Skip to main content

ಅಕ್ಕನ ವಚನಗಳು - 261 ರಿಂದ 270 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೬೧.
ಅಂಗದೊಳಗೆ ಅಂಗವಾಗಿ ಅಂಗಲಿಂಗೈಕ್ಯವ ಮಾಡಿದೆ
ಮನದೊಳಗೆ ಮನವಾಗಿ ಮನ ಲಿಂಗೈಕ್ಯವ ಮಾಡಿದೆ
ಭಾವದೊಳಗೆ ಭಾವವಾಗಿ ಭಾವಲಿಂಗೈಕ್ಯವ ಮಾಡಿದೆ
ಅರಿವಿನೊಳಗೆ ಅರಿವಾಗಿ ಜ್ಞಾನಲಿಂಗೈಕ್ಯವ ಮಾಡಿದೆ
ಕ್ರೀಗಳೆಲ್ಲವ ನಿಲಿಸಿ ಕ್ರಿಯಾತೀತವಾಗಿ
ನಿವೃತ್ತಿಲಿಂಗೈಕ್ಯವ ಮಾಡಿದೆ
ನಾನೆಂಬುದ ನಿಲಿಸಿ ನೀನೆಂಬುದ ಕೆಡಿಸಿ
ಉಭಯಲಿಂಗೈಕ್ಯವ ಮಾಡಿದೆ
ಚೆನ್ನಮಲ್ಲಿಕಾರ್ಜುನನೊಳಗೆ ನಾನಳಿದೆನಾಗಿ
ಲಿಂಗವೆಂಬ ಘನವು ಎನ್ನಲ್ಲಿ ಅಳಿಯಿತ್ತು [=ಉಳಿಯಿತ್ತು?]
ಕಾಣಾ ಸಂಗನಬಸವಣ್ಣ

೨೬೨.
ಎನ್ನ ಭಕ್ತಿ ನಿಮ್ಮ ಧರ್ಮ
ಎನ್ನ ಜ್ಞಾನ ಪ್ರಭುದೇವರ ಧರ್ಮ
ಎನ್ನ ಪರಿಣಾಮ ಚೆನ್ನಬಸವಣ್ಣನ ಧರ್ಮ
ಈ ಮೂವರೂ ಒಂದೊಂದ ಕೊಟ್ಟರೆನಗೆ-
ಮೂರು ಭಾವವಾಯಿತ್ತು
ಈ ಮೂರನು ನಿನ್ನಲ್ಲಿ ಸಮರ್ಪಿಸಿದ ಬಳಿಕ
ಎನಗಾವ ಜಂಜಡವಿಲ್ಲ
ಚೆನ್ನಮಲ್ಲಿಕಾರ್ಜುನದೇವರ ನೆನಹಿನಲ್ಲಿ
ನಿನ್ನ ಕರುಣದ ಶಿಶು ನಾನು ಕಾಣಾ ಸಂಗನಬಸವಣ್ಣ

೨೬೩.
ಲಿಂಗ ಸುಖಸಂಗದಲ್ಲಿ ಮನ ವೇದ್ಯವಾಯಿತ್ತು
ಇನ್ನೆಲ್ಲಿಯದಯ್ಯ ಎನಗೆ ನಿಮ್ಮಲ್ಲಿ ನಿರವಯವು?
ಇನ್ನೆಲ್ಲಿಯದಯ್ಯ ನಿಮ್ಮಲ್ಲಿ ಕೂಡುವುದು?
ಪರಮಸುಖಪರಿಣಾಮ ಮನ ಮೇರೆದಪ್ಪಿ
ನಾನು ನಿಜವನೈದುವ ಠಾವ ಹೇಳಾ ಚೆನ್ನಮಲ್ಲಿಕಾರ್ಜುನಯ್ಯ

೨೬೪.
ಮೂಲದ್ವಾರದ ಬೇರ ಮೆಟ್ಟಿ ಭೂಮಂಡಲವನೇರಿದೆ
ಆಚಾರದ ಬೇರ ಹಿಡಿದು ಐಕ್ಯದ ತುದಿಯನೇರಿದೆ
ವೈರಾಗ್ಯದ ಸೋಪಾನದಿಂದ ಶ್ರೀಗಿರಿಯನೇರಿದೆ
ಕೈವಿಡಿದು ತೆಗೆದುಕೊಳ್ಳಾ ಚೆನ್ನಮಲ್ಲಿಕಾರ್ಜುನ

೨೬೫.
ಬಯಲು ಲಿಂಗವೆಂಬೆನೆ? ಬಗಿದು ನಡೆದಲ್ಲಿ ಹೋಯಿತ್ತು
ಬೆಟ್ಟ ಲಿಂಗವೆಂಬೆನೆ? ಮೆಟ್ಟಿ ನಿಂದಲ್ಲಿ ಹೋಯಿತ್ತು
ತರುಮರಾದಿಗಳು ಲಿಂಗವೆಂಬೆನೆ! ತರಿದಲ್ಲಿ ಹೋಯಿತ್ತು
ಲಿಂಗ-ಜಂಗಮದ ಪಾದವೆ ಗತಿಯೆಂದು ನಂಬಿದ ಸಂಗನ ಬಸವಣ್ಣನ
ಮಾತು ಕೇಳದೆ ಕೆಟ್ಟೆನಯ್ಯ, ಚೆನ್ನಮಲ್ಲಿಕಾರ್ಜುನ

೨೬೬.
ನೋಡಿಹೆನೆಂದಡೆ ದೃಷ್ಟಿ ಮರೆಯಾಯಿತ್ತು
ಕೂಡಿಹೆನೆಂದೊಡೆ ಭಾವ ಮರೆಯಾಯಿತ್ತು
ಏನೆಂಬೆನೆಂತೆಂಬೆನಯ್ಯ?
ಅರಿದಿ[ದ=?]ಹೆನೆಂದೊಡೆ ಮರಹು ಮರೆಯಾಯಿತ್ತು
ನಿನ್ನ ಮಾಯೆಯನತಿಗಳೆವೊಡೆ ಎನ್ನಳವೇ
ಕಾಯಯ್ಯ ಚೆನ್ನಮಲ್ಲಿಕಾರ್ಜುನ

೨೬೭.
ಭಾವ ಬೀಸರವಾಯಿತ್ತು
ಮನ ಮೃತ್ಯುವನಪ್ಪಿತ್ತು, ಆನೇವೆನಯ್ಯ?
ಅಳಿತನದ ಮನ ತಲೆಕೆಳಗಾಯಿತ್ತು, ಆನೇವೆನಯ್ಯ?
ಬಿಚ್ಚಿ ಬೇರಾಗದ ಭಾವವಾಗಿ ಬೆರೆದೊಪ್ಪಚ್ಚಿ
ನಿನ್ನ ನಿತ್ಯಸುಖದೊಳಗಾನೆಂದಿಪ್ಪೆನಯ್ಯ
ಚೆನ್ನಮಲ್ಲಿಕಾರ್ಜುನ

೨೬೮.
ಹಗಲೆನ್ನೆ, ಇರುಳೆನ್ನೆ!
ಉದಯವೆನ್ನೆ, ಅಸ್ತಮಾನವೆನ್ನೆ! ಹಿಂದೆನ್ನೆ, ಮುಂದೆನ್ನೆ!
ನೀನಲ್ಲದೆ ಪರತೊಂದಹುದೆನ್ನೆ! ಮನ ಘನವಾದುದಿಲ್ಲಯ್ಯ!
ಕತ್ತಲೆಯಲ್ಲಿ ಕನ್ನಡಿಯ ನೋಡಿ ಕಳವಳಗೊಂಡೆನಯ್ಯ!
ನಿಮ್ಮ ಶರಣ ಬಸವಣ್ಣನ ತೇಜದೊಳಗಲ್ಲದೆ
ಆನೆನ್ನ [=ಆಂ ನಿನ್ನ?]ನೆಂತು ಕಾಂಬೆನು ಹೇಳಾ
ಚೆನ್ನಮಲ್ಲಿಕಾರ್ಜುನ

೨೬೯.
ಕಾಯದ ಕಾರ್ಪಣ್ಯವರತಿತ್ತು
ಕರಣಂಗಳ ಕಳವಳವಳಿದಿತ್ತು
ಮನ ತನ್ನ ತಾರ್ಕಣೆಯ ಕಂಡು ತಳವೆಳಗಾದುದು
ಇನ್ನೇವೆನಿನ್ನೇವೆನಯ್ಯ?
ನಿಮ್ಮ ಶರಣ ಬಸವಣ್ಣನ ಶ್ರೀಪಾದವ ಕಂಡಲ್ಲದೆ
ಬಯಕೆ ಬಯಲಾಗದು!
ಇನ್ನೇವೆನಿನ್ನೇವೆನಯ್ಯ ಚೆನ್ನಮಲ್ಲಿಕಾರ್ಜುನ

೨೭೦.
ಅಯ್ಯ ಕತ್ತಲೆಯ ಕಳೆದುಳಿದ
ಸತ್ಯ ಶರಣರ ಪರಿಯನೇನೆಂಬೆನಯ್ಯ!
ಘನವನೊಳಕೊಂಡ ಮನದ ಮಹಾನುಭಾವಿಗಳ
ಬಳಿವಿಡಿದು ಬದುಕುವೆನಯ್ಯ
ಅಯ್ಯ, ನಿನ್ನಲ್ಲಿ ಬೇರೊಂದರಿಯದ ಲಿಂಗಸುಖಿಗಳ ಸಂಗದಲ್ಲಿ
ದಿನವ ಕಳೆಯಿಸಯ್ಯ, ಚೆನ್ನಮಲ್ಲಿಕಾರ್ಜುನ

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ