Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.
೩೪೧.
ಮದನನೆಸುಗೆಯಿಂದ ಮುನ್ನ ಚೆನ್ನಮಲ್ಲನ
ಮದನಗಿತ್ತಿಯಾದೆ! ಮಿಕ್ಕಿ
ನಧಮರೇತಕವ್ವಗಳಿರ?
ಮದುವೆಯಹರೆ ಮಗುಳೆ ಕಂಡ ಕಂಡ ಗಂಡರ? ||೧||
ಸಾವು ಸಂಕಟಳಿವುಪಳಿವು
ನೋವು ದುಃಖ ದುರಿತರಕ್ತ
ಮಾವುಸಸ್ಠಿ ಬಾಲಜಾಡ್ಯ ಜರೆ ರುಜಾನಿಶಂ
ಬೇವಸಂಗಳಿಲ್ಲದುರೆ ಸ-
ದಾ ವಯಸ್ಸಿನಿಂದಲೆಸವ
ಕೋವಿದಂಗೆ ಪೆತ್ತರಿತ್ತರೆನ್ನ ||೨||
ಮಾತೆ ಮುಕುತಿದೆರಹನಾಂತು,
ರೀತಿಗೊಲ್ಲು ತಂದೆ, ಬಂಧು-
ವ್ರಾತವವನ ಕುಲವನೊಪ್ಪಿ ಕೊಟ್ಟರೆನ್ನನು
ಆತಗೊಲ್ಲು ಮದುವೆಯಾದೆ
ನಾ ತಳೋದರಿಯರಿರೆಲೆಲೆ
ಆತನರಸುತನದ ಘನದ ಬಿನದವೆಂತೆನೆ ||೩||
ಆಳುವವನಿಯವನಿಗಿದೀ
ರೇಳು ಲೋಕ, ದುರ್ಗ-ರಜತ
ಶೈಳ, ಹರಿವಿರಿಂಚಿ ಸುರಪ ಮುಖವಜೀರರು,
ಆಳು ದುನುಜ ಮನುಜ ದಿವಿಜ
ವ್ಯಾಳರುಗ್ಘಡಿಸುವ ಭಟ್ಟ
ಜಾಳಿ ಚಂಡಕೀರ್ತಿಗಳ್, ಪ್ರಧಾನಿ ಸುರಗುರು ||೪||
ಮಿತ್ರ ಧನದರಾಪ್ತರೇ
ಮಿತ್ರ ಗಾತ್ರ ಪ್ರಮಥರತಿ ಕ-
ಳತ್ರವೇ ಭವಾನಿ, ರಾಜವಾಜಿ ನಿಗಮವು
ಪತ್ರಿರಥ-ಗಣೇಶರೆಸೆವ
ಪುತ್ರರಧಿಕಶೈವಧರ್ಮ
ಗಾತ್ರ ಲಿಂಗವೀವನಾವ ಪದವನೆಳಸಲು ||೫||
ದಶಭುಜಂಗಳೈದು ವಕ್ತ್ರ
ವಸವವಖಿಳ ಕಕುಭ, ಮುಡಿವ
ಕುಸುಮ ತಾರೆ, ತುಂಬುರಾದಿಗಳ್ ಸುಗಾಯಕರ್,
ಎಸೆವ ಜಗದ ವಾರ್ತೆಗಳನು
ಬೆಸಸುವಾತ ನಾರದ ಶ್ರಿ-
ದಶವಧೂಕದಂಬ ಓಲಯಿಸುವರಾತನ ||೬||
ಹಸನಿಸುವನೆ ಭೃಂಗಿಯೂರು-
ವಸಿ ತಿಲೋತ್ತಮಾದಿ ದಿವಿಜ
ಕುಸುಮಗಂಧಿನಿಯರೆ ನಚ್ಚಣಿಯರು, ಪಿಡಿವಡೆ
ತಿಸುಳ ಸಬಳ, ಚಾಪ ತ್ರಿದಶ
ರೆಸವ ನಿಳಯ, ನಾರಿ ಭುಜಗ,
ವಿಶಿಖ ವಿಷ್ಣುವಿಂದು ಭಾಸ್ಕರಾಗ್ನಿ ನೇತ್ರವೂ ||೭||
ಮಲೆವ ಕಾಲ ಕಾಮದನುಜ
ಕುಲವನಟ್ಟಿ ಕುಟ್ಟಿ ಭಕ್ತ
ರೊಲವನೀವ ಸಕಲದೇವ ಚಕ್ರವರ್ತಿಗೆ
ಒಳಿದೆನೊಲಿವೆನೆಂತು ಪೇಳಿ
ರೆಲೆಲೆಯಕ್ಕಗಳಿರ ಬದ್ಧ
ಮಲಮಯಾಂಗಿಯಾದ ಹೀನಮಾನಸಾತ್ಮಗೆ? ||೮||
ಗಿರಿಯ ತೊರೆದು ಬಱಿ ಪುಲ್ಲ
ಮೊರಡಿಗೆಳಸಿ ಬಹುದೆ? ಅಂಚೆ
ಸರಸಿಯನ್ನು ಸಡಿಲಿ ಪಲ್ವಲಕ್ಕೆ ಪಾಯ್ವುದೇ?
ಎರಪದೇ ಪರಾಗವಿಲ್ಲ-
ದರಳಿಗಲಿ? ಮಹೇಶಗೊಲ್ದು
ನರಕಿಗೊಲಿಯ ಬಲ್ಲುದೇ ಮದೀಯ ಚಿತ್ತವು? ||೯||
ಮೇರುಗಿರಿಯಿರಲ್ಕೆ ರಜವ[=ಜರಗ?]
ತೂರಲೇಕೆ? ಕ್ಷ್ರೀರವಾರ್ಧಿ
ಸಾರಿರಲ್ಕೆ [ಓರೆಪಶುವದೇಕೆ]? ತತ್ತದ
ದಾರಿಗಳಲಲೇಕೆ ಗುರುವ
ಸಾರಿ ಸುಪ್ರಸಿದ್ಧವಿದ್ದು?
ಹಾರಲೇಕೆ ಪದವೆ ಲಿಂಗ ಕರದೊಳಿರುತಿರೆ? ||೧೦||
ಆವ ಚಿಂತೆಯೇಕೆ ಮನದ
ದಾವತಿಯನು ತೀರ್ಚುವೆನ್ನ
ಜೀವದೆರೆಯ ಚೆನ್ನಮಲ್ಲಿಕಾರ್ಜುನಯ್ಯನ
ಭಾವೆಯಾನು! ಬಳಿಕ ನರಕಿ
ಜೀವಿಗೆನ್ನ ಕೇಳ್ದರಿನ್ನು
ನೋವಿರಿ.... ||೧೧||
೩೪೨.
ಎನಗೆ ಬಂದ ಬವರಕೇಕೆ ನಿಮಗೆ ಬಂಧನ? ||ಪಲ್ಲವ||
ಆರಿಗಿಟ್ಟ ಬಡಿಣದನ್ನ | ವಾರು ಕೊಂಬರೆನಗೆ ಬಂದ
ಮಾರಿಗಾಗಿ ಶಿವನ ಭಕ್ತರಳಲಲೆನ್ನಸು
ಹಾರುತಿದೆ-ಮದೀಯ ತನುವ | ನೂರುನುಚ್ಚುಮಾಡೆ ನಿಮಗಿ
ದೂರ ಪೇಳ್ದೊಡಾಣೆ ಚೆನ್ನಮಲ್ಲಿಕಾಜುನ ||೧||
ಇಹದೆ ಶರಣರೊಲಿಯದಲ್ಲ | ದಹುದೆ ಮುಕ್ತಿಯವರ ಭಂಗಿ
ಸಹಿತರಿಂದಲಾವ ಗತಿಯ ಪಡೆವೆನಿನಿತಕೆ
ದಹನನೇತ್ರನಿಟ್ಟ ನೆಲೆಯೊಳಿಹೆ[ನೆನ್ನುತ್ತ ಗೀತವನ್ನು
ಸಹಜಭರಿತೆ ಪಾಡಿದಳ್ ಮನೋನುರಾಗದಿ] ||೨||
ವಾತ-ವಹ್ನಿ-ಸಲಿಲ-ಸುರ | ಭೂತಳಾದಿ ತತ್ವವನಿಶ
ರೀತಿದಪ್ಪದಿಪ್ಪವಯ್ಯ ನಿನನುಜ್ಞೆಯ-
ನಾತು; ಮಿಕ್ಕಡೆನ್ನನೊಪ್ಪ | ನಾತ ಮಲ್ಲಿನಾಥ
..................................... ||೩||
೩೪೩.
ಬೇನೆಯಿಂ ಬೇವ ಬೇವದಸದಳ ಬಲ್ಲರೆ
ಬೇನೆಯಿಲ್ಲದರಂತೆ ನೀವೆಂತರಿವಿರೆನ್ನ
ಬೇನೆಯ ಬಗೆಯವನ್ನಗಳಿರಾ ಮಚ್ಚೆನ್ನ ಮಲ್ಲೇಶನಿರಿದಲಗು ಮುರಿದ
ಬೇನೆಯಿಂ ಬೇವಳಾನೇ ಬಲ್ಲೆನೀ ನೋವು
ಬೇನೆ ಮಚ್ಚಿತ್ತದೆರೆಯನ ತಾಗದಿರದು
೩೪೪.
ವಿಷಯಸುಖ ವಿಷವೆಂದು ತಿಳಿಯದಜ್ಞಾನಿ ಬಿಡು
ವಿಷಯಸುಖ ನಿರವಯವೆಂದರಿಯದರಿಮರುಳೆ ಬಿಡು
ವಿಷಯಸುಖ ಭವದ ಬಿತ್ತೆಂದು ಭಾವಿಸದಧಮಜೀವಿ ಬಿಡು ಬಿಡು ಸೆರಗನು
ವಿಷಯದಣು ಮಾತ್ರ ಬಿಂದುಗಳಲ್ ಭೂಧರದೊ
ಲೆಸೆವುದೆಂದೋದುವಾಗಮವ ಕೇಳ್ದೆಚ್ಚರದ
ಪಶುವೆ ಕೇಳ್ದರಿಯ ವಿಷಯದೊಳು ಮುಂಗೆಟ್ಟ ನರಸುರರ ವಿಧಿಗಳ ||೧||
ಪುಲ್ಲಶರನೆಸುಗೆಗಳವಳಿದಳುಪಿದಂಗನೆಯ
ನೊಲ್ಲದೊಲ್ಲದ ಪೆಣ್ಣನೊಲಿಸುವವನತ್ಯಧಮ
ನಲ್ಲವೆ? ಪೆರತೊರ್ವಗೊಲ್ದವಳನಪ್ಪಲಳ್ತಿಯೆ ಮನಕ್ಕಾನು ಚೆನ್ನ
ಮಲ್ಲಿಕಾರ್ಜುನಗೊಲ್ದಳೆನ್ನನಪ್ಪಿದಡೆ ಕ
ಗ್ಗಲ್ಲನಪ್ಪಿದ ಮಾಳ್ಕೆಯಂತಿರದೆ ಹೋಗೆಲವೊ
ಖುಲ್ಲ ||೨||
೩೪೫.
[ತೊಡರಿ ಬಿಡದಂಡೆಲೆವ ಮಾಯೆಯ
ತೊಡಕನಾರೈದಲಿಸಿ ಗೀತವ
ತೊಡಗಿದಳ್] ಅಸಂಖ್ಯಾತಲಕ್ಷಭವಾಂಬುರಾಶಿಯೊಳು
ಕಡೆದು ಮನುಜತ್ವಂಬಡೆಯೆ ಬೆಂ-
ಬಿಡದು ನಿಮ್ಮಯ ಮಾಯೆ, ಮಾಯೆಯ
ಬಿಡುಗಡೆಗೆ ತೆರಪಿಲ್ಲಾ ಗುರುಚೆನ್ನಮಲ್ಲೇಶ ||೧||
ಒಡಲಿನೊಳ್ ಮಲಮಾಸಿನುಬ್ಬಸ
ವಡೆದುದಿಸಲಜ್ಞಾನ ರುಜೆಗಳ
ತೊಡಕು, ಕಾವನ ಕಾಟ ಜವ್ವನದೊಳ್, ಜರೆಗಶಕ್ತಿಯ
ಜಡತೆಯಲ್ಲದೆ ಜಗಕೆ ನಿಮ್ಮಡಿ
ವಿಡಿಯಲೆಲ್ಲಿಯ ಬಿಡೆಯ ಮಾಯೆಯ ಸೆಡಕಿನೊಳು ಸಿಲುಕಿ ||೨||
ಹರಿಯಜೇಂದ್ರಾದ್ಯಖಿಳ ದಿವಿಜರ
ಶಿರವನರಿದಹಿದನುಜಮನುಜರ
ನರೆದು ಸಣ್ಣಿಸಿ ನುಂಗಿ, ನುಸುಳುವ ಮನುಮುನಿಗಳಧಟ
ಪರಿದು ಸಚರಾಚರವ ನೆರೆ ನಿ
ಟ್ಟೊರಸುವುದು ಗಡ ಮಾಯೆ ನಿಮ್ಮಯ
ಶರಣರಡಿವಿಡಿದಾಂ ಬದುಕಿರ್ದೆನೆಂದು ಪಾಡಿದಳು ||೩||
೩೪೬.
ತನುವು ಕಟ್ಟನೆ ಕರಗೆರೆದು ಮ
ಜ್ಜನವ, ನಿಜಮನವಲರ್ದು ಕುಸುಮವ,
ವಿನುತ ಹದುಳಿಗತನದಿ ಗಂಧಾಕ್ಷತೆಯನರು ಹಿಂದೆ
ಮಿನುಗುವಾರ್ತಿಯ, ನೆನಹುಶುದ್ಧದಿ
ಘನಸುಧೂಪವ, ಹರುಷರಸ ಸಂ
ಜನಿತ ನೈವೇದ್ಯವ ಸಮರ್ಪಿಸಿ, ಜ್ಞಾನಸತ್ಕ್ರಿಯದಿ ||೧||
ತಾಂ ಬೆಳೆರ್ವೆತ್ತಲೆಯನಿತ್ತು ಕ-
ರಾಂಜುಜದ ಬೊಮ್ಮವನು ನಿಜ ಹರು
ಷಾಂಬುಕಣ ಸಂಪಾತದೊಡನಿಟ್ಟಿಸುತೆ ಕ್ರಿಯೆಗಳವು
ಬೆಂಬಳಿಯೊಳಿರ್ದರಿಯದರ್ಚಿಪೆ
ನೆಂಬೆನೆಂತಾ ನಾದ ಬಿಂದುಗ
ಳೆಂಬರಿಯವು ನಿಮ್ಮ ನುತಿಸುವೆನೆಂತು ಶಶಿಮೌಳಿ ||೨||
೩೪೭.
ಅನುಭವವೆ ಭವಬಂಧಮೋಚನ
ವನುಭವವೆ ದುರಿತಾಚಲಶನಿ
ಯನುಭವವೆ ತನುಗುಣಾಭ್ರ ಪ್ರಕರಪವಮಾನ
ಅನುಭವವೆ ಭಕ್ತಿಯೆ ಸುಧಾನಿಧಿ
ಅನುಭವವೆ ಮುಕ್ತಿಯ ತವರ್ಮನೆ ಶರಣಸಂತತಿಯ ||೧||
೩೪೮.
ಭಾಷೆಯ ಮೀಸಲ್ಗೆಡಿಸಿ ಬಳಿಯಲಿ-
ನ್ನೇಸೊಂದಾಚರಣೆಯನಾಚರಿಸಲ್
ದೋಷಂ ಪರಿಯದವಂಗವನೊಳ್ ಪುದುವಾಳ್ವರ್ ತದ್ದೋಷಾ
ವಾಸಿಗಳೆನಿಪರ್, ತೊಲತೊಲಗಿನ್ನೆ
ನ್ನಾಸೆಯನುಳಿದು
೩೪೯.
ಪೂತ ಶ್ರೀಗುರುವರ ಪೇಳ್ದೊಲ್ ದು
ರ್ನೀತಿಯ, ಭೀತರ ಕಾಯ್ವಂ ತಾನೆ
ಬೂತಾದೊಲ್, ಪತಿಪತ್ನೀತ್ವವನರಹುವಳಭಿಸಾರಿಕೆಯ
ರೀತಿಯನೊರೆವೊಲ್, ಪೇಳ್ದಿರಿ ನೀವೆ
ನ್ನಾತುಮದಜ್ಞನತೆಯಂ ತೆವರದೆ ದು
ರ್ನೀತಿಯನಾ ಶಿವಭಕ್ತರ್ ಸಹಭವಗುರುತಂದೆಗಳೆನಗೆ ||೧||
ಮದ್ಗುರು ತಂದೆ ಮಹಾವೈಭವದೊಳ್
ಚಿದ್ಘನಲಿಂಗಕ್ಕೊಲಿದೆನ್ನುವನೆಸೆ
ದುದ್ಗಮ ಶರನೆಸೆಯದ ಬಳಿಕುದ್ವಾಹವೆನೆಸಗಿದ ಬಳಿಕ
ತದ್ ಘನಲಿಂಗದ ಸತಿಯಂ ಪಡೆದು ವಿ
ಯದ್ ಗಂಗಾಮೌಲಿಯ ಭಕ್ತಂಗಿ
ತ್ತುದ್ಗಮ ಶರನ ವಿಕಾರದೋಳಿಹುದಂ ನೋಳ್ದಪೆವೆಂಬರಕೆ ||೨||
ಈ ಪಾಪವನೊಂದಿಸಲೆಳಸುವರೇಂ
ಕೂಪರೆ ಪೆರದೊಲಗು
೩೫೦.
ಕ್ಷಿತಿಯ ಚರಿತ್ರವನತಿಗಳೆದೆನ್ನುವನೆಳಸಿದಿರೆಂತೆನಲು
ಹುತಹವನುಂಡ ಹಿಮಂ ಬೆರೆವುದೆ? ಸ
ನ್ನುತ ಸೌರಭ್ಯಕದಂಬವನಂಬರ
ಗತಿವೇಗದಿನಡರಿದ ಹೊಗೆ ಮನೆಗಳ್ತಪ್ಪುದೆ ಮಡಮುರಿದು?
ಓಡೊಡೆ ಗಾಜುಗಳುಂ ಮೃತ್ತಿಕೆಯೊಳ್
ಮೂಡಿ ಗಡಾ ಮೃತ್ತಿಕೆಯೊಳ್ ಮಗುಳೊಡ
ಗೂಡವೆನಲ್ಕವರಿಂದಿಳಿಕೆಯೆ ಶಿವಶರಣರ ಚಾರಿತ್ರ?
ರೂಢಿಯೊಳೆಗೆದಾ ರೂಢಿಯೆ ಜಡದೊಳ್
ಕೂಡದ ವೃಷಭಾರೂಢನೊಳೊಡನೊಡ
ಗೂಡಿದ ಶರಣರ ಕೂಡಿದಳಾನೆನ್ನಾಸೆಯ ಮಾಣು
Comments
Post a Comment