೨೩೧.
ತನುವ ಮೀರಿತ್ತು, ಮನವ ಮೀರಿತ್ತು
ಮಹವ ಮೀರಿತ್ತು
ಅಲ್ಲಿಂದತ್ತ ಭಾವಿಸುವ ಭಾವಕರಿಲ್ಲಾಗಿ ತಾರ್ಕಣೆಯಿಲ್ಲ
ಚೆನ್ನಮಲ್ಲಿಕಾರ್ಜುನಯ್ಯ ಬೆರಸಲಿಲ್ಲದ ನಿಜತತ್ವವು
೨೩೨.
ಆಧಾರ-ಸ್ವಾಧಿಷ್ಠಾನ-ಮಣಿಪೂರಕ-
ಅನಾಹುತ-ವಿಶುದ್ಧಿ-ಆಜ್ಞೇಯವ ನುಡಿದರೇನು?
ಆದಿಯನಾದಿಯ [ಸುದ್ದಿಯ] ಕೇಳಿದಡೇನು, ಹೇಳಿದಡೇನು
ತನ್ನಲ್ಲಿದ್ದುದ ತಾನರಿಯದನ್ನಕ್ಕರ
ಉನ್ಮನಿರಭಸದ ಮನ ಪವನದ ಮೇಲೆ
ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲಯದವರು?
೨೩೩.
ನಿತ್ಯವೆಂಬ ನಿಜಪದವೆನ್ನ ಹತ್ತೆ ಸಾರ್ದುದ ಕಂಡ ಬಳಿಕ
ಚಿತ್ತ ಕರಗಿ ಮನ ಕೊರಗಿ
ಹೃದಯವರಳಿತು ನೋಡಯ್ಯ
ಒತ್ತಿ ಬಿಗಿದ ಸೆರೆಯೊಳಗೆ ಅತ್ತಿತ್ತಲೆಂದರಿಯದೆ
ಚೆನ್ನಮಲ್ಲಿಕಾರ್ಜುನನ ಪಾದದಲ್ಲಿ
ಮರೆದೊರಗಿದೆ ನೋಡಯ್ಯ
೨೩೪.
ಆಶೆಯಾಮಿಷವಳಿದು
ಹುಸಿ ವಿಷಯಂಗಳೆಲ್ಲಾ ಹಿಂಗಿ
ಸಂಶಯಸಂಬಂಧ ವಿಸಂಬಂಧವಾಯಿತ್ತು ನೋಡಾ
ಎನ್ನ ಮನದೊಳಗೆ ಘನಪರಿಣಾಮವ ಕಂಡು
ಮನ ಮಗ್ನವಾಯಿತ್ತಯ್ಯ
ಚೆನ್ನಮಲ್ಲಿಕಾರ್ಜುನ,
ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯ
೨೩೫.
ಆದಿಅನಾದಿಯ ನಿತ್ಯಾನಿತ್ಯವ ತಿಳಿಯಲರಿಯದೆ
ವಾಯಕ್ಕೆ ಪರಬ್ರಹ್ಮವ ನುಡಿವ
ವಾಯುಪ್ರಾಣಿಗಳವರೆತ್ತ ಬಲ್ಲರೋ ಆ ಪರಬ್ರಹ್ಮದ ನಿಲವ?
ಅದೆಂತೆಂದಡೆ
ಆದಿಯೇ ದೇಹ, ಅನಾದಿಯೇ ನಿರ್ದೇಹ
ಆದಿಯೇ ಸಕಲ, ಅನಾದಿಯೇ ನಿಷ್ಕಲ
ಆದಿಯೇ ಜಡ, ಅನಾದಿಯೇ ಅಜಡ
ಆದಿಯೇ ಕಾಯ, ಅನಾದಿಯೇ ಪ್ರಾಣ
ಈ ಎರಡರ ಯೋಗವ ಭೇದಿಸಿ
ತನ್ನಿಂದ ತಾ ತಿಳಿದು ನೋಡಲು
ಆದಿಸಂಬಂಧಮಪ್ಪ ಭೂತಂಗಳೂ ನಾನಲ್ಲ,
ದಶೇಂದ್ರಿಯಗಳೂ ನಾನಲ್ಲ,
ಅಷ್ಟಮದಂಗಳು, ಅರಿಷಡ್ವರ್ಗಂಗಳು, ಷಡೂರ್ಮಿಗಳು
ಷಡ್ಭಾವವಿಕಾರಂಗಳು ಷಟ್ಕರ್ಮಂಗಳು, ಷಡ್ಧಾತುಗಳು
ಸಪ್ತವ್ಯಸನಂಗಳು, ತನುತ್ರಯಂಗಳು, ಜೀವತ್ರಯಂಗಳು,
ಮನತ್ರಯಂಗಳು, ಮಲತ್ರಯಂಗಳು, ಗುಣತ್ರಯಂಗಳು,
ಭಾವತ್ರಯಂಗಳು, ತಾಪತ್ರಯಂಗಳು, ಷಟ್ಕರಣಂಗಳು,
ಇಂತಿವು ಆದಿಯಾಗಿ ತೋರುವ ತೋರಿಕೆಯೆ ನಾನಲ್ಲ
ಎನ್ನವೇ ಅಲ್ಲ!
ಎನ್ನ ಅಧೀನವಾಗಿರ್ಪವು, ನಾನಿವರ ಅಧೀನವಲ್ಲ
ಎನ್ನ ತುರ್ಯಾತುರ್ಯತೀತವಪ್ಪ ಸಚ್ಚಿದಾನಂದ,
ನಿತ್ಯಪರಿಪೂರ್ಣವೇ ತನ್ನಿರವೆಂದು ತಿಳಿಯೆ-
ಆ ತಿಳಿದ ಮಾತ್ರದಲ್ಲಿಯೇ ಅನಿತ್ಯದಾ ಬೆಸುಗೆ ಬಿಟ್ಟು
ನಿರಾಳದಲ್ಲಿ ನಿರವಯವನೆಯ್ದಲರಿಯದೆ
ಮತ್ತೆಯೂ ಭೌತಿಕಸಂಬಂಧಿಯಾಗಿ ಇರುತಿರಲು
ಈ ತತ್ವದಾದಿ ತಾನೆಂತೆನಲು
ಆ ಪರಬ್ರಹ್ಮವಪ್ಪ-ನಿತ್ಯನಿರಾಳ ನಿಶ್ಶೂನ್ಯಲಿಂಗವೇ
ತನ್ನ ಲೀಲಾವಿಲಾಸದಿಂದ ತಾನೇ ಸುನಾದ-ಬಿಂದು-ಪ್ರಕಾಶ
ತೇಜೋಮೂರ್ತಿಯಾಗಿ ನಿಂದು
ಆ ಮಹಾಲಿಂಗವೆನಿಸಿತ್ತು
ಆ ಪಂಚಸಾದಾಖ್ಯವೇ ಪಂಚಲಿಂಗಪ್ರಕಾಶವೆನಿಸಿತ್ತು
ಆ ಪಂಚಲಿಂಗಪ್ರಕಾಶವೇ ಪಂಚಮುಖವೆನಿಸಿತ್ತು
ಆ ಪಂಚಮುಖದಿಂದವೇ ಪಂಚಾಕ್ಷರಿ ಉತ್ಪತ್ತಿ
ಆ ಪಂಚಾಕ್ಷರಿಯಿಂದವೇ ಪಂಚಕಲೆಗಳುತ್ಪತ್ತಿ
ಆ ಪಂಚಕಲೆಗಳಿಂದಲೇ ಪಂಚಶಕ್ತಿಗಳುತ್ಪತ್ತಿ
ಆ ಪಂಚಶಕ್ತಿಗಳಿಂದವೇ
ಜ್ಞಾನ-ಮನ-ಬುದ್ಧಿ-ಚಿತ್ತ-ಅಹಂಕಾರಗಳ ಜನನ
ಆ ಜ್ಞಾನ-ಮನ-ಬುದ್ಧಿ-ಅಹಂಕಾರಗಳಿಂದವೇ
ಪಂಚತನ್ಮಾತ್ರೆಗಳುತ್ಪತ್ತಿ
ಆ ಪಂಚತನ್ಮಾತ್ರೆಗಳಿಂದವೇ ಪಂಚಭೂತಂಗಳುತ್ಪತ್ತಿ
ಆ ಪಂಚಭೂತಂಗಳೇ ಪಂಚೀಕರಣವನೆಯ್ದಿ ಆತ್ಮಂಗೆ ಅಂಗವಾಯಿತ್ತು
ಆ ಅಂಗಕ್ಕೆ ಜ್ಞಾನೇಂದ್ರಿಯಗಳು ಕರ್ಮೇಂದ್ರಿಯಗಳು
ಪ್ರತ್ಯಂಗವೆನಿಸಿತ್ತು
ಇಂತೀ ದೇಹಸಂಬಂಧಮಂ
ಶಿವ ತನ್ನ ಚಿದಂಶಿಕನಪ್ಪ ಆತ್ಮಂಗೆ ಸಂಬಂಧಿಸಿದನಾಗಿ
ಆ ಸಂಬಂಧಿಸಿದ ಕಾಯದ ಪೂರ್ವಾಶ್ರಯವು
ಎಲ್ಲಿ ಆಯಿತು ಅಲ್ಲೇ ಅಡಗಿಸಿ
ಆ ಕಾಯದ ಪೂರ್ವಾಶ್ರಯವನಳಿದು
ಮಹಾಘನಲಿಂಗವ ವೇಧಿಸಿ [ಕೊಟ್ಟು]
ಶಿವ ತಾನೆ ಗುರುವಾಗಿ ಬಂದು
ಆ ಗುರು ತಾನೆ ಮಹಾಘನಲಿಂಗವ ವೇಧಿಸಿ ಕೊಟ್ಟ ಪರಿಯೆಂತೆಂದೆಡೆ
ಆತ್ಮಗೂಡಿ ಪಂಚಭೂತಂಗಳನೆ ಷಡಂಗವೆಂದೆನಿಸಿ
ಆ ಅಂಗಕ್ಕೆ ಕಲೆಗಳನೆ ಷಡ್ವಿಧಭಕ್ತಿಗಳೆಂದೆನಿಸಿ
ಆ ಶಕ್ತಿಗಳಿಗೆ ಷಡ್ವಿಧಭಕ್ತಿಯನಳವಡಿಸಿ
ಆ ಭಕ್ತಿಗಳಿಗೆ ಭಾವ-ಜ್ಞಾನ-ಮನ-ಬುದ್ಧಿ-ಚಿತ್ತ-ಅಹಂಕಾರಗಳನೆ
ಷಡ್ವಿಧ ಹಸ್ತಂಗಳೆನಿಸಿ
ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ ಪಂಚಲಿಂಗಗಳನೆ
ಷಡ್ವಿಧ ಲಿಂಗಗಳೆಂದೆನಿಸಿ
ಆ ಲಿಂಗಂಗಳಿಗೆ ಷಡಕ್ಷರಿಯನೇ ಷಡ್ವಿಧ ಮಂತ್ರವೆಂದೆನಿಸಿ
ಆ ಮಂತ್ರಲಿಂಗಂಗಳಿಗೆ ಹೃದಯವೊಂದುಗೂಡಿ
ಆ ಪಂಚೇಂದ್ರಿಯಂಗಳನೆ ಷಡ್ವಿಧಮುಖಂಗಳೆಂದೆನಿಸಿ
ಆ ಮುಖಂಗಳಿಗೆ ತನ್ಮಾತ್ರೆಗಳನೆ ದ್ರವ್ಯಪದಾರ್ಥಂಗಳೆನಿಸಿ
ಆ ದ್ರವ್ಯಪದಾರ್ಥಂಗಳನು ಆಯಾಯಾ ಮುಖದ ಲಿಂಗಂಗಳಲ್ಲಿ
ನಿರಂತರ ಸಾವಧಾನದಿಂದ ಅರ್ಪಿತವಾಗಿ ಬೀಗಲೊಡನೆ
ಅಂಗಸ್ಥಲಂಗಳಡಗಿ ತ್ರಿವಿಧಲಿಂಗಸ್ಥಲಂಗಳುಳಿದು
ಕಾಯ ಗುರು, ಪ್ರಾಣ ಲಿಂಗ, ಜ್ಞಾನ ಜಂಗಮ
ಗುರುವಿನಲ್ಲಿ ಶುದ್ಧ ಪ್ರಸಾದ, ಲಿಂಗದಲ್ಲಿ ಸಿದ್ಧಪ್ರಸಾದ
ಜಂಗಮದಲ್ಲಿ ಪ್ರಸಿದ್ಧಪ್ರಸಾದ
ಇಂತೀ ತ್ರಿವಿಧಪ್ರಸಾದ ಏಕಾರ್ಥವಾಗಿ
ಮಹಾಘನ ಪರಿಪೂರ್ಣ ಪ್ರಸಾದವಳವಟ್ಟ ಶರಣನು
ಜ್ಞಾನಿ ಅಲ್ಲ, ಅಜ್ಞಾನಿ ಮುನ್ನವೇ ಅಲ್ಲ
ಶೂನ್ಯನಲ್ಲ, ನಿಶ್ಶೂನ್ಯನಲ್ಲ
ದ್ವೈತಿಯಲ್ಲ, ಅದ್ವೈತಿಯಲ್ಲ
ಇಂತೀ ಉಭಯಾತ್ಮಕ ತಾನೆಯಾಗಿ
ಇದು ಕಾರಣ-
ಅದರ ಆಗು-ಹೋಗು ಸಕೀಲಸಂಬಂಧವ
ಚೆನ್ನಮಲ್ಲಿಕಾರ್ಜುನ ನಿಮ್ಮ ಶರಣರೇಬಲ್ಲರು
೨೩೬.
ತನ್ನ ಶಿಷ್ಯ ತನ್ನ ಮಗನೆಂಬುದು ತಪ್ಪದಲಾ
ಏಕೆ?
ಆತನ ಧನಕ್ಕೆ ತಂದೆಯಾದನಲ್ಲದೆ
ಆತನ ಮನಕ್ಕೆ ತಂದೆಯಾದನೆ?
ಏಕೆ?
ಆತನ ಮನವನರಿಯನಾಗಿ
ಆತನ ಧನಕ್ಕೆ ತಂದೆಯಾದನು
ತಮ್ಮಲ್ಲಿರ್ದ ಭಕ್ತಿಯ ಮಾರಿಕೊಂಡುಂಬವರು
ನಿಮ್ಮ ನಿಜಭಕ್ತರಲ್ಲಯ್ಯ ಚೆನ್ನಮಲ್ಲಿಕಾರ್ಜುನ
೨೩೭.
ಅರ್ಥ ಸಂನ್ಯಾಸಿಯಾದಡೇನಯ್ಯಾ,
ಆವಂಗದಿಂದ ಬಂದಡೆಯೂ ಕೊಳ್ಳದಿರಬೇಕು
ರುಚಿ ಸನ್ಯಾಸಿಯಾದಡೇನಯ್ಯಾ
ಜಿಹ್ವೆಯ ಕೊನೆಯಲ್ಲಿ ಮಧುರವನರಿಯದಿರಬೇಕು
ಸ್ತ್ರೀ-ಸನ್ಯಾಸಿಯಾದಡೇನಯ್ಯಾ
ಜಾಗ್ರತ್-ಸ್ವಪ್ನ-ಸುಷುಪ್ತಿಯಲ್ಲಿ ತಪ್ಪಿಲ್ಲದಿರಬೇಕು
ದಿಗಂಬರಿಯಾದಡೇನಯ್ಯಾ
ಮನ ಬತ್ತಲೆಯಿರಬೇಕು
ಇಂತೀ ಚತುರ್ವಿಧ ಹೊಲಬನರಿಯದೆ
ವೃಥಾ ಕೆಟ್ಟರು ಕಾಣಾ ಚೆನ್ನಮಲ್ಲಿಕಾರ್ಜುನಾ
೨೩೮.
ಸದ್ಗುರುಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ
ತಚ್ಛಿಷ್ಯನ ಮಸ್ತಕದ ಮೇಲೆ ತನ್ನ ಶ್ರೀಹಸ್ತವನಿರಿಸಿದಡೆ
ಲೋಹದ ಮೇಲೆ ಪರುಷ ಬಿದ್ದಂತಾಯಿತ್ತಯ್ಯ
ಒಪ್ಪುವ ಶ್ರೀವಿಭೂತಿಯ ನೊಸಲಿಂಗೆ ಪಟ್ಟವ ಕಟ್ಟಿದೊಡೆ
ಮುಕ್ತಿರಾಜ್ಯದೊಡೆತನಕ್ಕೆ ಪಟ್ಟವ ಕಟ್ಟಿದಂತಾಯಿತ್ತಯ್ಯ
ಸದ್ಯೋಜಾತ-ವಾಮದೇವ-ಅಘೋರ-ತತ್ಪುರುಷ-ಈಶಾನವೆಂಬ
ಪಂಚಕಳಶದ ಅಭಿಷೇಕವ ಮಾಡಿಸಲು
ಶಿವನ ಕರುಣಾಮೃತದ ಸೋನೆ ಸುರಿದಂತಾಯಿತ್ತಯ್ಯ
ನೆರೆದ ಶಿವಗಣಂಗಳ ಮಧ್ಯದಲ್ಲಿ
ಮಹಾಲಿಂಗವನು ಕರತಳಾಮಳಕವಾಗಿ
ಶಿಷ್ಯನ ಕರಸ್ಥಲಕ್ಕೆ ಇತ್ತು ಪ್ರತಿಷ್ಠಿಸಿ
ಪ್ರಣವಪಂಚಾಕ್ಷರಿಯುಪದೇಶವ ಕರ್ಣದಲ್ಲಿ ಹೇಳಿ
ಕಂಕಣವ ಕಟ್ಟಿದಲ್ಲಿ
ಕಾಯವೇ ಕೈಲಾಸವಾಯಿತ್ತು
ಪ್ರಾಣವೇ ಪಂಚಬ್ರಹ್ಮಮಯ ಲಿಂಗವಾಯಿತ್ತು
ಇಂತು ಮುಂದ ತೋರಿಸಿ ಹಿಂದೆ ಬಿಡಿಸಿದ
ಶ್ರೀಗುರುವಿನ ಸಾನ್ನಿಧ್ಯದಿಂದಾನು ಬದುಕಿದೆನಯ್ಯ
ಚೆನ್ನಮಲ್ಲಿಕಾರ್ಜುನಯ್ಯ
೨೩೯.
ಧನದ ಮೇಲೆ ಬಂದವರೆಲ್ಲ ಅನುಸಾರಿಗಳಲ್ಲದೆ
ಅನುವ ಮಾಡಬಂದವರಲ್ಲ
ಮನದ ಮೇಲೆ ಬಂದು ನಿಂದು ಜರಿದು ನುಡಿದು
ಪಥವ ತೋರಬಲ್ಲಡಾತನೇ ಸಂಬಂಧಿ
ಹೀಂಗಲ್ಲದೆ, ಅವರಿಚ್ಛೆಯ ನುಡಿದು ತನ್ನುದರವ ಹೊರೆವನಕ
ಬಚ್ಚಣಿಗಳ ಮೆಚ್ಚುವನೆ ಚೆನ್ನಮಲ್ಲಿಕಾರ್ಜುನ
೨೪೦.
ಸೆಜ್ಜೆ ಉಪ್ಪರಿಸಿ, ಶಿವಲಿಂಗ ಕರಸ್ಥಲಕ್ಕೆ ಬರೆ,
ಪ್ರಜ್ವಲಿಸಿ ತೊಳಗಿ ಬೆಳಗುತ್ತಿಹ ಕಾಂತಿಯಲ್ಲಿ
ಜಜ್ಜರಿಸಿ ತನು-ಮನ, ದೃಷ್ಟಿನಟ್ಟು
ನಟ್ಟದೃಷ್ಟಿಯೊಳು ಒಜ್ಜರಿಸಿ ಹರಿವ
ಶಿವಸುಖರಸದೊಳೋಲಾಡುತೆಂದಿಪ್ಪೆನೊ
ನಿಮ್ಮ ಸಜ್ಜನಿಕೆ-ಸದ್ಭಕ್ತಿಯ ತಲೆಯೊತ್ತಿ ಕೂಡಿ ಆಡಿ ಲಜ್ಜೆಗೆಟ್ಟು
ನಿಮ್ಮನೆಂದಿಗೆ ನೆರೆವೆ ಚೆನ್ನಮಲ್ಲಿಕಾರ್ಜುನ
ತನುವ ಮೀರಿತ್ತು, ಮನವ ಮೀರಿತ್ತು
ಮಹವ ಮೀರಿತ್ತು
ಅಲ್ಲಿಂದತ್ತ ಭಾವಿಸುವ ಭಾವಕರಿಲ್ಲಾಗಿ ತಾರ್ಕಣೆಯಿಲ್ಲ
ಚೆನ್ನಮಲ್ಲಿಕಾರ್ಜುನಯ್ಯ ಬೆರಸಲಿಲ್ಲದ ನಿಜತತ್ವವು
೨೩೨.
ಆಧಾರ-ಸ್ವಾಧಿಷ್ಠಾನ-ಮಣಿಪೂರಕ-
ಅನಾಹುತ-ವಿಶುದ್ಧಿ-ಆಜ್ಞೇಯವ ನುಡಿದರೇನು?
ಆದಿಯನಾದಿಯ [ಸುದ್ದಿಯ] ಕೇಳಿದಡೇನು, ಹೇಳಿದಡೇನು
ತನ್ನಲ್ಲಿದ್ದುದ ತಾನರಿಯದನ್ನಕ್ಕರ
ಉನ್ಮನಿರಭಸದ ಮನ ಪವನದ ಮೇಲೆ
ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲಯದವರು?
೨೩೩.
ನಿತ್ಯವೆಂಬ ನಿಜಪದವೆನ್ನ ಹತ್ತೆ ಸಾರ್ದುದ ಕಂಡ ಬಳಿಕ
ಚಿತ್ತ ಕರಗಿ ಮನ ಕೊರಗಿ
ಹೃದಯವರಳಿತು ನೋಡಯ್ಯ
ಒತ್ತಿ ಬಿಗಿದ ಸೆರೆಯೊಳಗೆ ಅತ್ತಿತ್ತಲೆಂದರಿಯದೆ
ಚೆನ್ನಮಲ್ಲಿಕಾರ್ಜುನನ ಪಾದದಲ್ಲಿ
ಮರೆದೊರಗಿದೆ ನೋಡಯ್ಯ
೨೩೪.
ಆಶೆಯಾಮಿಷವಳಿದು
ಹುಸಿ ವಿಷಯಂಗಳೆಲ್ಲಾ ಹಿಂಗಿ
ಸಂಶಯಸಂಬಂಧ ವಿಸಂಬಂಧವಾಯಿತ್ತು ನೋಡಾ
ಎನ್ನ ಮನದೊಳಗೆ ಘನಪರಿಣಾಮವ ಕಂಡು
ಮನ ಮಗ್ನವಾಯಿತ್ತಯ್ಯ
ಚೆನ್ನಮಲ್ಲಿಕಾರ್ಜುನ,
ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯ
೨೩೫.
ಆದಿಅನಾದಿಯ ನಿತ್ಯಾನಿತ್ಯವ ತಿಳಿಯಲರಿಯದೆ
ವಾಯಕ್ಕೆ ಪರಬ್ರಹ್ಮವ ನುಡಿವ
ವಾಯುಪ್ರಾಣಿಗಳವರೆತ್ತ ಬಲ್ಲರೋ ಆ ಪರಬ್ರಹ್ಮದ ನಿಲವ?
ಅದೆಂತೆಂದಡೆ
ಆದಿಯೇ ದೇಹ, ಅನಾದಿಯೇ ನಿರ್ದೇಹ
ಆದಿಯೇ ಸಕಲ, ಅನಾದಿಯೇ ನಿಷ್ಕಲ
ಆದಿಯೇ ಜಡ, ಅನಾದಿಯೇ ಅಜಡ
ಆದಿಯೇ ಕಾಯ, ಅನಾದಿಯೇ ಪ್ರಾಣ
ಈ ಎರಡರ ಯೋಗವ ಭೇದಿಸಿ
ತನ್ನಿಂದ ತಾ ತಿಳಿದು ನೋಡಲು
ಆದಿಸಂಬಂಧಮಪ್ಪ ಭೂತಂಗಳೂ ನಾನಲ್ಲ,
ದಶೇಂದ್ರಿಯಗಳೂ ನಾನಲ್ಲ,
ಅಷ್ಟಮದಂಗಳು, ಅರಿಷಡ್ವರ್ಗಂಗಳು, ಷಡೂರ್ಮಿಗಳು
ಷಡ್ಭಾವವಿಕಾರಂಗಳು ಷಟ್ಕರ್ಮಂಗಳು, ಷಡ್ಧಾತುಗಳು
ಸಪ್ತವ್ಯಸನಂಗಳು, ತನುತ್ರಯಂಗಳು, ಜೀವತ್ರಯಂಗಳು,
ಮನತ್ರಯಂಗಳು, ಮಲತ್ರಯಂಗಳು, ಗುಣತ್ರಯಂಗಳು,
ಭಾವತ್ರಯಂಗಳು, ತಾಪತ್ರಯಂಗಳು, ಷಟ್ಕರಣಂಗಳು,
ಇಂತಿವು ಆದಿಯಾಗಿ ತೋರುವ ತೋರಿಕೆಯೆ ನಾನಲ್ಲ
ಎನ್ನವೇ ಅಲ್ಲ!
ಎನ್ನ ಅಧೀನವಾಗಿರ್ಪವು, ನಾನಿವರ ಅಧೀನವಲ್ಲ
ಎನ್ನ ತುರ್ಯಾತುರ್ಯತೀತವಪ್ಪ ಸಚ್ಚಿದಾನಂದ,
ನಿತ್ಯಪರಿಪೂರ್ಣವೇ ತನ್ನಿರವೆಂದು ತಿಳಿಯೆ-
ಆ ತಿಳಿದ ಮಾತ್ರದಲ್ಲಿಯೇ ಅನಿತ್ಯದಾ ಬೆಸುಗೆ ಬಿಟ್ಟು
ನಿರಾಳದಲ್ಲಿ ನಿರವಯವನೆಯ್ದಲರಿಯದೆ
ಮತ್ತೆಯೂ ಭೌತಿಕಸಂಬಂಧಿಯಾಗಿ ಇರುತಿರಲು
ಈ ತತ್ವದಾದಿ ತಾನೆಂತೆನಲು
ಆ ಪರಬ್ರಹ್ಮವಪ್ಪ-ನಿತ್ಯನಿರಾಳ ನಿಶ್ಶೂನ್ಯಲಿಂಗವೇ
ತನ್ನ ಲೀಲಾವಿಲಾಸದಿಂದ ತಾನೇ ಸುನಾದ-ಬಿಂದು-ಪ್ರಕಾಶ
ತೇಜೋಮೂರ್ತಿಯಾಗಿ ನಿಂದು
ಆ ಮಹಾಲಿಂಗವೆನಿಸಿತ್ತು
ಆ ಪಂಚಸಾದಾಖ್ಯವೇ ಪಂಚಲಿಂಗಪ್ರಕಾಶವೆನಿಸಿತ್ತು
ಆ ಪಂಚಲಿಂಗಪ್ರಕಾಶವೇ ಪಂಚಮುಖವೆನಿಸಿತ್ತು
ಆ ಪಂಚಮುಖದಿಂದವೇ ಪಂಚಾಕ್ಷರಿ ಉತ್ಪತ್ತಿ
ಆ ಪಂಚಾಕ್ಷರಿಯಿಂದವೇ ಪಂಚಕಲೆಗಳುತ್ಪತ್ತಿ
ಆ ಪಂಚಕಲೆಗಳಿಂದಲೇ ಪಂಚಶಕ್ತಿಗಳುತ್ಪತ್ತಿ
ಆ ಪಂಚಶಕ್ತಿಗಳಿಂದವೇ
ಜ್ಞಾನ-ಮನ-ಬುದ್ಧಿ-ಚಿತ್ತ-ಅಹಂಕಾರಗಳ ಜನನ
ಆ ಜ್ಞಾನ-ಮನ-ಬುದ್ಧಿ-ಅಹಂಕಾರಗಳಿಂದವೇ
ಪಂಚತನ್ಮಾತ್ರೆಗಳುತ್ಪತ್ತಿ
ಆ ಪಂಚತನ್ಮಾತ್ರೆಗಳಿಂದವೇ ಪಂಚಭೂತಂಗಳುತ್ಪತ್ತಿ
ಆ ಪಂಚಭೂತಂಗಳೇ ಪಂಚೀಕರಣವನೆಯ್ದಿ ಆತ್ಮಂಗೆ ಅಂಗವಾಯಿತ್ತು
ಆ ಅಂಗಕ್ಕೆ ಜ್ಞಾನೇಂದ್ರಿಯಗಳು ಕರ್ಮೇಂದ್ರಿಯಗಳು
ಪ್ರತ್ಯಂಗವೆನಿಸಿತ್ತು
ಇಂತೀ ದೇಹಸಂಬಂಧಮಂ
ಶಿವ ತನ್ನ ಚಿದಂಶಿಕನಪ್ಪ ಆತ್ಮಂಗೆ ಸಂಬಂಧಿಸಿದನಾಗಿ
ಆ ಸಂಬಂಧಿಸಿದ ಕಾಯದ ಪೂರ್ವಾಶ್ರಯವು
ಎಲ್ಲಿ ಆಯಿತು ಅಲ್ಲೇ ಅಡಗಿಸಿ
ಆ ಕಾಯದ ಪೂರ್ವಾಶ್ರಯವನಳಿದು
ಮಹಾಘನಲಿಂಗವ ವೇಧಿಸಿ [ಕೊಟ್ಟು]
ಶಿವ ತಾನೆ ಗುರುವಾಗಿ ಬಂದು
ಆ ಗುರು ತಾನೆ ಮಹಾಘನಲಿಂಗವ ವೇಧಿಸಿ ಕೊಟ್ಟ ಪರಿಯೆಂತೆಂದೆಡೆ
ಆತ್ಮಗೂಡಿ ಪಂಚಭೂತಂಗಳನೆ ಷಡಂಗವೆಂದೆನಿಸಿ
ಆ ಅಂಗಕ್ಕೆ ಕಲೆಗಳನೆ ಷಡ್ವಿಧಭಕ್ತಿಗಳೆಂದೆನಿಸಿ
ಆ ಶಕ್ತಿಗಳಿಗೆ ಷಡ್ವಿಧಭಕ್ತಿಯನಳವಡಿಸಿ
ಆ ಭಕ್ತಿಗಳಿಗೆ ಭಾವ-ಜ್ಞಾನ-ಮನ-ಬುದ್ಧಿ-ಚಿತ್ತ-ಅಹಂಕಾರಗಳನೆ
ಷಡ್ವಿಧ ಹಸ್ತಂಗಳೆನಿಸಿ
ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ ಪಂಚಲಿಂಗಗಳನೆ
ಷಡ್ವಿಧ ಲಿಂಗಗಳೆಂದೆನಿಸಿ
ಆ ಲಿಂಗಂಗಳಿಗೆ ಷಡಕ್ಷರಿಯನೇ ಷಡ್ವಿಧ ಮಂತ್ರವೆಂದೆನಿಸಿ
ಆ ಮಂತ್ರಲಿಂಗಂಗಳಿಗೆ ಹೃದಯವೊಂದುಗೂಡಿ
ಆ ಪಂಚೇಂದ್ರಿಯಂಗಳನೆ ಷಡ್ವಿಧಮುಖಂಗಳೆಂದೆನಿಸಿ
ಆ ಮುಖಂಗಳಿಗೆ ತನ್ಮಾತ್ರೆಗಳನೆ ದ್ರವ್ಯಪದಾರ್ಥಂಗಳೆನಿಸಿ
ಆ ದ್ರವ್ಯಪದಾರ್ಥಂಗಳನು ಆಯಾಯಾ ಮುಖದ ಲಿಂಗಂಗಳಲ್ಲಿ
ನಿರಂತರ ಸಾವಧಾನದಿಂದ ಅರ್ಪಿತವಾಗಿ ಬೀಗಲೊಡನೆ
ಅಂಗಸ್ಥಲಂಗಳಡಗಿ ತ್ರಿವಿಧಲಿಂಗಸ್ಥಲಂಗಳುಳಿದು
ಕಾಯ ಗುರು, ಪ್ರಾಣ ಲಿಂಗ, ಜ್ಞಾನ ಜಂಗಮ
ಗುರುವಿನಲ್ಲಿ ಶುದ್ಧ ಪ್ರಸಾದ, ಲಿಂಗದಲ್ಲಿ ಸಿದ್ಧಪ್ರಸಾದ
ಜಂಗಮದಲ್ಲಿ ಪ್ರಸಿದ್ಧಪ್ರಸಾದ
ಇಂತೀ ತ್ರಿವಿಧಪ್ರಸಾದ ಏಕಾರ್ಥವಾಗಿ
ಮಹಾಘನ ಪರಿಪೂರ್ಣ ಪ್ರಸಾದವಳವಟ್ಟ ಶರಣನು
ಜ್ಞಾನಿ ಅಲ್ಲ, ಅಜ್ಞಾನಿ ಮುನ್ನವೇ ಅಲ್ಲ
ಶೂನ್ಯನಲ್ಲ, ನಿಶ್ಶೂನ್ಯನಲ್ಲ
ದ್ವೈತಿಯಲ್ಲ, ಅದ್ವೈತಿಯಲ್ಲ
ಇಂತೀ ಉಭಯಾತ್ಮಕ ತಾನೆಯಾಗಿ
ಇದು ಕಾರಣ-
ಅದರ ಆಗು-ಹೋಗು ಸಕೀಲಸಂಬಂಧವ
ಚೆನ್ನಮಲ್ಲಿಕಾರ್ಜುನ ನಿಮ್ಮ ಶರಣರೇಬಲ್ಲರು
೨೩೬.
ತನ್ನ ಶಿಷ್ಯ ತನ್ನ ಮಗನೆಂಬುದು ತಪ್ಪದಲಾ
ಏಕೆ?
ಆತನ ಧನಕ್ಕೆ ತಂದೆಯಾದನಲ್ಲದೆ
ಆತನ ಮನಕ್ಕೆ ತಂದೆಯಾದನೆ?
ಏಕೆ?
ಆತನ ಮನವನರಿಯನಾಗಿ
ಆತನ ಧನಕ್ಕೆ ತಂದೆಯಾದನು
ತಮ್ಮಲ್ಲಿರ್ದ ಭಕ್ತಿಯ ಮಾರಿಕೊಂಡುಂಬವರು
ನಿಮ್ಮ ನಿಜಭಕ್ತರಲ್ಲಯ್ಯ ಚೆನ್ನಮಲ್ಲಿಕಾರ್ಜುನ
೨೩೭.
ಅರ್ಥ ಸಂನ್ಯಾಸಿಯಾದಡೇನಯ್ಯಾ,
ಆವಂಗದಿಂದ ಬಂದಡೆಯೂ ಕೊಳ್ಳದಿರಬೇಕು
ರುಚಿ ಸನ್ಯಾಸಿಯಾದಡೇನಯ್ಯಾ
ಜಿಹ್ವೆಯ ಕೊನೆಯಲ್ಲಿ ಮಧುರವನರಿಯದಿರಬೇಕು
ಸ್ತ್ರೀ-ಸನ್ಯಾಸಿಯಾದಡೇನಯ್ಯಾ
ಜಾಗ್ರತ್-ಸ್ವಪ್ನ-ಸುಷುಪ್ತಿಯಲ್ಲಿ ತಪ್ಪಿಲ್ಲದಿರಬೇಕು
ದಿಗಂಬರಿಯಾದಡೇನಯ್ಯಾ
ಮನ ಬತ್ತಲೆಯಿರಬೇಕು
ಇಂತೀ ಚತುರ್ವಿಧ ಹೊಲಬನರಿಯದೆ
ವೃಥಾ ಕೆಟ್ಟರು ಕಾಣಾ ಚೆನ್ನಮಲ್ಲಿಕಾರ್ಜುನಾ
೨೩೮.
ಸದ್ಗುರುಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ
ತಚ್ಛಿಷ್ಯನ ಮಸ್ತಕದ ಮೇಲೆ ತನ್ನ ಶ್ರೀಹಸ್ತವನಿರಿಸಿದಡೆ
ಲೋಹದ ಮೇಲೆ ಪರುಷ ಬಿದ್ದಂತಾಯಿತ್ತಯ್ಯ
ಒಪ್ಪುವ ಶ್ರೀವಿಭೂತಿಯ ನೊಸಲಿಂಗೆ ಪಟ್ಟವ ಕಟ್ಟಿದೊಡೆ
ಮುಕ್ತಿರಾಜ್ಯದೊಡೆತನಕ್ಕೆ ಪಟ್ಟವ ಕಟ್ಟಿದಂತಾಯಿತ್ತಯ್ಯ
ಸದ್ಯೋಜಾತ-ವಾಮದೇವ-ಅಘೋರ-ತತ್ಪುರುಷ-ಈಶಾನವೆಂಬ
ಪಂಚಕಳಶದ ಅಭಿಷೇಕವ ಮಾಡಿಸಲು
ಶಿವನ ಕರುಣಾಮೃತದ ಸೋನೆ ಸುರಿದಂತಾಯಿತ್ತಯ್ಯ
ನೆರೆದ ಶಿವಗಣಂಗಳ ಮಧ್ಯದಲ್ಲಿ
ಮಹಾಲಿಂಗವನು ಕರತಳಾಮಳಕವಾಗಿ
ಶಿಷ್ಯನ ಕರಸ್ಥಲಕ್ಕೆ ಇತ್ತು ಪ್ರತಿಷ್ಠಿಸಿ
ಪ್ರಣವಪಂಚಾಕ್ಷರಿಯುಪದೇಶವ ಕರ್ಣದಲ್ಲಿ ಹೇಳಿ
ಕಂಕಣವ ಕಟ್ಟಿದಲ್ಲಿ
ಕಾಯವೇ ಕೈಲಾಸವಾಯಿತ್ತು
ಪ್ರಾಣವೇ ಪಂಚಬ್ರಹ್ಮಮಯ ಲಿಂಗವಾಯಿತ್ತು
ಇಂತು ಮುಂದ ತೋರಿಸಿ ಹಿಂದೆ ಬಿಡಿಸಿದ
ಶ್ರೀಗುರುವಿನ ಸಾನ್ನಿಧ್ಯದಿಂದಾನು ಬದುಕಿದೆನಯ್ಯ
ಚೆನ್ನಮಲ್ಲಿಕಾರ್ಜುನಯ್ಯ
೨೩೯.
ಧನದ ಮೇಲೆ ಬಂದವರೆಲ್ಲ ಅನುಸಾರಿಗಳಲ್ಲದೆ
ಅನುವ ಮಾಡಬಂದವರಲ್ಲ
ಮನದ ಮೇಲೆ ಬಂದು ನಿಂದು ಜರಿದು ನುಡಿದು
ಪಥವ ತೋರಬಲ್ಲಡಾತನೇ ಸಂಬಂಧಿ
ಹೀಂಗಲ್ಲದೆ, ಅವರಿಚ್ಛೆಯ ನುಡಿದು ತನ್ನುದರವ ಹೊರೆವನಕ
ಬಚ್ಚಣಿಗಳ ಮೆಚ್ಚುವನೆ ಚೆನ್ನಮಲ್ಲಿಕಾರ್ಜುನ
೨೪೦.
ಸೆಜ್ಜೆ ಉಪ್ಪರಿಸಿ, ಶಿವಲಿಂಗ ಕರಸ್ಥಲಕ್ಕೆ ಬರೆ,
ಪ್ರಜ್ವಲಿಸಿ ತೊಳಗಿ ಬೆಳಗುತ್ತಿಹ ಕಾಂತಿಯಲ್ಲಿ
ಜಜ್ಜರಿಸಿ ತನು-ಮನ, ದೃಷ್ಟಿನಟ್ಟು
ನಟ್ಟದೃಷ್ಟಿಯೊಳು ಒಜ್ಜರಿಸಿ ಹರಿವ
ಶಿವಸುಖರಸದೊಳೋಲಾಡುತೆಂದಿಪ್ಪೆನೊ
ನಿಮ್ಮ ಸಜ್ಜನಿಕೆ-ಸದ್ಭಕ್ತಿಯ ತಲೆಯೊತ್ತಿ ಕೂಡಿ ಆಡಿ ಲಜ್ಜೆಗೆಟ್ಟು
ನಿಮ್ಮನೆಂದಿಗೆ ನೆರೆವೆ ಚೆನ್ನಮಲ್ಲಿಕಾರ್ಜುನ
Comments
Post a Comment