Skip to main content

ಅಕ್ಕನ ವಚನಗಳು - 11 ರಿಂದ 20 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೧೧.
ನೀರಕ್ಷೀರದಂತೆ ನೀನಿಪ್ಪೆಯಾಗಿ
ಆವುದು ಮುಂದು, ಆವುದು ಹಿಂದು ಎಂದರಿಯೆನು
ಆವುದು ಕರ್ತೃ, ಆವುದು ಭೃತ್ಯನೆಂದರಿಯೆನು
ಆವುದು ಘನ, ಆವುದು ಕಿರಿದೆಂದರಿಯೆನು
ಚೆನ್ನಮಲ್ಲಿಕಾರ್ಜುನಯ್ಯ, ನಿನ್ನನೊಲಿದು ಕೊಂಡಾಡಿದರೆ
ಇರುಹೆ ರುದ್ರನಾಗದೆ ಹೇಳಯ್ಯ
೧೨.
ಎನ್ನ ಕಾಯ ಮಣ್ಣು, ಜೀವ ಬಯಲು
ಆವುದ ಹಿಡಿವೆನಯ್ಯ ದೇವ?
ನಿಮ್ಮನಾವ ಪರಿಯಲ್ಲಿ ನೆನೆವೆನಯ್ಯ?
ಎನ್ನ ಮಾಯವನು ಮಾಣಿಸಯ್ಯ ಚೆನ್ನಮಲ್ಲಿಕಾರ್ಜುನಯ್ಯ
೧೩.
ಆವಾಗಳೂ ನನ್ನ ಮನ ಉದರಕ್ಕೆ ಹರಿವುದು
ಕಾಣಲಾರೆನಯ್ಯ ನಿಮ್ಮುವನು
ಭೇದಿಸಲಾರೆನಯ್ಯ ನಿಮ್ಮ ಮಾಯೆಯನು
ಮಾಯದ ಸಂಸಾರದಲ್ಲಿ ಸಿಲುಕಿದೆನು
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಹೊದ್ದುವಂತೆ ಮಾಡಾ ನಿಮ್ಮ ಧರ್ಮ
೧೪.
ಕಲ್ಲ ಹೊಕ್ಕರೆ ಕಲ್ಲ ಬಿರಿಸಿದೆ
ಗಿರಿಯ ಹೊಕ್ಕರೆ ಗಿರಿಯ ಬಿರಿಸಿದೆ
ಭಾಪು ಸಂಸಾರವೇ, ಬೆನ್ನಿಂದ ಬೆನ್ನ ಹತ್ತಿ ಬಂದೆ
ಚೆನ್ನಮಲ್ಲಿಕಾರ್ಜುನಯ್ಯ, ಇನ್ನೇವೆನಿನ್ನೇವೆ!?
೧೫.
ಸಂಸಾರವೆಂಬ ಹಗೆಯಯ್ಯ, ತಂದೆ,
ಎನ್ನ ವಂಶವಂಶ ತಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯ
ಎನ್ನುವನರಸಿಯರಸಿ ಹಿಡಿದು ಕೊಲ್ಲುತ್ತಿದೆಯಯ್ಯ
ನಿಮ್ಮ ಮರೆವೊಕ್ಕೆ ಕಾಯಯ್ಯ
ಎನ್ನ ಬಿನ್ನಪವನವಧಾರು, ಚೆನ್ನಮಲ್ಲಿಕಾರ್ಜುನಯ್ಯ




೧೬.
ಬೆಂದ ಸಂಸಾರ ಬೆಂಬಿಡದೆ ಕಾಡುತ್ತಿರುವುದಯ್ಯ
ಏವೆನಯ್ಯ ಏವೆನಯ್ಯ?
ಅಂದಂದಿನ ದಂದುಗಕ್ಕೆ ಏವೆನಯ್ಯ ಏವೆನಯ್ಯ?
ಬೆಂದೊಡಲ ಹೊರೆವುದಕ್ಕೆ ನಾನಾರೆ
ಚೆನ್ನಮಲ್ಲಿಕಾರ್ಜುನ, ಕೊಲ್ಲು ಕಾಯಿ ನಿಮ್ಮ ಧರ್ಮ!
೧೭.
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ
ತನ್ನ ನೂಲು ತನ್ನನೇ ಸುತ್ತಿ ಸುತ್ತಿ ಸಾವ ತೆರನಂತೆ
ಮನ ಬಂದುದ ಬಯಸಿ ಬಯಸಿ ಬೇವುತ್ತಿರುವೆನಯ್ಯ!
ಅಯ್ಯ, ಎನ್ನ ಮನದ ದುರಾಶೆಯ ಮಾಣಿಸಿ
ನಿಮ್ಮತ್ತ ತೋರಾ, ಚೆನ್ನಮಲ್ಲಿಕಾರ್ಜುನ
೧೮.
ಒಂದಲ್ಲ ಎರಡಲ್ಲ ಮೂರಲ್ಲ ನಾಲ್ಕಲ್ಲ-
ಎಂಬತ್ತುನಾಲ್ಕು ಲಕ್ಷ ಯೋನಿಯೊಳಗೆ
ಬಂದೆ ಬಂದೆ ಬಾರದ ಭವಗಳನುಂಡೆನುಂಡೆ ಸುಖಾಸುಖಂಗಳ
ಹಿಂದಣ ಜನ್ಮಂಗಳು ತಾನೇನಾದರಾಗಲಿ
ಇಂದು ನೀ ಕರುಣಿಸು ಚೆನ್ನಮಲ್ಲಿಕಾರ್ಜುನ
೧೯.
ಪುಣ್ಯಪಾಪಂಗಳನರಿಯದ ಮೊದಲು
ಭವ ಭವಂಗಳಲಿ ಬಂದೆನಯ್ಯ
ನಂಬಿ ಬಂದು ಶರಣುಹೊಕ್ಕೆನಯ್ಯ
ನಿಮ್ಮನೆಂದೂ ಅಗಲದಂತೆ ಮಾಡಿ ನಡೆಸಯ್ಯ
ನಿಮ್ಮ ಧರ್ಮ, ನಿಮ್ಮ ಧರ್ಮ!!
ನಿಮ್ಮನೊಂದನೇ ಬೇಡುವೆನು
ಎನ್ನ ಬಂಧನವ ಬಿಡುವಂತೆ ಮಾಡಯ್ಯ ಶ್ರೀ ಚೆನ್ನಮಲ್ಲಿಕಾರ್ಜುನ
೨೦.
ಕೋಲ ತುದಿಯ ಕೋಡಗದಂತೆ
ನೇಣ ತುದಿಯ ಬೊಂಬೆಯಂತೆ
ಆಡಿದೆನಯ್ಯ ನೀನಾಡಿಸಿದಂತೆ
ನಾ ನುಡಿದೆನಯ್ಯ ನೀ ನುಡಿಸಿದಂತೆ
ನಾನಿದ್ದೇನಯ್ಯ ನೀನಿರಿಸಿದಂತೆ
ಜಗದ ಯಂತ್ರವಾಹಕ ಚೆನ್ನಮಲ್ಲಿಕಾರ್ಜುನ ಸಾಕೆಂಬನ್ನಕ

Comments

  1. Thank you very much... I was searching for a vachana by Akkamahadevi. I searched for a very long time on the net, but finally I found it in your site. God bless you!

    ReplyDelete

Post a Comment

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ