Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.
೨೩೧.
ಸಾಸವೆಯ ಮೇಲೆ ಸಾಗರವರಿದಂತಾಯಿತಯ್ಯ!
ಆನಂದದಿಂದ ನಲಿನಲಿದಾಡುವೆನು.
ಆನಂದದಿಂದ ಕುಣಿಕುಣಿದಾಡುವೆನು.
ಕೂಡಲಸಂಗನ ಶರಣರು ಬಂದರೆ
ಉಬ್ಬಿಕೊಬ್ಬಿ ಹರುಷದಲೋಲಾಡುವೆನು.
೨೩೨.
ಎಳ್ಳಿಲ್ಲದ ಗಾಣವನಾಡಿದ
ಎತ್ತಿನಂತಾಯಿತ್ತೆನ್ನ ಭಕ್ತಿ!
ಉಪ್ಪ ಅಪ್ಪುವಿನಲ್ಲಿ ಅದ್ದಿ
ಮೆಲಿದಂತಾಯಿತ್ತೆನ್ನ ಭಕ್ತಿ!
ಕೂಡಲಸಂಗಮದೇವ,
ಅನು ಮಾಡಿದೆನೆಂಬೀ ಕಿಚ್ಚು ಸಾಲದೆ ?
ಎಳ್ಳಿಲ್ಲದ ಗಾಣವನಾಡಿದ
ಎತ್ತಿನಂತಾಯಿತ್ತೆನ್ನ ಭಕ್ತಿ!
ಉಪ್ಪ ಅಪ್ಪುವಿನಲ್ಲಿ ಅದ್ದಿ
ಮೆಲಿದಂತಾಯಿತ್ತೆನ್ನ ಭಕ್ತಿ!
ಕೂಡಲಸಂಗಮದೇವ,
ಅನು ಮಾಡಿದೆನೆಂಬೀ ಕಿಚ್ಚು ಸಾಲದೆ ?
೨೩೩.
ಧ್ಯಾನಮೌನವೆಂಬ ಶಸ್ತ್ರವ ಹಿಡಿಯಲಾರದೆ
ಅಹಂಕಾರಧಾರೆಯ ಮೊನೆಯಲಗೆಂಬ ಶಸ್ತ್ರವ ಹಿಡಿದು ಕೆಟ್ಟೆನಯ್ಯ!
ಅಂಜುವೆನಂಜುವೆನಯ್ಯ!
ಜಂಗಮ-ಲಿಂಗವೆಂಬ ಭಾಷೆ ಪಲ್ಲಟವಾಯಿತ್ತು!
ಇನ್ನು-ಜಂಗಮಲಿಂಗವೆಂಬ ಶಿಕ್ಷಾಶಸ್ತ್ರದಲ್ಲಿ,
ಎನ್ನ ಹೊಯ್ದು ಬಯ್ದು ರಕ್ಷಿಸುವುದು ಕೂಡಲಸಂಗಮದೇವ!
ಧ್ಯಾನಮೌನವೆಂಬ ಶಸ್ತ್ರವ ಹಿಡಿಯಲಾರದೆ
ಅಹಂಕಾರಧಾರೆಯ ಮೊನೆಯಲಗೆಂಬ ಶಸ್ತ್ರವ ಹಿಡಿದು ಕೆಟ್ಟೆನಯ್ಯ!
ಅಂಜುವೆನಂಜುವೆನಯ್ಯ!
ಜಂಗಮ-ಲಿಂಗವೆಂಬ ಭಾಷೆ ಪಲ್ಲಟವಾಯಿತ್ತು!
ಇನ್ನು-ಜಂಗಮಲಿಂಗವೆಂಬ ಶಿಕ್ಷಾಶಸ್ತ್ರದಲ್ಲಿ,
ಎನ್ನ ಹೊಯ್ದು ಬಯ್ದು ರಕ್ಷಿಸುವುದು ಕೂಡಲಸಂಗಮದೇವ!
೨೩೪.
ಎನ್ನಲ್ಲಿ ಭಕ್ತಿ ಸಾಸವೆಯ ಷಡ್ಭಾಗದಿನಿತಿಲ್ಲ;
ಎನ್ನ ಭಕ್ತನೆಂಬರು; ಎನ್ನ ಸಮಯಾಚಾರಿ ಎಂದೆಂಬರು.
ನಾನೇನು ಪಾಪವ ಮಾಡಿದೆನೋ!
ಬೆಳೆಯದ ಮುನ್ನವೇ ಮೊಳೆಯ ಕೊಯ್ವರೆ ಹೇಳಯ್ಯ ?
ಇರಿಯದ ವೀರ ಇಲ್ಲದ ಸೊಬಗುವ
ಎಲ್ಲ ಒಡೆಯರು ಏರಿಸಿ ನುಡಿವರು!
ಎನಗಿದು ವಿಧಿಯೇ ಕೂಡಲಸಂಗಮದೇವ ?
ಎನ್ನಲ್ಲಿ ಭಕ್ತಿ ಸಾಸವೆಯ ಷಡ್ಭಾಗದಿನಿತಿಲ್ಲ;
ಎನ್ನ ಭಕ್ತನೆಂಬರು; ಎನ್ನ ಸಮಯಾಚಾರಿ ಎಂದೆಂಬರು.
ನಾನೇನು ಪಾಪವ ಮಾಡಿದೆನೋ!
ಬೆಳೆಯದ ಮುನ್ನವೇ ಮೊಳೆಯ ಕೊಯ್ವರೆ ಹೇಳಯ್ಯ ?
ಇರಿಯದ ವೀರ ಇಲ್ಲದ ಸೊಬಗುವ
ಎಲ್ಲ ಒಡೆಯರು ಏರಿಸಿ ನುಡಿವರು!
ಎನಗಿದು ವಿಧಿಯೇ ಕೂಡಲಸಂಗಮದೇವ ?
೨೩೫.
ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ
ಹೊಗಳಿ ಹೊಗಳಿ!
ಎನ್ನ ಹೊಗಳತೆ ಎನ್ನನಿಮ್ಮೈಗೊಂಡಿತಲ್ಲ!
ಅಯ್ಯೋ ನಿಮ್ಮ ಮನ್ನಣೆಯೆ
ಮಸೆದಲಗಾಗಿ ತಾಗಿತ್ತಲ್ಲ!
ನೊಂದೆನು, ಸೈರಿಸಲಾರೆನು-ಕೂಡಲಸಂಗಮದೇವ,
ನೀನೆನಗೊಳ್ಳಿದನಾದರೆ,
ಎನ್ನ ಹೊಗಳತೆಗಡ್ಡ ಬಾರಾ ಧರ್ಮೀ.
ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ
ಹೊಗಳಿ ಹೊಗಳಿ!
ಎನ್ನ ಹೊಗಳತೆ ಎನ್ನನಿಮ್ಮೈಗೊಂಡಿತಲ್ಲ!
ಅಯ್ಯೋ ನಿಮ್ಮ ಮನ್ನಣೆಯೆ
ಮಸೆದಲಗಾಗಿ ತಾಗಿತ್ತಲ್ಲ!
ನೊಂದೆನು, ಸೈರಿಸಲಾರೆನು-ಕೂಡಲಸಂಗಮದೇವ,
ನೀನೆನಗೊಳ್ಳಿದನಾದರೆ,
ಎನ್ನ ಹೊಗಳತೆಗಡ್ಡ ಬಾರಾ ಧರ್ಮೀ.
೨೩೬.
ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ!
ಅಹಂಕಾರ ಪೂರಾಯ ಗಾಯದಲ್ಲಿ
ಆನೆಂತು ಬದುಕುವೆನೆಂತು ಜೀವಿಸುವೆ!
ಜಂಗಮವಾಗಿ ಬಂದು ಜರಿದು
ಶೂಲವನಿಳುಹಿ, ಪ್ರಸಾದದ ಮದ್ದನಿಕ್ಕಿ
ಸಲಹು ಕೂಡಲಸಂಗಮದೇವ.
ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ!
ಅಹಂಕಾರ ಪೂರಾಯ ಗಾಯದಲ್ಲಿ
ಆನೆಂತು ಬದುಕುವೆನೆಂತು ಜೀವಿಸುವೆ!
ಜಂಗಮವಾಗಿ ಬಂದು ಜರಿದು
ಶೂಲವನಿಳುಹಿ, ಪ್ರಸಾದದ ಮದ್ದನಿಕ್ಕಿ
ಸಲಹು ಕೂಡಲಸಂಗಮದೇವ.
೨೩೭.
ಹೊಯ್ದವರೆನ್ನ ಹೊರೆದವರೆಂಬೆ,
ಬಯ್ದವರೆನ್ನ ಬಂಧುಗಳೆಂಬೆ.
ನಿಂದಿಸಿದವರೆನ್ನ ತಂದೆತಾಯಿಗಳೆಂಬೆ!
ಆಳಿಗೊಂಡವರೆನ್ನ ಆಳ್ದರೆಂಬೆ.
ಜರಿದವರೆನ್ನ ಜನ್ಮಬಂಧುಗಳೆಂಬೆ.
ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದವರು
ಕೂಡಲಸಂಗಮದೇವ.
ಹೊಯ್ದವರೆನ್ನ ಹೊರೆದವರೆಂಬೆ,
ಬಯ್ದವರೆನ್ನ ಬಂಧುಗಳೆಂಬೆ.
ನಿಂದಿಸಿದವರೆನ್ನ ತಂದೆತಾಯಿಗಳೆಂಬೆ!
ಆಳಿಗೊಂಡವರೆನ್ನ ಆಳ್ದರೆಂಬೆ.
ಜರಿದವರೆನ್ನ ಜನ್ಮಬಂಧುಗಳೆಂಬೆ.
ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದವರು
ಕೂಡಲಸಂಗಮದೇವ.
೨೩೮.
ಎಡದ ಕೈಯಲು ಹಾಲ ಬಟ್ಟಲು
ಬಲದ ಕೈಯಲು ಓಜುಗಟ್ಟಿಗೆ!
ಆವಾಗ ಬಂದಾನೆಮ್ಮಯ್ಯ
ಬಡಿದು ಹಾಲು ಕುಡಿಸುವ ತಂದೆ! ?
"ದಂಡಕ್ಷೀರದ್ವಯೀಹಸ್ತಂ
ಜಂಗಮಂ ಭಕ್ತಿಮಂದಿರಂ |
ತದ್ಭಕ್ತ್ಯಾ ಲಿಂಗಸಂತುಷ್ಟಿಃ
ಅಪಹಾಸಾಚ್ಚ ದಂಡನಂ ||"
ಎಂದುದಾಗಿ ಕೂಡಲಸಂಗಮದೇವಯ್ಯ
ತಾನೇ ಭಕ್ತಿಪಥವ ತೋರುವ ತಂದೆ.
ಎಡದ ಕೈಯಲು ಹಾಲ ಬಟ್ಟಲು
ಬಲದ ಕೈಯಲು ಓಜುಗಟ್ಟಿಗೆ!
ಆವಾಗ ಬಂದಾನೆಮ್ಮಯ್ಯ
ಬಡಿದು ಹಾಲು ಕುಡಿಸುವ ತಂದೆ! ?
"ದಂಡಕ್ಷೀರದ್ವಯೀಹಸ್ತಂ
ಜಂಗಮಂ ಭಕ್ತಿಮಂದಿರಂ |
ತದ್ಭಕ್ತ್ಯಾ ಲಿಂಗಸಂತುಷ್ಟಿಃ
ಅಪಹಾಸಾಚ್ಚ ದಂಡನಂ ||"
ಎಂದುದಾಗಿ ಕೂಡಲಸಂಗಮದೇವಯ್ಯ
ತಾನೇ ಭಕ್ತಿಪಥವ ತೋರುವ ತಂದೆ.
೨೩೯.
ಕೃತಯುಗದಲ್ಲಿ ಕೇತಾರವೆಂಬ ಮೂಲಸ್ಥಾನ;
ತ್ರೇತಾಯುಗದಲ್ಲಿ ವಾರಣಾಸಿ ಎಂಬ ಮೂಲಸ್ಥಾನ;
ದ್ವಾಪರಯುಗದಲ್ಲಿ ವಿರೂಪಾಕ್ಷವೆಂಬ ಮೂಲಸ್ಥಾನ;
ಕಲಿಯುಗದಲ್ಲಿ ಪರ್ವತವೆಂಬ ಮೂಲಸ್ಥಾನ;
ನಾ-ನಾ ಸ್ಥಾನವ ಮೆಟ್ಟಿದೆ
ಜಂಗಮವೇ ಲಿಂಗವೆಂದು ನಂಬಿದೆ
ಕೂಡಲಸಂಗಮದೇವ.
ಕೃತಯುಗದಲ್ಲಿ ಕೇತಾರವೆಂಬ ಮೂಲಸ್ಥಾನ;
ತ್ರೇತಾಯುಗದಲ್ಲಿ ವಾರಣಾಸಿ ಎಂಬ ಮೂಲಸ್ಥಾನ;
ದ್ವಾಪರಯುಗದಲ್ಲಿ ವಿರೂಪಾಕ್ಷವೆಂಬ ಮೂಲಸ್ಥಾನ;
ಕಲಿಯುಗದಲ್ಲಿ ಪರ್ವತವೆಂಬ ಮೂಲಸ್ಥಾನ;
ನಾ-ನಾ ಸ್ಥಾನವ ಮೆಟ್ಟಿದೆ
ಜಂಗಮವೇ ಲಿಂಗವೆಂದು ನಂಬಿದೆ
ಕೂಡಲಸಂಗಮದೇವ.
೨೪೦.
ಭಕ್ತದೇಹೀಕದೇವನಪ್ಪ ದೇವನು
ಸದ್ಭಕ್ತರ ಬಳಿಯಲ್ಲಿ ಬಪ್ಪನಾಗಿ,
ಆಳ್ದನು ಬರಲಾಳು ಮಂಚದ ಮೇಲೆ
ಇಪ್ಪುದು ಗುಣವೇ ಹೇಳಾ
ಕೂಡಲಸಂಗಮದೇವ ?
ಜಂಗಮರೂಪವಾಗಿ ಸಂಗಯ್ಯ ಬಂದಾನೆಂದು
ಎಂದೆಂದೂ ನಾನು ಮಂಚವನೇರದ ಭಾಷೆ!
ಭಕ್ತದೇಹೀಕದೇವನಪ್ಪ ದೇವನು
ಸದ್ಭಕ್ತರ ಬಳಿಯಲ್ಲಿ ಬಪ್ಪನಾಗಿ,
ಆಳ್ದನು ಬರಲಾಳು ಮಂಚದ ಮೇಲೆ
ಇಪ್ಪುದು ಗುಣವೇ ಹೇಳಾ
ಕೂಡಲಸಂಗಮದೇವ ?
ಜಂಗಮರೂಪವಾಗಿ ಸಂಗಯ್ಯ ಬಂದಾನೆಂದು
ಎಂದೆಂದೂ ನಾನು ಮಂಚವನೇರದ ಭಾಷೆ!
Comments
Post a Comment