೧೭೧.
ಜ್ಞಾನಿಯನಜ್ಞಾನಿಯೆಂದು | ಹೀನ ತಾ ನುಡಿದರೆ
ಆನೆಯನೇರಿ ಸುಖದಿಂದಲಿ - ಹೋಹಂಗೆ
ಶ್ವಾನ ಬೊಗಳ್ದೇನು ಸರ್ವಜ್ಞ
೧೭೨.
ತುಂಬಿದಾ ಕೆರೆಭಾವಿ | ತುಂಬಿಹುದೆನಬೇಡ
ನಂಬಿರಬೇಡ ಲಕ್ಶ್ಮಿಯನು - ಬಡತನವು
ಬೆಂಬಳಿಯೊಳಿಹುದು ಸರ್ವಜ್ಞ
೧೭೩.
ಕೇಡನೊಬ್ಬನಿಗೆ ಬಯಸೆ | ಕೇಡು ತಪ್ಪದು ತನಗೆ
ಕೂಡಿ ಕೆಂಡವನು ತೆಗೆದೊಡೆ - ತನ್ನ ಕೈ
ಕೂಡೆ ಬೇವಂತೆ ಸರ್ವಜ್ಞ
೧೭೪.
ಅರಸು ಮುನಿದೂರೊಳಗೆ | ಇರುವುದೇ ಕರ ಕಷ್ಟ
ಅರಸು ಮನ್ನಣೆಯು ಕರಗಿದ - ಠಾವಿಂದ
ಸರಿವುದೇ ಲೇಸು ಸರ್ವಜ್ಞ
೧೭೫.
ಆಶೆಯುಳ್ಳನ್ನಕ್ಕರ - ದಾಸನಾಗಿರುತಿಪ್ಪ
ಆಶೆಯ ತಲೆಯನಳಿದರೆ - ಕೈಲಾಸ
ದಾಚೆಯಲಿಪ್ಪ ಸರ್ವಜ್ಞ
೧೭೬.
ಧಾರುಣಿ ನಡುಗುವುದು | ಮೇರುವಲ್ಲಾಡುವುದು
ವಾರಿಧಿ ಬತ್ತಿ ಬರೆವುದು - ಶಿವಭಕ್ತಿ
ಯೋರೆಯಾದಂದು ಸರ್ವಜ್ಞ
೧೭೭.
ಮಂದಿಯಿಲ್ಲದರಸು | ತಂದೆ ಇಲ್ಲದ ಕಂದ
ಬಂಧುಗಳಿಲ್ಲದಿಹ ಬಡತನ - ಇವು ತಾನು
ಎಂದಿಗೂ ಬೇಡ ಸರ್ವಜ್ಞ
೧೭೮.
ಅನ್ನವಿಕ್ಕದನಿಂದ | ಕುನ್ನಿ ತಾ ಕರ ಲೇಸು
ಉನ್ನತವಪ್ಪತಿಥಿಗಿಕ್ಕದ ಬದುಕು - ನಾಯ
ಕುನ್ನಿಯಿಂ ಕಷ್ಟ ಸರ್ವಜ್ಞ
೧೭೯.
ಉರಿಯುದಕ ಶೀತವು | ಉರಗಪತಿ ಭೀಕರವು
ಗುರುವಾಜ್ಞೆಗಂಜಿ ಕೆಡುವವು - ಇದ ನರ
ರರಿಯದೆ ಕೆಡುಗು ಸರ್ವಜ್ಞ
೧೮೦.
ಶೇಷನಿಂ ಹಿರಿದಿಲ್ಲ | ಆಸೆಯಿಂ ಕೀಳಿಲ್ಲ
ರೋಷದಿಂದಧಮಗತಿಯಿಲ್ಲ - ಪರದೈವ
ಈಶನಿಂದಿಲ್ಲ ಸರ್ವಜ್ಞ
ಜ್ಞಾನಿಯನಜ್ಞಾನಿಯೆಂದು | ಹೀನ ತಾ ನುಡಿದರೆ
ಆನೆಯನೇರಿ ಸುಖದಿಂದಲಿ - ಹೋಹಂಗೆ
ಶ್ವಾನ ಬೊಗಳ್ದೇನು ಸರ್ವಜ್ಞ
೧೭೨.
ತುಂಬಿದಾ ಕೆರೆಭಾವಿ | ತುಂಬಿಹುದೆನಬೇಡ
ನಂಬಿರಬೇಡ ಲಕ್ಶ್ಮಿಯನು - ಬಡತನವು
ಬೆಂಬಳಿಯೊಳಿಹುದು ಸರ್ವಜ್ಞ
೧೭೩.
ಕೇಡನೊಬ್ಬನಿಗೆ ಬಯಸೆ | ಕೇಡು ತಪ್ಪದು ತನಗೆ
ಕೂಡಿ ಕೆಂಡವನು ತೆಗೆದೊಡೆ - ತನ್ನ ಕೈ
ಕೂಡೆ ಬೇವಂತೆ ಸರ್ವಜ್ಞ
೧೭೪.
ಅರಸು ಮುನಿದೂರೊಳಗೆ | ಇರುವುದೇ ಕರ ಕಷ್ಟ
ಅರಸು ಮನ್ನಣೆಯು ಕರಗಿದ - ಠಾವಿಂದ
ಸರಿವುದೇ ಲೇಸು ಸರ್ವಜ್ಞ
೧೭೫.
ಆಶೆಯುಳ್ಳನ್ನಕ್ಕರ - ದಾಸನಾಗಿರುತಿಪ್ಪ
ಆಶೆಯ ತಲೆಯನಳಿದರೆ - ಕೈಲಾಸ
ದಾಚೆಯಲಿಪ್ಪ ಸರ್ವಜ್ಞ
೧೭೬.
ಧಾರುಣಿ ನಡುಗುವುದು | ಮೇರುವಲ್ಲಾಡುವುದು
ವಾರಿಧಿ ಬತ್ತಿ ಬರೆವುದು - ಶಿವಭಕ್ತಿ
ಯೋರೆಯಾದಂದು ಸರ್ವಜ್ಞ
೧೭೭.
ಮಂದಿಯಿಲ್ಲದರಸು | ತಂದೆ ಇಲ್ಲದ ಕಂದ
ಬಂಧುಗಳಿಲ್ಲದಿಹ ಬಡತನ - ಇವು ತಾನು
ಎಂದಿಗೂ ಬೇಡ ಸರ್ವಜ್ಞ
೧೭೮.
ಅನ್ನವಿಕ್ಕದನಿಂದ | ಕುನ್ನಿ ತಾ ಕರ ಲೇಸು
ಉನ್ನತವಪ್ಪತಿಥಿಗಿಕ್ಕದ ಬದುಕು - ನಾಯ
ಕುನ್ನಿಯಿಂ ಕಷ್ಟ ಸರ್ವಜ್ಞ
೧೭೯.
ಉರಿಯುದಕ ಶೀತವು | ಉರಗಪತಿ ಭೀಕರವು
ಗುರುವಾಜ್ಞೆಗಂಜಿ ಕೆಡುವವು - ಇದ ನರ
ರರಿಯದೆ ಕೆಡುಗು ಸರ್ವಜ್ಞ
೧೮೦.
ಶೇಷನಿಂ ಹಿರಿದಿಲ್ಲ | ಆಸೆಯಿಂ ಕೀಳಿಲ್ಲ
ರೋಷದಿಂದಧಮಗತಿಯಿಲ್ಲ - ಪರದೈವ
ಈಶನಿಂದಿಲ್ಲ ಸರ್ವಜ್ಞ
Comments
Post a Comment