Skip to main content

ಬಸವಣ್ಣನ ವಚನಗಳು - 441 ರಿಂದ 450 ರವರೆಗೆ


Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೪೪೧.
ಅರಿದರಿದು ಸಮಗಾಣಿಸಬಾರದು ?
ತ್ರಾಸಿನ ಕಟ್ಟಳೆಯಂತಿನಿತು ವೆಗ್ಗಳವಾದರೆ
ಈಶ್ವರನು ಒಡೆಯಿಕ್ಕದೆ ಮಾಣುವನೆ ?
ಪಾತ್ರಾಪಾತ್ರವೆಂದು ಕಂಡರೆ
ಶಿವನೆಂತು ಮೆಚ್ಚುವನೊ ?
ಜೀವಜೀವಾತ್ಮವ ಸರಿಯೆಂದು ಕಂಡರೆ
ಸಮವೇದಿಸದಿಪ್ಪನೇ ಶಿವನು ?
ತನ್ನ ಮನದಲ್ಲಿ
"ಯತ್ರ ಜೀವಸ್ತತ್ರ ಶಿವ"ನೆಂದು
ಸರ್ವಜೀವದಯಾಪಾರಿಯಾದರೆ
ಕೂಡಲಸಂಗಮದೇವನು
ಕೈಲಾಸದಿಂದ ಬಂದು ಎತ್ತಿಕೊಳ್ಳದಿಪ್ಪನೆ ?

೪೪೨.
ಮುತ್ತು ಉದಕದಲಾಗದು,
ಉದಕ ಮುತ್ತಿನೊಲಾಗದು,
ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ!
ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕಲ್ಲದೆ,
ಕರ್ತೃ ಕೂಡಲಸಂಗಮದೇವರ
ಒಲವಿನ ದಯದ ಚಿತ್ತವಿಡಿದಂಗಲ್ಲದೆ
ಶಿವತತ್ತ್ವ ಸಾಹಿತ್ಯವಾಗದು.

೪೪೩.
ಚಂದ್ರಕಾಂತದ ಶಿಲೆಯಲ್ಲಿ ಜಲವಿಲ್ಲದನ್ನಕ
ಶೈತ್ಯವ ತೋರುವ ಪರಿಯೆಂತೋ ?
ಸೂರ್ಯಕಾಂತದ ಶಿಲೆಯಲ್ಲಿ ಅಗ್ನಿಯಿಲ್ಲದನ್ನಕ
ಉಷ್ಣವ ತೋರುವ ಪರಿಯೆಂತೋ ?
ಶರಣಂಗೆ ಭಕ್ತಿಕಾಯವಿಲ್ಲದನ್ನಕ
ಕೂಡಲಸಂಗನನರಿವ ಪರಿಯೆಂತೋ ?

೪೪೪.
ಮುನ್ನೂರರುವತ್ತು ನಕ್ಷತ್ರಕ್ಕೆ
ಬಾಯ ಬಿಟ್ಟುಕೊಂಡಿಪ್ಪುದೇ ಸಿಂಪು ?
ಅದು ಸ್ವಾತಿಗಲ್ಲದೆ ಬಾಯ್ದೆರೆಯದು ಕೇಳಾ ಕೇಳು ತಂದೆ!
ಎಲ್ಲವಕ್ಕೆ ಬಾಯ ಬಿಟ್ಟರೆ
ತಾನೆಲ್ಲಿಯ ಮುತ್ತಪ್ಪುದು ?
ಪರಮಂಗಲ್ಲದೆ ಹರುಷವಿಲ್ಲೆಂದು
ಕರಣಾದಿ ಗುಣಂಗಳ ಮರೆದರು;
ಇದು ಕಾರಣ ಕೂಡಲಸಂಗನ ಶರಣರು
ಸಪ್ತವ್ಯಸನಿಗಳಲ್ಲಾಗಿ.

೪೪೫.
ಮೈಗೆ ಕಾಹ ಹೇಳುವರಲ್ಲದೆ,
ಮನಕ್ಕೆ ಕಾಹ ಹೇಳುವರೆ ?
ಅಣಕದ ಗಂಡನ ಹೊಸ ಪರಿಯ ನೋಡಾ!
ಕೂಡಲಸಂಗಮದೇವನೆನ್ನ ಮನವ ನಂಬದೆ
ತನ್ನಲ್ಲಿದ್ದ ಲೇಸ ಕಾಹ ಹೇಳಿದನು.

೪೪೬.
ಬೆಳಗಿನೊಳಗಣ ಮಹಾಬೆಳಗು! ಶಿವಶಿವಾ!!
ಪರಮಾಶ್ರಯವೆ ತಾನಾಗಿ,
ಶತಪತ್ರಕಮಳಕರ್ಣಿಕಾಮಧ್ಯದಲ್ಲಿ
ಸ್ವತಸ್ಸಿದ್ಧನಾಗಿಪ್ಪ ನಮ್ಮ ಕೂಡಲಸಂಗಮದೇವ.

೪೪೭.
ತಮತಮಗೆಲ್ಲ ನೊಸಲ ಕಣ್ಣವರು!
ತಮತಮಗೆಲ್ಲ ನಂದಿವಾಹನರು!
ತಮತಮಗೆಲ್ಲ ಖಟ್ವಾಂಗಕಪಾಲ ತ್ರಿಶೂಲಧರರು!
ದೇವರಾರು ಭಕ್ತರಾರು ಹೇಳಿರಯ್ಯ ?
ಕೂಡಲಸಂಗಮದೇವ,
ನಿಮ್ಮ ಶರಣರು ಸ್ವತಂತ್ರರು!
ಎನ್ನ ಬಚ್ಚಬರಿಯ ಬಸವನೆನಿಸಯ್ಯ!

೪೪೮.
ಉಳ್ಳವರು ಶಿವಾಲಯವ ಮಾಡಿಹರು!
ನಾನೇನ ಮಾಡುವೆ ? ಬಡವನಯ್ಯ!
ಎನ್ನ ಕಾಲೇ ಕಂಬ, ದೇಹವೇ ದೇಗುಲ,
ಶಿರವೇ ಹೊನ್ನ ಕಳಶವಯ್ಯ!
ಕೂಡಲಸಂಗಮದೇವ ಕೇಳಯ್ಯ,

ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ!

೪೪೯.
ಗುರು ಮುನಿದರೆ ಒಂದು ದಿನ ತಾಳುವೆ,
ಲಿಂಗ ಮುನಿದರೆ ದಿನವರೆ ತಾಳುವೆ.
ಜಂಗಮ ಮುನಿದರೆ
ಕ್ಷಣಮಾತ್ರವ ತಾಳಿದೆನಾದರೆ
ಎನ್ನ ಪ್ರಾಣದ ಹೋಕು ಕೂಡಲಸಂಗಮದೇವ.

೪೫೦.
ರಚ್ಚೆಯ ನೆರವಿಗೆ ನಾಡನುಡಿ ಇಲ್ಲದಿಹುದೆ ?
ಅದರಂತೆನಬಹುದೇ ಸಜ್ಜನ ಸ್ತ್ರೀಯ ?
ಅದರಂತೆನಬಹುದೇ ಭಕ್ತಿರತಿಯ ?
ಕರುಳ ಕಲೆ-ಪ್ರಕಟಿತ ಉಂಟೆ ಕೂಡಲಸಂಗಮದೇವ ?

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ...

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...