೬೧.
ಪೃಥ್ವಿಯ ಗೆಲಿದ ಏಲೇಶ್ವರನ ನಾನು ಕಂಡೆ
ಭಾವಭ್ರಮೆಯ ಗೆಲಿದ ಬ್ರಹ್ಮೇಶ್ವರನ ನಾನು ಕಂಡೆ
ಸತ್ವ-ರಜ-ತಮ-ತ್ರಿವಿಧವ ಗೆಲಿದ ತ್ರಿಪುರಾಂತಕನ ಕಂಡೆ
ಅಂತರಂಗ-ಆತ್ಮಜ್ಞಾನದಿಂದ ಜ್ಯೋತಿಸಿದ್ಧಯ್ಯನ ನಾನು ಕಂಡೆ
ಇವರೆಲ್ಲರ ಮಧ್ಯಸ್ಥಾನ ಪ್ರಾಣಲಿಂಗವೆಂದು
ಸುಜ್ಞಾನದಲ್ಲಿ ತೋರಿದ ಆ ಬಸವಣ್ಣನ ಪ್ರಸಾದದಿಂದ
ಚೆನ್ನಮಲ್ಲಿಕಾರ್ಜುನನ ಕಂಡೆನಯ್ಯ
೬೨.
ಅಪಾರ ಗಂಭೀರದ ಅಂಬುಧಿಯಲ್ಲಿ
ತಾರಾಪಥವ ನೋಡಿ ನಡೆಯೆ
ಭೈತ್ರದಿಂದ ದ್ವೀಪಾಂತರಕ್ಕೆ ಸಕಲಪದಾರ್ಥನವೆಯ್ದಿಸುವುದು
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ
ತುರ್ಯಸಂಭಾಷಣೆಯನರಿದಡೆ ಮುನ್ನಿನಲ್ಲಿಗೆಯ್ದಿಸುವುದು
೬೩.
ಕ್ರೀಯೊಳ್ಳುಡೊಂತೊಂದಾಸೆ
ಸದ್ಭಕ್ತರ ನುಡಿಗಡಣ ಉಳ್ಳೊಡಂತೊಂದಾಸೆ
ಶ್ರೀಗಿರಿಯನೇರಿ ನಿಮ್ಮ ಬೆರೆಸಿದರೆ ಎನ್ನಾಸೆಗೆ ಕಡೆಯೇ ಅಯ್ಯ?
ಆವಾಸೆಯೂ ಇಲ್ಲದೆ ನಿಮ್ಮ ನಂಬಿ ಬಂದು ಕೆಟ್ಟೆನಯ್ಯ
೬೪.
ಆರೂ ಇಲ್ಲದವಳೆಂದು
ಅಳಿಗೊಳಲು ಬೇಡ ಕಂಡಯ್ಯ
ಏನ ಮಾಡಿದೆಡೆಯೂ ನಾನಂಜುವಳಲ್ಲ!
ತರಗೆಲೆಯ ಮೆಲಿದು ನಾನಿಹೆನು
ಸುರಗಿಯ ಮೇಲೆರಗಿ ನಾನಿಹೆನು
ಚೆನ್ನಮಲ್ಲಿಕಾರ್ಜುನಯ್ಯ
ಕರ ಕಡೆ ನೋಡಿದಡೆ
ಒಡಲನೂ ಪ್ರಾಣವನೂ ನಿಮಗೊಪ್ಪಿಸಿ ಶುದ್ಧಳಿಹೆನು
೬೫.
ಕಿಡಿಕಿಡಿ ಕೆದರಿದಡೆ
ಎನಗೆ ಹಸಿವು ತೃಷೆ ಅಡಗಿತ್ತೆಂಬೆನು
ಮುಗಿಲು ಹರಿದು ಬಿದ್ದಡೆ
ಎನಗೆ ಮಜ್ಜನಕ್ಕೆರೆದರೆಂಬೆನು
ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು
ಚೆನ್ನಮಲ್ಲಿಕಾರ್ಜುನಯ್ಯ, ಶಿರ ಹರಿದು ಬಿದ್ದಡೆ ಪ್ರಾಣ
ನಿಮಗರ್ಪಿತವೆಂಬೆನು
೬೬.
ನಚ್ಚುಗೆ ಮನ ನಿಮ್ಮಲ್ಲಿ ಮೆಚ್ಚುಗೆ ಮನ ನಿಮ್ಮಲ್ಲಿ
ಸಲುಗೆ ಮನ ನಿಮ್ಮಲ್ಲಿ ಸೋಲುಗೆ ಮನ ನಿಮ್ಮಲ್ಲಿ
ಅಳಲುಗೆ ಮನ ನಿಮ್ಮಲ್ಲಿ ಬಳಲುಗೆ ಮನ ನಿಮ್ಮಲ್ಲಿ
ಕರಗುಗೆ ಮನ ನಿಮ್ಮಲ್ಲಿ ಕೊರಗುಗೆ ಮನ ನಿಮ್ಮಲ್ಲಿ
ಎನ್ನ ಪಂಚೇದ್ರಿಯಗಳು ಕಬ್ಬುನ ಉಂಡ ನೀರಿನಂತೆ
ನಿಮ್ಮಲ್ಲಿ ಬೆರೆಸುಗೆ ಚೆನ್ನಮಲ್ಲಿಕಾರ್ಜುನಯ್ಯ
೬೭.
ಒಡಲಿಲ್ಲದ, ನುಡಿಯಿಲ್ಲದ, ಕಡೆಯಿಲ್ಲದ
ನಲ್ಲನ ಒಡಗೂಡಿ ಸುಖಿಯಾದೆ ಕೇಳಿರಯ್ಯ
ಭಾಷೆ ಪೈಸರವಿಲ್ಲ ಓಸರಿಸೆನನ್ಯಕ್ಕೆ
ಆಸೆ ಮಾಡೆನು ಮತ್ತೆ ಭಿನ್ನ ಸುಖಕ್ಕೆ
ಆರಳಿದು ಮೂರಾಗಿ, ಮೂರಳಿದು ಎರಡಾಗಿ,
ಎರಡಳಿದು ಒಂದಾಗಿ ನಿಂದೆನಯ್ಯ
ಬಸವಣ್ಣ ಮೊದಲಾದ ಶರಣರಿಗೆ ಶರಣಾರ್ಥಿ
ಪ್ರಭುವಿನಿಂದ ಕೃತಕೃತ್ಯಳಾದೆನು ನಾನು
ಮರೆಯಲಾಗದು ನಾನು ನಿಮ್ಮ ಶಿಶುವೆಂದು
ಚೆನ್ನಮಲ್ಲಿಕಾರ್ಜುನನ ಬೆರೆಸೆಂದು
ಎನ್ನ ಹರಸುತ್ತಿಹುದು
೬೮.
ಹೊಳೆವ ಕೆಂಜೆಡೆಗಳ ಮಣಿಮುಕುಟದ
ಒಪ್ಪುವ ಸುಲಿಪಲ್ಗಳ ನಗೆಮೊಗದ
ಕಂಗಳ ಕಾಂತಿಯಿಂ ಈರೇಳು ಭುವನಮಂ ಬೆಳಗುವ
ದಿವ್ಯ ಸ್ವರೂಪನಂ ಕಂಡೆ ನಾನು
ಕಂಡೆನ್ನ ಕಂಗಳ ಬರ ಹಿಂಗಿತ್ತೆಂದೆನಗೆ
ಗಂಡ ಗಂಡರನ್ನೆಲ್ಲ ಹೆಂಡಹೆಂಡಿರಾಗಿ ಆಳುವ
ಗುರುವನ ಕಂಡೆ ನಾನು !
ಜಗದಾದಿ ಶಕ್ತಿಯೊಳು ಬೆರೆಸಿ ಒಡನಾಡುವ
ಪರಮ ಗುರು ಚೆನ್ನಮಲ್ಲಿಕಾರ್ಜುನನ ನಿಲುವ ಕಂಡು ಬದುಕಿದೆನು
೬೯.
ಕಿಚ್ಚಿಲ್ಲದ ಬೇಗೆಯಲಿ ಬೆಂದೆನವ್ವ
ಏರಿಲ್ಲದ ಘಾಯದಲಿ ನೊಂದೆನವ್ವ
ಸುಖವಿಲ್ಲದ ಧಾವತಿಗೊಂಡೆನವ್ವ
ಚೆನ್ನಮಲ್ಲಿಕಾರ್ಜುನದೇವಂಗೊಲಿದು
ಬಾರದ ಭವಂಗಳಲಿ ಬಂದೆನವ್ವ
೭೦.
ಬೆರಸುವಡೆ ಬೇಗ ತೋರ! ಹೊರಹಾಕದಿರಯ್ಯ!
ನಿಮ್ಮಲ್ಲಿಗೆ ಸಲೆ ಸಂದ ತೊತ್ತಾನು, ಎನ್ನ ಹೊರಹಾಕದಿರಯ್ಯ
ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ನಂಬಿ
ಬೆಂಬಳಿ ಬಂದೆನು ಇಂಬುಗೊಳ್ಳಯ್ಯ ಬೇಗದಲಿ
ಪೃಥ್ವಿಯ ಗೆಲಿದ ಏಲೇಶ್ವರನ ನಾನು ಕಂಡೆ
ಭಾವಭ್ರಮೆಯ ಗೆಲಿದ ಬ್ರಹ್ಮೇಶ್ವರನ ನಾನು ಕಂಡೆ
ಸತ್ವ-ರಜ-ತಮ-ತ್ರಿವಿಧವ ಗೆಲಿದ ತ್ರಿಪುರಾಂತಕನ ಕಂಡೆ
ಅಂತರಂಗ-ಆತ್ಮಜ್ಞಾನದಿಂದ ಜ್ಯೋತಿಸಿದ್ಧಯ್ಯನ ನಾನು ಕಂಡೆ
ಇವರೆಲ್ಲರ ಮಧ್ಯಸ್ಥಾನ ಪ್ರಾಣಲಿಂಗವೆಂದು
ಸುಜ್ಞಾನದಲ್ಲಿ ತೋರಿದ ಆ ಬಸವಣ್ಣನ ಪ್ರಸಾದದಿಂದ
ಚೆನ್ನಮಲ್ಲಿಕಾರ್ಜುನನ ಕಂಡೆನಯ್ಯ
೬೨.
ಅಪಾರ ಗಂಭೀರದ ಅಂಬುಧಿಯಲ್ಲಿ
ತಾರಾಪಥವ ನೋಡಿ ನಡೆಯೆ
ಭೈತ್ರದಿಂದ ದ್ವೀಪಾಂತರಕ್ಕೆ ಸಕಲಪದಾರ್ಥನವೆಯ್ದಿಸುವುದು
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ
ತುರ್ಯಸಂಭಾಷಣೆಯನರಿದಡೆ ಮುನ್ನಿನಲ್ಲಿಗೆಯ್ದಿಸುವುದು
೬೩.
ಕ್ರೀಯೊಳ್ಳುಡೊಂತೊಂದಾಸೆ
ಸದ್ಭಕ್ತರ ನುಡಿಗಡಣ ಉಳ್ಳೊಡಂತೊಂದಾಸೆ
ಶ್ರೀಗಿರಿಯನೇರಿ ನಿಮ್ಮ ಬೆರೆಸಿದರೆ ಎನ್ನಾಸೆಗೆ ಕಡೆಯೇ ಅಯ್ಯ?
ಆವಾಸೆಯೂ ಇಲ್ಲದೆ ನಿಮ್ಮ ನಂಬಿ ಬಂದು ಕೆಟ್ಟೆನಯ್ಯ
೬೪.
ಆರೂ ಇಲ್ಲದವಳೆಂದು
ಅಳಿಗೊಳಲು ಬೇಡ ಕಂಡಯ್ಯ
ಏನ ಮಾಡಿದೆಡೆಯೂ ನಾನಂಜುವಳಲ್ಲ!
ತರಗೆಲೆಯ ಮೆಲಿದು ನಾನಿಹೆನು
ಸುರಗಿಯ ಮೇಲೆರಗಿ ನಾನಿಹೆನು
ಚೆನ್ನಮಲ್ಲಿಕಾರ್ಜುನಯ್ಯ
ಕರ ಕಡೆ ನೋಡಿದಡೆ
ಒಡಲನೂ ಪ್ರಾಣವನೂ ನಿಮಗೊಪ್ಪಿಸಿ ಶುದ್ಧಳಿಹೆನು
೬೫.
ಕಿಡಿಕಿಡಿ ಕೆದರಿದಡೆ
ಎನಗೆ ಹಸಿವು ತೃಷೆ ಅಡಗಿತ್ತೆಂಬೆನು
ಮುಗಿಲು ಹರಿದು ಬಿದ್ದಡೆ
ಎನಗೆ ಮಜ್ಜನಕ್ಕೆರೆದರೆಂಬೆನು
ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು
ಚೆನ್ನಮಲ್ಲಿಕಾರ್ಜುನಯ್ಯ, ಶಿರ ಹರಿದು ಬಿದ್ದಡೆ ಪ್ರಾಣ
ನಿಮಗರ್ಪಿತವೆಂಬೆನು
೬೬.
ನಚ್ಚುಗೆ ಮನ ನಿಮ್ಮಲ್ಲಿ ಮೆಚ್ಚುಗೆ ಮನ ನಿಮ್ಮಲ್ಲಿ
ಸಲುಗೆ ಮನ ನಿಮ್ಮಲ್ಲಿ ಸೋಲುಗೆ ಮನ ನಿಮ್ಮಲ್ಲಿ
ಅಳಲುಗೆ ಮನ ನಿಮ್ಮಲ್ಲಿ ಬಳಲುಗೆ ಮನ ನಿಮ್ಮಲ್ಲಿ
ಕರಗುಗೆ ಮನ ನಿಮ್ಮಲ್ಲಿ ಕೊರಗುಗೆ ಮನ ನಿಮ್ಮಲ್ಲಿ
ಎನ್ನ ಪಂಚೇದ್ರಿಯಗಳು ಕಬ್ಬುನ ಉಂಡ ನೀರಿನಂತೆ
ನಿಮ್ಮಲ್ಲಿ ಬೆರೆಸುಗೆ ಚೆನ್ನಮಲ್ಲಿಕಾರ್ಜುನಯ್ಯ
೬೭.
ಒಡಲಿಲ್ಲದ, ನುಡಿಯಿಲ್ಲದ, ಕಡೆಯಿಲ್ಲದ
ನಲ್ಲನ ಒಡಗೂಡಿ ಸುಖಿಯಾದೆ ಕೇಳಿರಯ್ಯ
ಭಾಷೆ ಪೈಸರವಿಲ್ಲ ಓಸರಿಸೆನನ್ಯಕ್ಕೆ
ಆಸೆ ಮಾಡೆನು ಮತ್ತೆ ಭಿನ್ನ ಸುಖಕ್ಕೆ
ಆರಳಿದು ಮೂರಾಗಿ, ಮೂರಳಿದು ಎರಡಾಗಿ,
ಎರಡಳಿದು ಒಂದಾಗಿ ನಿಂದೆನಯ್ಯ
ಬಸವಣ್ಣ ಮೊದಲಾದ ಶರಣರಿಗೆ ಶರಣಾರ್ಥಿ
ಪ್ರಭುವಿನಿಂದ ಕೃತಕೃತ್ಯಳಾದೆನು ನಾನು
ಮರೆಯಲಾಗದು ನಾನು ನಿಮ್ಮ ಶಿಶುವೆಂದು
ಚೆನ್ನಮಲ್ಲಿಕಾರ್ಜುನನ ಬೆರೆಸೆಂದು
ಎನ್ನ ಹರಸುತ್ತಿಹುದು
೬೮.
ಹೊಳೆವ ಕೆಂಜೆಡೆಗಳ ಮಣಿಮುಕುಟದ
ಒಪ್ಪುವ ಸುಲಿಪಲ್ಗಳ ನಗೆಮೊಗದ
ಕಂಗಳ ಕಾಂತಿಯಿಂ ಈರೇಳು ಭುವನಮಂ ಬೆಳಗುವ
ದಿವ್ಯ ಸ್ವರೂಪನಂ ಕಂಡೆ ನಾನು
ಕಂಡೆನ್ನ ಕಂಗಳ ಬರ ಹಿಂಗಿತ್ತೆಂದೆನಗೆ
ಗಂಡ ಗಂಡರನ್ನೆಲ್ಲ ಹೆಂಡಹೆಂಡಿರಾಗಿ ಆಳುವ
ಗುರುವನ ಕಂಡೆ ನಾನು !
ಜಗದಾದಿ ಶಕ್ತಿಯೊಳು ಬೆರೆಸಿ ಒಡನಾಡುವ
ಪರಮ ಗುರು ಚೆನ್ನಮಲ್ಲಿಕಾರ್ಜುನನ ನಿಲುವ ಕಂಡು ಬದುಕಿದೆನು
೬೯.
ಕಿಚ್ಚಿಲ್ಲದ ಬೇಗೆಯಲಿ ಬೆಂದೆನವ್ವ
ಏರಿಲ್ಲದ ಘಾಯದಲಿ ನೊಂದೆನವ್ವ
ಸುಖವಿಲ್ಲದ ಧಾವತಿಗೊಂಡೆನವ್ವ
ಚೆನ್ನಮಲ್ಲಿಕಾರ್ಜುನದೇವಂಗೊಲಿದು
ಬಾರದ ಭವಂಗಳಲಿ ಬಂದೆನವ್ವ
೭೦.
ಬೆರಸುವಡೆ ಬೇಗ ತೋರ! ಹೊರಹಾಕದಿರಯ್ಯ!
ನಿಮ್ಮಲ್ಲಿಗೆ ಸಲೆ ಸಂದ ತೊತ್ತಾನು, ಎನ್ನ ಹೊರಹಾಕದಿರಯ್ಯ
ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ನಂಬಿ
ಬೆಂಬಳಿ ಬಂದೆನು ಇಂಬುಗೊಳ್ಳಯ್ಯ ಬೇಗದಲಿ
Comments
Post a Comment