Skip to main content

ಅಕ್ಕನ ವಚನಗಳು - 291 ರಿಂದ 300 ರವರೆಗೆ


Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೯೧.
ಹುಟ್ಟು-ಹೊರೆಯ ಕಟ್ಟಳೆಯ ಕಳೆದನವ್ವ
ಹೊನ್ನು-ಮಣ್ಣಿನ ಮಾಯೆಯ ಮಾಣಿಸಿದನವ್ವ
ಎನ್ನ ತನುವಿನ ಲಜ್ಜೆಯನಿಳುಹಿ
ಎನ್ನ ಮನದ ಕತ್ತಲೆಯ ಕಳೆದ
ಚೆನ್ನಮಲ್ಲಿಕಾರ್ಜುನಯ್ಯನ
ಒಳಗಾದವಳನೇನೆಂದು ನುಡಿಯಿಸುವಿರವ್ವ

೨೯೨.
ಕಾಯದ ಕಳವಳವ ಕೆಡಿಸಿ
ಮನದ ಮಾಯೆಯ ಮಾಣಿಸಿ
ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯ
ಶಿವಶಿವಾ ಎನ್ನ ಬಂಧನವ ಬಿಡಿಸಿ
ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯ
ಇರುಳೋಸರಿಸದ ಜಕ್ಕವಕ್ಕಿಯಂತೆ ನಾನಿಂದು
ನಿಮ್ಮ ಶ್ರೀಪಾದವನಿಂಬುಗೊಂಡು
ಸುಖದೊಳಗೋಲಾಡುವೆನಯ್ಯ ಚೆನ್ನಮಲ್ಲಿಕಾರ್ಜುನ

೨೯೩.
ಅಯ್ಯ, ನೀನೆನ್ನ ಮೊರೆಯನಾಲಿಸಿದೊಡಾಲಿಸು
ಆಲಿಸದಿರ್ದೊಡೆ ಮಾಣು
ಅಯ್ಯ, ನೀನೆನ್ನ ದುಃಖವ ನೋಡಿದೊಡೆ ನೋಡು
ನೋಡದಿರ್ದೊಡೆ ಮಾಣು
ಎನಗಿದು ವಿಧಿಯೆ?!
ನೀನೊಲ್ಲದೊಡೆ ನಾನೊಲಿಸುವ ಪರಿಯೆಂತಯ್ಯ?
ಮಾನವಳಿಸಿ ಮಾರುವೋಗಿ ಮರೆವೊಕ್ಕೊಡೆ
ಕೊಂಬ ಪರಿಯೆಂತಯ್ಯ ಚೆನ್ನಮಲ್ಲಿಕಾರ್ಜುನ

೨೯೪.
ಮುಡಿ ಬಿಟ್ಟು ಮೊಗ ಬಾಡಿ ತನು ಕರಗಿದವಳ
ಎನ್ನನೇಕೆ ನುಡಿಸುವಿರಿ ಎಲೆ ಅಣ್ಣಗಳಿರಾ?
ಎನ್ನನೇಕೆ ಕಾಡುವಿರಿ ಎಲೆ ತಂದೆಗಳಿರಾ?
ಬಲುಹಳಿದು, ಭವಗೆಟ್ಟು ಛಲವಳಿದು
ಭಕ್ತೆಯಾಗಿ ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದವಳ

೨೯೫.
ಬಟ್ಟಿಹ ಮೊಲೆಯ, ಭರದ ಜವ್ವನವ
ಚೆಲುವ ಕಂಡು ಬಂದಿರಣ್ಣಾ
ಅಣ್ಣಾ, ನಾನು ಹೆಂಗೂಸಲ್ಲ
ಅಣ್ಣ, ನಾನು ಸೂಳೆಯಲ್ಲ
ಅಣ್ಣಾ, ಮತ್ತೆ ನನ್ನ ಕಂಡು ಕಂಡು
ಆರೆಂದು ಬಂದಿರಣ್ಣ?
ಚೆನ್ನಮಲ್ಲಿಕಾರ್ಜುನನಲ್ಲದ ಮಿಕ್ಕಿದ ಪುರುಷನು
ನಮಗಾಗದ ಮೋರೆ ನೋಡಣ್ಣ

೨೯೬.
ಎಲೆ ಅಣ್ಣಾ, ಎಲೆ ಅಣ್ಣಾ, ನೀವು ಮರುಳಲ್ಲ
ಅಣ್ಣಾ, ಎನ್ನ ನಿನ್ನಳವೆ?
ಹದಿನಾಲ್ಕು ಲೋಕವ ನುಂಗಿದ
ಕಾಮನ ಬಾಣದ ಗುಣ ಎನ್ನನಿನ್ನಳವೆ?
ವಾರುವ ಮುಗ್ಗಿದೊಡೆ [ಮಿಣಿ ಹರಿಯ] ಹೊಯ್ವರೆ?
ಮುಗ್ಗಿದ ಭಂಗವ ಮುಂದೆ ರಣದಲ್ಲಿ ತಿಳಿವುದು
ನಿನ್ನ ನೀ ಸಂಹರಿಸಿ ಕೈದುವ ಕೊಳ್ಳಿರಣ್ಣ
ಚೆನ್ನಮಲ್ಲಿಕಾರ್ಜುನನೆಂಬ ಹಗೆಗೆ ಬೆಂಗೊಡದಿರಣ್ಣ

೨೯೭.
ಒಬ್ಬಂಗೆ ಇಹವುಂಟು, ಒಬ್ಬಂಗೆ ಪರವುಂಟು
ಒಬ್ಬಂಗೆ ಇಹಪರವೆರಡೂ ಇಲ್ಲ
ಚೆನ್ನಮಲ್ಲಿಕಾರ್ಜುನದೇವರ ಶರಣರಿಗೆ
ಇಹಪರವೆರಡೂ ಉಂಟು

೨೯೮. ಆಕಾರವಲ್ಲದ ನಿರಾಕಾರಲಿಂಗವ ಕೈಯಲ್ಲಿ ಹಿಡಿದು
ಕೊರಳಲ್ಲಿ ಕಟ್ಟಿದೆವೆಂಬರು ನರಕಜೀವಿಗಳು
ಹರಿಬ್ರಹ್ಮರು, ವೇದಶಾಸ್ತ್ರಂಗಳು ಅರಸಿ ಕಾಣದ ಲಿಂಗ
ಭಕ್ತಿಗೆ ಫಲಪದಂಗಳಲ್ಲದೆ ಲಿಂಗವಿಲ್ಲ
ಕರ್ಮಕ್ಕೆ ನರಕ[ನಾಕ?]ವಲ್ಲದೆ ಲಿಂಗವಿಲ್ಲ
ವೈರಾಗ್ಯಕ್ಕೆ ಮುಕ್ತಿಯಲ್ಲದೆ ಲಿಂಗವಿಲ್ಲ
ಜ್ಞಾನಕ್ಕೆ ಪರಿಭ್ರಮಣವಲ್ಲದೆ ಲಿಂಗವಿಲ್ಲ
ಇದುಕಾರಣ; ಅದ್ವೈತದಿಂದ ತನ್ನ ತಾನರಿದು ತಾನಾದರೆ
ಚೆನ್ನಮಲ್ಲಿಕಾರ್ಜುನಲಿಂಗ ತಾನೆ ಬೇರಿಲ್ಲ

೨೯೯.
ಕಂಗಳ ಕಳೆದು, ಕರುಳುಗಳ ಕಿತ್ತು
ಕಾಮದ ಮೂಗ ಕೊಯ್ದು
ಭಂಗದ ಬಟ್ಟೆಯ ಭವ ಗೆಲಿಯದಳಿಗಂಗವೆಲ್ಲಿಯದು ಹೇಳಾ!
ಶೃಂಗಾರವೆಂಬ ಹಂಚಿಗೆ ಹಲ್ಲ ತೆರೆದರೇನುಂಟು
ಅಂಗವೆ ಲಿಂಗವಹ ಪರಿಯೆನಗೆ ಹೇಳಾ
ಶ್ರೀಗಿರಿ ಚೆನ್ನಮಲ್ಲಿಕಾರ್ಜುನ

೩೦೦.
ಮೊಲೆ-ಮುಡಿಯಿದ್ದರೇನು
ಮೂಗಿಲ್ಲದವಳಿಂಗೆ?
ತಲೆಯ ಮೇಲೆ ಸೆರಗೇತಕ್ಕೆ
ಸಹಜಸಂಕಲ್ಪವಿಲ್ಲದವಳಿಂಗೆ?
ಜಲದೊಳಗೆ ಹುಟ್ಟಿಗುಳೆ[ಗುಳ್ಳೆ?]
ಜಾತಿಸ್ಮರತ್ವವರಿದಿತ್ತು
ಹಲವರ ಹಾದಿಯೊಳು
ಹರಿಸುರರು ನಿಮ್ಮ ನೆಲೆಯಂ ತೋರಿದೆ [ತೋರರೇ?]
ಶ್ರೀಗಿರಿ ಚೆನ್ನಮಲ್ಲಿಕಾರ್ಜುನ

Comments

  1. thanks for your information it was useful for my school project

    ReplyDelete

Post a Comment

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ