Skip to main content

ಅಕ್ಕನ ವಚನಗಳು - 151 ರಿಂದ 160 ರವರೆಗೆ

೧೫೧.
ಎನ್ನಂಗದಲಿ ಆಚಾರವ ತೋರಿದನಯ್ಯ ಬಸವಣ್ಣನು
[ಆ] ಆಚಾರವೇ ಲಿಂಗವೆಂದರುಹಿದನಯ್ಯ ಬಸವಣ್ಣನು
ಎನ್ನ ಪ್ರಾಣದಲ್ಲಿ ಅರುಹ ತೋರಿದನಯ್ಯ ಬಸವಣ್ಣನು
ಆ ಅರುಹೇ ಜಂಗಮವೆಂದರುಹಿದನಯ್ಯ ಬಸವಣ್ನನು
[ಚೆನ್ನಮಲ್ಲಿಕಾರ್ಜುನ] [ಎನ್ನ] ಹೆತ್ತ ತಂದೆ ಸಂಗಬಸವಣ್ನನು
ಎನಗೀ ಕ್ರಮವನರುಹಿದನಯ್ಯ

೧೫೨.
ಗಂಗೆಯೊಡನಾಡಿದ ಗಟ್ಟ-ಬೆಟ್ಟಂಗಳು
ಕೆಟ್ಟ ಕೇಡ ನೋಡಯ್ಯ
ಅಗ್ನಿಯೊಡನಾಡಿದ ಕಾಷ್ಟಂಗಳು ಕೆಟ್ಟ ಕೇಡ ನೋಡಯ್ಯ
ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಯ್ಯ
ಇಂತೀ ಪರಶಿವಮೂರ್ತಿ ಹರನೇ
ನಿಮ್ಮ ಜಂಗಮಲಿಂಗದೊಡನಾಡಿ ಎನ್ನ ಭವಾದಿಭವಂಗಳು
ಕೆಟ್ಟ ಕೇಡ ನೋಡಾ ಚೆನ್ನಮಲ್ಲಿಕಾರ್ಜುನ

೧೫೩.
ಮರ್ತ್ಯಲೋಕದ ಭಕ್ತರ ಮನವ ಬೆಳಗಲೆಂದು
ಇಳಿತಂದನಯ್ಯ ಶಿವನು
ಕತ್ತಲೆಯ ಪಾತಾಳವ ರವಿ ಹೊಕ್ಕಂತಾಯಿತಯ್ಯ
ಚಿತ್ತದ ಪ್ರವೃತ್ತಿಯ ಹಿಂಗಿಸಿ
ಮುಕ್ತಿಪಥವ ತೋರಿದನಲ್ಲಾ ಅಸಂಖ್ಯಾತರುಗಳಿಗೆ
ತನುವೆಲ್ಲ ಸ್ವಯಂಲಿಂಗ, ಮನವೆಲ್ಲ ಚರಲಿಂಗ
ಭಾವವೆಲ್ಲ ಮಹಾಘನದ ಬೆಳಗು
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣಸಮ್ಯಜ್ಞಾನಿ ಚೆನ್ನಬಸವಣ್ಣನ
ಶ್ರೀಪಾದಕ್ಕೆ ಶರಣೆಂದು
ಎನ್ನ ಭಾವಂ ನಾಸ್ತಿಯಾಯಿತ್ತಯ್ಯ ಪ್ರಭುವೇ

೧೫೪.
ಕಲ್ಯಾಣವೆಂಬುದಿನ್ನಾರಿಗೂ ಹೊಗಬಾರದು
ಆಶೆ-ಆಮಿಷವನಳಿದವಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು
ಒಳಗು-ಹೊರಗೂ ಶುದ್ಧವಾದಂಗಲ್ಲದೆ ಕಲ್ಯಾಣವ ಹೊಗಬಾರದು
ನಾನೆಂಬುದು ಹರಿದವಂಗಲ್ಲದೆ ಕಲ್ಯಾಣವ ಹೊಗಬಾರದು
ಒಳಗು ತಿಳಿದು ಚೆನ್ನಮಲ್ಲಿಕಾರ್ಜುನಂಗೊಲಿದು
ಉಭಯ ಲಜ್ಜೆಯಳಿದೆನಾಗಿ ಕಲ್ಯಾಣವ ಕಂಡು
ನಮೋ ನಮೋ ಎನುತಿರ್ದೆನು

೧೫೫.
ಅಯ್ಯಾ ನಿಮ್ಮಾನುಭಾವಿಗಳ ಸಂಗದಿಂದ
ಎನ್ನ ತನು ಶುದ್ಧವಾಯಿತ್ತು!
ಅಯ್ಯಾ ನಿಮ್ಮ ಅನುಭಾವಿಗಳ ಸಂಗದಿಂದ
ಎನ್ನ ಮನ ಶುದ್ಧವಾಯಿತ್ತು!
ಅಯ್ಯಾ ನಿಮ್ಮ ಅನುಭಾವಿಗಳು ಒರೆದೊರೆದು ಆಗುಮಾಡಿದ ಕಾರಣ
ಚೆನ್ನಮಲ್ಲಿಕಾರ್ಜುನ, ನಿಮಗಾನು ತೊಡಿಗೆಯಾದೆನು






೧೫೬.
ಅರಸಿ ತೊಳಲಿದರಿಲ್ಲ ಹರಸಿ ಬಳಲಿದರಿಲ್ಲ
ಬಯಸಿ ಹೊಕ್ಕರಿಲ್ಲ ತಪಸ್ಸು ಮಾಡಿದರಿಲ್ಲ
ಅದು ತನ್ನ ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು
ಶಿವನೊಲಿದಲ್ಲದೇ ಕೈಗೂಡದು
ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿ
ನಾನು ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು

೧೫೭.
ಹಾವಿನ ಬಾಯ ಹಲ್ಲ ಕಳೆದು
ಹಾವನಾಡಿಸಬಲ್ಲೆಡೆ
ಹಾವಿನ ಸಂಗವೆ ಲೇಸು ಕಂಡಯ್ಯ!
ಕಾಯದ ಸಂಗವ ವಿವರಿಸಬಲ್ಲಡೆ
ಕಾಯದ ಸಂಗವೇ ಲೇಸು ಕಂಡಯ್ಯ!
ತಾಯಿ ರಕ್ಕಸಿಯಾದಂತೆ ಕಾಯವಿಕಾರವು
ಚೆನ್ನಮಲ್ಲಿಕಾರ್ಜುನಯ್ಯ,
ನೀನೊಲಿದವರು ಕಾಯಗೊಂಡಿದ್ದರೆನಬೇಡ

೧೫೮.
ಅಂಗವಿಕಾರಸಂಗವ ಮರೆದು
ಲಿಂಗವನೊಡಗೂಡುತಿಪ್ಪರ ತೋರಾ ಎನಗೆ!
ಕಾಯವಿಕಾರ ಕತ್ತಲೆಯಳಿದು
ಭಕ್ತಿಯೇ ಪ್ರಾಣವಾಗಿಪ್ಪರ ತೋರಾ ಎನಗೆ!
ತ್ರಿಕರಣಶುದ್ಧವಾಗಿ ನಿಮ್ಮ ನೆರೆನಂಬಿದ ಸದ್ಭಕ್ತರ ತೋರಾ ಎನಗೆ
ಚೆನ್ನಮಲ್ಲಿಕಾರ್ಜುನ

೧೫೯.
ತುಂಬಿದುದು ತುಳುಕದು ನೋಡಾ
ನಂಬಿದುದು ಸಂದೇಹಿಸದು ನೋಡಾ
ಒಳಿದುದು ಓಸರಿಸದು ನೋಡಾ
ನೆರೆಯರಿದುದು ಮರೆಯದು ನೋಡಾ
ಚೆನ್ನಮಲ್ಲಿಕಾರ್ಜುನಯ್ಯ, ನೀನೊಲಿದ ಶರಣಂಗೆ
ನಿಸ್ಸೀಮ ಸುಖ ನೋಡಯ್ಯ!

೧೬೦.
ನೋಡಿ ನುಡಿಸಿ ಮಾತಾಡಿಸಿದಡೊಂದು ಸುಖ
ಏನ ಮಾಡದಯ್ಯ ನಿಮ್ಮ ಶರಣರ ಅನುಭಾವ?
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣರ ಸದ್ಗೋಷ್ಠಿ ಏನ ಮಾಡಯ್ಯ?

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ