೧೫೧.
ಎನ್ನಂಗದಲಿ ಆಚಾರವ ತೋರಿದನಯ್ಯ ಬಸವಣ್ಣನು
[ಆ] ಆಚಾರವೇ ಲಿಂಗವೆಂದರುಹಿದನಯ್ಯ ಬಸವಣ್ಣನು
ಎನ್ನ ಪ್ರಾಣದಲ್ಲಿ ಅರುಹ ತೋರಿದನಯ್ಯ ಬಸವಣ್ಣನು
ಆ ಅರುಹೇ ಜಂಗಮವೆಂದರುಹಿದನಯ್ಯ ಬಸವಣ್ನನು
[ಚೆನ್ನಮಲ್ಲಿಕಾರ್ಜುನ] [ಎನ್ನ] ಹೆತ್ತ ತಂದೆ ಸಂಗಬಸವಣ್ನನು
ಎನಗೀ ಕ್ರಮವನರುಹಿದನಯ್ಯ
೧೫೨.
ಗಂಗೆಯೊಡನಾಡಿದ ಗಟ್ಟ-ಬೆಟ್ಟಂಗಳು
ಕೆಟ್ಟ ಕೇಡ ನೋಡಯ್ಯ
ಅಗ್ನಿಯೊಡನಾಡಿದ ಕಾಷ್ಟಂಗಳು ಕೆಟ್ಟ ಕೇಡ ನೋಡಯ್ಯ
ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಯ್ಯ
ಇಂತೀ ಪರಶಿವಮೂರ್ತಿ ಹರನೇ
ನಿಮ್ಮ ಜಂಗಮಲಿಂಗದೊಡನಾಡಿ ಎನ್ನ ಭವಾದಿಭವಂಗಳು
ಕೆಟ್ಟ ಕೇಡ ನೋಡಾ ಚೆನ್ನಮಲ್ಲಿಕಾರ್ಜುನ
೧೫೩.
ಮರ್ತ್ಯಲೋಕದ ಭಕ್ತರ ಮನವ ಬೆಳಗಲೆಂದು
ಇಳಿತಂದನಯ್ಯ ಶಿವನು
ಕತ್ತಲೆಯ ಪಾತಾಳವ ರವಿ ಹೊಕ್ಕಂತಾಯಿತಯ್ಯ
ಚಿತ್ತದ ಪ್ರವೃತ್ತಿಯ ಹಿಂಗಿಸಿ
ಮುಕ್ತಿಪಥವ ತೋರಿದನಲ್ಲಾ ಅಸಂಖ್ಯಾತರುಗಳಿಗೆ
ತನುವೆಲ್ಲ ಸ್ವಯಂಲಿಂಗ, ಮನವೆಲ್ಲ ಚರಲಿಂಗ
ಭಾವವೆಲ್ಲ ಮಹಾಘನದ ಬೆಳಗು
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣಸಮ್ಯಜ್ಞಾನಿ ಚೆನ್ನಬಸವಣ್ಣನ
ಶ್ರೀಪಾದಕ್ಕೆ ಶರಣೆಂದು
ಎನ್ನ ಭಾವಂ ನಾಸ್ತಿಯಾಯಿತ್ತಯ್ಯ ಪ್ರಭುವೇ
೧೫೪.
ಕಲ್ಯಾಣವೆಂಬುದಿನ್ನಾರಿಗೂ ಹೊಗಬಾರದು
ಆಶೆ-ಆಮಿಷವನಳಿದವಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು
ಒಳಗು-ಹೊರಗೂ ಶುದ್ಧವಾದಂಗಲ್ಲದೆ ಕಲ್ಯಾಣವ ಹೊಗಬಾರದು
ನಾನೆಂಬುದು ಹರಿದವಂಗಲ್ಲದೆ ಕಲ್ಯಾಣವ ಹೊಗಬಾರದು
ಒಳಗು ತಿಳಿದು ಚೆನ್ನಮಲ್ಲಿಕಾರ್ಜುನಂಗೊಲಿದು
ಉಭಯ ಲಜ್ಜೆಯಳಿದೆನಾಗಿ ಕಲ್ಯಾಣವ ಕಂಡು
ನಮೋ ನಮೋ ಎನುತಿರ್ದೆನು
೧೫೫.
ಅಯ್ಯಾ ನಿಮ್ಮಾನುಭಾವಿಗಳ ಸಂಗದಿಂದ
ಎನ್ನ ತನು ಶುದ್ಧವಾಯಿತ್ತು!
ಅಯ್ಯಾ ನಿಮ್ಮ ಅನುಭಾವಿಗಳ ಸಂಗದಿಂದ
ಎನ್ನ ಮನ ಶುದ್ಧವಾಯಿತ್ತು!
ಅಯ್ಯಾ ನಿಮ್ಮ ಅನುಭಾವಿಗಳು ಒರೆದೊರೆದು ಆಗುಮಾಡಿದ ಕಾರಣ
ಚೆನ್ನಮಲ್ಲಿಕಾರ್ಜುನ, ನಿಮಗಾನು ತೊಡಿಗೆಯಾದೆನು
೧೫೬.
ಅರಸಿ ತೊಳಲಿದರಿಲ್ಲ ಹರಸಿ ಬಳಲಿದರಿಲ್ಲ
ಬಯಸಿ ಹೊಕ್ಕರಿಲ್ಲ ತಪಸ್ಸು ಮಾಡಿದರಿಲ್ಲ
ಅದು ತನ್ನ ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು
ಶಿವನೊಲಿದಲ್ಲದೇ ಕೈಗೂಡದು
ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿ
ನಾನು ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು
೧೫೭.
ಹಾವಿನ ಬಾಯ ಹಲ್ಲ ಕಳೆದು
ಹಾವನಾಡಿಸಬಲ್ಲೆಡೆ
ಹಾವಿನ ಸಂಗವೆ ಲೇಸು ಕಂಡಯ್ಯ!
ಕಾಯದ ಸಂಗವ ವಿವರಿಸಬಲ್ಲಡೆ
ಕಾಯದ ಸಂಗವೇ ಲೇಸು ಕಂಡಯ್ಯ!
ತಾಯಿ ರಕ್ಕಸಿಯಾದಂತೆ ಕಾಯವಿಕಾರವು
ಚೆನ್ನಮಲ್ಲಿಕಾರ್ಜುನಯ್ಯ,
ನೀನೊಲಿದವರು ಕಾಯಗೊಂಡಿದ್ದರೆನಬೇಡ
೧೫೮.
ಅಂಗವಿಕಾರಸಂಗವ ಮರೆದು
ಲಿಂಗವನೊಡಗೂಡುತಿಪ್ಪರ ತೋರಾ ಎನಗೆ!
ಕಾಯವಿಕಾರ ಕತ್ತಲೆಯಳಿದು
ಭಕ್ತಿಯೇ ಪ್ರಾಣವಾಗಿಪ್ಪರ ತೋರಾ ಎನಗೆ!
ತ್ರಿಕರಣಶುದ್ಧವಾಗಿ ನಿಮ್ಮ ನೆರೆನಂಬಿದ ಸದ್ಭಕ್ತರ ತೋರಾ ಎನಗೆ
ಚೆನ್ನಮಲ್ಲಿಕಾರ್ಜುನ
೧೫೯.
ತುಂಬಿದುದು ತುಳುಕದು ನೋಡಾ
ನಂಬಿದುದು ಸಂದೇಹಿಸದು ನೋಡಾ
ಒಳಿದುದು ಓಸರಿಸದು ನೋಡಾ
ನೆರೆಯರಿದುದು ಮರೆಯದು ನೋಡಾ
ಚೆನ್ನಮಲ್ಲಿಕಾರ್ಜುನಯ್ಯ, ನೀನೊಲಿದ ಶರಣಂಗೆ
ನಿಸ್ಸೀಮ ಸುಖ ನೋಡಯ್ಯ!
೧೬೦.
ನೋಡಿ ನುಡಿಸಿ ಮಾತಾಡಿಸಿದಡೊಂದು ಸುಖ
ಏನ ಮಾಡದಯ್ಯ ನಿಮ್ಮ ಶರಣರ ಅನುಭಾವ?
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣರ ಸದ್ಗೋಷ್ಠಿ ಏನ ಮಾಡಯ್ಯ?
ಎನ್ನಂಗದಲಿ ಆಚಾರವ ತೋರಿದನಯ್ಯ ಬಸವಣ್ಣನು
[ಆ] ಆಚಾರವೇ ಲಿಂಗವೆಂದರುಹಿದನಯ್ಯ ಬಸವಣ್ಣನು
ಎನ್ನ ಪ್ರಾಣದಲ್ಲಿ ಅರುಹ ತೋರಿದನಯ್ಯ ಬಸವಣ್ಣನು
ಆ ಅರುಹೇ ಜಂಗಮವೆಂದರುಹಿದನಯ್ಯ ಬಸವಣ್ನನು
[ಚೆನ್ನಮಲ್ಲಿಕಾರ್ಜುನ] [ಎನ್ನ] ಹೆತ್ತ ತಂದೆ ಸಂಗಬಸವಣ್ನನು
ಎನಗೀ ಕ್ರಮವನರುಹಿದನಯ್ಯ
೧೫೨.
ಗಂಗೆಯೊಡನಾಡಿದ ಗಟ್ಟ-ಬೆಟ್ಟಂಗಳು
ಕೆಟ್ಟ ಕೇಡ ನೋಡಯ್ಯ
ಅಗ್ನಿಯೊಡನಾಡಿದ ಕಾಷ್ಟಂಗಳು ಕೆಟ್ಟ ಕೇಡ ನೋಡಯ್ಯ
ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಯ್ಯ
ಇಂತೀ ಪರಶಿವಮೂರ್ತಿ ಹರನೇ
ನಿಮ್ಮ ಜಂಗಮಲಿಂಗದೊಡನಾಡಿ ಎನ್ನ ಭವಾದಿಭವಂಗಳು
ಕೆಟ್ಟ ಕೇಡ ನೋಡಾ ಚೆನ್ನಮಲ್ಲಿಕಾರ್ಜುನ
೧೫೩.
ಮರ್ತ್ಯಲೋಕದ ಭಕ್ತರ ಮನವ ಬೆಳಗಲೆಂದು
ಇಳಿತಂದನಯ್ಯ ಶಿವನು
ಕತ್ತಲೆಯ ಪಾತಾಳವ ರವಿ ಹೊಕ್ಕಂತಾಯಿತಯ್ಯ
ಚಿತ್ತದ ಪ್ರವೃತ್ತಿಯ ಹಿಂಗಿಸಿ
ಮುಕ್ತಿಪಥವ ತೋರಿದನಲ್ಲಾ ಅಸಂಖ್ಯಾತರುಗಳಿಗೆ
ತನುವೆಲ್ಲ ಸ್ವಯಂಲಿಂಗ, ಮನವೆಲ್ಲ ಚರಲಿಂಗ
ಭಾವವೆಲ್ಲ ಮಹಾಘನದ ಬೆಳಗು
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣಸಮ್ಯಜ್ಞಾನಿ ಚೆನ್ನಬಸವಣ್ಣನ
ಶ್ರೀಪಾದಕ್ಕೆ ಶರಣೆಂದು
ಎನ್ನ ಭಾವಂ ನಾಸ್ತಿಯಾಯಿತ್ತಯ್ಯ ಪ್ರಭುವೇ
೧೫೪.
ಕಲ್ಯಾಣವೆಂಬುದಿನ್ನಾರಿಗೂ ಹೊಗಬಾರದು
ಆಶೆ-ಆಮಿಷವನಳಿದವಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು
ಒಳಗು-ಹೊರಗೂ ಶುದ್ಧವಾದಂಗಲ್ಲದೆ ಕಲ್ಯಾಣವ ಹೊಗಬಾರದು
ನಾನೆಂಬುದು ಹರಿದವಂಗಲ್ಲದೆ ಕಲ್ಯಾಣವ ಹೊಗಬಾರದು
ಒಳಗು ತಿಳಿದು ಚೆನ್ನಮಲ್ಲಿಕಾರ್ಜುನಂಗೊಲಿದು
ಉಭಯ ಲಜ್ಜೆಯಳಿದೆನಾಗಿ ಕಲ್ಯಾಣವ ಕಂಡು
ನಮೋ ನಮೋ ಎನುತಿರ್ದೆನು
೧೫೫.
ಅಯ್ಯಾ ನಿಮ್ಮಾನುಭಾವಿಗಳ ಸಂಗದಿಂದ
ಎನ್ನ ತನು ಶುದ್ಧವಾಯಿತ್ತು!
ಅಯ್ಯಾ ನಿಮ್ಮ ಅನುಭಾವಿಗಳ ಸಂಗದಿಂದ
ಎನ್ನ ಮನ ಶುದ್ಧವಾಯಿತ್ತು!
ಅಯ್ಯಾ ನಿಮ್ಮ ಅನುಭಾವಿಗಳು ಒರೆದೊರೆದು ಆಗುಮಾಡಿದ ಕಾರಣ
ಚೆನ್ನಮಲ್ಲಿಕಾರ್ಜುನ, ನಿಮಗಾನು ತೊಡಿಗೆಯಾದೆನು
೧೫೬.
ಅರಸಿ ತೊಳಲಿದರಿಲ್ಲ ಹರಸಿ ಬಳಲಿದರಿಲ್ಲ
ಬಯಸಿ ಹೊಕ್ಕರಿಲ್ಲ ತಪಸ್ಸು ಮಾಡಿದರಿಲ್ಲ
ಅದು ತನ್ನ ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು
ಶಿವನೊಲಿದಲ್ಲದೇ ಕೈಗೂಡದು
ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿ
ನಾನು ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು
೧೫೭.
ಹಾವಿನ ಬಾಯ ಹಲ್ಲ ಕಳೆದು
ಹಾವನಾಡಿಸಬಲ್ಲೆಡೆ
ಹಾವಿನ ಸಂಗವೆ ಲೇಸು ಕಂಡಯ್ಯ!
ಕಾಯದ ಸಂಗವ ವಿವರಿಸಬಲ್ಲಡೆ
ಕಾಯದ ಸಂಗವೇ ಲೇಸು ಕಂಡಯ್ಯ!
ತಾಯಿ ರಕ್ಕಸಿಯಾದಂತೆ ಕಾಯವಿಕಾರವು
ಚೆನ್ನಮಲ್ಲಿಕಾರ್ಜುನಯ್ಯ,
ನೀನೊಲಿದವರು ಕಾಯಗೊಂಡಿದ್ದರೆನಬೇಡ
೧೫೮.
ಅಂಗವಿಕಾರಸಂಗವ ಮರೆದು
ಲಿಂಗವನೊಡಗೂಡುತಿಪ್ಪರ ತೋರಾ ಎನಗೆ!
ಕಾಯವಿಕಾರ ಕತ್ತಲೆಯಳಿದು
ಭಕ್ತಿಯೇ ಪ್ರಾಣವಾಗಿಪ್ಪರ ತೋರಾ ಎನಗೆ!
ತ್ರಿಕರಣಶುದ್ಧವಾಗಿ ನಿಮ್ಮ ನೆರೆನಂಬಿದ ಸದ್ಭಕ್ತರ ತೋರಾ ಎನಗೆ
ಚೆನ್ನಮಲ್ಲಿಕಾರ್ಜುನ
೧೫೯.
ತುಂಬಿದುದು ತುಳುಕದು ನೋಡಾ
ನಂಬಿದುದು ಸಂದೇಹಿಸದು ನೋಡಾ
ಒಳಿದುದು ಓಸರಿಸದು ನೋಡಾ
ನೆರೆಯರಿದುದು ಮರೆಯದು ನೋಡಾ
ಚೆನ್ನಮಲ್ಲಿಕಾರ್ಜುನಯ್ಯ, ನೀನೊಲಿದ ಶರಣಂಗೆ
ನಿಸ್ಸೀಮ ಸುಖ ನೋಡಯ್ಯ!
೧೬೦.
ನೋಡಿ ನುಡಿಸಿ ಮಾತಾಡಿಸಿದಡೊಂದು ಸುಖ
ಏನ ಮಾಡದಯ್ಯ ನಿಮ್ಮ ಶರಣರ ಅನುಭಾವ?
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣರ ಸದ್ಗೋಷ್ಠಿ ಏನ ಮಾಡಯ್ಯ?
Comments
Post a Comment