Skip to main content

ಬಸವಣ್ಣನ ವಚನಗಳು - 321 ರಿಂದ 330 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೩೨೧.
ಮೊರನ ಗೋಟಿಗೆ ಬಪ್ಪ ಕಿರುಕುಳದೈವಕ್ಕೆ
ಕುರಿಯನಿಕ್ಕಿಹೆವೆಂದು ನಲಿನಲಿದಾಡುವರು.
ಕುರಿ ಸತ್ತು ಕಾವುದೆ ಹರ ಮುಳಿದವರ ?
ಕುರಿ ಬೇಡ, ಮರಿ ಬೇಡ
ಬರಿಯ ಪತ್ರೆಯ ತಂದು
ಮರೆಯದೇ ಪೂಜಿಸು ನಮ್ಮ ಕೂಡಲಸಂಗಮದೇವನ.

೩೨೨.
ಮಡಕೆ ದೈವ, ಮೊರ ದೈವ,
ಬೀದಿಯ ಕಲ್ಲು ದೈವ,
ಹಣಿಗೆ ದೈವ, ಬಿಲ್ಲ ನಾರಿ ದೈವ--ಕಾಣಿರೊ!
ಕೊಳಗ ದೈವ, ಗಿಣ್ಣಿಲು ದೈವ--ಕಾಣಿರೊ!
ದೈವ ದೈವವೆಂದು ಕಾಲಿಡಲಿಂಬಿಲ್ಲ!
ದೇವನೊಬ್ಬನೆ ಕೂಡಲಸಂಗಮದೇವ.

೩೨೩.
ಋಣ ತಪ್ಪಿದ ಹೆಂಡಿರಲ್ಲಿ,
ಗುಣ ತಪ್ಪಿದ ನಂಟರಲ್ಲಿ,
ಜೀವವಿಲ್ಲದ ದೇಹದಲ್ಲಿ ಫಲವೇನೋ ?
ಆಳ್ದನೊಲ್ಲದಾಳಿನಲ್ಲಿ,
ಸಿರಿತೊಲಗಿದರಸಿನಲ್ಲಿ
ವರವಿಲ್ಲದ ದೈವದಲ್ಲಿ ಫಲವೇನೋ ?
ಕಳಿದ ಹೂವಿನಲ್ಲಿ ಕಂಪನು,
ಉಳಿದ ಸೊಳೆಯಲ್ಲಿ ಪೆಂಪನು,
ಕೊಳೆಚೆನೀರಿನಲ್ಲಿ ಗುಣ್ಪನರಸುವಿರಿ!
ಮರುಳೆ, ವರಗುರು ವಿಶ್ವಕ್ಕೆಲ್ಲ
ಗಿರಿಜಾಮನೋವಲ್ಲಭ ಪರಮ ಕಾರುಣಿಕ
ನಮ್ಮ ಕೂಡಲಸಂಗಮದೇವ.

೩೨೪.
ಗುಡಿಯೊಳಗಿದ್ದು ಗುಡಿಯ ನೇಣ ಕೊಯ್ದರೆ
ಗುಡಿಯ ದಡಿ ಬಿದ್ದು ಹಲ್ಲು ಹೋಹುದು ನೋಡಾ!
ಪೊಡವಿಗೀಶ್ವರನ ಗರ್ಭವಾಸದೊಳಗಿದ್ದು
ನುಡಿವರು ಮತ್ತೊಂದು ದೈವ ಉಂಟೆಂದು!
ತುಡುಗುಣಿ ನಾಯ ಹಿಡಿತಂದು ಸಾಕಿದರೆ
ತನ್ನೊಡಯಂಗೆ ಬೊಗಳುವಂತೆ ಕಾಣಾ
ಕೂಡಲಸಂಗಮದೇವ.

೩೨೫.
ಮಾತಿನ ಮಾತಿಂಗೆ ನಿನ್ನ ಕೊಂದೆಹರೆಂದು
ಅಳು ಕಂಡಾ! ಎಲೆ ಹೋತೇ,
ವೇದವನೋದಿದವರ ಮುಂದೆ
ಅಳು, ಕಂಡಾ! ಎಲೆ ಹೋತೇ,
ಶಾಸ್ತ್ರವನೋದಿದವರ ಮುಂದೆ
ಅಳು, ಕಂಡಾ! ಎಲೆ ಹೋತೇ,
ನೀನತ್ತುದಕೆ ತಕ್ಕುದ ಮಾಡುವ ಕೂಡಲಸಂಗಮದೇವ.

೩೨೬.
ಹೊಲೆಯೊಳಗೆ ಹುಟ್ಟಿ ಕುಲವನರಸುವೆಯೆಲವೋ
ಮಾತಂಗಿಯ ಮಗ ನೀನು!
ಸತ್ತುದನೆಳೆವವನೆತ್ತಣ ಹೊಲೆಯ ?
ಹೊತ್ತು ತಂದು ನೀವು ಕೊಲುವಿರಿ!
ಶಾಸ್ತ್ರವೆಂಬುದು ಹೋತಿಂಗೆ ಮಾರಿ.
ವೇದವೆಂಬುದು ನಿಮಗೆ ತಿಳಿಯದು.
ನಮ್ಮ ಕೂಡಲಸಂಗನ ಶರಣರು
ಕರ್ಮವಿರಹಿತರು, ಶರಣಾಸನ್ನಹಿತರು,
ಅನುಪಮ ಚರಿತ್ರರು,
ಅವರಿಗೆ ತೋರಲು ಪ್ರತಿಯಿಲ್ಲವೋ.

೩೨೭.
ಇಟ್ಟಯ ಹಣ್ಣ ನರಿ ತಿಂದು
ಸೃಷ್ಟಿ ತಿರುಗಿತೆಂಬಂತೆ,
ಮಟ್ಟಿಯನಿಟ್ಟ ದ್ವಿಜರ ಮಾತದೇಕೆ ?
ಹಗಲುಗಾಣದ ಗೂಗೆ ಇರುಳಾಯಿತ್ತೆಂದರೆ
ಜಗಕ್ಕೆ ಯಿರುಳಪ್ಪುದೆ ಮರುಳೆ ?
ಹೋಮದ ನೆವದಿಂದ ಹೋತನ ಕೊಂದು ತಿಂಬ
ಅನಾಮಿಕರೊಡನಾಡಿ ಗೆಲುವುದೇನು
ಕೂಡಲಸಂಗಮದೇವ.

೩೨೮.
ನೀರ ಕಂಡಲ್ಲಿ ಮುಳುಗುವರಯ್ಯ!
ಮರನ ಕಂಡಲ್ಲಿ ಸುತ್ತುವರಯ್ಯ!
ಬತ್ತುವ ಜಲವನೊಣಗುವ ಮರನ
ಮೆಚ್ಚಿದವರು ನಿಮ್ಮನೆತ್ತ ಬಲ್ಲರು
ಕೂಡಲಸಂಗಮದೇವ.

೩೨೯.
ಕಣ್ಣಮುಚ್ಚಿ ಕನ್ನಡಿಯ ತೋರುವಂತೆ!
ಇರುಳು ಹಗಲಿನ ನಿದ್ರೆ ಸಾಲದೆ ?
ಬೆರಳನೆಣಿಸಿ ಪರಮಾರ್ಥವ ಹಡೆವುದು
ಚೋದ್ಯವಲ್ಲವೆ ಹೇಳಾ ?
ಮೂಗ ಮುಚ್ಚಿ ಮುಕ್ತಿಯ ಬಯಸುವ
ನಾಚಿಕೆಯಿಲ್ಲದವರ ನಾನೇನೆಂಬೆ ಕೂಡಲಸಂಗಮದೇವ.

೩೩೦.
ನಿಮ್ಮನರಿಯದ ಕಾರಣ ಕೈಯಲ್ಲಿ ಹುಲ್ಲು.
ನಿಮಗೆರಗದ ಕಾರಣ ಕೊರಳಲ್ಲಿ ನೇಣು.
ಹಿಂಡಲೇಕೋ, ತೊಳೆಯಲೇಕೊ ?
ಮುಳುಮುಳುಗಿ ಮೂಗ ಹಿಡಿಯಲೇಕೋ ?
ಕೂಡಲಸಂಗನ ಶರಣರಲ್ಲಿ
ಡೋಹರಕಕ್ಕಯ್ಯನಾವ ತೊರೆಯಲ್ಲಿ ಮಿಂದ ?

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ...

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...