Skip to main content

ಬಸವಣ್ಣನ ವಚನಗಳು - 291 ರಿಂದ 300 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೯೧.
ಮಂಡೆಯ ಬೋಳಿಸಿಕೊಂಡು
ಗಂಡುದೊತ್ತುವೊಕ್ಕೆನಯ್ಯ.
ಲಜ್ಜೆಗೆಟ್ಟಾದರೂ ಲಿಂಗವನೊಲಿಸುವೆ.
ನಾಣುಗೆಟ್ಟಾದರೂ ಲಿಂಗವನೊಲಿಸುವೆ.
ಕೆಲದ ಸಂಸಾರಿಗಳು ನಗುತಿದ್ದರಿರಲಿ.
ಕೂಡಲಸಂಗಮದೇವ ಶರಣಾಗತಿವೊಕ್ಕೆನಯ್ಯ.
೨೯೨.
ಎನಗೆ ನಿಮ್ಮ ನೆನಹಾದಾಗವೇ ಉದಯ!
ಎನಗೆ ನಿಮ್ಮ ಮರಹಾದಾಗವೇ ಅಸ್ತಮಾನ!
ಎನಗೆ ನಿಮ್ಮ ನೆನಹವೇ ಜೀವ!
ಎನಗೆ ನಿಮ್ಮ ನೆನಹವೇ ಪ್ರಾಣ ಕಾಣ ತಂದೆ!
ಸ್ವಾಮಿ, ಎನ್ನ ಹೃದಯದಲ್ಲಿ
ನಿಮ್ಮ ಚರಣದುಂಡಿಗೆಯನೊತ್ತಯ್ಯ!
ವದನದಲ್ಲಿ ಪಂಚಾಕ್ಷರಿಯ ಬರೆಯಯ್ಯ
ಕೂಡಲಸಂಗಮದೇವ.
೨೯೩.
ಎನ್ನ ಕಾಯವ ದಂಡಿಗೆಯ ಮಾಡಯ್ಯ,
ಎನ್ನ ಶಿರವ ಸೋರೆಯ ಮಾಡಯ್ಯ,
ಎನ್ನ ನರವ ತಂತಿಯ ಮಾಡಯ್ಯ,
ಎನ್ನ ಬೆರಲ ಕಡ್ಡಿಯ ಮಾಡಯ್ಯ,
ಬತ್ತೀಸ ರಾಗವ ಹಾಡಯ್ಯ,
ಉರದಲೊತ್ತಿ ಬಾಜಿಸು ಕೂಡಲಸಂಗಮದೇವ.
೨೯೪.
ಮನಕ್ಕೆ ಮನೋಹರವಲ್ಲದ ಗಂಡರು
ಮನಕ್ಕೆ ಬಾರರು ಕೇಳವ್ವ ಕೆಳದಿ.
ಪನ್ನಗಭೂಷಣನಲ್ಲದ ಗಂಡರು
ಇನ್ನೆನಗಾಗದ ಮೋರೆ ನೋಡವ್ವ!
ಕನ್ನೆಯಂದಿನ ಕೂಟ:
ಚಿಕ್ಕಂದಿನ ಬಾಳುವೆ,
ನಿಮ್ಮಾಣೆಯಯ್ಯ ಕೂಡಲಸಂಗಮದೇವ.
೨೯೫.
ಜಗವೆಲ್ಲಾ ಅರಿಯಲು
ಎನಗೊಬ್ಬ ಗಂಡನುಂಟು!
ಆನು ಮುತ್ತೈದೆ;
ಆನು ನಿಟ್ಟೈದೆ.
ಕೂಡಲಸಂಗಮದೇವನಂತಪ್ಪ
ಎನಗೊಬ್ಬ ಗಂಡನುಂಟು.
೨೯೬.
ಸಂಸಾರವೆಂಬ ಶ್ವಾನನಟ್ಟಿ
ಮೀಸಲ ಬೀಸರ ಮಾಡದಿರಯ್ಯ!
ಎನ್ನ ಚಿತ್ತವು ನಿನ್ನ ಧ್ಯಾನವಯ್ಯ!
ನೀನಲ್ಲದೆ ಮತ್ತೇನನೂ ಅರಿಯೆನು
ಕನ್ನೆಯಲ್ಲಿ ಕೈವಿಡಿದೆನು.
ನಿನ್ನಲ್ಲಿ ನೆರೆದೆನು.
ಮನ್ನಿಸು ಕಂಡಾ ಮಹಾಲಿಂಗವೆ!
ಸತಿಯಾನು ಪತಿ ನೀನು
ಮನೆಯೊಡೆಯ ಮನೆಯ ಕಾಯ್ದಿಪ್ಪಂತೆ
ನೀನೆನ್ನ ಮನವ ಕಾಯ್ದಿಪ್ಪ ಗಂಡನು.
ನಿನಗೋತ ಮನವನನ್ಯಕ್ಕೆ ಹರಿಸಿದರೆ
ನಿನ್ನಭಿಮಾನ ಹಾನಿ ಕೂಡಲಸಂಗಮದೇವ.
೨೯೭.
ಅಯ್ಯ, ನಿಮ್ಮ ಅನುಭಾವದಿಂದ
ಎನ್ನ ತನು ಹಾಳಾಯಿತ್ತು.
ಅಯ್ಯ, ನಿಮ್ಮ ಅನುಭಾವದಿಂದ
ಎನ್ನ ಮನ ಹಾಳಾಯಿತ್ತು.
ಅಯ್ಯ, ನಿಮ್ಮ ಅನುಭಾವದಿಂದ
ಎನ್ನ ಕರ್ಮಚ್ಛೇದನವಾಯಿತ್ತು.
ಅಯ್ಯ, ನಿಮ್ಮವರು ಅಡಿಗಡಿಗೆ ಹೇಳಿ
ಭಕ್ತಿ ಎಂಬೀ ಒಡವೆಯನು
ದಿಟಮಾಡಿ ತೋರಿದರು ಕೂಡಲಸಂಗಮದೇವ.
೨೯೮.
ಭಕ್ತನೆಂತೆಂಬೆನಯ್ಯ, ಭವಿಸಂಗ ಬಿಡದನ್ನಕ ?
ಮಾಹೇಶ್ವರನೆಂತೆಂಬೆನಯ್ಯ,
ಪರಸ್ತ್ರೀ ಪರರರ್ಥದಾಸೆ ಬಿಡದನ್ನಕ ?
ಪ್ರಸಾದಿಯೆಂತೆಂಬೆನಯ್ಯ,
ಆಧಿವ್ಯಾಧಿ ನಷ್ಟವಾಗದನ್ನಕ ?
ಪ್ರಾಣಲಿಂಗಿಯೆಂತೆಂಬೆನಯ್ಯ,
ಪ್ರಾಣ ಸ್ವಸ್ಥಿರವಾಗದನ್ನಕ ?
ಶರಣನೆಂತೆಂಬೆನಯ್ಯ,
ಪಂಚೇಂದ್ರಿಯ ನಾಸ್ತಿಯಾಗದನ್ನಕ ?
ಐಕ್ಯನೆಂತೆಂಬೆನಯ್ಯ,
ಜನನ ಮರಣ ವಿರಹಿತವಾಗದನ್ನಕ ?
ಇಂತಪ್ಪ ಭಾಷೆ-ವ್ರತ-ವೇಷಂಗಳ
ನಾನರಿಯೆನಯ್ಯ!
ಅಘಟಿತ-ಘಟಿತ-ವರ್ತಮಾನವ
ನಾನರಿಯೆನಯ್ಯ!
ನಿಮ್ಮ ಶರಣರ ತೊತ್ತು,
ಭೃತ್ಯಾಚಾರವ ಮಾಡುವೆ ಕೂಡಲಸಂಗಮದೇವ.
೨೯೯.
ಅಭ್ಯಾಸವೆನ್ನ ವರ್ತಿಸಿತ್ತಯ್ಯ!
ಭಕ್ತಿ ಸಾಧ್ಯವಾಗದು, ನಾನೇವೆನಯ್ಯ ?
ಆನು ನಿಮ್ಮ ಮನಂಬೊಗುವನ್ನಕ,
ನೀವೆನ್ನ ಮನಂಬೊಗುವನ್ನಕ.
ಕಾಯಗುಣಂಗಳ ಕಳೆದವರಿಗೆ ಶರಣೆಂಬೆ
ಕೂಡಲಸಂಗಮದೇವ.
೩೦೦.
ತನುಸಾರಾಯರ, ಮನಸಾರಾಯರ,
ಜ್ಞಾನಸಾರಾಯರ ತೋರಯ್ಯ ನಿಮ್ಮ ಧರ್ಮ!
ಭಾವಸಾರಾಯರ, ಭಕ್ತಿಸಾರಾಯರ,
ತೋರಯ್ಯ ನಿಮ್ಮ ಧರ್ಮ !
ಕೂಡಲಸಂಗಮದೇವಯ್ಯ, ನಿಮ್ಮನರಿಯದ
ಅವಗುಣಿಗಳ ತೋರದಿರಯ್ಯ ನಿಮ್ಮ ಧರ್ಮ.

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ...

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...