೨೦೧.
ಊರ ಸೀರೆಗೆ ಅಸಗ ಬಡಿವಡೆದಂತೆ
ಹೊನ್ನೆನ್ನದು, ಹೆಣ್ಣೆನ್ನದು, ಮಣ್ಣೆನ್ನದು,
ಎಂದು ಮರುಳಾದೆ.
ನಿಮ್ಮನರಿಯದ ಕಾರಣ,
ಕೆಮ್ಮನೆ ಕೆಟ್ಟೆ ಕೂಡಲಸಂಗಮದೇವ.
ಊರ ಸೀರೆಗೆ ಅಸಗ ಬಡಿವಡೆದಂತೆ
ಹೊನ್ನೆನ್ನದು, ಹೆಣ್ಣೆನ್ನದು, ಮಣ್ಣೆನ್ನದು,
ಎಂದು ಮರುಳಾದೆ.
ನಿಮ್ಮನರಿಯದ ಕಾರಣ,
ಕೆಮ್ಮನೆ ಕೆಟ್ಟೆ ಕೂಡಲಸಂಗಮದೇವ.
೨೦೨.
ಕಾಂಚನವೆಂಬ ನಾಯ ನೆಚ್ಚಿ
ನಿಮ್ಮ ನಾನು ಮರೆದೆನಯ್ಯ.
ಕಾಂಚನಕ್ಕೆ ವೇಳೆಯಲ್ಲದೆ, ಲಿಂಗಕ್ಕೆ ವೇಳೆಯಿಲ್ಲ!
ಹಡಕಿಗೆ ಮೆಚ್ಚಿದ ಸೊಣಗನಮೃತದ ರುಚಿಯ ಬಲ್ಲುದೇ ?
ಕೂಡಲಸಂಗಮದೇವ.
ಕಾಂಚನವೆಂಬ ನಾಯ ನೆಚ್ಚಿ
ನಿಮ್ಮ ನಾನು ಮರೆದೆನಯ್ಯ.
ಕಾಂಚನಕ್ಕೆ ವೇಳೆಯಲ್ಲದೆ, ಲಿಂಗಕ್ಕೆ ವೇಳೆಯಿಲ್ಲ!
ಹಡಕಿಗೆ ಮೆಚ್ಚಿದ ಸೊಣಗನಮೃತದ ರುಚಿಯ ಬಲ್ಲುದೇ ?
ಕೂಡಲಸಂಗಮದೇವ.
೨೦೩.
ಹಗೆಹದಲ್ಲಿ ಬಿದ್ದವರ ಮೇಲೆ ಒರಳ ನೂಂಕುವರೆ ?
ಕೋಳದ ಮೇಲೆ ಸಂಕಲೆಯನಿಕ್ಕುವರೆ ?
ಬೆಂದ ಹುಣ್ಣ ಕಂಬಿಯಲ್ಲಿ ಕೀಸುವರೆ ?
ಕೂಡಲಸಂಗಯ್ಯ ಕಾಡುವ ಕಾಟ
ಸಿರಿಯಾಳಂಗಲ್ಲದೆ ಸೈರಿಸಬಹುದೆ ?
ಹಗೆಹದಲ್ಲಿ ಬಿದ್ದವರ ಮೇಲೆ ಒರಳ ನೂಂಕುವರೆ ?
ಕೋಳದ ಮೇಲೆ ಸಂಕಲೆಯನಿಕ್ಕುವರೆ ?
ಬೆಂದ ಹುಣ್ಣ ಕಂಬಿಯಲ್ಲಿ ಕೀಸುವರೆ ?
ಕೂಡಲಸಂಗಯ್ಯ ಕಾಡುವ ಕಾಟ
ಸಿರಿಯಾಳಂಗಲ್ಲದೆ ಸೈರಿಸಬಹುದೆ ?
೨೦೪.
ಮಾತಿನಲ್ಲಿ ಶ್ರೋತ್ರಸುಖವ ನುಡಿಯಬಹುದಲ್ಲದೆ,
ಮಾಡುವ ಸತ್ಕ್ರಿಯೆಯಿಂದ ಭಕ್ತನೆನಿಸಲು ಬಾರದು.
ಅರ್ಥಪ್ರಾಣಾಭಿಮಾನವಾರಿಗೆಯು ಸಮನಿಸದು,
ಲಿಂಗಮುಖದಲುದಯವಾದ ಶರಣಂಗಲ್ಲದೆ,
ಅಯ್ಯ, ಕೂಡಲಸಂಗನ ಶರಣರ
ಭಕ್ತಿಭಂಡಾರವು ಎನಗೆಂತು ಸಾಧ್ಯವಪ್ಪುದು,
ಹೇಳೆನ್ನ ತಂದೆ.
ಮಾತಿನಲ್ಲಿ ಶ್ರೋತ್ರಸುಖವ ನುಡಿಯಬಹುದಲ್ಲದೆ,
ಮಾಡುವ ಸತ್ಕ್ರಿಯೆಯಿಂದ ಭಕ್ತನೆನಿಸಲು ಬಾರದು.
ಅರ್ಥಪ್ರಾಣಾಭಿಮಾನವಾರಿಗೆಯು ಸಮನಿಸದು,
ಲಿಂಗಮುಖದಲುದಯವಾದ ಶರಣಂಗಲ್ಲದೆ,
ಅಯ್ಯ, ಕೂಡಲಸಂಗನ ಶರಣರ
ಭಕ್ತಿಭಂಡಾರವು ಎನಗೆಂತು ಸಾಧ್ಯವಪ್ಪುದು,
ಹೇಳೆನ್ನ ತಂದೆ.
೨೦೫.
ಬಾಣಮಯೂರರಂತೆ ಬಣ್ಣಿಸಲರಿಯೆ
ಸಿರಿಯಾಳನಂತೆ ಉಣಲಿಕ್ಕಲರಿಯೆ
ದಾಸಿಮಯ್ಯನಂತೆ ಉಡಕೊಡಲರಿಯೆ
ಉಂಡುಟ್ಟು ಕೊಟ್ಟರೆ ಮುಯ್ಯಿಗೆ ಮುಯ್ಯೆನಿಸಿತ್ತು,
ಎನಗೆ ಕೊಟ್ಟರೆ ಧರ್ಮ ಕೂಡಲಸಂಗಮದೇವ.
ಬಾಣಮಯೂರರಂತೆ ಬಣ್ಣಿಸಲರಿಯೆ
ಸಿರಿಯಾಳನಂತೆ ಉಣಲಿಕ್ಕಲರಿಯೆ
ದಾಸಿಮಯ್ಯನಂತೆ ಉಡಕೊಡಲರಿಯೆ
ಉಂಡುಟ್ಟು ಕೊಟ್ಟರೆ ಮುಯ್ಯಿಗೆ ಮುಯ್ಯೆನಿಸಿತ್ತು,
ಎನಗೆ ಕೊಟ್ಟರೆ ಧರ್ಮ ಕೂಡಲಸಂಗಮದೇವ.
೨೦೬.
ಎನ್ನ ತಪ್ಪನಂತಕೋಟಿ
ನಿಮ್ಮ ಸೈರಣೆಗೆ ಲೆಕ್ಕವಿಲ್ಲಯ್ಯ.
ಇನ್ನು ತಪ್ಪಿದೆನಾದರೆ
ನಿಮ್ಮ ಪಾದವೇ ದಿವ್ಯ ಕೂಡಲಸಂಗಮದೇವಯ್ಯ,
ನಿಮ್ಮ ಪ್ರಮಥರ ಮುಂದೆ ಕಿನ್ನರಿ ಬೊಮ್ಮಣ್ಣನೇ ಸಾಕ್ಷಿ!
ಎನ್ನ ತಪ್ಪನಂತಕೋಟಿ
ನಿಮ್ಮ ಸೈರಣೆಗೆ ಲೆಕ್ಕವಿಲ್ಲಯ್ಯ.
ಇನ್ನು ತಪ್ಪಿದೆನಾದರೆ
ನಿಮ್ಮ ಪಾದವೇ ದಿವ್ಯ ಕೂಡಲಸಂಗಮದೇವಯ್ಯ,
ನಿಮ್ಮ ಪ್ರಮಥರ ಮುಂದೆ ಕಿನ್ನರಿ ಬೊಮ್ಮಣ್ಣನೇ ಸಾಕ್ಷಿ!
೨೦೭.
ಅಡಿಗಡಿಗೆ ಎನ್ನ ಮನವ ಜಡಿದು ನೋಡದಿರಯ್ಯ.
ಬಡವನೆಂದೆನ್ನ ಕಾಡದಿರಯ್ಯ
ಎನಗೊಡೆಯರುಂಟು ನಮ್ಮ ಕೂಡಲಸಂಗನ ಶರಣರು.
ಅಡಿಗಡಿಗೆ ಎನ್ನ ಮನವ ಜಡಿದು ನೋಡದಿರಯ್ಯ.
ಬಡವನೆಂದೆನ್ನ ಕಾಡದಿರಯ್ಯ
ಎನಗೊಡೆಯರುಂಟು ನಮ್ಮ ಕೂಡಲಸಂಗನ ಶರಣರು.
೨೦೮.
ಮನೆ ನೋಡಾ ಬಡವರು,
ಮನ ನೋಡಾ ಧೀರರು
ಸೋಂಕಿನಲ್ಲಿ ಶುಚಿ;
ಸರ್ವಾಂಗಕಲಿ.
ಪರಸಕ್ಕನುವಿಲ್ಲ; ಬಂದ ತತ್ಕಾಲಕ್ಕುಂಟು.
ಕೂಡಲಸಂಗನ ಶರಣರು ಸ್ವತಂತ್ರಧೀರರು.
ಮನೆ ನೋಡಾ ಬಡವರು,
ಮನ ನೋಡಾ ಧೀರರು
ಸೋಂಕಿನಲ್ಲಿ ಶುಚಿ;
ಸರ್ವಾಂಗಕಲಿ.
ಪರಸಕ್ಕನುವಿಲ್ಲ; ಬಂದ ತತ್ಕಾಲಕ್ಕುಂಟು.
ಕೂಡಲಸಂಗನ ಶರಣರು ಸ್ವತಂತ್ರಧೀರರು.
೨೦೯.
ಆ ಕರಿಯಾಕೃತಿಯ ಸೂಕರನ ಹೋಲಿಸಿದರೆ
ಸೂಕರ ಆ ಕರಿಯಾಗಬಲ್ಲುದೆ ?
ಆ ವ್ಯಾಳೇಶನಾಕೃತಿಯ ಭೂನಾಗನ ಹೋಲಿಸಿದರೆ
ಭೂನಾಗನಾ ವ್ಯಾಳೇಶನಾಗಬಲ್ಲುದೇ ?
ನಾನು ಭಕ್ತನಾದರೇನಯ್ಯ
ನಮ್ಮ ಕೂಡಲಸಂಗಮದೇವರ ಸದ್ಭಕ್ತರ ಹೋಲಲರಿವೆನೆ ?
ಆ ಕರಿಯಾಕೃತಿಯ ಸೂಕರನ ಹೋಲಿಸಿದರೆ
ಸೂಕರ ಆ ಕರಿಯಾಗಬಲ್ಲುದೆ ?
ಆ ವ್ಯಾಳೇಶನಾಕೃತಿಯ ಭೂನಾಗನ ಹೋಲಿಸಿದರೆ
ಭೂನಾಗನಾ ವ್ಯಾಳೇಶನಾಗಬಲ್ಲುದೇ ?
ನಾನು ಭಕ್ತನಾದರೇನಯ್ಯ
ನಮ್ಮ ಕೂಡಲಸಂಗಮದೇವರ ಸದ್ಭಕ್ತರ ಹೋಲಲರಿವೆನೆ ?
೨೧೦.
ಮೋಟನ ಮೌಳಿ, ಮೂಕೊರತಿಯ ಶೃಂಗಾರ,
ಬೇಟ ಕುರುಡಂಗೆ ನಗೆಗೆಡೆಯಾಯಿತ್ತು!
ನಮ್ಮ ಕೂಡಲಸಂಗನ ಶರಣರ ಮುಂದೆ
ಆನು ಭಕ್ತನೆಂಬ ನಾಚಿಕೆ ಸಾಲದೆ ?
ಮೋಟನ ಮೌಳಿ, ಮೂಕೊರತಿಯ ಶೃಂಗಾರ,
ಬೇಟ ಕುರುಡಂಗೆ ನಗೆಗೆಡೆಯಾಯಿತ್ತು!
ನಮ್ಮ ಕೂಡಲಸಂಗನ ಶರಣರ ಮುಂದೆ
ಆನು ಭಕ್ತನೆಂಬ ನಾಚಿಕೆ ಸಾಲದೆ ?
Comments
Post a Comment