Skip to main content

ಬಸವಣ್ಣನ ವಚನಗಳು - 461 ರಿಂದ 470 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೪೬೧.
ಅಡಿಗಡಿಗೆ ಸ್ಥಾನನಿಧಿ!
ಅಡಿಗಡಿಗೆ ದಿವ್ಯಕ್ಷೇತ್ರ!
ಅಡಿಗಡಿಗೆ ನಿಧಿಯು ನಿಧಾನ! ನೋಡಾ!
ಆತನಿರವೇ ಅವಿಮುಕ್ತ ಕ್ಷೇತ್ರ,
ಕೂಡಲಸಂಗನ ಶರಣ ಸ್ವತಂತ್ರನಾಗಿ.

೪೬೨.
ಧನದಲ್ಲಿ ಶುಚಿ, ಪ್ರಾಣದಲ್ಲಿ ನಿರ್ಭಯ
ಇದಾವಂಗಳವಡುವುದಯ್ಯ ?
ನಿಧಾನ ತಪ್ಪಿ ಬಂದರೆ ಒಲ್ಲೆನೆಂಬವರಿಲ್ಲ!
ಪ್ರಮಾದವಶ ಬಂದರೆ ಹುಸಿಯೆನೆಂಬವರಿಲ್ಲ!
ನಿರಾಶೆ, ನಿರ್ಭಯ, ಕೂಡಲಸಂಗಮದೇವ,
ನೀನೊಲಿದ ಶರಣಂಗಲ್ಲದಿಲ್ಲ!

೪೬೩.
ಹಲಬರ ನುಂಗಿದ ಹಾವಿಂಗೆ ತಲೆ-ಬಾಲವಿಲ್ಲ ನೋಡಾ!
ಕೊಲುವುದು ತ್ರೈಜಗವೆಲ್ಲವ!
ತನಗೆ ಬೇರೆ ಪ್ರಳಯವಿಲ್ಲ!!
ನಾಕಡಿಯನೆಯ್ದದು,
ಲೋಕದ ಕಡೆಯನೇ ಕಾಬುದು!
ಸೂಕ್ಷ್ಮಪಥದಲ್ಲಿ ನಡೆವುದು,
ತನಗೆ ಬೇರೊಡಲಿಲ್ಲ!
ಅಹಂಕಾರವೆಂಬ ಗಾರುಡಿಗನ ನುಂಗಿತ್ತು
ಕೂಡಲಸಂಗನ ಶರಣರಲ್ಲದುಳಿದವರ.

೪೬೪.
ಉಂಬ ಬಟ್ಟಲು ಬೇರೆ ಕಂಚಲ್ಲ!
ನೋಡುವ ದರ್ಪಣ ಬೇರೆ ಕಂಚಲ್ಲ!
ಭಾಂಡ, ಭಾಜನ ಒಂದೆ!
ಬೆಳಗೆ ಕನ್ನಡಿಯೆನಿಸಿತ್ತಯ್ಯ!
ಅರಿದರೆ ಶರಣನು, ಮರೆದರೆ ಮಾನವನು!
ಮರೆಯದೆ ಪೂಜಿಸು ಕೂಡಲಸಂಗನ.

೪೬೫.
ಕೆರೆ ಹಳ್ಳ ಭಾವಿಗಳು ಮೈದೆಗೆದರೆ
ಗುಳ್ಳೆ, ಗೊರಚೆ, ಚಿಪ್ಪು ಕಾಣಬಹವು!
ವಾರಿಧಿ ಮೈದೆಗೆದರೆ
ರತ್ನ ಮುತ್ತುಗಳು ಕಾಣಬಹವು!
ಕೂಡಲಸಂಗನ ಶರಣರು
ಮನದೆರೆದು ಮಾತನಾಡಿದರೆ
ಲಿಂಗವೇ ಕಾಣಬಹುದು!

೪೬೬.
ನಾರುಳಿಯ ಹಣಿದವನಾರಾದರೆಯು ಆಡರೆ
ನಾರುಳಿದರೆ ಮುಂದೆ ಅಂಕುರಿತ ಫಲ ತಪ್ಪದು!
ಮಾಡುವನ್ನಕ ಫಲದಾಯಕ.
ಮಾಟವರತು ನಿಮ್ಮಲ್ಲಿ ಸಯವಾದರೆ
ಆತನೇ ಅಚ್ಚ ಶರಣನಯ್ಯ, ಕೂಡಲಸಂಗಮದೇವ.

೪೬೭.
ಐದು ಮಾನವ ಕುಟ್ಟಿ
ಒಂದು ಮಾನವ ಮಾಡು ಕಂಡೆಯಾ ಮದುವಳಿಗೆ!
ಇದು ನಮ್ಮ ಬಾಳುವೆ ಮದುವಳಿಗೆ!
ಇದು ನಮ್ಮ ವಿಸ್ತಾರ ಮದುವಳಿಗೆ!
ಮದವಳಿದು ನಿಜವುಳಿದ ಬಳಿಕ
ಅದು ಸತ್ಯ ಕಾಣಾ ಕೂಡಲಸಂಗಮದೇವಾ.

೪೬೮.
ಕುಲಮದವಳಿಯದನ್ನಕ ಶರಣನಾಗಲೇಕೆ ?
ವಿಧಿವಶ ಬಿಡದನ್ನಕ ಭಕ್ತನಾಗಲೇಕೆ ?
ಹಮ್ಮಿನ ಸೊಮ್ಮಿನ ಸಂಬಂಧ ಬಿಟ್ಟು
ಕಿಂಕರರ ಕಿಂಕರನಾಗಿರಬೇಕು.
ಹೆಪ್ಪನೆರೆದ ಹಾಲು ಕೆಟ್ಟು
ತುಪ್ಪವಪ್ಪಂತೆಯಿಪ್ಪರು,
ಕೂಡಲಸಂಗಮದೇವ, ನಿಮ್ಮ ಶರಣರು.

೪೬೯.
ಮಣ್ಣ ಮಡಕೆ ಮಣ್ಣಾಗದು ಕ್ರೀಯಳಿದು,
ಬೆಣ್ಣೆ ಕರಗಿ ತುಪ್ಪವಾಗಿ
ಮರಳಿ ಬೆಣ್ಣೆಯಾಗದು ಕ್ರೀಯಳಿದು,
ಹೊನ್ನು ಕಬ್ಬುನವಾಗದು ಕ್ರೀಯಳಿದು,
ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಾಗದು ಕ್ರೀಯಳಿದು.
ಕೂಡಲಸಂಗನ ಶರಣನಾಗಿ
ಮರಳಿ ಮಾನವನಾಗ ಕ್ರೀಯಳಿದು.

೪೭೦.
ಪೂರ್ವಜನ್ಮ ನಿವೃತ್ತಿಯಾಗಿ
ಗುರುಕರುಣವಿಡಿದಂಗೆ ಬಂಧನವೆಲ್ಲಿಯದೋ,
ಭವಬಂಧನವೆಲ್ಲಿಯದೋ
ಸಂಕಲ್ಪ-ವಿಕಲ್ಪವೆಂಬ ಸಂದೇಹವ ಕಳೆದುಳಿದವಂಗೆ
ಕೂಡಲಸಂಗಮದೇವರ
ತ್ರಿಸಂಧ್ಯಾಕಾಲದಲ್ಲಿ ಮಾಣದೇ ನೆನೆವಂಗೆ ?

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ