೧೭೧.
ಮರ ಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತ್ತು
ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ
ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು
ಇಂತಪ್ಪ ಮಹಾನುಭಾವರ ಅನುಭಾವವ ತೋರಿ
ಎನ್ನನುಳುಹಿಕೊಳ್ಳಾ, ಚೆನ್ನ ಮಲ್ಲಿಕಾರ್ಜುನ
೧೭೨.
ಸಂಗದಿಂದಲ್ಲದೇ ಅಗ್ನಿ ಹುಟ್ಟದು
ಸಂಗದಿಂದಲ್ಲದೇ ಬೀಜ ಮೊಳೆದೋರದು
ಸಂಗದಿಂದಲ್ಲದೇ ದೇಹವಾಗದು
ಸಂಗದಿಂದಲ್ಲದೇ ಸರ್ವಸುಖದೋರದು
ಚೆನ್ನಮಲ್ಲಿಕಾರ್ಜುನದೇವಯ್ಯ,
ನಿಮ್ಮ ಶರಣರ ಅನುಭವದ ಸಂಗದಿಂದಾನು
ಪರಮಸುಖಿಯಯ್ಯಾ
೧೭೩.
ಶಿವಭಕ್ತನ ಮನೆಯಂಗಳ
ವಾರಣಾಸಿ ಎಂಬುದು ಹುಸಿಯೆ?
ಶಿವಭಕ್ತನ ಮನೆಯಂಗಳದಲ್ಲಿ
ಅಷ್ಟಷಷ್ಟಿ ತೀರ್ಥಂಗಳು ನೆಲಸಿಪ್ಪವಾಗಿ
ಸುತ್ತಿಬರಲು ಶ್ರೀಶೈಲ, ಕಲಬಲದಲ್ಲಿ ಕೇದಾರ,
ಅಲ್ಲಿಂದ ಹೊರಗೆ ಶ್ರೀ ವಾರಣಾಸಿ
ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ
ಎನ್ನ ದೇವ ಚೆನ್ನಮಲ್ಲಿಕಾರ್ಜುನ,
ನಿಮ್ಮ ಭಕ್ತನ ಮನೆಯಂಗಳ ವಾರಣಾಸಿಯಿಂದಧಿಕ ನೋಡಾ!
೧೭೪.
ಕಾಮನ ಗೆಲಿದೆನು, ಬಸವ, ನಿಮ್ಮ ದಯೆಯಿಂದ
ಸೋಮಧರನ ಹಿಡಿಪ್ಪೆತನು, ಬಸವ, ನಿಮ್ಮ ಕೃಪೆಯಿಂದ
ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು?
ಭಾವಿಸಲು ಗಂಡು-ರೂಪು, ಬಸವ, ನಿಮ್ಮ ದಯದಿಂದದ
ಅತಿಕಾಮಿ ಚೆನ್ನಮಲ್ಲಿಕಾರ್ಜುನಯ್ಯಂಗೆ ತೊಡರನಿಕ್ಕಿ
ಎರಡರಿಯೆದೆ ಕೂಡಿದೆನು, ಬಸವ, ನಿಮ್ಮ ಕೃಪೆಯಿಂದ
೧೭೫.
ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ
ಮನದ ಭಂಗವ ಅರಿವಿನ ಮುಖದಿಂದ ಗೆಲಿದೆ
ಜೀವದ ಭಂಗವ ಶಿವಾನುಭವದಿಂದ ಗೆಲಿದೆ
ಕರಣದ ಕತ್ತಲೆಯ ಬೆಳಗನುಟ್ಟು ಗೆಲಿದೆ
ಜವ್ವನದ ಹೊರಮಿಂಚಿನಲ್ಲಿ ನಿಮ್ಮ ಕಣ್ಣಿಗೆ ತೋರುವ
ಕಾಮನ ಸುಟ್ಟುರುಹಿದ ಭಸ್ಮವ ನೋಡಯ್ಯ
ಚೆನ್ನಮಲ್ಲಿಕಾರ್ಜುನ ಕಾಮನ ಕೊಂದು
ಮನಸಿಜನಾಗುಳುಹಿದರೆ
ಮನಸಿಜನ ತಲೆಯ ಬರಹವ ತೊಡೆದೆನು
೧೭೬.
ಎಲ್ಲರ ಗಂಡರ ಶೃಂಗಾರದ ಪರಿಯಲ್ಲ
ಎನ್ನ ನಲ್ಲನ ಶೃಂಗಾರದ ಪರಿ ಬೇರೆ
ಕರದಲ್ಲಿ ಕಂಕಣ, ಉರದ ಮೇಲಂದುಗೆ, ಕಿವಿಯಲ್ಲಿ ಹಾವುಗೆ
ಉಭಯ-ಸಿರಿವಂತನ ಮೊಣಕಾಲಲ್ಲಿ ಝಳವಟ್ಟಿಗೆ
ಉಂಗುಷ್ಠದಲ್ಲಿ ಮೂಕುತಿ ಅದು ಜಾಣರಿಗೆ ಜಗುಳಿಕೆ
ಚೆನ್ನಮಲ್ಲಿಕಾರ್ಜುನಯ್ಯನ ಶೃಂಗಾರದ ಪರಿ ಬೇರೆ!
೧೭೭.
ದೃಷ್ಟಿವರಿದುದು, ಮನ ನೆಲೆಗೊಂಡುದಿದೇನೋ!
ಆವನೆಂದರಿಯೆ ಭಾವ ನೆಟ್ಟುದವ್ವ!
ಕಳಿಯರಿದು ಅಂಗ ಗಸಣಿಯಾದುದು
ಇನ್ನಾರೆಂದಡೆ ಬಿಡೆ ಚೆನ್ನಮಲ್ಲಿಕಾರ್ಜುನಲಿಂಗವ
೧೭೮.
ತಲೆಯಲ್ಲಿ ನಿರಿ, ಟೊಂಕದಲ್ಲಿ ಮುಡಿ,
ಮೊಣಕಾಲಲ್ಲಿ ಕಿವಿಯೋಲೆ ಕಂಡೆ!
ಹರವಸದ ಉಡೂಗೆ, ಚಿಣ್ಣಂಗೆ ಹರವಸನ ಉಡುಗೆ!
ಏಕಾಂತದಲ್ಲಿ ಕೂಡಿ, ಮುಖವ ಕಂಡು
ಕಾಣದ ಚೆನ್ನಮಲ್ಲಿಕಾರ್ಜುನನ ನೆರೆವ ಪರಿ ಕರ ಹೊಸತು
೧೭೯.
ಭಾವಿಸಿ ನೋಡಿದೆಡೆ ಅಂಗವಾಯಿತ್ತು!
ಅಂಗಗುಣವಳಿದ ಬಳಿಕ ನಿನಗಂಗವಾದೆ
ಭಿನ್ನರುಚಿಯ ಬಿಟ್ಟು ಲಿಂಗರುಚಿಯಾದ ಬಳಿಕ
ಚೆನ್ನಮಲ್ಲಿಕಾರ್ಜುನನ ಕೊಂದು ಸಾವ ಭಾಷೆ!
೧೮೦.
ಕಾಯದೊಳಗೆ ಅಕಾಯವಾಯಿತ್ತು
ಜೀವದೊಳಗೆ ನಿರ್ಜೀವವಾಯಿತ್ತು
ಭಾವದೊಳಗೆ ನಿರ್ಭಾವವಾಯಿತ್ತು
ಎನ್ನ ಮನದೊಳಗೆ ಘನ ನೆನಹಾಯಿತ್ತು
ಎನ್ನ ತಲೆ-ಮೊಲೆಯ ನೋಡಿ ಸಲಹಿದಿರಾಗಿ
ಚೆನ್ನಮಲ್ಲಿಕಾರ್ಜುನಯ್ಯನ ಧರ್ಮದವಳಾನು
ಮರ ಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತ್ತು
ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ
ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು
ಇಂತಪ್ಪ ಮಹಾನುಭಾವರ ಅನುಭಾವವ ತೋರಿ
ಎನ್ನನುಳುಹಿಕೊಳ್ಳಾ, ಚೆನ್ನ ಮಲ್ಲಿಕಾರ್ಜುನ
೧೭೨.
ಸಂಗದಿಂದಲ್ಲದೇ ಅಗ್ನಿ ಹುಟ್ಟದು
ಸಂಗದಿಂದಲ್ಲದೇ ಬೀಜ ಮೊಳೆದೋರದು
ಸಂಗದಿಂದಲ್ಲದೇ ದೇಹವಾಗದು
ಸಂಗದಿಂದಲ್ಲದೇ ಸರ್ವಸುಖದೋರದು
ಚೆನ್ನಮಲ್ಲಿಕಾರ್ಜುನದೇವಯ್ಯ,
ನಿಮ್ಮ ಶರಣರ ಅನುಭವದ ಸಂಗದಿಂದಾನು
ಪರಮಸುಖಿಯಯ್ಯಾ
೧೭೩.
ಶಿವಭಕ್ತನ ಮನೆಯಂಗಳ
ವಾರಣಾಸಿ ಎಂಬುದು ಹುಸಿಯೆ?
ಶಿವಭಕ್ತನ ಮನೆಯಂಗಳದಲ್ಲಿ
ಅಷ್ಟಷಷ್ಟಿ ತೀರ್ಥಂಗಳು ನೆಲಸಿಪ್ಪವಾಗಿ
ಸುತ್ತಿಬರಲು ಶ್ರೀಶೈಲ, ಕಲಬಲದಲ್ಲಿ ಕೇದಾರ,
ಅಲ್ಲಿಂದ ಹೊರಗೆ ಶ್ರೀ ವಾರಣಾಸಿ
ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ
ಎನ್ನ ದೇವ ಚೆನ್ನಮಲ್ಲಿಕಾರ್ಜುನ,
ನಿಮ್ಮ ಭಕ್ತನ ಮನೆಯಂಗಳ ವಾರಣಾಸಿಯಿಂದಧಿಕ ನೋಡಾ!
೧೭೪.
ಕಾಮನ ಗೆಲಿದೆನು, ಬಸವ, ನಿಮ್ಮ ದಯೆಯಿಂದ
ಸೋಮಧರನ ಹಿಡಿಪ್ಪೆತನು, ಬಸವ, ನಿಮ್ಮ ಕೃಪೆಯಿಂದ
ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು?
ಭಾವಿಸಲು ಗಂಡು-ರೂಪು, ಬಸವ, ನಿಮ್ಮ ದಯದಿಂದದ
ಅತಿಕಾಮಿ ಚೆನ್ನಮಲ್ಲಿಕಾರ್ಜುನಯ್ಯಂಗೆ ತೊಡರನಿಕ್ಕಿ
ಎರಡರಿಯೆದೆ ಕೂಡಿದೆನು, ಬಸವ, ನಿಮ್ಮ ಕೃಪೆಯಿಂದ
೧೭೫.
ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ
ಮನದ ಭಂಗವ ಅರಿವಿನ ಮುಖದಿಂದ ಗೆಲಿದೆ
ಜೀವದ ಭಂಗವ ಶಿವಾನುಭವದಿಂದ ಗೆಲಿದೆ
ಕರಣದ ಕತ್ತಲೆಯ ಬೆಳಗನುಟ್ಟು ಗೆಲಿದೆ
ಜವ್ವನದ ಹೊರಮಿಂಚಿನಲ್ಲಿ ನಿಮ್ಮ ಕಣ್ಣಿಗೆ ತೋರುವ
ಕಾಮನ ಸುಟ್ಟುರುಹಿದ ಭಸ್ಮವ ನೋಡಯ್ಯ
ಚೆನ್ನಮಲ್ಲಿಕಾರ್ಜುನ ಕಾಮನ ಕೊಂದು
ಮನಸಿಜನಾಗುಳುಹಿದರೆ
ಮನಸಿಜನ ತಲೆಯ ಬರಹವ ತೊಡೆದೆನು
೧೭೬.
ಎಲ್ಲರ ಗಂಡರ ಶೃಂಗಾರದ ಪರಿಯಲ್ಲ
ಎನ್ನ ನಲ್ಲನ ಶೃಂಗಾರದ ಪರಿ ಬೇರೆ
ಕರದಲ್ಲಿ ಕಂಕಣ, ಉರದ ಮೇಲಂದುಗೆ, ಕಿವಿಯಲ್ಲಿ ಹಾವುಗೆ
ಉಭಯ-ಸಿರಿವಂತನ ಮೊಣಕಾಲಲ್ಲಿ ಝಳವಟ್ಟಿಗೆ
ಉಂಗುಷ್ಠದಲ್ಲಿ ಮೂಕುತಿ ಅದು ಜಾಣರಿಗೆ ಜಗುಳಿಕೆ
ಚೆನ್ನಮಲ್ಲಿಕಾರ್ಜುನಯ್ಯನ ಶೃಂಗಾರದ ಪರಿ ಬೇರೆ!
೧೭೭.
ದೃಷ್ಟಿವರಿದುದು, ಮನ ನೆಲೆಗೊಂಡುದಿದೇನೋ!
ಆವನೆಂದರಿಯೆ ಭಾವ ನೆಟ್ಟುದವ್ವ!
ಕಳಿಯರಿದು ಅಂಗ ಗಸಣಿಯಾದುದು
ಇನ್ನಾರೆಂದಡೆ ಬಿಡೆ ಚೆನ್ನಮಲ್ಲಿಕಾರ್ಜುನಲಿಂಗವ
೧೭೮.
ತಲೆಯಲ್ಲಿ ನಿರಿ, ಟೊಂಕದಲ್ಲಿ ಮುಡಿ,
ಮೊಣಕಾಲಲ್ಲಿ ಕಿವಿಯೋಲೆ ಕಂಡೆ!
ಹರವಸದ ಉಡೂಗೆ, ಚಿಣ್ಣಂಗೆ ಹರವಸನ ಉಡುಗೆ!
ಏಕಾಂತದಲ್ಲಿ ಕೂಡಿ, ಮುಖವ ಕಂಡು
ಕಾಣದ ಚೆನ್ನಮಲ್ಲಿಕಾರ್ಜುನನ ನೆರೆವ ಪರಿ ಕರ ಹೊಸತು
೧೭೯.
ಭಾವಿಸಿ ನೋಡಿದೆಡೆ ಅಂಗವಾಯಿತ್ತು!
ಅಂಗಗುಣವಳಿದ ಬಳಿಕ ನಿನಗಂಗವಾದೆ
ಭಿನ್ನರುಚಿಯ ಬಿಟ್ಟು ಲಿಂಗರುಚಿಯಾದ ಬಳಿಕ
ಚೆನ್ನಮಲ್ಲಿಕಾರ್ಜುನನ ಕೊಂದು ಸಾವ ಭಾಷೆ!
೧೮೦.
ಕಾಯದೊಳಗೆ ಅಕಾಯವಾಯಿತ್ತು
ಜೀವದೊಳಗೆ ನಿರ್ಜೀವವಾಯಿತ್ತು
ಭಾವದೊಳಗೆ ನಿರ್ಭಾವವಾಯಿತ್ತು
ಎನ್ನ ಮನದೊಳಗೆ ಘನ ನೆನಹಾಯಿತ್ತು
ಎನ್ನ ತಲೆ-ಮೊಲೆಯ ನೋಡಿ ಸಲಹಿದಿರಾಗಿ
ಚೆನ್ನಮಲ್ಲಿಕಾರ್ಜುನಯ್ಯನ ಧರ್ಮದವಳಾನು
Comments
Post a Comment