Skip to main content

ಅಕ್ಕನ ವಚನಗಳು - 171 ರಿಂದ 180 ರವರೆಗೆ

೧೭೧.
ಮರ ಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತ್ತು
ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ
ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು
ಇಂತಪ್ಪ ಮಹಾನುಭಾವರ ಅನುಭಾವವ ತೋರಿ
ಎನ್ನನುಳುಹಿಕೊಳ್ಳಾ, ಚೆನ್ನ ಮಲ್ಲಿಕಾರ್ಜುನ

೧೭೨.
ಸಂಗದಿಂದಲ್ಲದೇ ಅಗ್ನಿ ಹುಟ್ಟದು
ಸಂಗದಿಂದಲ್ಲದೇ ಬೀಜ ಮೊಳೆದೋರದು
ಸಂಗದಿಂದಲ್ಲದೇ ದೇಹವಾಗದು
ಸಂಗದಿಂದಲ್ಲದೇ ಸರ್ವಸುಖದೋರದು
ಚೆನ್ನಮಲ್ಲಿಕಾರ್ಜುನದೇವಯ್ಯ,
ನಿಮ್ಮ ಶರಣರ ಅನುಭವದ ಸಂಗದಿಂದಾನು
ಪರಮಸುಖಿಯಯ್ಯಾ

೧೭೩.
ಶಿವಭಕ್ತನ ಮನೆಯಂಗಳ
ವಾರಣಾಸಿ ಎಂಬುದು ಹುಸಿಯೆ?
ಶಿವಭಕ್ತನ ಮನೆಯಂಗಳದಲ್ಲಿ
ಅಷ್ಟಷಷ್ಟಿ ತೀರ್ಥಂಗಳು ನೆಲಸಿಪ್ಪವಾಗಿ
ಸುತ್ತಿಬರಲು ಶ್ರೀಶೈಲ, ಕಲಬಲದಲ್ಲಿ ಕೇದಾರ,
ಅಲ್ಲಿಂದ ಹೊರಗೆ ಶ್ರೀ ವಾರಣಾಸಿ
ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ
ಎನ್ನ ದೇವ ಚೆನ್ನಮಲ್ಲಿಕಾರ್ಜುನ,
ನಿಮ್ಮ ಭಕ್ತನ ಮನೆಯಂಗಳ ವಾರಣಾಸಿಯಿಂದಧಿಕ ನೋಡಾ!

೧೭೪.
ಕಾಮನ ಗೆಲಿದೆನು, ಬಸವ, ನಿಮ್ಮ ದಯೆಯಿಂದ
ಸೋಮಧರನ ಹಿಡಿಪ್ಪೆತನು, ಬಸವ, ನಿಮ್ಮ ಕೃಪೆಯಿಂದ
ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು?
ಭಾವಿಸಲು ಗಂಡು-ರೂಪು, ಬಸವ, ನಿಮ್ಮ ದಯದಿಂದದ
ಅತಿಕಾಮಿ ಚೆನ್ನಮಲ್ಲಿಕಾರ್ಜುನಯ್ಯಂಗೆ ತೊಡರನಿಕ್ಕಿ
ಎರಡರಿಯೆದೆ ಕೂಡಿದೆನು, ಬಸವ, ನಿಮ್ಮ ಕೃಪೆಯಿಂದ

೧೭೫.
ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ
ಮನದ ಭಂಗವ ಅರಿವಿನ ಮುಖದಿಂದ ಗೆಲಿದೆ
ಜೀವದ ಭಂಗವ ಶಿವಾನುಭವದಿಂದ ಗೆಲಿದೆ
ಕರಣದ ಕತ್ತಲೆಯ ಬೆಳಗನುಟ್ಟು ಗೆಲಿದೆ
ಜವ್ವನದ ಹೊರಮಿಂಚಿನಲ್ಲಿ ನಿಮ್ಮ ಕಣ್ಣಿಗೆ ತೋರುವ
ಕಾಮನ ಸುಟ್ಟುರುಹಿದ ಭಸ್ಮವ ನೋಡಯ್ಯ
ಚೆನ್ನಮಲ್ಲಿಕಾರ್ಜುನ ಕಾಮನ ಕೊಂದು
ಮನಸಿಜನಾಗುಳುಹಿದರೆ
ಮನಸಿಜನ ತಲೆಯ ಬರಹವ ತೊಡೆದೆನು






೧೭೬.
ಎಲ್ಲರ ಗಂಡರ ಶೃಂಗಾರದ ಪರಿಯಲ್ಲ
ಎನ್ನ ನಲ್ಲನ ಶೃಂಗಾರದ ಪರಿ ಬೇರೆ
ಕರದಲ್ಲಿ ಕಂಕಣ, ಉರದ ಮೇಲಂದುಗೆ, ಕಿವಿಯಲ್ಲಿ ಹಾವುಗೆ
ಉಭಯ-ಸಿರಿವಂತನ ಮೊಣಕಾಲಲ್ಲಿ ಝಳವಟ್ಟಿಗೆ
ಉಂಗುಷ್ಠದಲ್ಲಿ ಮೂಕುತಿ ಅದು ಜಾಣರಿಗೆ ಜಗುಳಿಕೆ
ಚೆನ್ನಮಲ್ಲಿಕಾರ್ಜುನಯ್ಯನ ಶೃಂಗಾರದ ಪರಿ ಬೇರೆ!

೧೭೭.
ದೃಷ್ಟಿವರಿದುದು, ಮನ ನೆಲೆಗೊಂಡುದಿದೇನೋ!
ಆವನೆಂದರಿಯೆ ಭಾವ ನೆಟ್ಟುದವ್ವ!
ಕಳಿಯರಿದು ಅಂಗ ಗಸಣಿಯಾದುದು
ಇನ್ನಾರೆಂದಡೆ ಬಿಡೆ ಚೆನ್ನಮಲ್ಲಿಕಾರ್ಜುನಲಿಂಗವ

೧೭೮.
ತಲೆಯಲ್ಲಿ ನಿರಿ, ಟೊಂಕದಲ್ಲಿ ಮುಡಿ,
ಮೊಣಕಾಲಲ್ಲಿ ಕಿವಿಯೋಲೆ ಕಂಡೆ!
ಹರವಸದ ಉಡೂಗೆ, ಚಿಣ್ಣಂಗೆ ಹರವಸನ ಉಡುಗೆ!
ಏಕಾಂತದಲ್ಲಿ ಕೂಡಿ, ಮುಖವ ಕಂಡು
ಕಾಣದ ಚೆನ್ನಮಲ್ಲಿಕಾರ್ಜುನನ ನೆರೆವ ಪರಿ ಕರ ಹೊಸತು

೧೭೯.
ಭಾವಿಸಿ ನೋಡಿದೆಡೆ ಅಂಗವಾಯಿತ್ತು!
ಅಂಗಗುಣವಳಿದ ಬಳಿಕ ನಿನಗಂಗವಾದೆ
ಭಿನ್ನರುಚಿಯ ಬಿಟ್ಟು ಲಿಂಗರುಚಿಯಾದ ಬಳಿಕ
ಚೆನ್ನಮಲ್ಲಿಕಾರ್ಜುನನ ಕೊಂದು ಸಾವ ಭಾಷೆ!

೧೮೦.
ಕಾಯದೊಳಗೆ ಅಕಾಯವಾಯಿತ್ತು
ಜೀವದೊಳಗೆ ನಿರ್ಜೀವವಾಯಿತ್ತು
ಭಾವದೊಳಗೆ ನಿರ್ಭಾವವಾಯಿತ್ತು
ಎನ್ನ ಮನದೊಳಗೆ ಘನ ನೆನಹಾಯಿತ್ತು
ಎನ್ನ ತಲೆ-ಮೊಲೆಯ ನೋಡಿ ಸಲಹಿದಿರಾಗಿ
ಚೆನ್ನಮಲ್ಲಿಕಾರ್ಜುನಯ್ಯನ ಧರ್ಮದವಳಾನು

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ