೧೮೧.
ಗಟ್ಟಿದುಪ್ಪಕ್ಕೆ ತಿಳಿದುಪ್ಪಕ್ಕೆ ಭೇದವುಂಟೇ ಅಯ್ಯ?
ದೀಪಕ್ಕೆ ದೀಪ್ತಿಗೆ ಭೇದವುಂಟೇ ಅಯ್ಯ?
ಆತ್ಮಕ್ಕೆ ಅಂಗಕ್ಕೆ ಭೇದವುಂಟೇ ಅಯ್ಯ
ಎನ್ನಂಗವನು ಶ್ರೀಗುರು ಮಂತ್ರವ ಮಾಡಿ ತೋರಿದನಾಗಿ
ಸಾವಯವಕ್ಕೆ ನಿರವಯವಕ್ಕೆ ಭಿನ್ನವಿಲ್ಲವಯ್ಯ!
ಚೆನ್ನಮಲ್ಲಿಕಾರ್ಜುನದೇವರ ಬೆರೆಸಿ ಮತಿಗೆಟ್ಟವಳ
ಏನ ನುಡಿಸುವಿರಯ್ಯ?
೧೮೨.
ಕೆಂಡವ ಶವದಂತೆ
ಸೂತ್ರ ತಪ್ಪಿದ ಬೊಂಬೆಯಂತೆ
ಜಲವರತ ತಟಾಕದಂತೆ
ಬೆಂದ ನುಲಿಯಂತೆ-
ಮತ್ತೆ ಹಿಂದಣಂಗ ಉಂಟೇ ಅಣ್ಣ
ಚೆನ್ನಮಲ್ಲಿಕಾರ್ಜುನನಂಗವೇ ಆಶ್ರಯವಾದವಳಿಗೆ?!
೧೮೩.
ಫಲ ಒಳಗೆ ಪಕ್ವವಾಗಿಯಲ್ಲದೆ
ಹೊರಗಣ ಸಿಪ್ಪೆ ಒಪ್ಪಗೆಡದು
ಕಾಮನ ಮುದ್ರೆಯ ಕಂಡು ನಿಮಗೆ ನೋವಾದೀತೆಂದು
ಆ ಭಾವದಿಂದ ಮುಚ್ಚಿದೆ
ಇದಕೆ ನೋವೇಕೆ?
ಕಾಡದಿರಣ್ಣ ಚೆನ್ನಮಲ್ಲಿಕಾರ್ಜುನದೇವನ ಒಳಗಾದವಳ
೧೮೪.
ನಾಣ ಮರೆಯ ನೂಲು ಸಡಿಲೆ ನಾಚುವರು ನೋಡಾ
ಗಂಡು-ಹೆಣ್ಣೆಂಬ ಜಾತಿ
ಪ್ರಾಣದೊಡೆಯ ಜಗದೊಳಗೆ ಮುಳುಗುತ್ತ ತೆರಹಿಲ್ಲದಿರಲು
ದೇವರ ಮುಂದೆ ನಾಚಲುಂಟೆ?
ಚೆನ್ನಮಲ್ಲಿಕಾರ್ಜುನಂಗೆ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು
ಮುಚ್ಚಿ ಮೆರೆಸಬಹುದೆ ಹೇಳಯ್ಯ
೧೮೫.
ಎಲ್ಲಿ ಹೋದರೂ ಕಲಿಗೆ ಭಯವಿಲ್ಲ
ಹಂದೆಗೆ ಸುಖವಿಲ್ಲ ಕೇಳಿರಣ್ಣ!
ಈವಂಗವಗುಣವಿಲ್ಲ, ಕರುಣ ಉಳ್ಳವಂಗೆ ಪಾಪವಿಲ್ಲ
ಇನ್ನು ಪರಧನ-ಪರಸ್ತ್ರೀಯ ತೊರೆದಾತಂಗೆ
ಮುಂದೆ ಭವವಿಲ್ಲ, ಚೆನ್ನಮಲ್ಲಿಕಾರ್ಜುನ
೧೮೬.
ಸಿರಿಯಾಳಂಗೆ ಶಿವದಾಸಿಮಯ್ಯಂಗೆ ಬಸವಂಗೆ
ಆದ ರೇಖೆಯ ಬಿಟ್ಟು ಜೂಜನಾಡರೆ ನಮ್ಮವರಂದು?
ಒಬ್ಬಂಗೆ ಮಗನ ರಪಣ
ಒಬ್ಬಂಗೆ ಸೀರೆಯ ರಪಣ
ಒಬ್ಬಂಗೆ ತನು-ಮನ-ಧನ ರಪಣ
ಮೂವರೂ ಮೂದಲಿಸಿ ಮುಕ್ಕಣ್ಣನ ಗೆಲಿದರು
ಎನ್ನ ದೇವ ಚೆನ್ನಮಲ್ಲಿಕಾರ್ಜುನ
೧೮೭.
ಪ್ರಾಣಲಿಂಗವೆಂದರಿದ ಬಳಿಕ
ಪ್ರಾಣದಾಸೆ ಹಿಂಗಿತ್ತು
ಲಿಂಗಪ್ರಾಣವೆಂದರಿದ ಬಳಿಕ
ಅಂಗದಾಸೆ ಹಿಂಗಿತ್ತು
ಲಿಂಗಸೋಂಕಿನ ಸಂಗಿಗೆ-ಕಂಗಲೇ ಕರುವಾಗಿರ್ದವಯ್ಯ
ಚೆನ್ನಮಲ್ಲಿಕಾರ್ಜುನನ ಹಿಂಗದೆ ಅನಿಮಿಷವಾಗಿಹ ಶರಣಂಗೆ
೧೮೮.
ಕರಸ್ಥಲಕ್ಕೆ ಲಿಂಗಸ್ವಾಯತವಾದ ಬಳಿಕ
ಕಾಯಕ ನಿವೃತ್ತಿಯಾಗಬೇಕು
ಅಂಗದಲಳವಟ್ಟ ಲಿಂಗ ಲಿಂಗೈಕ್ಯಂಗೆ
ಅಂಗಸಂಗ ಮತ್ತೆಲ್ಲಿಯದು?
ಮಹಾಘನವನರಿದ ಮಹಂತರಿಗೆ
ಮಾಯವೆಲ್ಲಿಯದೋ ಚೆನ್ನಮಲ್ಲಿಕಾರ್ಜುನ?
೧೮೯.
ಕಟ್ಟಿದ ಕೆರೆಗೆ ಕೋಡಿ ಮಾಣದು
ಹುಟ್ಟಿದ ಪ್ರಾಣಿಗೆ ಪ್ರಳಯ ತಪ್ಪದಿನ್ನೆಂತಯ್ಯ
ಅರುಹಿರಿಯರೆಲ್ಲಾ ವೃಥಾ ಕೆಟ್ಟುಹೋದರಿನ್ನೆಂತಯ್ಯ
ಚೆನ್ನಮಲ್ಲಿಕಾರ್ಜುನದೇವನ
ಗೊತ್ತ ಮುಟ್ಟಿದವರೆಲ್ಲರೂ ನಿಶ್ಚಿಂತರಾದರು
೧೯೦.
ಊರ ನಡುವೆ ಒಂದು ಬೇಂಟೆ ಬಿದ್ದಿತ್ತು
ಆರು ಕಂಡವರು ಕೊಡಿರಯ್ಯಾ
ಊರಿಗೆ ದೂರುವೆನಗುಸೆಯನಿಕ್ಕುವೆ
ಅರಿತು ಅರಿಯದೆ ಒಂದು ಬೇಂಟೆಯನಾಡಿದೆನು
ಅರಸಿಕೊಡಯ್ಯ ಚೆನ್ನಮಲ್ಲಿಕಾರ್ಜುನ
ಗಟ್ಟಿದುಪ್ಪಕ್ಕೆ ತಿಳಿದುಪ್ಪಕ್ಕೆ ಭೇದವುಂಟೇ ಅಯ್ಯ?
ದೀಪಕ್ಕೆ ದೀಪ್ತಿಗೆ ಭೇದವುಂಟೇ ಅಯ್ಯ?
ಆತ್ಮಕ್ಕೆ ಅಂಗಕ್ಕೆ ಭೇದವುಂಟೇ ಅಯ್ಯ
ಎನ್ನಂಗವನು ಶ್ರೀಗುರು ಮಂತ್ರವ ಮಾಡಿ ತೋರಿದನಾಗಿ
ಸಾವಯವಕ್ಕೆ ನಿರವಯವಕ್ಕೆ ಭಿನ್ನವಿಲ್ಲವಯ್ಯ!
ಚೆನ್ನಮಲ್ಲಿಕಾರ್ಜುನದೇವರ ಬೆರೆಸಿ ಮತಿಗೆಟ್ಟವಳ
ಏನ ನುಡಿಸುವಿರಯ್ಯ?
೧೮೨.
ಕೆಂಡವ ಶವದಂತೆ
ಸೂತ್ರ ತಪ್ಪಿದ ಬೊಂಬೆಯಂತೆ
ಜಲವರತ ತಟಾಕದಂತೆ
ಬೆಂದ ನುಲಿಯಂತೆ-
ಮತ್ತೆ ಹಿಂದಣಂಗ ಉಂಟೇ ಅಣ್ಣ
ಚೆನ್ನಮಲ್ಲಿಕಾರ್ಜುನನಂಗವೇ ಆಶ್ರಯವಾದವಳಿಗೆ?!
೧೮೩.
ಫಲ ಒಳಗೆ ಪಕ್ವವಾಗಿಯಲ್ಲದೆ
ಹೊರಗಣ ಸಿಪ್ಪೆ ಒಪ್ಪಗೆಡದು
ಕಾಮನ ಮುದ್ರೆಯ ಕಂಡು ನಿಮಗೆ ನೋವಾದೀತೆಂದು
ಆ ಭಾವದಿಂದ ಮುಚ್ಚಿದೆ
ಇದಕೆ ನೋವೇಕೆ?
ಕಾಡದಿರಣ್ಣ ಚೆನ್ನಮಲ್ಲಿಕಾರ್ಜುನದೇವನ ಒಳಗಾದವಳ
೧೮೪.
ನಾಣ ಮರೆಯ ನೂಲು ಸಡಿಲೆ ನಾಚುವರು ನೋಡಾ
ಗಂಡು-ಹೆಣ್ಣೆಂಬ ಜಾತಿ
ಪ್ರಾಣದೊಡೆಯ ಜಗದೊಳಗೆ ಮುಳುಗುತ್ತ ತೆರಹಿಲ್ಲದಿರಲು
ದೇವರ ಮುಂದೆ ನಾಚಲುಂಟೆ?
ಚೆನ್ನಮಲ್ಲಿಕಾರ್ಜುನಂಗೆ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು
ಮುಚ್ಚಿ ಮೆರೆಸಬಹುದೆ ಹೇಳಯ್ಯ
೧೮೫.
ಎಲ್ಲಿ ಹೋದರೂ ಕಲಿಗೆ ಭಯವಿಲ್ಲ
ಹಂದೆಗೆ ಸುಖವಿಲ್ಲ ಕೇಳಿರಣ್ಣ!
ಈವಂಗವಗುಣವಿಲ್ಲ, ಕರುಣ ಉಳ್ಳವಂಗೆ ಪಾಪವಿಲ್ಲ
ಇನ್ನು ಪರಧನ-ಪರಸ್ತ್ರೀಯ ತೊರೆದಾತಂಗೆ
ಮುಂದೆ ಭವವಿಲ್ಲ, ಚೆನ್ನಮಲ್ಲಿಕಾರ್ಜುನ
೧೮೬.
ಸಿರಿಯಾಳಂಗೆ ಶಿವದಾಸಿಮಯ್ಯಂಗೆ ಬಸವಂಗೆ
ಆದ ರೇಖೆಯ ಬಿಟ್ಟು ಜೂಜನಾಡರೆ ನಮ್ಮವರಂದು?
ಒಬ್ಬಂಗೆ ಮಗನ ರಪಣ
ಒಬ್ಬಂಗೆ ಸೀರೆಯ ರಪಣ
ಒಬ್ಬಂಗೆ ತನು-ಮನ-ಧನ ರಪಣ
ಮೂವರೂ ಮೂದಲಿಸಿ ಮುಕ್ಕಣ್ಣನ ಗೆಲಿದರು
ಎನ್ನ ದೇವ ಚೆನ್ನಮಲ್ಲಿಕಾರ್ಜುನ
೧೮೭.
ಪ್ರಾಣಲಿಂಗವೆಂದರಿದ ಬಳಿಕ
ಪ್ರಾಣದಾಸೆ ಹಿಂಗಿತ್ತು
ಲಿಂಗಪ್ರಾಣವೆಂದರಿದ ಬಳಿಕ
ಅಂಗದಾಸೆ ಹಿಂಗಿತ್ತು
ಲಿಂಗಸೋಂಕಿನ ಸಂಗಿಗೆ-ಕಂಗಲೇ ಕರುವಾಗಿರ್ದವಯ್ಯ
ಚೆನ್ನಮಲ್ಲಿಕಾರ್ಜುನನ ಹಿಂಗದೆ ಅನಿಮಿಷವಾಗಿಹ ಶರಣಂಗೆ
೧೮೮.
ಕರಸ್ಥಲಕ್ಕೆ ಲಿಂಗಸ್ವಾಯತವಾದ ಬಳಿಕ
ಕಾಯಕ ನಿವೃತ್ತಿಯಾಗಬೇಕು
ಅಂಗದಲಳವಟ್ಟ ಲಿಂಗ ಲಿಂಗೈಕ್ಯಂಗೆ
ಅಂಗಸಂಗ ಮತ್ತೆಲ್ಲಿಯದು?
ಮಹಾಘನವನರಿದ ಮಹಂತರಿಗೆ
ಮಾಯವೆಲ್ಲಿಯದೋ ಚೆನ್ನಮಲ್ಲಿಕಾರ್ಜುನ?
೧೮೯.
ಕಟ್ಟಿದ ಕೆರೆಗೆ ಕೋಡಿ ಮಾಣದು
ಹುಟ್ಟಿದ ಪ್ರಾಣಿಗೆ ಪ್ರಳಯ ತಪ್ಪದಿನ್ನೆಂತಯ್ಯ
ಅರುಹಿರಿಯರೆಲ್ಲಾ ವೃಥಾ ಕೆಟ್ಟುಹೋದರಿನ್ನೆಂತಯ್ಯ
ಚೆನ್ನಮಲ್ಲಿಕಾರ್ಜುನದೇವನ
ಗೊತ್ತ ಮುಟ್ಟಿದವರೆಲ್ಲರೂ ನಿಶ್ಚಿಂತರಾದರು
೧೯೦.
ಊರ ನಡುವೆ ಒಂದು ಬೇಂಟೆ ಬಿದ್ದಿತ್ತು
ಆರು ಕಂಡವರು ಕೊಡಿರಯ್ಯಾ
ಊರಿಗೆ ದೂರುವೆನಗುಸೆಯನಿಕ್ಕುವೆ
ಅರಿತು ಅರಿಯದೆ ಒಂದು ಬೇಂಟೆಯನಾಡಿದೆನು
ಅರಸಿಕೊಡಯ್ಯ ಚೆನ್ನಮಲ್ಲಿಕಾರ್ಜುನ
Comments
Post a Comment