Skip to main content

ಬಸವಣ್ಣನ ವಚನಗಳು - 261 ರಿಂದ 270 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೬೧.
ಓಡುವಾತ ಲೆಂಕನಲ್ಲ, ಬೇಡುವಾತ ಭಕ್ತನಲ್ಲ!
ಓಡಲಾಗದು ಲೆಂಕನು ಬೇಡಲಾಗದು ಭಕ್ತನು!
ಓಡೆನಯ್ಯ, ಬೇಡೆನಯ್ಯ ಕೂಡಲಸಂಗಮದೇವ.
೨೬೨.
ಎಲ್ಲಿ ನೋಡಿರಲ್ಲಿ ಮನವೆಳಸಿದರೆ
ಆಣೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ!
ಪರವಧುವನು ಮಾದೇವಿಯೆಂದೇ ಕಾಬೆ ಕೂಡಲಸಂಗಮದೇವ.
೨೬೩.
ಹರಿವ ಹಾವಿಂಗಂಜೆ, ಉರಿಯ ನಾಲಗೆಗಂಜೆ!
ಸುರಗಿಯ ಮೊನೆಗಂಜೆ!
ಒಂದಕ್ಕಂಜುವೆ, ಒಂದಕ್ಕಳುಕುವೆ;
ಪರಧನ ಪರಸ್ತ್ರೀಯೆಂಬೀ ಜೂಬಿಂಗಂಜುವೆ!
ಮುನ್ನಂಜದ ರಾವಣನೇ ವಿಧಿಯಾದ
ಅಂಜುವೆನಯ್ಯ, ಕೂಡಲಸಂಗಮದೇವ!
೨೬೪.
ಅಸುರನೈಶ್ವರ್ಯವನೆಣಿಸುವಡೆ-
ಸೀತೆಗೆ ಸರಿ-ಮಿಗಿಲೆನಿಸುವ ಸತಿಯರುಂಟು ಕೋಟಿ!
ಮತಿವಂತ ಶಿರಃಪ್ರಧಾನರೆಂಟು ಕೋಟಿ!
ಲೆಕ್ಕವಿಲ್ಲದ ದಳವು! ಲಕ್ಷ ಕುಮಾರರು!
ದಿಕ್ಪಾಲಕರವನ ಮನೆಯ ಬಂಧನದಲಿಪ್ಪರು
ಸುರಸತಿಯರನೆಲ್ಲರನಾತ ಸೆರೆಮಾಡಿಯಾಳಿದ!
ಶಿವನೇ ನೀ ಕರುಣಿಸಿದಂತಿರದೆ
ಪರವಧುವಿನ ಬೇಟವವನ ಪ್ರಾಣವ ಕೊಂಡಿತ್ತು.
ಇದನರಿತು ಪರವಧುವಿಗೆಳಸುವವರ ಕಂಡು
ಗರುಡ ಕಂಡ ಸರ್ಪ ಧರೆಗಿಳಿವಂತೆ ಅಡಗಿಪ್ಪೆನಯ್ಯ
ಕೂಡಲಸಂಗಮದೇವ.
೨೬೫.
ಒಂದಕೊಂಬತ್ತ ನುಡಿದು ಕಣ್ಣ ಕೆಚ್ಚನೆ ಮಾಡಿ,
ಗಂಡುಗೆದರಿ ಮುಡುಹಿಕ್ಕಿ
ಕೆಲೆವರ ಕಂಡಂಜುವೆ ಓಸರಿಸುವೆ,
ಓಡಿದೆನೆಂಬ ಭಂಗವಾದರಾಗಲಿ
ನಮ್ಮ ಕೂಡಲಸಂಗನ ಶರಣರನುಭಾವವಿಲ್ಲದವರ
ಹೊಲಮೇರೆಯ ಹೊದ್ದೆ, ಹೊಲನ ಬಿಟ್ಟೋಡುವೆ.
೨೬೬.
ದೇವಸಹಿತ ಭಕ್ತ ಮನೆಗೆ ಬಂದರೆ
ಕಾಯಕವಾವುದೆಂದು ಬೆಸಗೊಂಡೆನಾದರೆ
ನಿಮ್ಮಾಣೆ, ನಿಮ್ಮ ಪುರಾತರಾಣೆ, ತಲೆದಂಡ, ತಲೆದಂಡ.
ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಸಿದರೆ
ನಿಮ್ಮ ರಾಣಿವಾಸದಾಣೆ.
೨೬೭.
ಕೂಪರಿಗೆ ಹೇಳುವೆನು ಕುಳಸ್ಥಳಂಗಳನೆಲ್ಲ,
ಕೂರದವರಿಗೆ ಹೇಳಿ ನಾನೇವೇನು ಶಿವನೆ,
ಕರಲ ಭೂಮಿಯಲ್ಲಿ ಕರೆದ ವೃಷ್ಟಿಯ ತೆರನಂತೆ!
ಅವರೆತ್ತ ಬಲ್ಲರೆನ್ನ ಸುಖದುಃಖವ ?
ಅಂಗವಿಲ್ಲದ ಸಂಗವು
ಅಳಲಿಲ್ಲದ ಹುಯ್ಯಲಂತೆ.
ಇದು ಕಾರಣ ಕೂಡಲಸಂಗಮದೇವಾ
ನಿಮ್ಮ ಶರಣರಿಗಲ್ಲದೆ ಬಾಯ ತೆರೆಯನು.
೨೬೮.
ಒಡೆದೋಡೂ ಎನ್ನ ಮನೆಯಲಿಲ್ಲದಂತೆ ಮಾಡಯ್ಯ !
ಕೊಡು ದೇವ ಎನ್ನ ಕೈಯಲೊಂದು ಗರಿಕೆಯನು,
ಮೃಡದೇವಾ ಶರಣೆಂದು ಭಿಕ್ಷಕ್ಕೆ ಹೋದರೆ,
ಅಲ್ಲಿ, ನಡೆ ದೇವಾ ಎಂದೆನಿಸು ಕೂಡಲಸಂಗಮದೇವ.
೨೬೯.
ಅಯ್ಯ, ನಿಮ್ಮ ಶರಣರ ದಾಸೋಹಕ್ಕೆ
ಎನ್ನ ತನು-ಮನ-ಧನವಲಸದಂತೆ ಮಾಡಯ್ಯ.
ತನು ದಾಸೋಹಕ್ಕೆ ಉಬ್ಬುವಂತೆ ಮಾಡು;
ಮನ ದಾಸೋಹಕ್ಕೆ ಲೀಯವಹಂತೆ ಮಾಡು;
ಧನ ದಾಸೋಹಕ್ಕೆ ಸವೆದು
ನಿಮ್ಮ ಶರಣರ ಪ್ರಸಾದದಲ್ಲಿ ನಿರಂತರ
ಆಡಿ, ಪಾಡಿ; ನೋಡಿ, ಕೂಡಿ;
ಭಾವಿಸಿ, ಸುಖಿಸಿ; ಪರಿಣಾಮಿಸುವಂತೆ ಮಾಡು
ಕೂಡಲಸಂಗಮದೇವ.
೨೭೦.
ಹಾರುವ ಹಾರುವನಪ್ಪೆ ನಾನು,
ಸದ್ಭಕ್ತರೆನ್ನವರೆನ್ನವರೆಂದು!
ಹಾರುವ ಹಾರುವನಪ್ಪೆ ನಾನು, ಶರಣರು ಎನ್ನವರೆನ್ನವರೆಂದು!
ಕೂಡಲಸಂಗನ ಶರಣರು ಒಕ್ಕುದನಿಕ್ಕಿ ಸಲಹುವರೆಂದು!

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ...

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...