Skip to main content

ಬಸವಣ್ಣನ ವಚನಗಳು - 281 ರಿಂದ 290 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೮೧.
ಎನ್ನ ಜನ್ಮವ ತೊಡೆದ ನೀ ಧರ್ಮಿ!
ಎನ್ನ ಜನ್ಮವನತಿಗಳೆದ ನೀ ಧರ್ಮಿ!
ಎನ್ನ ಭವಬಂಧನವ ನೀಕರಿಸಿದೆಯಾಗಿ
ಶಿವನೇ ಗತಿಯೆಂದು ನಂಬಿದೆನಯ್ಯ.
ಎನ್ನಷ್ಟಮದಂಗಳ ಸುಟ್ಟುರುಹಿದೆಯಾಗಿ
ಕಟ್ಟುಗ್ರದಿಂದ ನಿಮ್ಮ ಶ್ರೀಚರಣವ ಕಂಡೆ.
ಸೃಷ್ಟಿಪ್ರತಿಪಾಲಕ ನಿಮ್ಮ ನಾ ನಂಬಿದೆ
ಕರುಣಿಸು ಕೂಡಲಸಂಗಮದೇವ.
೨೮೨.
ಭವರೋಗವೈದ್ಯನೆಂದು ನಾ ನಿಮ್ಮ ಮರೆವೊಕ್ಕೆ,
ಭಕ್ತಿದಾಯಕ ನೀನು, ಕರುಣಿಸು ಲಿಂಗತಂದೆ.
ಜಯ ಜಯ ಶ್ರೀ ಮಹಾದೇವ,
ಜಯ ಜಯ ಶ್ರೀ ಮಹಾದೇವ,
ಎನುತಿದ್ದಿತೆನ್ನ ಮನವು;
ಕೂಡಲಸಂಗಮದೇವಂಗೆ
ಶರಣೆನುತಿದ್ದಿತೆನ್ನ ಮನವು.
೨೮೩.
ಅಂಗೈಯೊಳಗಣ ಲಿಂಗವ ನೋಡುತ್ತ
ಕಂಗಳು ಕಡೆಗೋಡಿವರಿವುತ್ತ ಸುರಿವುತ್ತ ಎಂದಿಪ್ಪೆನೋ ?!
ನೋಟವೇ ಪ್ರಾಣವಾಗಿ ಎಂದಿಪ್ಪೆನೋ!
ಕೂಟವೇ ಪ್ರಾಣವಾಗಿ ಎಂದಿಪ್ಪೆನೋ!
ಎನ್ನಂಗ ವಿಕಾರದ ಸಂಗವಳಿದು
ಕೂಡಲಸಂಗಯ್ಯ ಲಿಂಗಯ್ಯ ಲಿಂಗವೆನುತ್ತ ಎಂದಿಪ್ಪೆನೋ !?
೨೮೪.
ಎದೆ ಬಿರಿವನ್ನಕ, ಮನ ದಣಿವನ್ನಕ
ನಾಲಗೆ ನಲಿನಲಿದೋಲಾಡುವನ್ನಕ
ನಿಮ್ಮ ನಾಮಾಮೃತವ ತಂದಿರಿಸು ಕಂಡ
ಎಲೆ ಹರನೆ
ಎಲೆ ಶಿವನೆ!
ನಿಮ್ಮ ನಾಮಾಮೃತವ ತಂದಿರಿಸು ಕಂಡಾ
ಬಿರಿಮುಗುಳಂತೆ ಎನ್ನ ಹೃದಯ
ನಿಮ್ಮ ಶ್ರೀಚರಣದ ಮೇಲೆ ಬಿದ್ದರಳುಗೆ
ಕೂಡಲಸಂಗಮದೇವ.
೨೮೫.
ಆಡಿ ಕಾಲು ದಣಿಯದು
ನೋಡಿ ಕಣ್ಣು ದಣಿಯದು,
ಹಾಡಿ ನಾಲಗೆ ದಣಿಯದು,
ಇನ್ನೇವೆನಿನ್ನೇವೆ!
ನಾ ನಿಮ್ಮ ಕಯ್ಯಾರೆ ಪೂಜಿಸಿ
ಮನ ದಣಿಯಲೊಲ್ಲದು
ಇನ್ನೇವೆನಿನ್ನೇವೆ!
ಕೂಡಲಸಂಗಮದೇವಯ್ಯ,
ನಿಮ್ಮ ಉದರವ ಬಗಿದಾನು ಹೊಗುವ ಭರವೆನಗೆ!
೨೮೬.
ಕಾಮಸಂಗ ನಿಸ್ಸಂಗವಾಗಿ
ಇನ್ನಾವ ಸಂಗವನರಿಯೆನಯ್ಯ.
ಮಿಗೆ ಒಲಿದೆನಾಗಿ ಅಗಲಲಾರೆ:
ನಗೆಮೊಗದರಸ ಅವಧಾರು! ಕೂಡಲಸಂಗಮದೇವ,
ಬಗಿದು ಹೊಗುವೆ ನಾ ನಿಮ್ಮ ಮನವನು.
೨೮೭.
ವಾರವೆಂದರಿಯೆ, ದಿನವೆಂದರಿಯೆ!
ಏನೆಂದರಿಯೆನಯ್ಯ.
ನಾನು ಇರುಳೆಂದರಿಯೆ, ಹಗಲೆಂದರಿಯೆ!
ಏನೆಂದರಿಯೆನಯ್ಯ.
ನಾನು ನಿಮ್ಮುವ ಪೂಜಿಸಿ, ಎನ್ನುವ ಮರೆದೆನು
ಕೂಡಲಸಂಗಮದೇವ.
೨೮೮.
ನಿಮ್ಮ ನೋಟವನಂತಸುಖ.
ನಿಮ್ಮ ಕೂಟ ಪರಮಸುಖ.
ಅಷ್ಟಕೋಟಿರೋಮಂಗಳೆಲ್ಲ
ಕಂಗಳಾಗಿ ನೋಡುತ್ತಿದ್ದೆನು.
ಕೂಡಲಸಂಗಮದೇವಯ್ಯ,
ನಿಮ್ಮ ನೋಡಿ ನೋಡಿ
ಎನ್ನ ಮನದಲ್ಲಿ ರತಿ ಹುಟ್ಟಿ,
ನಿಮಿರ್ದವೆನ್ನ ಕಳೆಗಳು.
೨೮೯.
ವಚನದಲ್ಲಿ ನಾಮಾಮೃತ ತುಂಬಿ.
ನಯನದಲ್ಲಿ ನಿಮ್ಮ ಮೂರುತಿ ತುಂಬಿ,
ಮನದಲ್ಲಿ ನಿಮ್ಮ ನೆನಹು ತುಂಬಿ;
ಕಿವಿಯಲ್ಲಿ ನಿಮ್ಮ ಕೀರುತಿ ತುಂಬಿ;
ಕೂಡಲಸಂಗಮದೇವ,
ನಿಮ್ಮ ಚರಣಕಮಲದೊಳಗಾನು ತುಂಬಿ!
೨೯೦.
ಉರಿಯೊಳಗಣ ಕರ್ಪೂರಕ್ಕೆ ಕರೆಯುಂಟೇ ಅಯ್ಯ ?
ಬಯಲು ಮರೀಚಿಕೆಯ ಜಲಕ್ಕೆ ಕೆಸರುಂಟೇ ಅಯ್ಯ ?
ವಾಯುವನಪ್ಪಿದ ಪರಿಮಳಕ್ಕೆ ನಿರ್ಮಾಲ್ಯವುಂಟೇ ಅಯ್ಯ ?
ನೀವು ನೆರೆಯೊಲಿದ ಬಳಿಕೆನಗೆ ಭವವುಂಟೇ ?
ಕೂಡಲಸಂಗಮದೇವ.
ಚರಣಕಮಲದೊಳಗೆನ್ನನಿಂಬಿಟ್ಟುಕೊಳ್ಳಯ್ಯ!

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ...

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...