Skip to main content

ಬಸವಣ್ಣನ ವಚನಗಳು - 251 ರಿಂದ 260 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೫೧.
ಆರಾಧನೆಯ ಮಾಡಿದರೆ ಅಮೃತದ ಬೆಳಸು.
ವಿರೋಧಿಸಿದರೆ ವಿಷದ ಬೆಳಸು.
ಇದು ಕಾರಣ,
ಲಿಂಗ ಜಂಗಮಕ್ಕಂಜಲೇಬೇಕು.
ಸ್ಥಾವರ-ಜಂಗಮ ಒಂದೆಂದರಿದರೆ
ಕೂಡಲಸಂಗಮದೇವ ಶರಣಾಸನ್ನಿಹಿತನು.
೨೫೨.
ಜಂಗಮ ನಿಂದೆಯ ಮಾಡಿ, ಲಿಂಗವ ಪೂಜಿಸುವ
ಭಕ್ತನ ಅಂಘವಣೆ ಎಂತೋ ?
ಶಿವಶಿವ, ನಿಂದಿಸುವ ಪೂಜಿಸುವ
ಪಾತಕವಿದ ಕೇಳಲಾಗದು!
"ಗುರುವಿನ ಗುರು ಜಂಗಮ"
ಇಂತೆಂದುದು ಕೂಡಲಸಂಗನ ವಚನ.
೨೫೩.
ಅರಸರ ಕಂಡು ತನ್ನ ಪುರುಷನ ಮರೆತರೆ
ಮರನೇರಿ ಕಯ್ಯ ಬಿಟ್ಟಂತಾದೆನಯ್ಯ!
ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ
ನಮ್ಮ ಕೂಡಲಸಂಗಮದೇವಯ್ಯ
ಜಂಗಮಮುಖಲಿಂಗವಾದ ಕಾರಣ.
೨೫೪.
ಲಿಂಗದಲ್ಲಿ ದಿಟವನರಸುವಡೆ
ಜಂಗಮವ ನೆರೆ ನಂಬುವುದು.
ನಡೆ ಲಿಂಗ, ನುಡಿ ಲಿಂಗ
ಮುಖ ಲಿಂಗವೆಂದೆ ನಂಬೊ.
ಯತ್ರ ಮಾಹೇಶ್ವರಸ್ತತ್ರಾಸನ್ನಹಿತನಾಗಿ,
ಅಧರ ತಾಗಿದ ರುಚಿಯನು
ಉದರ ತಾಗಿದ ಸುಖವ
ಉಂಬ-ಉಡುವ ಕೂಡಲಸಂಗಮದೇವ
ಜಂಗಮಮುಖದಲ್ಲಿ.
೨೫೫.
ಎಂಬತ್ತುನಾಲ್ಕುಲಕ್ಷ ಮುಖದೊಳಗೊಂದೇ ಮುಖವಾಗಿ
ಕಾಡಿ ನೋಡೆನ್ನನು, ಬೇಡಿ ನೋಡೆನ್ನನು
ಬೇಡದಿದ್ದರೆ, ಅಯ್ಯ, ನಿಮಗೆ ಪ್ರಮಥರಾಣೆ!
ನೀನಾವ ಮುಖದಲ್ಲಿ ಬಂದು ಬೇಡಿದರೀವೆನು
ಕೂಡಲಸಂಗಮದೇವ.
೨೫೬.
ಕಂದಿದೆನಯ್ಯ ಎನ್ನ ನೋಡುವರಿಲ್ಲದೆ.
ಕುಂದಿದೆನಯ್ಯ ಎನ್ನ ನುಡಿಸುವರಿಲ್ಲದೆ.
ಬಡವಾದೆನಯ್ಯ ಎನ್ನ ತನುಮನಧನವ ಬೇಡುವರಿಲ್ಲದೆ,
ಕಾಡುವ ಬೇಡುವ ಶರಣರ ತಂದು
ಕಾಡಿಸು ಬೇಡಿಸು ಕೂಡಲಸಂಗಮದೇವ.
೨೫೭.
ನೀನಿಕ್ಕಿದ ಬಿಯ್ಯದಲ್ಲಿ ವಂಚನೆಯುಳ್ಳೊಡೆ
ಸಂಗ, ನಿಮ್ಮ ತೊತ್ತುತನಕ್ಕೆ ದೂರವಯ್ಯ.
ಕದ್ದು ತಿಂದರೆ, ಕೈಯ ಹಿಡಿದೊಮ್ಮೆ ಬಡಿದು,
ತುಡುಗುಣಿತನವ ಬಿಡಿಸಯ್ಯ.
ಜಂಗಮ ಮನೆಗೆ ಬಂದಲ್ಲಿ ಓಸರಿಸಿದರೆ
ಹಿಡಿದು ಮೂಗ ಕೊಯ್ಯಯ್ಯ ಕೂಡಲಸಂಗಮದೇವ.
೨೫೮.
ಹೊನ್ನಿನೊಳಗೊಂದೊರೆಯ,
ಸೀರೆಯೊಳಗೊಂದೆಳೆಯ,
ಇಂದಿಂಗೆ ನಾಳಿಂಗೆ ಬೇಕೆಂದೆನಾದರೆ
ನಿಮ್ಮಾಣೆ ನಿಮ್ಮ ಪ್ರಮಥರಾಣೆ,
ನಿಮ್ಮ ಶರಣರಿಗಲ್ಲದೆ ಮತ್ತೊಂದಕಿಕ್ಕೆನಯ್ಯ
ಕೂಡಲಸಂಗಮದೇವ.
೨೫೯.
ಕಾಗೆಯಂದಗುಳ ಕಂಡರೆ
ಕರೆಯದೇ ತನ್ನ ಬಳಗವನ್ನು ?
ಕೋಳಿಯೊಂದು ಕುಟುಕ ಕಂಡರೆ
ಕೂಗಿ ಕರೆಯದೇ ತನ್ನ ಕುಲವೆಲ್ಲವನ್ನು ?
ಶಿವಭಕ್ತನಾಗಿ ಭಕ್ತಿ-ಪಕ್ಷವಿಲ್ಲದಿದ್ದರೆ
ಕಾಗೆ ಕೋಳಿಯಿಂದ ಕರಕಷ್ಟ ಕೂಡಲಸಂಗಮದೇವ.
೨೬೦.
ಆವನಾದರೇನು ಹೇಮವಿಲ್ಲದುಂಗೈಸಬಹುದೆ ?
ಕೊಡಲಿಲ್ಲೆಂಬುದರಿಂದ ಸಾಯಲುಬಹುದು,
ಸೈರಿಸಬಾರದು!
ಬೇಡುವರ ನೋಡಿ ನೋಡಿ
ಈಯಲಿಲ್ಲದ ಜೀವನವದೇಕೆ ಕೂಡಲಸಂಗಮದೇವ.

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ...

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...