೧೯೧.
ಆವ ವಿದ್ಯೆಯ ಕಲಿತಡೇನು
ಶವ ವಿದ್ಯೆ ಮಾಣದನ್ನಕ?
ಅಶನವ ತೊಡೆದಡೇನು? ವ್ಯಸನವ ಮರೆದೆಡೇನು?
ಉಸಿರಗಿಡಿದರೇನು? ಬಸಿರ ಕಟ್ಟಿದರೇನು?
ಚೆನ್ನಮಲ್ಲಿಕಾರ್ಜುನದೇವಯ್ಯ ನೆಲದಳವಾರನಾದಡೆ
ಕಳ್ಳನೆಲ್ಲಿ ಅಡಗುವ?
೧೯೨.
ಹಡೆವುದರಿದು ನರಜನ್ಮವ
ಹಡೆವುದರಿದು ಗುರುಕಾರುಣ್ಯವ
ಹಡೆವುದರಿದು ಲಿಂಗಜಂಗಮಸೇವೆಯ
ಚೆನ್ನಮಲ್ಲಿಕಾರ್ಜುನಯ್ಯನ ಶರಣ ಸಂಗದಲ್ಲಿ
ನಲಿದಾಡು ಕಂಡೆಯಾ ಎಲೆ ಮನವೇ
೧೯೩.
ಮಾಟಕೂಟ ಬಸವಣ್ಣಂಗಾಯಿತ್ತು
ನೋಟಕೂಟ ಪ್ರಭುದೇವರಿಗಾಯಿತ್ತು
ಭಾವಕೂಟ ಅಜಗಣ್ಣಂಗಾಯಿತ್ತು
ಸ್ನೇಹಕೂಟ ಬಾಚಿರಾಜಂಗಾಯಿತ್ತು
ಇವರೆಲ್ಲರ ಕೂಟ ಬಸವಣ್ಣಂಗಾಯಿತ್ತು
ಎನಗೆ ನಿಮ್ಮಲ್ಲಿ ಅವಿರಳದ ಕೂಟ ಚೆನ್ನಮಲ್ಲಿಕಾರ್ಜುನಯ್ಯ
೧೯೪.
ಮಾಟಕೂಟದಲ್ಲಿ ಬಸವಣ್ಣನಿಲ್ಲ
ನೋಟಕೂಟದಲ್ಲಿ ಪ್ರಭುದೇವರಿಲ್ಲ
ಭಾವಕೂಟದಲ್ಲಿ ಅಜಗಣ್ಣನಿಲ್ಲ
ಸ್ನೇಹಕೂಟದಲ್ಲಿ ಬಾಚಿರಾಜನಿಲ್ಲ
ಇವರೆಲ್ಲರ ಕೂಟದಲ್ಲಿ ಬಸವಣ್ಣನಿಲ್ಲ
ಎನಗಿನ್ನೇವೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ?
೧೯೫.
ಕದಳಿಯೆಂಬುದು ತನು! ಕದಳಿಯೆಂಬುದು ಮನ!
ಕದಳಿಯೆಂಬುದು ವಿಷಯಂಗಳು
ಕದಳಿಯೆಂಬುದು ಭವಘೋರಾರಣ್ಯ
ಕದಳಿಯೆಂಬುದ ಗೆದ್ದು ತವ ಬದುಕೆ ಬಂದು
ಕದಳಿಯ ಬನದಲ್ಲಿ ಭವಹರನ ಕಂಡೆನು
ಭವಗೆಟ್ಟು ಬಂದ ಮಗಳೆಂದು
ಕರುಣದಿಂ ತೆಗೆದು ಬಿಗಿಯಪ್ಪಿದರೆ
ಚೆನ್ನಮಲ್ಲಿಕಾರ್ಜುನನ ಹೃದಯಕಮಲದಲ್ಲಿ ಅಡಗಿದೆನು
೧೯೬.
ಕರ್ಮವೆಂಬ ಕದಳಿಯೆನಗೆ, ಕಾಯವೆಂಬ ಕದಳಿ ನಿನಗೆ
ಮಾಟವೆಂಬ ಕದಳಿ ಚೆನ್ನಬಸವಣ್ಣಂಗೆ
ಬಂದ ಬಂದ ಭಾವ ಸೆಲೆ ಸಂದಿತ್ತು
ಎನ್ನಂಗದವಸಾನವ ಹೇಳಾ ಚೆನ್ನಮಲ್ಲಿಕಾರ್ಜುನಯ್ಯ
೧೯೭.
ಬಸವಣ್ಣನ ಭಕ್ತಿ, ಚೆನ್ನಬಸವಣ್ಣನ ಜ್ಞಾನ,
ಮಡಿವಾಳಯ್ಯನ ನಿಷ್ಠೆ, ಪ್ರಭುದೇವರ ಜಂಗಮಸ್ಥಲ,
ಅಜಗಣ್ಣ ಐಕ್ಯಸ್ಥಲ, ನಿಜಗುಣನ ಆರೂಢಸ್ಥಲ,
ಸಿದ್ಧರಾಮಯ್ಯನ ಸಮಾಧಿಸ್ಥಲ-
ಇಂತಿವರ ಕರುಣಪ್ರಸಾದ ಎನಗಾಯಿತ್ತು ಚೆನ್ನಮಲ್ಲಿಕಾರ್ಜುನಯ್ಯ
೧೯೮.
ಬಸವಣ್ಣನ ಮನೆಯ ಮಗಳಾಗಿ ಬದುಕಿದೆನಾಗಿ
ತನ್ನ ಕರುಣ ಭಕ್ತಿ ಪ್ರಸಾದವ ಕೊಟ್ಟನು
ಚೆನ್ನಬಸವಣ್ಣನ ತೊತ್ತಿನ ಮಗಳಾದ ಕಾರಣ
ಒಕ್ಕ ಪ್ರಸಾದವ ಕೊಟ್ಟನು
ಪ್ರಭುದೇವರ ತೊತ್ತಿನ ತೊತ್ತಿನ ಮರುದೊತ್ತಿನ
ಮಗಳಾದ ಕಾರಣ
ಜ್ಞಾನ ಪ್ರಸಾದವ ಕೊಟ್ಟನು
ಸಿದ್ಧರಾಮಯ್ಯನ ಶಿಶುಮಗಳಾದ ಕಾರಣ
ಪ್ರಾಣ ಪ್ರಸಾದವ ಸಿದ್ಧಿಸಿ ಕೊಟ್ಟನು
ಮಡಿವಾಲಯ್ಯನ ಮನೆಮಗಳಾದ ಕಾರಣ
ನಿರ್ಮಳ ಪ್ರಸಾದವ ನಿಶ್ಚಯಿಸಿ ಕೊಟ್ಟನು
ಇಂತೀ ಅಸಂಖ್ಯಾತಗಣಂಗಳೆಲ್ಲರೂ
ತಮ್ಮ ಕರುಣದ ಕಂದನೆಂದು ತಲೆದಡವಿದ ಕಾರಣ
ಚೆನ್ನಮಲ್ಲಿಕಾರ್ಜುನಯ್ಯನ ಶ್ರೀಪಾದಕ್ಕೆ ಯೋಗ್ಯಳಾದೆನು
೧೯೯.
ಹಸಿವಾದರೆ ಊರೊಳಗೆ ಭಿಕ್ಷಾನ್ನಗಳುಂಟು
ತೃಷೆಯಾದರೆ ಕೆರೆ-ಭಾವಿ-ಹಳ್ಳಂಗಳುಂಟು
ಶಯನಕ್ಕೆ ಹಾಳುದೇಗುಲವುಂಟು
ಚೆನ್ನಮಲ್ಲಿಕಾರ್ಜುನಯ್ಯ ಆತ್ಮಸಂಗಾತಕ್ಕೆ ನೀನೆನಗುಂಟು
೨೦೦.
ಮನೆಮನೆದಪ್ಪದೆ ಕೈಯೊಡ್ಡಿ ಬೇಡುವಂತೆ ಮಾಡಯ್ಯ
ಬೇಡಿದರೆ ಇಕ್ಕದಂತೆ ಮಾಡಯ್ಯ
ಇಕ್ಕಿದರೆ ನೆಲಕ್ಕೆ ಬೀಳುವಂತೆ ಮಾಡಯ್ಯ
ನೆಲಕ್ಕೆ ಬಿದ್ದರೆ ನಾನೆತ್ತಿಕೊಂಬುದಕೆ ಮುನ್ನವೇ
ಶುನಿ ಎತ್ತಿಕೊಂಬಂತೆ ಮಾಡು
ಚೆನ್ನಮಲ್ಲಿಕಾರ್ಜುನಯ್ಯ!
ಆವ ವಿದ್ಯೆಯ ಕಲಿತಡೇನು
ಶವ ವಿದ್ಯೆ ಮಾಣದನ್ನಕ?
ಅಶನವ ತೊಡೆದಡೇನು? ವ್ಯಸನವ ಮರೆದೆಡೇನು?
ಉಸಿರಗಿಡಿದರೇನು? ಬಸಿರ ಕಟ್ಟಿದರೇನು?
ಚೆನ್ನಮಲ್ಲಿಕಾರ್ಜುನದೇವಯ್ಯ ನೆಲದಳವಾರನಾದಡೆ
ಕಳ್ಳನೆಲ್ಲಿ ಅಡಗುವ?
೧೯೨.
ಹಡೆವುದರಿದು ನರಜನ್ಮವ
ಹಡೆವುದರಿದು ಗುರುಕಾರುಣ್ಯವ
ಹಡೆವುದರಿದು ಲಿಂಗಜಂಗಮಸೇವೆಯ
ಚೆನ್ನಮಲ್ಲಿಕಾರ್ಜುನಯ್ಯನ ಶರಣ ಸಂಗದಲ್ಲಿ
ನಲಿದಾಡು ಕಂಡೆಯಾ ಎಲೆ ಮನವೇ
೧೯೩.
ಮಾಟಕೂಟ ಬಸವಣ್ಣಂಗಾಯಿತ್ತು
ನೋಟಕೂಟ ಪ್ರಭುದೇವರಿಗಾಯಿತ್ತು
ಭಾವಕೂಟ ಅಜಗಣ್ಣಂಗಾಯಿತ್ತು
ಸ್ನೇಹಕೂಟ ಬಾಚಿರಾಜಂಗಾಯಿತ್ತು
ಇವರೆಲ್ಲರ ಕೂಟ ಬಸವಣ್ಣಂಗಾಯಿತ್ತು
ಎನಗೆ ನಿಮ್ಮಲ್ಲಿ ಅವಿರಳದ ಕೂಟ ಚೆನ್ನಮಲ್ಲಿಕಾರ್ಜುನಯ್ಯ
೧೯೪.
ಮಾಟಕೂಟದಲ್ಲಿ ಬಸವಣ್ಣನಿಲ್ಲ
ನೋಟಕೂಟದಲ್ಲಿ ಪ್ರಭುದೇವರಿಲ್ಲ
ಭಾವಕೂಟದಲ್ಲಿ ಅಜಗಣ್ಣನಿಲ್ಲ
ಸ್ನೇಹಕೂಟದಲ್ಲಿ ಬಾಚಿರಾಜನಿಲ್ಲ
ಇವರೆಲ್ಲರ ಕೂಟದಲ್ಲಿ ಬಸವಣ್ಣನಿಲ್ಲ
ಎನಗಿನ್ನೇವೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ?
೧೯೫.
ಕದಳಿಯೆಂಬುದು ತನು! ಕದಳಿಯೆಂಬುದು ಮನ!
ಕದಳಿಯೆಂಬುದು ವಿಷಯಂಗಳು
ಕದಳಿಯೆಂಬುದು ಭವಘೋರಾರಣ್ಯ
ಕದಳಿಯೆಂಬುದ ಗೆದ್ದು ತವ ಬದುಕೆ ಬಂದು
ಕದಳಿಯ ಬನದಲ್ಲಿ ಭವಹರನ ಕಂಡೆನು
ಭವಗೆಟ್ಟು ಬಂದ ಮಗಳೆಂದು
ಕರುಣದಿಂ ತೆಗೆದು ಬಿಗಿಯಪ್ಪಿದರೆ
ಚೆನ್ನಮಲ್ಲಿಕಾರ್ಜುನನ ಹೃದಯಕಮಲದಲ್ಲಿ ಅಡಗಿದೆನು
೧೯೬.
ಕರ್ಮವೆಂಬ ಕದಳಿಯೆನಗೆ, ಕಾಯವೆಂಬ ಕದಳಿ ನಿನಗೆ
ಮಾಟವೆಂಬ ಕದಳಿ ಚೆನ್ನಬಸವಣ್ಣಂಗೆ
ಬಂದ ಬಂದ ಭಾವ ಸೆಲೆ ಸಂದಿತ್ತು
ಎನ್ನಂಗದವಸಾನವ ಹೇಳಾ ಚೆನ್ನಮಲ್ಲಿಕಾರ್ಜುನಯ್ಯ
೧೯೭.
ಬಸವಣ್ಣನ ಭಕ್ತಿ, ಚೆನ್ನಬಸವಣ್ಣನ ಜ್ಞಾನ,
ಮಡಿವಾಳಯ್ಯನ ನಿಷ್ಠೆ, ಪ್ರಭುದೇವರ ಜಂಗಮಸ್ಥಲ,
ಅಜಗಣ್ಣ ಐಕ್ಯಸ್ಥಲ, ನಿಜಗುಣನ ಆರೂಢಸ್ಥಲ,
ಸಿದ್ಧರಾಮಯ್ಯನ ಸಮಾಧಿಸ್ಥಲ-
ಇಂತಿವರ ಕರುಣಪ್ರಸಾದ ಎನಗಾಯಿತ್ತು ಚೆನ್ನಮಲ್ಲಿಕಾರ್ಜುನಯ್ಯ
೧೯೮.
ಬಸವಣ್ಣನ ಮನೆಯ ಮಗಳಾಗಿ ಬದುಕಿದೆನಾಗಿ
ತನ್ನ ಕರುಣ ಭಕ್ತಿ ಪ್ರಸಾದವ ಕೊಟ್ಟನು
ಚೆನ್ನಬಸವಣ್ಣನ ತೊತ್ತಿನ ಮಗಳಾದ ಕಾರಣ
ಒಕ್ಕ ಪ್ರಸಾದವ ಕೊಟ್ಟನು
ಪ್ರಭುದೇವರ ತೊತ್ತಿನ ತೊತ್ತಿನ ಮರುದೊತ್ತಿನ
ಮಗಳಾದ ಕಾರಣ
ಜ್ಞಾನ ಪ್ರಸಾದವ ಕೊಟ್ಟನು
ಸಿದ್ಧರಾಮಯ್ಯನ ಶಿಶುಮಗಳಾದ ಕಾರಣ
ಪ್ರಾಣ ಪ್ರಸಾದವ ಸಿದ್ಧಿಸಿ ಕೊಟ್ಟನು
ಮಡಿವಾಲಯ್ಯನ ಮನೆಮಗಳಾದ ಕಾರಣ
ನಿರ್ಮಳ ಪ್ರಸಾದವ ನಿಶ್ಚಯಿಸಿ ಕೊಟ್ಟನು
ಇಂತೀ ಅಸಂಖ್ಯಾತಗಣಂಗಳೆಲ್ಲರೂ
ತಮ್ಮ ಕರುಣದ ಕಂದನೆಂದು ತಲೆದಡವಿದ ಕಾರಣ
ಚೆನ್ನಮಲ್ಲಿಕಾರ್ಜುನಯ್ಯನ ಶ್ರೀಪಾದಕ್ಕೆ ಯೋಗ್ಯಳಾದೆನು
೧೯೯.
ಹಸಿವಾದರೆ ಊರೊಳಗೆ ಭಿಕ್ಷಾನ್ನಗಳುಂಟು
ತೃಷೆಯಾದರೆ ಕೆರೆ-ಭಾವಿ-ಹಳ್ಳಂಗಳುಂಟು
ಶಯನಕ್ಕೆ ಹಾಳುದೇಗುಲವುಂಟು
ಚೆನ್ನಮಲ್ಲಿಕಾರ್ಜುನಯ್ಯ ಆತ್ಮಸಂಗಾತಕ್ಕೆ ನೀನೆನಗುಂಟು
೨೦೦.
ಮನೆಮನೆದಪ್ಪದೆ ಕೈಯೊಡ್ಡಿ ಬೇಡುವಂತೆ ಮಾಡಯ್ಯ
ಬೇಡಿದರೆ ಇಕ್ಕದಂತೆ ಮಾಡಯ್ಯ
ಇಕ್ಕಿದರೆ ನೆಲಕ್ಕೆ ಬೀಳುವಂತೆ ಮಾಡಯ್ಯ
ನೆಲಕ್ಕೆ ಬಿದ್ದರೆ ನಾನೆತ್ತಿಕೊಂಬುದಕೆ ಮುನ್ನವೇ
ಶುನಿ ಎತ್ತಿಕೊಂಬಂತೆ ಮಾಡು
ಚೆನ್ನಮಲ್ಲಿಕಾರ್ಜುನಯ್ಯ!
Comments
Post a Comment