೫೧.
ಅಂಗ ಲಿಂಗವ ವೇಧಿಸಿ
ಅಂಗ ಲಿಂಗದೊಳಗಾಯಿತ್ತು
ಮನ ಲಿಂಗವ ವೇಧಿಸಿ
ಮನ ಲಿಂಗದೊಳಗಾಯಿತ್ತು
ಭಾವ ಲಿಂಗವ ವೇಧಿಸಿ
ಭಾವ ಲಿಂಗದೊಳಗಾಯಿತ್ತು
ಚೆನ್ನಮಲ್ಲಿಕಾರ್ಜುನ, ನಿಮ್ಮ ಒಲುಮೆಯ ಸಂಗದಲ್ಲಿರ್ದು
ಸ್ವಯಂಲಿಂಗಿಯಾದೆನು
೫೨.
ನಿನ್ನರಿಕೆಯ ನರಕವೇ ಮೋಕ್ಷ ನೋಡಯ್ಯ
ನಿನ್ನರಿಯದ ಮುಕ್ತಿಯೇ ನರಕ ಕಂಡಯ್ಯ
ನೀನೊಲ್ಲದ ಸುಖವೇ ದುಃಖ ಕಂಡಯ್ಯ
ನೀನೊಲಿದ ದುಃಖವೇ ಪರಮಸುಖ ಕಂಡಯ್ಯ
ಚೆನ್ನಮಲ್ಲಿಕಾರ್ಜುನಯ್ಯ
ನೀ ಕಟ್ಟಿ ಕೆಡಹಿದ ಬಂಧನವೇ ನಿರ್ಬಂಧನವೆಂದಿಪ್ಪೆನು
೫೩.
ಹಾಲು ತುಪ್ಪವ ನುಂಗಿ ಬೇರಾಗಬಲ್ಲುದೆ?
ಸೂರ್ಯಕಾಂತದಗ್ನಿಯನಾರು ಭೇದಿಸಬಲ್ಲರು?
ಅಪಾರಮಹಿಮ ಚೆನ್ನಮಲ್ಲಿಕಾರ್ಜುನನೆನ್ನೊಳಡಗಿಪ್ಪ ಪರಿಯ
ಬೇರಿಲ್ಲದೆ ಕಂಡು ಕಣ್ತೆರೆದೆನು
೫೪.
ಘನವ ಕಂಡೆ, ಅನುವ ಕಂಡೆ
ಆಯತ-ಸ್ವಾಯತ-ಸನ್ನಿಹಿತ ಸುಖವ ಕಂಡೆ
ಅರಿವನರಿದು ಮರಹ ಮರೆದೆ
ಕುರುಹಿನ ಮೋಹದ ಮರವೆಯನೀಡಾಡಿದೆ
ಚೆನ್ನಮಲ್ಲಿಕಾರ್ಜುನ, ನಿಮ್ಮನರಿದು ಸೀಮೆಗೆಟ್ಟೆನು
೫೫.
ಕ್ರೀಗಳು ಮುಟ್ಟಲರಿಯವು ನಿಮ್ಮನೆಂತು ಪೂಜಿಸುವೆ?
ನಾದ-ಬಿಂದುಗಳು ಮುಟ್ಟಲರಿಯವು ನಿಮ್ಮನೆಂತು ಹಾಡುವೆ?
ಕಾಯ ಮುಟ್ಟುವೊಡೆ ಕಾಣಬಾರದ ಘನವು
ನಿಮ್ಮನೆಂತು ಕರಸ್ಥಲದಲಿ ಧರಿಸುವೆ?
ಚೆನ್ನಮಲ್ಲಿಕಾರ್ಜುನಯ್ಯ, ನಾನೇನೆಂದರಿಯದೆ
ನಿಮ್ಮ ನೋಡಿ ನೋಡಿ ಸೈವೆರೆಗಾಗುತಿರ್ದೆನು
೫೬.
ಸಜ್ಜನವಾಗಿ ಮಜ್ಜನಕ್ಕೆರೆವೆ
ಶಾಂತಳಾಗಿ ಪೂಜೆಯ ಮಾಡುವೆ
ಸಮರತಿಯಿಂದ ನಿಮ್ಮ ಕೂಡುವೆ
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮನಲಗದ ಪೂಜೆ ಅನುವಾಯಿತ್ತೆನಗೆ
೫೭.
ಎಲ್ಲ ಎಲ್ಲವನರಿದು ಫಲವೇನಯ್ಯ?
ತನ್ನ ತಾನರಿಯಬೇಕಲ್ಲದೆ?
ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರ ಕೇಳಲುಂಟೆ?
ಚೆನ್ನಮಲ್ಲಿಕಾರ್ಜುನ, ನೀ ಅರಿವಾಗಿ ಮುಂದೋರಿದ ಕಾರಣ
ನಿಮ್ಮಿಂದ ನಿಮ್ಮನರಿದೆನಯ್ಯ ಪ್ರಭುವೆ
೫೮.
ಚಂದನವ ಕಡಿದು ಕೊರೆದು ತೇದೊಡೆ
ನೊಂದೆನೆಂದು ಕಂಪ ಬಿಟ್ಟಿತ್ತೆ?
ತಂದು ಸುವರ್ಣವ ಕಡಿದೊರೆದೆಡೆ ಬೆಂದು ಕಳಂಕ ಹಿಡಿದಿತ್ತೆ?
ಸಂದು ಸಂದನು ಕಡಿದು ಕಬ್ಬನು ತಂದು ಗಾಣದಲಿಕ್ಕಿ ಅರೆದೊಡೆ
ಬೆಂದು ಪಾಕಗೂಳ ಸಕ್ಕರೆಯಾಗಿ ನೊಂದೆನೆಂದು ಸವಿಯ ಬಿಟ್ಟಿತ್ತೆ?
ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮುಂದಿಳುಹಲು
ನಿಮಗೆ ಹಾನಿ
ಎನ್ನ ತಂದೆ ಮಲ್ಲಿಕಾರ್ಜುನದೇವಯ್ಯ,
ಕೊಂದೊಡೆ ಶರಣೆಂಬುದ ಮಾಣೆ
೫೯.
ಒಡಲ ಕಳವಳಕ್ಕಾಗಿ ಅಡವಿಯ ಹೊಕ್ಕೆನು
ಗಿಡುಗಿಡುದಪ್ಪದೆ ಬೇಡಿದೆನೆನ್ನಂಗಕ್ಕೆಂದು
ಆವು ನೀಡಿದವು ತಮ್ಮ ಲಿಂಗಕ್ಕೆಂದು
ಆನು ಬೇಡಿ ಭವಿಯಾದೆನು
ಆವು ನೀಡಿ ಭಕ್ತರಾದರು
ಇನ್ನು ಬೇಡಿದೆನಾದರೆ, ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮಾಣೆ
೬೦.
ಗಿರಿಯೊಳು ವನದೊಳು ಗಿಡಗಿಡದತ್ತ
ದೇವ ಎನ್ನ ದೇವ ಬಾರಯ್ಯ ತೋರಯ್ಯ ನಿಮ್ಮ ಕರುಣವನೆಂದು
ನಾನು ಅರಸುತ್ತ ಅಳಲುತ್ತ ಕಾಣದೇ ಸುಯಿದು ಬಂದು
ಕಂಡೆ ಶರಣರ ಸಂಗದಿಂದ
ಅರಸಿ ಹಿಡಿದೇನೆಂದು ನೀನಡಗುವ ಠಾವ ಹೇಳಾ
ಚೆನ್ನಮಲ್ಲಿಕಾರ್ಜುನ
ಅಂಗ ಲಿಂಗವ ವೇಧಿಸಿ
ಅಂಗ ಲಿಂಗದೊಳಗಾಯಿತ್ತು
ಮನ ಲಿಂಗವ ವೇಧಿಸಿ
ಮನ ಲಿಂಗದೊಳಗಾಯಿತ್ತು
ಭಾವ ಲಿಂಗವ ವೇಧಿಸಿ
ಭಾವ ಲಿಂಗದೊಳಗಾಯಿತ್ತು
ಚೆನ್ನಮಲ್ಲಿಕಾರ್ಜುನ, ನಿಮ್ಮ ಒಲುಮೆಯ ಸಂಗದಲ್ಲಿರ್ದು
ಸ್ವಯಂಲಿಂಗಿಯಾದೆನು
೫೨.
ನಿನ್ನರಿಕೆಯ ನರಕವೇ ಮೋಕ್ಷ ನೋಡಯ್ಯ
ನಿನ್ನರಿಯದ ಮುಕ್ತಿಯೇ ನರಕ ಕಂಡಯ್ಯ
ನೀನೊಲ್ಲದ ಸುಖವೇ ದುಃಖ ಕಂಡಯ್ಯ
ನೀನೊಲಿದ ದುಃಖವೇ ಪರಮಸುಖ ಕಂಡಯ್ಯ
ಚೆನ್ನಮಲ್ಲಿಕಾರ್ಜುನಯ್ಯ
ನೀ ಕಟ್ಟಿ ಕೆಡಹಿದ ಬಂಧನವೇ ನಿರ್ಬಂಧನವೆಂದಿಪ್ಪೆನು
೫೩.
ಹಾಲು ತುಪ್ಪವ ನುಂಗಿ ಬೇರಾಗಬಲ್ಲುದೆ?
ಸೂರ್ಯಕಾಂತದಗ್ನಿಯನಾರು ಭೇದಿಸಬಲ್ಲರು?
ಅಪಾರಮಹಿಮ ಚೆನ್ನಮಲ್ಲಿಕಾರ್ಜುನನೆನ್ನೊಳಡಗಿಪ್ಪ ಪರಿಯ
ಬೇರಿಲ್ಲದೆ ಕಂಡು ಕಣ್ತೆರೆದೆನು
೫೪.
ಘನವ ಕಂಡೆ, ಅನುವ ಕಂಡೆ
ಆಯತ-ಸ್ವಾಯತ-ಸನ್ನಿಹಿತ ಸುಖವ ಕಂಡೆ
ಅರಿವನರಿದು ಮರಹ ಮರೆದೆ
ಕುರುಹಿನ ಮೋಹದ ಮರವೆಯನೀಡಾಡಿದೆ
ಚೆನ್ನಮಲ್ಲಿಕಾರ್ಜುನ, ನಿಮ್ಮನರಿದು ಸೀಮೆಗೆಟ್ಟೆನು
೫೫.
ಕ್ರೀಗಳು ಮುಟ್ಟಲರಿಯವು ನಿಮ್ಮನೆಂತು ಪೂಜಿಸುವೆ?
ನಾದ-ಬಿಂದುಗಳು ಮುಟ್ಟಲರಿಯವು ನಿಮ್ಮನೆಂತು ಹಾಡುವೆ?
ಕಾಯ ಮುಟ್ಟುವೊಡೆ ಕಾಣಬಾರದ ಘನವು
ನಿಮ್ಮನೆಂತು ಕರಸ್ಥಲದಲಿ ಧರಿಸುವೆ?
ಚೆನ್ನಮಲ್ಲಿಕಾರ್ಜುನಯ್ಯ, ನಾನೇನೆಂದರಿಯದೆ
ನಿಮ್ಮ ನೋಡಿ ನೋಡಿ ಸೈವೆರೆಗಾಗುತಿರ್ದೆನು
೫೬.
ಸಜ್ಜನವಾಗಿ ಮಜ್ಜನಕ್ಕೆರೆವೆ
ಶಾಂತಳಾಗಿ ಪೂಜೆಯ ಮಾಡುವೆ
ಸಮರತಿಯಿಂದ ನಿಮ್ಮ ಕೂಡುವೆ
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮನಲಗದ ಪೂಜೆ ಅನುವಾಯಿತ್ತೆನಗೆ
೫೭.
ಎಲ್ಲ ಎಲ್ಲವನರಿದು ಫಲವೇನಯ್ಯ?
ತನ್ನ ತಾನರಿಯಬೇಕಲ್ಲದೆ?
ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರ ಕೇಳಲುಂಟೆ?
ಚೆನ್ನಮಲ್ಲಿಕಾರ್ಜುನ, ನೀ ಅರಿವಾಗಿ ಮುಂದೋರಿದ ಕಾರಣ
ನಿಮ್ಮಿಂದ ನಿಮ್ಮನರಿದೆನಯ್ಯ ಪ್ರಭುವೆ
೫೮.
ಚಂದನವ ಕಡಿದು ಕೊರೆದು ತೇದೊಡೆ
ನೊಂದೆನೆಂದು ಕಂಪ ಬಿಟ್ಟಿತ್ತೆ?
ತಂದು ಸುವರ್ಣವ ಕಡಿದೊರೆದೆಡೆ ಬೆಂದು ಕಳಂಕ ಹಿಡಿದಿತ್ತೆ?
ಸಂದು ಸಂದನು ಕಡಿದು ಕಬ್ಬನು ತಂದು ಗಾಣದಲಿಕ್ಕಿ ಅರೆದೊಡೆ
ಬೆಂದು ಪಾಕಗೂಳ ಸಕ್ಕರೆಯಾಗಿ ನೊಂದೆನೆಂದು ಸವಿಯ ಬಿಟ್ಟಿತ್ತೆ?
ನಾ ಹಿಂದೆ ಮಾಡಿದ ಹೀನಂಗಳೆಲ್ಲವ ತಂದು ಮುಂದಿಳುಹಲು
ನಿಮಗೆ ಹಾನಿ
ಎನ್ನ ತಂದೆ ಮಲ್ಲಿಕಾರ್ಜುನದೇವಯ್ಯ,
ಕೊಂದೊಡೆ ಶರಣೆಂಬುದ ಮಾಣೆ
೫೯.
ಒಡಲ ಕಳವಳಕ್ಕಾಗಿ ಅಡವಿಯ ಹೊಕ್ಕೆನು
ಗಿಡುಗಿಡುದಪ್ಪದೆ ಬೇಡಿದೆನೆನ್ನಂಗಕ್ಕೆಂದು
ಆವು ನೀಡಿದವು ತಮ್ಮ ಲಿಂಗಕ್ಕೆಂದು
ಆನು ಬೇಡಿ ಭವಿಯಾದೆನು
ಆವು ನೀಡಿ ಭಕ್ತರಾದರು
ಇನ್ನು ಬೇಡಿದೆನಾದರೆ, ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮಾಣೆ
೬೦.
ಗಿರಿಯೊಳು ವನದೊಳು ಗಿಡಗಿಡದತ್ತ
ದೇವ ಎನ್ನ ದೇವ ಬಾರಯ್ಯ ತೋರಯ್ಯ ನಿಮ್ಮ ಕರುಣವನೆಂದು
ನಾನು ಅರಸುತ್ತ ಅಳಲುತ್ತ ಕಾಣದೇ ಸುಯಿದು ಬಂದು
ಕಂಡೆ ಶರಣರ ಸಂಗದಿಂದ
ಅರಸಿ ಹಿಡಿದೇನೆಂದು ನೀನಡಗುವ ಠಾವ ಹೇಳಾ
ಚೆನ್ನಮಲ್ಲಿಕಾರ್ಜುನ
Comments
Post a Comment