೧.
ಅಘಟಿತ-ಘಟಿತನ ಒಲವಿನ ಶಿಶು
ಕಟ್ಟಿದೆನು ಜಗಕ್ಕೆ ಬಿರುದನು
ಕಾಮ-ಕ್ರೋಧ-ಲೋಭ-ಮೋಹ-ಮದ-ಮತ್ಸರಂಗಳಿಗೆ
ಇಕ್ಕಿದೆನು ಕಾಲಲ್ಲಿ ತೊಡರನು
ಗುರುಕೃಪೆಯೆಂಬ ತಿಗುರನಿಕ್ಕಿ
ಮಹಾಶರಣೆಂಬ ತಿಲಕವನಿಕ್ಕಿ
ಶಿವಶರಣೆಂಬ ಅಲಗ ಕೊಂಡು
ನಿನ್ನ ಕೊಲುವೆ ಗೆಲುವೆ!
ಬಿಡು ಬಿಡು ಕರ್ಮವೇ, ನಿನ್ನ ಕೊಲ್ಲದೇ ಮಾಣೆನು!!
ಕಡೆಹಿಸಿಕೊಳ್ಪದೆನ್ನ ನುಡಿಯ ಕೇಳಾ-
ಕೆಡದ ಶಿವಶರಣೆಂಬ ಅಲಗನೆ ಕೊಂಡು
ನಿನ್ನ ಕೊಲುವೆ ಗೆಲುವೆ ನಾನು!
ಬ್ರಹ್ಮಪಾಶವೆಂಬ ಕಳನನೆ ಸವರಿ
ವಿಷ್ಣುಮಾಯೆಯೆಂಬ ಎಡಗೋಲ ನೂಕಿ
ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿಕಾಡುವೆ ನಾನು.
೨.
ನೆಲದ ಮರೆಯ ನಿಧಾನದಂತೆ
ಫಲದ ಮರೆಯ ರುಚಿಯಂತೆ
ಶಿಲೆಯ ಮರೆಯ ಹೇಮದಂತೆ
ತಿಲದ ಮರೆಯ ತೈಲದಂತೆ
ಮರದ ಮರೆಯ ತೇಜಿದಂತೆ
ಭಾವದ ಮರೆಯ ಬ್ರಹ್ಮನಾಗಿಪ್ಪ
ಚೆನ್ನಮಲ್ಲಿಕಾರ್ಜುನನ ನಿಲವನಾರೂ ಅರಿಯಬಾರದು!
೩.
ಈಳೆ-ನಿಂಬೆ-ಮಾವು-ಮಾದಲಕ್ಕೆ
ಹುಳಿನೀರೆರೆದವರಾರಯ್ಯ?
ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿನೀರೆರೆದವರಾರಯ್ಯ?
ಕಳವೆ-ಶಾಲಿಗೆ ಓಗರದ ಉದಕವನೆರೆದವರಾರಯ್ಯ?
ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ
ಪರಿಮಳದುದಕವನೆರೆದವರಾರಯ್ಯ?
ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ!
ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ
ತನ್ನ ಪರಿ ಬೇರಾಗಿಹ ಹಾಂಗೆ
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು
ಹಲವು ಜಗಂಗಳ ಕೂಡಿಕೊಂಡಿದ್ದರೇನು? ತನ್ನ ಪರಿ ಬೇರೆ!
೪.
ತನ್ನ ವಿನೋದಕ್ಕೆ ತಾನೇ ಸೃಜಿಸಿದ ಜಗತ್ತ!
ತನ್ನ ವಿನೋದಕ್ಕೆ ತಾನೇ ಸುತ್ತಿದನದಕ್ಕೆ ಸಕಲ ಪ್ರಪಂಚ!!
ತನ್ನ ವಿನೋದಕ್ಕೆ ತಾನೇ ತಿರಿಗಿಸಿದನನಂತ ಭವದುಃಖಂಗಳಲ್ಲಿ
ಇಂತೆನ್ನ ಚೆನ್ನಮಲ್ಲಿಕಾರ್ಜುನದೇವನೆಂಬ ಪರಶಿವನು
ತನ್ನ ಜಗದ್ವಿಲಾಸ ಸಾಕಾದ ಮತ್ತೆ
ತಾನೇ ಪರಿವನಾ ಮಾಯಾಪಾಶವನು!
೫.
ಶಿವಂಗೆ ತಪ್ಪಿದ ಕಾಲ ಭಸ್ಮವಾದುದನರಿಯಾ?
ಶಿವಂಗೆ ತಪ್ಪಿದ ಕಾಮನುರಿದುದನರಿಯಾ?
ಶಿವಂಗೆ ತಪ್ಪಿದ ಬ್ರಹ್ಮನ ಶಿರ ಹೋದುದನರಿಯಾ?
ಚೆನ್ನಮಲ್ಲಿಕಾರ್ಜುನನ ಪಾದಕ್ಕೆ ತಪ್ಪಿದೆಡೆ
ಭವಘೋರನರಕವೆಂದರಿಯಾ ಮರುಳೇ.
೬.
ಕಾಮ ಬಲ್ಲಿದನೆಂದರೆ
ಉರುಹಿ ಭಸ್ಮವ ಮಾಡಿದ!
ಕಾಲ ಬಲ್ಲಿದನೆಂದರೆ ಕೆಡಹಿ ತುಳಿದ!
ಬ್ರಹ್ಮ ಬಲ್ಲಿದನೆಂದರೆ
ಶಿರವ ಚಿವುಟಿಯಾಡಿದ!
ಎಲೆ ಅವ್ವ, ನೀನು ಕೇಳಾ ತಾಯೆ,
ವಿಷ್ಣು ಬಲ್ಲಿದನೆಂದರೆ
ಮುರಿದು ಕಂಕಾಳವ ಪಿಡಿದ!
ತ್ರಿಪುರದ ಕೋಟೆ ಬಲ್ಲಿತ್ತೆಂದರೆ
ನೊಸಲ ಕಣ್ಣಿಂದುರುಹಿದನವ್ವ!
ಇದು ಕಾರಣ
ಚೆನ್ನಮಲ್ಲಿಕಾರ್ಜುನ ಗಂಡನೆನಗೆ!
ಜನನಮರಣಕ್ಕೊಳಗಾಗದವನ
ಬಲುಹನೇನ ಬಣ್ಣಿಪೆನವ್ವ!?
೭.
ಅಯ್ಯ, ಪಾತಾಳವಿತ್ತಿತ್ತ, ಶ್ರೀಪಾದವತ್ತತ್ತ
ಬ್ರಹ್ಮಾಂಡವಿತ್ತಿತ್ತ, ಮಣಿಮುಕುಟವತ್ತತ್ತ
ಅಯ್ಯ, ದಶದಿಕ್ಕುಇತ್ತಿತ್ತ, ದಶಭುಜಗಳತ್ತತ್ತ
ಚೆನ್ನಮಲ್ಲಿಕಾರ್ಜುನಯ್ಯ,
ನೀವೆನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯ!
೮.
ದೇವ, ಎನ್ನ ಹೃದಯಕಮಲದೊಳಗೆ ಪ್ರಜ್ವಳಿಪ್ಪ ಬೆಳಗೆ
ದೇವ, ಎನ್ನ ಮನದ ಮೊನೆಯೊಳೊಪ್ಪುತಿರ್ಪ ಬೆಳಗಿನೊಳಗೆ
ಗುರುವೆ ಬಾರ, ಪರವೆ ಬಾರ, ವರವೆ ಬಾರ, ದೇವದೇವ
ಹರನೆ ಬಾರ, ಸುಕೃತಸಾರ ಸರ್ಪಹಾರ ಬಾರ ದೇವ
ವೀರಭದ್ರ, ರುದ್ರ, ದುರಿತದೂರ, ವಿಶ್ವರೂಪ ಬಾರ
ಮಾರಮಥನ, ಪುಣ್ಯಕಥನ, ಸಹಜಮಿಥುನರೂಪ ಬಾರ
ತರಗಿರಿಯ ಪಿರಿಯ ಸಿರಿಯ ಸತ್ಯಶರಣ ಭರಣ ಬಾರ
ಬಾರ ಫಲವೆ, ಫಲದ ರಸವೆ, ರಸದ ಸವಿಯ ಸುಖವೆ ಬಾರ
ಬಾರ ಗುರುವೆ, ಬಾರ ಪರವೆ, ಬಾರ ವರವೆ ಮಲ್ಲಿನಾಥ
ಬಾರ ಧನವೆ, ಬಾರ ಸುಕೃತಸಾರ ಬಾರ ಮಲ್ಲಿನಾಥ
ಬರ ಸಿದ್ಧ, ಭವವಿರುದ್ಧ ಸುಪ್ರಸಿದ್ಧ ಮಲ್ಲಿನಾಥ
ಬಾರ ಮುಡುಹು ಮುಂದಲೆಗಳ ಕುರುಳನೀವೆ ಮಲ್ಲಿನಾಥ ಬಾರ
೯.
ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು
ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
ಹದುಳಿಗರಲ್ಲದವರಲ್ಲಿ ಗಂಧಾಕ್ಷತಯನೊಲ್ಲೆಯಯ್ಯ ನೀನು
ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು
ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯ ನೀನು
ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು
ತ್ರಿಕರಣಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯ ನೀನು
ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯ ನೀನು
ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ
ಚೆನ್ನಮಲ್ಲಿಕಾರ್ಜುನಯ್ಯ.
೧೦.
ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯ?
ನೀನು ಬಹಿರಂಗವ್ಯವಹಾರದೂರಸ್ಥನು!
ಅಂತರಂಗದಲ್ಲಿ ಧ್ಯಾನವ ಮಾಡಿ ಒಲಿಸುವೆನೆ ಅಯ್ಯ?
ನೀನು ವಾಙ್ಮನಕ್ಕತೀತನು
ಜಪಸ್ತೋತ್ರದಿಂದ ಒಲಿಸುವೆನೆ ಅಯ್ಯ?
ನೀನು ನಾದಾತೀತನು
ಭಾವಜ್ಞಾನದಿಂದೊಲಿಸುವೆನೆ ಅಯ್ಯ?
ನೀನು ಮತಿಗತೀತನು
ಹೃದಯಕಮಲಮಧ್ಯದಲ್ಲಿ ಇಂಬಿಟ್ಟುಕೊಂಬೆನೇ ಅಯ್ಯ?
ನೀನು ಸರ್ವಾಂಗಪರಿಪೂರ್ಣನು
ಅಯ್ಯ ನಿನ್ನ ಒಲಿಸಲೆನ್ನಳವಲ್ಲ
ನೀ ಒಲಿವುದೆ ಸುಖವಯ್ಯ ಚೆನ್ನಮಲ್ಲಿಕಾರ್ಜುನಯ್ಯ!
ಅಘಟಿತ-ಘಟಿತನ ಒಲವಿನ ಶಿಶು
ಕಟ್ಟಿದೆನು ಜಗಕ್ಕೆ ಬಿರುದನು
ಕಾಮ-ಕ್ರೋಧ-ಲೋಭ-ಮೋಹ-ಮದ-ಮತ್ಸರಂಗಳಿಗೆ
ಇಕ್ಕಿದೆನು ಕಾಲಲ್ಲಿ ತೊಡರನು
ಗುರುಕೃಪೆಯೆಂಬ ತಿಗುರನಿಕ್ಕಿ
ಮಹಾಶರಣೆಂಬ ತಿಲಕವನಿಕ್ಕಿ
ಶಿವಶರಣೆಂಬ ಅಲಗ ಕೊಂಡು
ನಿನ್ನ ಕೊಲುವೆ ಗೆಲುವೆ!
ಬಿಡು ಬಿಡು ಕರ್ಮವೇ, ನಿನ್ನ ಕೊಲ್ಲದೇ ಮಾಣೆನು!!
ಕಡೆಹಿಸಿಕೊಳ್ಪದೆನ್ನ ನುಡಿಯ ಕೇಳಾ-
ಕೆಡದ ಶಿವಶರಣೆಂಬ ಅಲಗನೆ ಕೊಂಡು
ನಿನ್ನ ಕೊಲುವೆ ಗೆಲುವೆ ನಾನು!
ಬ್ರಹ್ಮಪಾಶವೆಂಬ ಕಳನನೆ ಸವರಿ
ವಿಷ್ಣುಮಾಯೆಯೆಂಬ ಎಡಗೋಲ ನೂಕಿ
ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿಕಾಡುವೆ ನಾನು.
೨.
ನೆಲದ ಮರೆಯ ನಿಧಾನದಂತೆ
ಫಲದ ಮರೆಯ ರುಚಿಯಂತೆ
ಶಿಲೆಯ ಮರೆಯ ಹೇಮದಂತೆ
ತಿಲದ ಮರೆಯ ತೈಲದಂತೆ
ಮರದ ಮರೆಯ ತೇಜಿದಂತೆ
ಭಾವದ ಮರೆಯ ಬ್ರಹ್ಮನಾಗಿಪ್ಪ
ಚೆನ್ನಮಲ್ಲಿಕಾರ್ಜುನನ ನಿಲವನಾರೂ ಅರಿಯಬಾರದು!
೩.
ಈಳೆ-ನಿಂಬೆ-ಮಾವು-ಮಾದಲಕ್ಕೆ
ಹುಳಿನೀರೆರೆದವರಾರಯ್ಯ?
ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿನೀರೆರೆದವರಾರಯ್ಯ?
ಕಳವೆ-ಶಾಲಿಗೆ ಓಗರದ ಉದಕವನೆರೆದವರಾರಯ್ಯ?
ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ
ಪರಿಮಳದುದಕವನೆರೆದವರಾರಯ್ಯ?
ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ!
ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ
ತನ್ನ ಪರಿ ಬೇರಾಗಿಹ ಹಾಂಗೆ
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು
ಹಲವು ಜಗಂಗಳ ಕೂಡಿಕೊಂಡಿದ್ದರೇನು? ತನ್ನ ಪರಿ ಬೇರೆ!
೪.
ತನ್ನ ವಿನೋದಕ್ಕೆ ತಾನೇ ಸೃಜಿಸಿದ ಜಗತ್ತ!
ತನ್ನ ವಿನೋದಕ್ಕೆ ತಾನೇ ಸುತ್ತಿದನದಕ್ಕೆ ಸಕಲ ಪ್ರಪಂಚ!!
ತನ್ನ ವಿನೋದಕ್ಕೆ ತಾನೇ ತಿರಿಗಿಸಿದನನಂತ ಭವದುಃಖಂಗಳಲ್ಲಿ
ಇಂತೆನ್ನ ಚೆನ್ನಮಲ್ಲಿಕಾರ್ಜುನದೇವನೆಂಬ ಪರಶಿವನು
ತನ್ನ ಜಗದ್ವಿಲಾಸ ಸಾಕಾದ ಮತ್ತೆ
ತಾನೇ ಪರಿವನಾ ಮಾಯಾಪಾಶವನು!
೫.
ಶಿವಂಗೆ ತಪ್ಪಿದ ಕಾಲ ಭಸ್ಮವಾದುದನರಿಯಾ?
ಶಿವಂಗೆ ತಪ್ಪಿದ ಕಾಮನುರಿದುದನರಿಯಾ?
ಶಿವಂಗೆ ತಪ್ಪಿದ ಬ್ರಹ್ಮನ ಶಿರ ಹೋದುದನರಿಯಾ?
ಚೆನ್ನಮಲ್ಲಿಕಾರ್ಜುನನ ಪಾದಕ್ಕೆ ತಪ್ಪಿದೆಡೆ
ಭವಘೋರನರಕವೆಂದರಿಯಾ ಮರುಳೇ.
೬.
ಕಾಮ ಬಲ್ಲಿದನೆಂದರೆ
ಉರುಹಿ ಭಸ್ಮವ ಮಾಡಿದ!
ಕಾಲ ಬಲ್ಲಿದನೆಂದರೆ ಕೆಡಹಿ ತುಳಿದ!
ಬ್ರಹ್ಮ ಬಲ್ಲಿದನೆಂದರೆ
ಶಿರವ ಚಿವುಟಿಯಾಡಿದ!
ಎಲೆ ಅವ್ವ, ನೀನು ಕೇಳಾ ತಾಯೆ,
ವಿಷ್ಣು ಬಲ್ಲಿದನೆಂದರೆ
ಮುರಿದು ಕಂಕಾಳವ ಪಿಡಿದ!
ತ್ರಿಪುರದ ಕೋಟೆ ಬಲ್ಲಿತ್ತೆಂದರೆ
ನೊಸಲ ಕಣ್ಣಿಂದುರುಹಿದನವ್ವ!
ಇದು ಕಾರಣ
ಚೆನ್ನಮಲ್ಲಿಕಾರ್ಜುನ ಗಂಡನೆನಗೆ!
ಜನನಮರಣಕ್ಕೊಳಗಾಗದವನ
ಬಲುಹನೇನ ಬಣ್ಣಿಪೆನವ್ವ!?
೭.
ಅಯ್ಯ, ಪಾತಾಳವಿತ್ತಿತ್ತ, ಶ್ರೀಪಾದವತ್ತತ್ತ
ಬ್ರಹ್ಮಾಂಡವಿತ್ತಿತ್ತ, ಮಣಿಮುಕುಟವತ್ತತ್ತ
ಅಯ್ಯ, ದಶದಿಕ್ಕುಇತ್ತಿತ್ತ, ದಶಭುಜಗಳತ್ತತ್ತ
ಚೆನ್ನಮಲ್ಲಿಕಾರ್ಜುನಯ್ಯ,
ನೀವೆನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯ!
೮.
ದೇವ, ಎನ್ನ ಹೃದಯಕಮಲದೊಳಗೆ ಪ್ರಜ್ವಳಿಪ್ಪ ಬೆಳಗೆ
ದೇವ, ಎನ್ನ ಮನದ ಮೊನೆಯೊಳೊಪ್ಪುತಿರ್ಪ ಬೆಳಗಿನೊಳಗೆ
ಗುರುವೆ ಬಾರ, ಪರವೆ ಬಾರ, ವರವೆ ಬಾರ, ದೇವದೇವ
ಹರನೆ ಬಾರ, ಸುಕೃತಸಾರ ಸರ್ಪಹಾರ ಬಾರ ದೇವ
ವೀರಭದ್ರ, ರುದ್ರ, ದುರಿತದೂರ, ವಿಶ್ವರೂಪ ಬಾರ
ಮಾರಮಥನ, ಪುಣ್ಯಕಥನ, ಸಹಜಮಿಥುನರೂಪ ಬಾರ
ತರಗಿರಿಯ ಪಿರಿಯ ಸಿರಿಯ ಸತ್ಯಶರಣ ಭರಣ ಬಾರ
ಬಾರ ಫಲವೆ, ಫಲದ ರಸವೆ, ರಸದ ಸವಿಯ ಸುಖವೆ ಬಾರ
ಬಾರ ಗುರುವೆ, ಬಾರ ಪರವೆ, ಬಾರ ವರವೆ ಮಲ್ಲಿನಾಥ
ಬಾರ ಧನವೆ, ಬಾರ ಸುಕೃತಸಾರ ಬಾರ ಮಲ್ಲಿನಾಥ
ಬರ ಸಿದ್ಧ, ಭವವಿರುದ್ಧ ಸುಪ್ರಸಿದ್ಧ ಮಲ್ಲಿನಾಥ
ಬಾರ ಮುಡುಹು ಮುಂದಲೆಗಳ ಕುರುಳನೀವೆ ಮಲ್ಲಿನಾಥ ಬಾರ
೯.
ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು
ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು
ಹದುಳಿಗರಲ್ಲದವರಲ್ಲಿ ಗಂಧಾಕ್ಷತಯನೊಲ್ಲೆಯಯ್ಯ ನೀನು
ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು
ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯ ನೀನು
ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು
ತ್ರಿಕರಣಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯ ನೀನು
ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯ ನೀನು
ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ
ಚೆನ್ನಮಲ್ಲಿಕಾರ್ಜುನಯ್ಯ.
೧೦.
ಅಷ್ಟವಿಧಾರ್ಚನೆಯ ಮಾಡಿ ಒಲಿಸುವೆನೆ ಅಯ್ಯ?
ನೀನು ಬಹಿರಂಗವ್ಯವಹಾರದೂರಸ್ಥನು!
ಅಂತರಂಗದಲ್ಲಿ ಧ್ಯಾನವ ಮಾಡಿ ಒಲಿಸುವೆನೆ ಅಯ್ಯ?
ನೀನು ವಾಙ್ಮನಕ್ಕತೀತನು
ಜಪಸ್ತೋತ್ರದಿಂದ ಒಲಿಸುವೆನೆ ಅಯ್ಯ?
ನೀನು ನಾದಾತೀತನು
ಭಾವಜ್ಞಾನದಿಂದೊಲಿಸುವೆನೆ ಅಯ್ಯ?
ನೀನು ಮತಿಗತೀತನು
ಹೃದಯಕಮಲಮಧ್ಯದಲ್ಲಿ ಇಂಬಿಟ್ಟುಕೊಂಬೆನೇ ಅಯ್ಯ?
ನೀನು ಸರ್ವಾಂಗಪರಿಪೂರ್ಣನು
ಅಯ್ಯ ನಿನ್ನ ಒಲಿಸಲೆನ್ನಳವಲ್ಲ
ನೀ ಒಲಿವುದೆ ಸುಖವಯ್ಯ ಚೆನ್ನಮಲ್ಲಿಕಾರ್ಜುನಯ್ಯ!
Comments
Post a Comment