Skip to main content

Posts

Showing posts from October 13, 2010

ಅಕ್ಕನ ವಚನಗಳು - 31 ರಿಂದ 40 ರವರೆಗೆ

೩೧. ಊರ ಸೀರೆಗೆ ಅಗಸ ತಡಬಡಗೊಂಬಂತೆ ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಎಂದು ನೆನೆನೆನೆದು ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ ೩೨. ದೇವ ಎನಗೆ ಭವಿಯ ಸಂಗವೆಂದು ಮಾಣ್ಪುದೆನ್ನ ತಂದೆ ದೇವ ಬೆರಕೆಯಿಲ್ಲದಚ್ಚಬಕುತಿ ಸುಖವದೆಂದು ತಂದೆ ಪೂಜೆಯೊಳಗೆ ಮೆಚ್ಚ ಬೆಚ್ಚ ಮನವನೆಂತು ತೆಗೆವೆನಯ್ಯ ಪೂಜೆಯೊಳಗೆ ನೆಟ್ಟ ದಿಟ್ಟಿಗಳನದೆಂತು ಕೀಳ್ವೆನಯ್ಯ [ಚೆನ್ನಮಲ್ಲಿಕಾರ್ಜುನ] ೩೩. ದೇವ ಶಿವಲಾಂಛನವನೇರಿಸಿಕೊಂಡು ಮನೆಗೆ ಬಂದವರಂ ಕಡೆಗಣಿಸೆ ಎಂತು ನೋಡುತಿರ್ಪೆನ್? ಆವರ್ಗೆ ಸತ್ಕಾರವಂ ಮಾಡಲಿಲ್ಲದಿರ್ದೊಡೆ ಎನ್ನನೀ ಧರೆಯ ಮೇಲಿರಿಸುವ ಕಾರಣವೇನಭವ? ನಿನ್ನವಳೆಂದೆನ್ನ ಮುದ್ದುತನವ ಸಲಿಸುವೊಡಿರಿಸುವುದು ಇಲ್ಲಾ ಕೈಲಸಕ್ಕೆ ಕೊಂಡೊಯ್ವುದು [ಚೆನ್ನಮಲ್ಲಿಕಾರ್ಜುನ] ೩೪. ಅಶನದಾಶಯಂ, ತೃಷೆಯ ತೃಷ್ಣೆಯಂ, ಬೆಸನದ ಬೇಗೆಯಂ, ವಿಷಯದ ವಿಹ್ವಳತೆಯಂ, ತಾಪತ್ರಯದ ಕಲ್ಪನೆಗಳಂ ಗೆಲಿದೆ ಇನ್ನೇನಿನ್ನೇನೆನ್ನಿಚ್ಛೆಯಾದುದು ಚೆನ್ನಮಲ್ಲಿಕಾರ್ಜುನ ನಿನಗಂಜೆನಂಜೆ ೩೫. ಶಿವನೇ, ಉಳಿವ ಕರೆವ ನೇಹವುಂಟೆ? ಸಂಸಾರಕ್ಕಂ ನಿಮ್ಮಲ್ಲಿ ಗೆಡೆಯಾಡುವ ಭಕ್ತಿಯುಂಟೇ? ಏನಯ್ಯ ಶಿವನೇ, ಏನೆಂದು ಪೇಳ್ವೆ ಲಜ್ಜೆಯ ಮಾತ, [ಚೆನ್ನಮಲ್ಲಿಕಾರ್ಜುನ] ೩೬. ಒಳಗೆ ಶೋಧಿಸಿ, ಹೊರಗೆ ಶುದ್ಧವಿಸಿ, ಒಳ-ಹೊರಗೆಂಬ ಉಭಯಶಂಕೆಯ ಕಳೆದು, ಸ್ಫಟಿಕದ