೩೧.
ಊರ ಸೀರೆಗೆ ಅಗಸ ತಡಬಡಗೊಂಬಂತೆ
ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಎಂದು ನೆನೆನೆನೆದು
ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆನಯ್ಯ
ಚೆನ್ನಮಲ್ಲಿಕಾರ್ಜುನಯ್ಯ
೩೨.
ದೇವ ಎನಗೆ ಭವಿಯ ಸಂಗವೆಂದು ಮಾಣ್ಪುದೆನ್ನ ತಂದೆ
ದೇವ ಬೆರಕೆಯಿಲ್ಲದಚ್ಚಬಕುತಿ ಸುಖವದೆಂದು ತಂದೆ
ಪೂಜೆಯೊಳಗೆ ಮೆಚ್ಚ ಬೆಚ್ಚ ಮನವನೆಂತು ತೆಗೆವೆನಯ್ಯ
ಪೂಜೆಯೊಳಗೆ ನೆಟ್ಟ ದಿಟ್ಟಿಗಳನದೆಂತು ಕೀಳ್ವೆನಯ್ಯ
[ಚೆನ್ನಮಲ್ಲಿಕಾರ್ಜುನ]
೩೩.
ದೇವ ಶಿವಲಾಂಛನವನೇರಿಸಿಕೊಂಡು
ಮನೆಗೆ ಬಂದವರಂ ಕಡೆಗಣಿಸೆ
ಎಂತು ನೋಡುತಿರ್ಪೆನ್?
ಆವರ್ಗೆ ಸತ್ಕಾರವಂ
ಮಾಡಲಿಲ್ಲದಿರ್ದೊಡೆ
ಎನ್ನನೀ ಧರೆಯ ಮೇಲಿರಿಸುವ ಕಾರಣವೇನಭವ?
ನಿನ್ನವಳೆಂದೆನ್ನ ಮುದ್ದುತನವ ಸಲಿಸುವೊಡಿರಿಸುವುದು
ಇಲ್ಲಾ ಕೈಲಸಕ್ಕೆ ಕೊಂಡೊಯ್ವುದು [ಚೆನ್ನಮಲ್ಲಿಕಾರ್ಜುನ]
೩೪.
ಅಶನದಾಶಯಂ, ತೃಷೆಯ ತೃಷ್ಣೆಯಂ,
ಬೆಸನದ ಬೇಗೆಯಂ, ವಿಷಯದ ವಿಹ್ವಳತೆಯಂ,
ತಾಪತ್ರಯದ ಕಲ್ಪನೆಗಳಂ ಗೆಲಿದೆ
ಇನ್ನೇನಿನ್ನೇನೆನ್ನಿಚ್ಛೆಯಾದುದು
ಚೆನ್ನಮಲ್ಲಿಕಾರ್ಜುನ ನಿನಗಂಜೆನಂಜೆ
೩೫.
ಶಿವನೇ, ಉಳಿವ ಕರೆವ ನೇಹವುಂಟೆ?
ಸಂಸಾರಕ್ಕಂ ನಿಮ್ಮಲ್ಲಿ ಗೆಡೆಯಾಡುವ ಭಕ್ತಿಯುಂಟೇ?
ಏನಯ್ಯ ಶಿವನೇ,
ಏನೆಂದು ಪೇಳ್ವೆ ಲಜ್ಜೆಯ ಮಾತ, [ಚೆನ್ನಮಲ್ಲಿಕಾರ್ಜುನ]
೩೬.
ಒಳಗೆ ಶೋಧಿಸಿ, ಹೊರಗೆ ಶುದ್ಧವಿಸಿ,
ಒಳ-ಹೊರಗೆಂಬ ಉಭಯಶಂಕೆಯ ಕಳೆದು,
ಸ್ಫಟಿಕದ ಶಲಾಕೆಯಂತೆ ತಳವೆಳಗುಮಾಡಿ,
ಸುಕ್ಷೇತ್ರವನರಿದು ಬೀಜವ ಬಿತ್ತುವಂತೆ,
ಶಿಷ್ಯನ ಸರ್ವಪ್ರಪಂಚ ನಿವೃತ್ತಿಯಂ ಮಾಡಿ, ನಿಜೋಪದೇಶವನಿತ್ತು
ಆ ಶಿಷ್ಯನ ನಿಜದಾದಿಯನೈದಿಸುವನೀಗ ದೀಕ್ಷಾಗುರು!
ಆ ಸಹಜಗುರುವೀಗ ಜಗದಾರಾಧ್ಯನು
ಅವನ ಪಾದಕ್ಕೆ ನಮೋ ನಮೋ ಎಂಬೆ ಕಾಣಾ ಚೆನ್ನಮಲ್ಲಿಕಾರ್ಜುನ
೩೭.
ಗುರುವೆಂಬ ತೆತ್ತಿಗನೆನಗೆ
ಲಿಂಗವೆಂಬಲಗನು ಮನುನಿಷ್ಠೆಯೆಂಬ ಕೈಯಲ್ಲಿ ಕೊಡಲು
ಕಾದುವೆನು, ಗೆಲುವೆನು ಕಾಮನೆಂಬುವನ!
ಕ್ರೋಧಾದಿಗಳು ಕೆಟ್ಟು, ವಿಷಯಂಗಳೋಡಿದವು
ಅಲಗು ಎನ್ನೊಳಗೆ ನಟ್ಟು ಆನಳಿದ ಕಾರಣ
ಚೆನ್ನಮಲ್ಲಿಕಾರ್ಜುನಲಿಂಗವ ಕರದಲ್ಲಿ ಹಿಡಿದೆ
೩೮.
ಗುರುವಿನ ಕರುಣದಿಂದ ಲಿಂಗ-ಜಂಗಮನ ಕಂಡೆ
ಗುರುವಿನ ಕರುಣದಿಂದ ಪಾದೋದಕ-ಪ್ರಸಾದವ ಕಂಡೆ
ಗುರುವಿನ ಕರುಣದಿಂದ ಸಜ್ಜನಸದ್ಭಕ್ತರ ಗೋಷ್ಠಿಯ ಕಂಡೆ
ಚೆನ್ನಮಲ್ಲಿಕಾರ್ಜುನಯ್ಯ,
ನಾ ಹುಟ್ಟಲೊಡನೆ ವಿಭೂತಿಯ ಪಟ್ಟವ ಕಟ್ಟಿ
ಸದ್ಗುರುಸ್ವಾಮಿ ಲಿಂಗಸ್ವಾಯತವ ಮಾಡಿದನಾಗಿ ಧನ್ಯಳಾದೆನು
೩೯.
ಗುರುವಿನ ಕರುಣದಿಂದ ಲಿಂಗ-ಜಂಗಮನ ಕಂಡ್
ಗುರುವಿನ ಕರುಣದಿಂದ ಪಾದೋದಕ-ಪ್ರಸಾದವ ಕಂಡೆ
ಗುರುವಿನ ಕರುಣದಿಂದ ಸಜ್ಜನಸದ್ಭಕ್ತರ ಗೋಷ್ಠಿಯ ಕಂಡೆ
ಚೆನ್ನಮಲ್ಲಿಕಾರ್ಜುನಯ್ಯ, ನಾ ಹುಟ್ಟಲೊಡನೆ
ವಿಭೂತಿಯ ಪಟ್ಟವ ಕಟ್ಟಿ ಸದ್ಗುರುಸ್ವಾಮಿ
ಲಿಂಗಸ್ವಾಯತವ ಮಾಡಿದನಾಗಿ ಧನ್ಯಳಾದೆನು
೪೦.
ಅರಸಿ ಮರೆವೊಕ್ಕೊಡೆ ಕಾವ ಗುರುವೇ,
ಜಯ ಜಯ ಗುರುವೇ
ಆರೂ ಅರಿಯದ ಬಯಲೊಳಗೆ ಬಯಲಾಗಿ
ನಿಂದ ನಿಲವ ಹಿಡಿದೆನ್ನ ಕರದಲ್ಲಿ ತೋರಿದ ಗುರುವೇ
ಚೆನ್ನಮಲ್ಲಿಕಾರ್ಜುನ ಗುರುವೇ, ಜಯ ಜಯ ಗುರುವೇ.
ಊರ ಸೀರೆಗೆ ಅಗಸ ತಡಬಡಗೊಂಬಂತೆ
ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಎಂದು ನೆನೆನೆನೆದು
ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆನಯ್ಯ
ಚೆನ್ನಮಲ್ಲಿಕಾರ್ಜುನಯ್ಯ
೩೨.
ದೇವ ಎನಗೆ ಭವಿಯ ಸಂಗವೆಂದು ಮಾಣ್ಪುದೆನ್ನ ತಂದೆ
ದೇವ ಬೆರಕೆಯಿಲ್ಲದಚ್ಚಬಕುತಿ ಸುಖವದೆಂದು ತಂದೆ
ಪೂಜೆಯೊಳಗೆ ಮೆಚ್ಚ ಬೆಚ್ಚ ಮನವನೆಂತು ತೆಗೆವೆನಯ್ಯ
ಪೂಜೆಯೊಳಗೆ ನೆಟ್ಟ ದಿಟ್ಟಿಗಳನದೆಂತು ಕೀಳ್ವೆನಯ್ಯ
[ಚೆನ್ನಮಲ್ಲಿಕಾರ್ಜುನ]
೩೩.
ದೇವ ಶಿವಲಾಂಛನವನೇರಿಸಿಕೊಂಡು
ಮನೆಗೆ ಬಂದವರಂ ಕಡೆಗಣಿಸೆ
ಎಂತು ನೋಡುತಿರ್ಪೆನ್?
ಆವರ್ಗೆ ಸತ್ಕಾರವಂ
ಮಾಡಲಿಲ್ಲದಿರ್ದೊಡೆ
ಎನ್ನನೀ ಧರೆಯ ಮೇಲಿರಿಸುವ ಕಾರಣವೇನಭವ?
ನಿನ್ನವಳೆಂದೆನ್ನ ಮುದ್ದುತನವ ಸಲಿಸುವೊಡಿರಿಸುವುದು
ಇಲ್ಲಾ ಕೈಲಸಕ್ಕೆ ಕೊಂಡೊಯ್ವುದು [ಚೆನ್ನಮಲ್ಲಿಕಾರ್ಜುನ]
೩೪.
ಅಶನದಾಶಯಂ, ತೃಷೆಯ ತೃಷ್ಣೆಯಂ,
ಬೆಸನದ ಬೇಗೆಯಂ, ವಿಷಯದ ವಿಹ್ವಳತೆಯಂ,
ತಾಪತ್ರಯದ ಕಲ್ಪನೆಗಳಂ ಗೆಲಿದೆ
ಇನ್ನೇನಿನ್ನೇನೆನ್ನಿಚ್ಛೆಯಾದುದು
ಚೆನ್ನಮಲ್ಲಿಕಾರ್ಜುನ ನಿನಗಂಜೆನಂಜೆ
೩೫.
ಶಿವನೇ, ಉಳಿವ ಕರೆವ ನೇಹವುಂಟೆ?
ಸಂಸಾರಕ್ಕಂ ನಿಮ್ಮಲ್ಲಿ ಗೆಡೆಯಾಡುವ ಭಕ್ತಿಯುಂಟೇ?
ಏನಯ್ಯ ಶಿವನೇ,
ಏನೆಂದು ಪೇಳ್ವೆ ಲಜ್ಜೆಯ ಮಾತ, [ಚೆನ್ನಮಲ್ಲಿಕಾರ್ಜುನ]
೩೬.
ಒಳಗೆ ಶೋಧಿಸಿ, ಹೊರಗೆ ಶುದ್ಧವಿಸಿ,
ಒಳ-ಹೊರಗೆಂಬ ಉಭಯಶಂಕೆಯ ಕಳೆದು,
ಸ್ಫಟಿಕದ ಶಲಾಕೆಯಂತೆ ತಳವೆಳಗುಮಾಡಿ,
ಸುಕ್ಷೇತ್ರವನರಿದು ಬೀಜವ ಬಿತ್ತುವಂತೆ,
ಶಿಷ್ಯನ ಸರ್ವಪ್ರಪಂಚ ನಿವೃತ್ತಿಯಂ ಮಾಡಿ, ನಿಜೋಪದೇಶವನಿತ್ತು
ಆ ಶಿಷ್ಯನ ನಿಜದಾದಿಯನೈದಿಸುವನೀಗ ದೀಕ್ಷಾಗುರು!
ಆ ಸಹಜಗುರುವೀಗ ಜಗದಾರಾಧ್ಯನು
ಅವನ ಪಾದಕ್ಕೆ ನಮೋ ನಮೋ ಎಂಬೆ ಕಾಣಾ ಚೆನ್ನಮಲ್ಲಿಕಾರ್ಜುನ
೩೭.
ಗುರುವೆಂಬ ತೆತ್ತಿಗನೆನಗೆ
ಲಿಂಗವೆಂಬಲಗನು ಮನುನಿಷ್ಠೆಯೆಂಬ ಕೈಯಲ್ಲಿ ಕೊಡಲು
ಕಾದುವೆನು, ಗೆಲುವೆನು ಕಾಮನೆಂಬುವನ!
ಕ್ರೋಧಾದಿಗಳು ಕೆಟ್ಟು, ವಿಷಯಂಗಳೋಡಿದವು
ಅಲಗು ಎನ್ನೊಳಗೆ ನಟ್ಟು ಆನಳಿದ ಕಾರಣ
ಚೆನ್ನಮಲ್ಲಿಕಾರ್ಜುನಲಿಂಗವ ಕರದಲ್ಲಿ ಹಿಡಿದೆ
೩೮.
ಗುರುವಿನ ಕರುಣದಿಂದ ಲಿಂಗ-ಜಂಗಮನ ಕಂಡೆ
ಗುರುವಿನ ಕರುಣದಿಂದ ಪಾದೋದಕ-ಪ್ರಸಾದವ ಕಂಡೆ
ಗುರುವಿನ ಕರುಣದಿಂದ ಸಜ್ಜನಸದ್ಭಕ್ತರ ಗೋಷ್ಠಿಯ ಕಂಡೆ
ಚೆನ್ನಮಲ್ಲಿಕಾರ್ಜುನಯ್ಯ,
ನಾ ಹುಟ್ಟಲೊಡನೆ ವಿಭೂತಿಯ ಪಟ್ಟವ ಕಟ್ಟಿ
ಸದ್ಗುರುಸ್ವಾಮಿ ಲಿಂಗಸ್ವಾಯತವ ಮಾಡಿದನಾಗಿ ಧನ್ಯಳಾದೆನು
೩೯.
ಗುರುವಿನ ಕರುಣದಿಂದ ಲಿಂಗ-ಜಂಗಮನ ಕಂಡ್
ಗುರುವಿನ ಕರುಣದಿಂದ ಪಾದೋದಕ-ಪ್ರಸಾದವ ಕಂಡೆ
ಗುರುವಿನ ಕರುಣದಿಂದ ಸಜ್ಜನಸದ್ಭಕ್ತರ ಗೋಷ್ಠಿಯ ಕಂಡೆ
ಚೆನ್ನಮಲ್ಲಿಕಾರ್ಜುನಯ್ಯ, ನಾ ಹುಟ್ಟಲೊಡನೆ
ವಿಭೂತಿಯ ಪಟ್ಟವ ಕಟ್ಟಿ ಸದ್ಗುರುಸ್ವಾಮಿ
ಲಿಂಗಸ್ವಾಯತವ ಮಾಡಿದನಾಗಿ ಧನ್ಯಳಾದೆನು
೪೦.
ಅರಸಿ ಮರೆವೊಕ್ಕೊಡೆ ಕಾವ ಗುರುವೇ,
ಜಯ ಜಯ ಗುರುವೇ
ಆರೂ ಅರಿಯದ ಬಯಲೊಳಗೆ ಬಯಲಾಗಿ
ನಿಂದ ನಿಲವ ಹಿಡಿದೆನ್ನ ಕರದಲ್ಲಿ ತೋರಿದ ಗುರುವೇ
ಚೆನ್ನಮಲ್ಲಿಕಾರ್ಜುನ ಗುರುವೇ, ಜಯ ಜಯ ಗುರುವೇ.
Comments
Post a Comment