ್ಲಿಕಾರ್ಜುನದೇವರ ಅವಸರದ
ಓಲೆಯನೊಯ್ಯುತ್ತಲಿದ್ದೇನೆ ಶರಣಾರ್ಥಿ
೧೨೨.
ಹೆದರದಿರು ಮನವೇ, ಬೆದರದಿರು ಮನವೇ
ನಿಜವನರಿತು ನಿಶ್ಚಿಂತವಾಗಿರು
ಫಲವಾದ ಮರನ ಇಡುವುದೊಂದು ಕೋಟಿ
ಎಲವದ ಮರನ ಇಡುವರೊಬ್ಬರ ಕಾಣೆ
ಭಕ್ತಿಯುಳ್ಳವರ ಬೈವರೊಂದು ಕೋಟಿ,
ಭಕ್ತಿಯಿಲ್ಲದವ ಬೈವರೊಬ್ಬರ ಕಾಣೆ
ನಿಮ್ಮ ಶರಣರ ನುಡಿಯೆ ಎನಗೆ ಗತಿಸೋಪಾನ, ಚೆನ್ನಮಲ್ಲಿಕಾರ್ಜುನ
೧೨೩.
ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದರೆ
ಕನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ!
ಬೊಬ್ಬುಲಿಯನೇರಿದ ಮರ್ಕಟನಂತೆ
ಹಣ್ಣ ಮೆಲಲಿಲ್ಲ, ಕುಳ್ಳಿರೆ ಠಾವಿಲ್ಲ!
ನಾನು ಸರ್ವಸಂಗಪರಿತ್ಯಾಗ ಮಾಡಿದವಳಲ್ಲ
ನಿಮ್ಮ ಕೂಡಿ ಕುಲವಳಿದವಳಲ್ಲ ಚೆನ್ನಮಲ್ಲಿಕಾರ್ಜುನ
೧೨೪.
ಕೈಸಿರಿಯ ದಂಡವ ಕೊಳಬಹುದಲ್ಲದೆ
ಮೈಸಿರಿಯ ದಂಡವ ಕೊಳಲುಂಟೆ?
ಉಟ್ಟಂತ ಉಡಿಗೆತೊಡಿಗೆಯನೆಲ್ಲ ಸೆಳೆದುಕೊಳಬಹುದಲ್ಲದೆ
ಮುಚ್ಚಿ ಮುಸುಕಿರ್ದ ನಿರ್ವಾಣವ ಸೆಳೆದುಲೊಳಬಹುದೇ?
ಚೆನ್ನಮಲ್ಲಿಕಾರ್ಜುನದೇವರ ಬೆಳಗನುಟ್ಟು ಲಜ್ಜೆಗೆಟ್ಟವಳಿಗೆ
ಉಡಿಗೆತೊಡಿಗೆಯ ಹಂಗೇಕೊ ಮರುಳೇ?
೧೨೫.
ಮರವಿದ್ದು ಫಲವೇನು? ನೆಳಲಿಲ್ಲದನ್ನಕ!
ಧನವಿದ್ದು ಫಲವೇನು ದಯವಿಲ್ಲದನ್ನಕ?
ಹಸುವಿದ್ದು ಫಲವೇನು ಹಯನಿಲ್ಲದನ್ನಕ?
ರೂಪಿದ್ದು ಫಲವೇನು ಗುಣವಿಲ್ಲದನ್ನಕ?
ಅಗಲಿದ್ದು ಫಲವೇನು ಬಾನವಿಲ್ಲದನ್ನಕ?
ನಾನಿದ್ದು ಫಲವೇನು ನಿಮ್ಮ ಜ್ಞಾನವಿಲ್ಲದನ್ನಕ?
ಚೆನ್ನಮಲ್ಲಿಕಾರ್ಜುನ
೧೨೬.
ಕಟ್ಟಿಹಾದ ಬಿದಿರಿನಲ್ಲಿ ಮರಳಿ ಕಳಲೆ ಮೂಡಬಲ್ಲುದೆ?
ಸುಟ್ಟ ಮಡಕೆ ಮುನ್ನಿನಂತೆ ಮರಳಿ ಧರೆಯನಪ್ಪಬಲ್ಲುದೆ?
ತೊಟ್ಟು ಬಿಟ್ಟು ಬಿದ್ದ ಹಣ್ಣು ಮರಳಿ ತೊಟ್ಟನಪ್ಪಬಲ್ಲುದೆ?
ಕಷ್ಟಕರ್ಮಿ ಮನುಜರು ಕಾಣದೆ ಒಂದ ನುಡಿದರೆ
ನಿಷ್ಠೆಯುಳ್ಳ ಶರಣರು ಮರಳಿ ಮರ್ತ್ಯಕ್ಕೆ ಬಪ್ಪರೆ?
ಚೆನ್ನಮಲ್ಲಿಕಾರ್ಜುನ
೧೨೭.
ಪಂಚೇಂದ್ರಿಯಂಗಳೊಳಗೆ
ಒಂದಕ್ಕೆ ಪ್ರಿಯನಾದರೆ ಸಾಲದೆ?
ಸಪ್ತವ್ಯಸನಂಗಳೊಳಗೆ ಒಂದಕ್ಕೆ ಪ್ರಿಯನಾದರೆ ಸಾಲದೆ?
ರತ್ನದ ಸಂಕೋಲೆಯಾದಡೇನು ಬಂಧನ ಬಿಡುವುದೆ?
ಚೆನ್ನಮಲ್ಲಿಕಾರ್ಜುನ
೧೨೮.
ಮರೆಯ ನೂಲು ಸರಿಯೆ
ನಾಚುವುದು ನೋಡಾ ಗಂಡು ಹೆಣ್ಣೆಂಬ ಜಾತಿ
ಪ್ರಾಣದೊಡೆಯ ನೀ ಜಗದಲ್ಲಿ
ತೆರಹಿಲ್ಲದೊಪ್ಪುಡೆ ನಾಚಲೆಡೆಯುಂಟೆ ಹೇಳಾ!
ಚೆನ್ನಮಲ್ಲಿಕಾರ್ಜುನಯ್ಯ ಜಗವೆಲ್ಲ ಕಣ್ಣಾಗಿ ನೋಡುತ್ತಿರೆ
ಮುಚ್ಚಿ ಮರೆಯಿಸುವೆನೆಂತು ಹೇಳಾ ಅಯ್ಯ
೧೨೯.
ತನುವಿಡಿದು ದಾಸೋಹವ ಮಾಡಿ, ಗುರುಪ್ರಸಾದಿಯಾದ ಬಸವಣ್ಣ
ಮನವಿಡಿದು ದಾಸೋಹವ ಮಾಡಿ ಲಿಂಗಪ್ರಸಾದಿಯಾದ ಬಸವಣ್ಣ
ಧನವಿಡಿದು ದಾಸೋಹವ ಮಾಡಿ, ಜಂಗಮಪ್ರಸಾದಿಯಾದ ಬಸವಣ್ಣ
ಇಂತೀ ತ್ರಿವಿಧವಿಡಿದು ದಾಸೋಹವ ಮಾಡಿ
ಸದ್ಗುರು ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣ ಬಸವಣ್ಣ ಸ್ವಯಂಪ್ರಸಾದಿಯಾದನಯ್ಯ
೧೩೦.
ಆತುರದ ಧ್ಯಾನದಿಂದ ಧಾವತಿಗೊಂಡೆ
ಜ್ಯೋತಿರ್ಲಿಂಗವ ಕಾಣಿಸಬಾರದು, ಮಾತಿನ ಮಾತಿಗೆ ಸಿಲುಕುವನಲ್ಲ
ಧಾತುಗೆಡಿಸಿ ಮನವ ನೋಡಿ ಕಾಡುವನು
ಆತುಮನಂತರ-ಪರವನರಿದಡೆ ಆತನೆ ಶಿವಯೋಗಿ
ಆತನ ಪಾದಕೆ ಶರಣು ಎಂಬೆನಯ್ಯ ಚೆನ್ನಮಲ್ಲಿಕಾರ್ಜುನ
ಹಸಿವೇ ನೀನು ನಿಲ್ಲು, ನಿಲ್ಲು, ತೃಷೆಯೇ ನೀನು ನಿಲ್ಲು ನಿಲ್ಲು
ನಿದ್ರೆಯೇ ನೀನು ನಿಲ್ಲು ನಿಲ್ಲು, ಕಾಮವೇ ನೀನು ನಿಲ್ಲು ನಿಲ್ಲು
ಕ್ರೋಧವೇ ನೀನು ನಿಲ್ಲು ನಿಲ್ಲು, ಮೋಹವೇ ನೀನು ನಿಲ್ಲು ನಿಲ್ಲು
ಲೋಭವೇ ನೀನು ನಿಲ್ಲು ನಿಲ್ಲು, ಮದವೇ ನೀನು ನಿಲ್ಲು ನಿಲ್ಲು
ಮಚ್ಚರವೇ ನೀನು ನಿಲ್ಲು ನಿಲ್ಲು, ಸಚರಾಚರವೇ ನೀನು ನಿಲ್ಲು ನಿಲ್ಲು
ನಾನು ಚೆನ್ನಮಲ್ಲಿಕಾರ್ಜುನದೇವರ ಅವಸರದ
ಓಲೆಯನೊಯ್ಯುತ್ತಲಿದ್ದೇನೆ ಶರಣಾರ್ಥಿ
೧೨೨.
ಹೆದರದಿರು ಮನವೇ, ಬೆದರದಿರು ಮನವೇ
ನಿಜವನರಿತು ನಿಶ್ಚಿಂತವಾಗಿರು
ಫಲವಾದ ಮರನ ಇಡುವುದೊಂದು ಕೋಟಿ
ಎಲವದ ಮರನ ಇಡುವರೊಬ್ಬರ ಕಾಣೆ
ಭಕ್ತಿಯುಳ್ಳವರ ಬೈವರೊಂದು ಕೋಟಿ,
ಭಕ್ತಿಯಿಲ್ಲದವ ಬೈವರೊಬ್ಬರ ಕಾಣೆ
ನಿಮ್ಮ ಶರಣರ ನುಡಿಯೆ ಎನಗೆ ಗತಿಸೋಪಾನ, ಚೆನ್ನಮಲ್ಲಿಕಾರ್ಜುನ
೧೨೩.
ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದರೆ
ಕನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ!
ಬೊಬ್ಬುಲಿಯನೇರಿದ ಮರ್ಕಟನಂತೆ
ಹಣ್ಣ ಮೆಲಲಿಲ್ಲ, ಕುಳ್ಳಿರೆ ಠಾವಿಲ್ಲ!
ನಾನು ಸರ್ವಸಂಗಪರಿತ್ಯಾಗ ಮಾಡಿದವಳಲ್ಲ
ನಿಮ್ಮ ಕೂಡಿ ಕುಲವಳಿದವಳಲ್ಲ ಚೆನ್ನಮಲ್ಲಿಕಾರ್ಜುನ
೧೨೪.
ಕೈಸಿರಿಯ ದಂಡವ ಕೊಳಬಹುದಲ್ಲದೆ
ಮೈಸಿರಿಯ ದಂಡವ ಕೊಳಲುಂಟೆ?
ಉಟ್ಟಂತ ಉಡಿಗೆತೊಡಿಗೆಯನೆಲ್ಲ ಸೆಳೆದುಕೊಳಬಹುದಲ್ಲದೆ
ಮುಚ್ಚಿ ಮುಸುಕಿರ್ದ ನಿರ್ವಾಣವ ಸೆಳೆದುಲೊಳಬಹುದೇ?
ಚೆನ್ನಮಲ್ಲಿಕಾರ್ಜುನದೇವರ ಬೆಳಗನುಟ್ಟು ಲಜ್ಜೆಗೆಟ್ಟವಳಿಗೆ
ಉಡಿಗೆತೊಡಿಗೆಯ ಹಂಗೇಕೊ ಮರುಳೇ?
೧೨೫.
ಮರವಿದ್ದು ಫಲವೇನು? ನೆಳಲಿಲ್ಲದನ್ನಕ!
ಧನವಿದ್ದು ಫಲವೇನು ದಯವಿಲ್ಲದನ್ನಕ?
ಹಸುವಿದ್ದು ಫಲವೇನು ಹಯನಿಲ್ಲದನ್ನಕ?
ರೂಪಿದ್ದು ಫಲವೇನು ಗುಣವಿಲ್ಲದನ್ನಕ?
ಅಗಲಿದ್ದು ಫಲವೇನು ಬಾನವಿಲ್ಲದನ್ನಕ?
ನಾನಿದ್ದು ಫಲವೇನು ನಿಮ್ಮ ಜ್ಞಾನವಿಲ್ಲದನ್ನಕ?
ಚೆನ್ನಮಲ್ಲಿಕಾರ್ಜುನ
೧೨೬.
ಕಟ್ಟಿಹಾದ ಬಿದಿರಿನಲ್ಲಿ ಮರಳಿ ಕಳಲೆ ಮೂಡಬಲ್ಲುದೆ?
ಸುಟ್ಟ ಮಡಕೆ ಮುನ್ನಿನಂತೆ ಮರಳಿ ಧರೆಯನಪ್ಪಬಲ್ಲುದೆ?
ತೊಟ್ಟು ಬಿಟ್ಟು ಬಿದ್ದ ಹಣ್ಣು ಮರಳಿ ತೊಟ್ಟನಪ್ಪಬಲ್ಲುದೆ?
ಕಷ್ಟಕರ್ಮಿ ಮನುಜರು ಕಾಣದೆ ಒಂದ ನುಡಿದರೆ
ನಿಷ್ಠೆಯುಳ್ಳ ಶರಣರು ಮರಳಿ ಮರ್ತ್ಯಕ್ಕೆ ಬಪ್ಪರೆ?
ಚೆನ್ನಮಲ್ಲಿಕಾರ್ಜುನ
೧೨೭.
ಪಂಚೇಂದ್ರಿಯಂಗಳೊಳಗೆ
ಒಂದಕ್ಕೆ ಪ್ರಿಯನಾದರೆ ಸಾಲದೆ?
ಸಪ್ತವ್ಯಸನಂಗಳೊಳಗೆ ಒಂದಕ್ಕೆ ಪ್ರಿಯನಾದರೆ ಸಾಲದೆ?
ರತ್ನದ ಸಂಕೋಲೆಯಾದಡೇನು ಬಂಧನ ಬಿಡುವುದೆ?
ಚೆನ್ನಮಲ್ಲಿಕಾರ್ಜುನ
೧೨೮.
ಮರೆಯ ನೂಲು ಸರಿಯೆ
ನಾಚುವುದು ನೋಡಾ ಗಂಡು ಹೆಣ್ಣೆಂಬ ಜಾತಿ
ಪ್ರಾಣದೊಡೆಯ ನೀ ಜಗದಲ್ಲಿ
ತೆರಹಿಲ್ಲದೊಪ್ಪುಡೆ ನಾಚಲೆಡೆಯುಂಟೆ ಹೇಳಾ!
ಚೆನ್ನಮಲ್ಲಿಕಾರ್ಜುನಯ್ಯ ಜಗವೆಲ್ಲ ಕಣ್ಣಾಗಿ ನೋಡುತ್ತಿರೆ
ಮುಚ್ಚಿ ಮರೆಯಿಸುವೆನೆಂತು ಹೇಳಾ ಅಯ್ಯ
೧೨೯.
ತನುವಿಡಿದು ದಾಸೋಹವ ಮಾಡಿ, ಗುರುಪ್ರಸಾದಿಯಾದ ಬಸವಣ್ಣ
ಮನವಿಡಿದು ದಾಸೋಹವ ಮಾಡಿ ಲಿಂಗಪ್ರಸಾದಿಯಾದ ಬಸವಣ್ಣ
ಧನವಿಡಿದು ದಾಸೋಹವ ಮಾಡಿ, ಜಂಗಮಪ್ರಸಾದಿಯಾದ ಬಸವಣ್ಣ
ಇಂತೀ ತ್ರಿವಿಧವಿಡಿದು ದಾಸೋಹವ ಮಾಡಿ
ಸದ್ಗುರು ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣ ಬಸವಣ್ಣ ಸ್ವಯಂಪ್ರಸಾದಿಯಾದನಯ್ಯ
೧೩೦.
ಆತುರದ ಧ್ಯಾನದಿಂದ ಧಾವತಿಗೊಂಡೆ
ಜ್ಯೋತಿರ್ಲಿಂಗವ ಕಾಣಿಸಬಾರದು, ಮಾತಿನ ಮಾತಿಗೆ ಸಿಲುಕುವನಲ್ಲ
ಧಾತುಗೆಡಿಸಿ ಮನವ ನೋಡಿ ಕಾಡುವನು
ಆತುಮನಂತರ-ಪರವನರಿದಡೆ ಆತನೆ ಶಿವಯೋಗಿ
ಆತನ ಪಾದಕೆ ಶರಣು ಎಂಬೆನಯ್ಯ ಚೆನ್ನಮಲ್ಲಿಕಾರ್ಜುನ
Comments
Post a Comment