Skip to main content

Posts

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ
Recent posts

ಅಕ್ಕನ ವಚನಗಳು - 341 ರಿಂದ 350 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೩೪೧. ಮದನನೆಸುಗೆಯಿಂದ ಮುನ್ನ ಚೆನ್ನಮಲ್ಲನ ಮದನಗಿತ್ತಿಯಾದೆ! ಮಿಕ್ಕಿ ನಧಮರೇತಕವ್ವಗಳಿರ? ಮದುವೆಯಹರೆ ಮಗುಳೆ ಕಂಡ ಕಂಡ ಗಂಡರ? ||೧|| ಸಾವು ಸಂಕಟಳಿವುಪಳಿವು ನೋವು ದುಃಖ ದುರಿತರಕ್ತ ಮಾವುಸಸ್ಠಿ ಬಾಲಜಾಡ್ಯ ಜರೆ ರುಜಾನಿಶಂ ಬೇವಸಂಗಳಿಲ್ಲದುರೆ ಸ- ದಾ ವಯಸ್ಸಿನಿಂದಲೆಸವ ಕೋವಿದಂಗೆ ಪೆತ್ತರಿತ್ತರೆನ್ನ ||೨|| ಮಾತೆ ಮುಕುತಿದೆರಹನಾಂತು, ರೀತಿಗೊಲ್ಲು ತಂದೆ, ಬಂಧು- ವ್ರಾತವವನ ಕುಲವನೊಪ್ಪಿ ಕೊಟ್ಟರೆನ್ನನು ಆತಗೊಲ್ಲು ಮದುವೆಯಾದೆ ನಾ ತಳೋದರಿಯರಿರೆಲೆಲೆ ಆತನರಸುತನದ ಘನದ ಬಿನದವೆಂತೆನೆ ||೩|| ಆಳುವವನಿಯವನಿಗಿದೀ ರೇಳು ಲೋಕ, ದುರ್ಗ-ರಜತ ಶೈಳ, ಹರಿವಿರಿಂಚಿ ಸುರಪ ಮುಖವಜೀರರು, ಆಳು ದುನುಜ ಮನುಜ ದಿವಿಜ ವ್ಯಾಳರುಗ್ಘಡಿಸುವ ಭಟ್ಟ ಜಾಳಿ ಚಂಡಕೀರ್ತಿಗಳ್, ಪ್ರಧಾನಿ ಸುರಗುರು ||೪|| ಮಿತ್ರ ಧನದರಾಪ್ತರೇ ಮಿತ್ರ ಗಾತ್ರ ಪ್ರಮಥರತಿ ಕ- ಳತ್ರವೇ ಭವಾನಿ, ರಾಜವಾಜಿ ನಿಗಮವು ಪತ್ರಿರಥ-ಗಣೇಶರೆಸೆವ ಪುತ್ರರಧಿಕಶೈವಧರ್ಮ ಗಾತ್ರ ಲಿಂಗವೀವನಾವ ಪದವನೆಳಸಲು ||೫|| ದಶಭುಜಂಗಳೈದು ವಕ್ತ್ರ ವಸವವಖಿಳ ಕಕುಭ, ಮುಡಿವ ಕುಸ

ಅಕ್ಕನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ಶಿವಗಣಂಗಳ ಮನೆಯಂಗಳ ವಾರಣಾಸಿಯೆಂಬುದು ಹುಸಿಯೇ ಪುರಾತನರ ಮನೆಯ ಅಂಗಳದಲ್ಲಿ ಅಷ್ಟಾಷಷ್ಟಿತೀರ್ಥಂಗಳು ನೆಲೆಸಿಪ್ಪವಾಗಿ? ಅದೆಂತೆಂದಡೆ: ಕೇದಾರಸ್ಯೋದಕೇ ಪೀತೇ ವಾರಣಸ್ಯಾಂ ಮೃತೇ ಸತಿ ಶೀಶೈಲ ಶಿಖರೇ ದೃಷ್ಟೇ ಪುನರ್ಜನ್ಮ ನ ವಿದ್ಯತೇ ಎಂಬ ಶಬ್ದಕ್ಕಧಿಕವು ಸುತ್ತಿಬರಲು ಶ್ರೀಶೈಲ, ಕೆಲಬಲದಲ್ಲಿ ಕೇದಾರ ಅಲ್ಲಿಂದ ಹೊರಗೆ ವಾರಣಾಸಿ ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ ಎನ್ನ ದೇವ ಚೆನ್ನಮಲ್ಲಿಕಾರ್ಜುನ ನಿಮ್ಮ ಭಕ್ತರ ಮನೆಯಂಗಳ ವಾರಣಾಸಿಯಿಂದ ಗುಂಜಿಯಧಿಕ ನೋಡಾ! ೩೩೨. ನಿನ್ನ ಅಂಗದಾಚಾರವ ಕಂಡು ಎನಗೆ ಲಿಂಗಸಂಗವಾಯಿತ್ತಯ್ಯ, ಬಸವಣ್ಣ ನಿನ್ನ ಮನದ ಸುಜ್ಞಾನವ ಕಂಡು ಎನಗೆ ಜಂಗಮಸಂಬಂಧವಾಯಿತ್ತಯ್ಯ, ಬಸವಣ್ಣ ನಿನ್ನ ಸದ್ಭಕ್ತಿಯ ತಿಳಿದು ಎನಗೆ ನಿಜಸಾಧ್ಯವಾಯಿತ್ತಯ್ಯ, ಬಸವಣ್ಣ ಚೆನ್ನಮಲ್ಲಿಕಾರ್ಜುನನ ಹೆಸರಿಟ್ಟ ಗುರು ನೀನಾದ ಕಾರಣ ನಾನೆಂಬುದಿಲ್ಲವಯ್ಯ ಬಸವಣ್ಣ ೩೩೩. ಅಯ್ಯ, ನಿಮ್ಮಾನುಭಾವಿಗಳ ಸಂಗದಿಂದ ಎನ್ನ ತನು ಶುದ್ಧವಾಯಿತ್ತು! ಅಯ್ಯ, ನಿಮ್ಮ ಅನುಭಾವಿಗಳು ಎನ್ನನೊರೆದೊರೆದು, ಕಡಿಕಡಿದು, ಅರೆದರೆದು ಅನುಮಾಡಿದ ಕಾರಣ ಎನ್ನ ಮನ ಶುದ್ಧವಾಯಿತ್ತು!

ಅಕ್ಕನ ವಚನಗಳು - 321 ರಿಂದ 330 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೨೧. ಕಳವಳದ ಮನವು ತಲೆಕೆಳಗಾದುದವ್ವ ಸುಳಿದು ಬೀಸುವ ಗಾಳಿ ಉರಿಯಾಯಿತವ್ವ ಬೆಳದಿಂಗಳು ಬಿಸಿಲಾಯಿತ್ತು ಕೆಳದಿ ಹೊಳಲ ಸುಂಕಿಗನಂತೆ ತೊಳಲುತಿದ್ದೆನವ್ವ ತಿಳುಹೌ ಬುದ್ಧಿಯ ಹೇಳಿ ಕರೆತಾರೆಲೆಗವ್ವ ಚೆನ್ನಮಲ್ಲಿಕಾರ್ಜುನಂಗೆ ಎರಡರ ಮುನಿಸವ್ವ ೩೨೨. ಇಂದೆನ್ನ ಮನೆಗೆ ಗಂಡ ಬಂದಹನೆಲೆಗವ್ವ ನಿಮನಿಮಗೆಲ್ಲ ಶೃಂಗಾರವ ಮಾಡಿಕೊಳ್ಳಿ ಚೆನ್ನಮಲ್ಲಿಕಾರ್ಜುನನೀಗಳೇ ಬಂದಹನು ಇದಿರುಗೊಳ್ಳ ಬನ್ನಿರೇ ಅವ್ವಗಳಿರಾ! ೩೨೩. ಬಂದಹನೆಂದು ಬಟ್ಟೆಯ ನೋಡಿ ಬಾರದಿದ್ದರೆ ಕರಗಿ ಕೊರಗಿದೆನವ್ವ ತಡವಾದರೆ ಬಡವಾದೆ ತಾಯೆ ಚೆನ್ನಮಲ್ಲಿಕಾರ್ಜುನ ಒಂದಿರುಳಗಲಿದರೆ ತೆಕ್ಕೆ ಸಡಿಲಿದ ಜಕ್ಕವಕ್ಕಿಯಂತಾದೆನವ್ವ ೩೨೪. ಕೂಡಿ ಕೂಡುವ ಸುಖದಿಂದ ಒಪ್ಪಚ್ಚಿ ಅಗಲಿ ಕೂಡುವ ಸುಖ ಲೇಸು ಕೆಳದಿ! ಒಚ್ಚತ ಅಗಲಿರೆ, ಕಾಣದೆ ಇರಲಾರೆ, ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಅಗಲಿ ಅಗಲದ ಸುಖವೆಂದಪ್ಪುದೋ! ೩೨೫. ಉರಿಯ [ಪಳಿಯನೆ] ಉಡಿಸಿ, ಊರಿಂದ ಹೊರಗಿರಿಸಿ ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವ ತುರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ ಕರೆ ನೊಂದೆ ನೋಡವ್ವ ಅವಸ್ಥೆಯಿಂದ ಹಿರಿದು ದುಃಖದಲ್ಲಿ ಬೆಂದೆ ಕರಿ ಬೆ

ಅಕ್ಕನ ವಚನಗಳು - 311 ರಿಂದ 320 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೧೧. ನಾಳೆ ಬರುವುದು ನಮಗಿಂದೇ ಬರಲಿ ಇಂದು ಬರುವುದು ನಮಗೀಗಲೇ ಬರಲಿ ಆಗೀಗ ಎನ್ನದಿರು ಚೆನ್ನಮಲ್ಲಿಕಾರ್ಜುನ ೩೧೨. ಕಿಡಿಕಿಡಿ ಕಾರಿದರೆನಗೆ ಹಸಿವು ತೃಷೆ ಅಡಗಿತ್ತೆಂಬೆ ಸಮುದ್ರ ಮೇರೆದಪ್ಪಿದರೆ ಎನಗೆ ಮಜ್ಜನವ ನೀಡಿದರೆಂಬೆ ಮುಗಿಲು ಹರಿದುಬಿದ್ದರೆ ಎನಗೆ ಪುಷ್ಪದ ಅರಳೆಂಬೆ ಶಿರ ಹೋದರೆ ಚೆನ್ನಮಲ್ಲಿಕಾರ್ಜುನದೇವಂಗೆ ಅರ್ಪಿತವೆಂಬೆ ೩೧೩. ಹಿಂಡನಗಲಿ ಹಿಡಿವಡೆದ ಕುಂಜರ ತನ್ನ ವಿಂಧ್ಯವ ನೆನೆವಂತೆ ನೆನೆವೆನೆಯ್ಯ ! ಬಂಧನಕ್ಕೆ ಬಂದ ಗಿಳಿ ತನ್ನ ಬಂಧುವ ನೆನೆವಂತೆ ನೆನೆವೆನೆಯ್ಯ ! ಕಂದ, ನೀನಿತ್ತ ಬಾ ಎಂದು ನೀವು ನಿಮ್ಮಂದವ ತೋರಯ್ಯ ಚೆನ್ನಮಲ್ಲಿಕಾರ್ಜುನ ೩೧೪. ಉದಯದಲೆದ್ದು ನಿಮ್ಮ ನೆನೆವೆನಯ್ಯ ನಿಮ್ಮ ಬರವ ಹಾರುತಿರ್ಪೆನಯ್ಯ ಹಸೆ ಹಂದರವನಿಕ್ಕಿ ನಿಮ್ಮಡಿಗಳಿಗೆಡೆಮಾಡಿಕೊಂಡಿಪ್ಪೆನಯ್ಯಾ ಚೆನ್ನಮಲ್ಲಿಕಾರ್ಜುನ, ನೀನಾವಾಗ ಬಂದಹೆಯೆಂದು ೩೧೫. ಗಿರಿಯಲಲ್ಲದೆ ಹುಲುಮೊರಡಿಯಲಾಡುವುದೇ ನವಿಲು? [ಕೊಳನನಲ್ಲದೆ] ಕಿರುವಳ್ಳಕೆಳಸುವುದೇ ಹಂಸ? ಮಾಮರ ತಳಿತಲ್ಲದೇ ಸ್ವರಗೈಯುವುದೇ ಕೋಗಿಲೆ? ಪರಿಮಳವಿಲ್ಲದ ಪುಷ್ಪಕೆಳಸುವುದೇ ಭ್ರಮರ? ಎನ್ನ ಜೀವ ಚೆನ್ನಮಲ್ಲಿಕಾರ್ಜುನಗ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತೋರಾ

ಅಕ್ಕನ ವಚನಗಳು - 291 ರಿಂದ 300 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೯೧. ಹುಟ್ಟು-ಹೊರೆಯ ಕಟ್ಟಳೆಯ ಕಳೆದನವ್ವ ಹೊನ್ನು-ಮಣ್ಣಿನ ಮಾಯೆಯ ಮಾಣಿಸಿದನವ್ವ ಎನ್ನ ತನುವಿನ ಲಜ್ಜೆಯನಿಳುಹಿ ಎನ್ನ ಮನದ ಕತ್ತಲೆಯ ಕಳೆದ ಚೆನ್ನಮಲ್ಲಿಕಾರ್ಜುನಯ್ಯನ ಒಳಗಾದವಳನೇನೆಂದು ನುಡಿಯಿಸುವಿರವ್ವ ೨೯೨. ಕಾಯದ ಕಳವಳವ ಕೆಡಿಸಿ ಮನದ ಮಾಯೆಯ ಮಾಣಿಸಿ ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯ ಶಿವಶಿವಾ ಎನ್ನ ಬಂಧನವ ಬಿಡಿಸಿ ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯ ಇರುಳೋಸರಿಸದ ಜಕ್ಕವಕ್ಕಿಯಂತೆ ನಾನಿಂದು ನಿಮ್ಮ ಶ್ರೀಪಾದವನಿಂಬುಗೊಂಡು ಸುಖದೊಳಗೋಲಾಡುವೆನಯ್ಯ ಚೆನ್ನಮಲ್ಲಿಕಾರ್ಜುನ ೨೯೩. ಅಯ್ಯ, ನೀನೆನ್ನ ಮೊರೆಯನಾಲಿಸಿದೊಡಾಲಿಸು ಆಲಿಸದಿರ್ದೊಡೆ ಮಾಣು ಅಯ್ಯ, ನೀನೆನ್ನ ದುಃಖವ ನೋಡಿದೊಡೆ ನೋಡು ನೋಡದಿರ್ದೊಡೆ ಮಾಣು ಎನಗಿದು ವಿಧಿಯೆ?! ನೀನೊಲ್ಲದೊಡೆ ನಾನೊಲಿಸುವ ಪರಿಯೆಂತಯ್ಯ? ಮಾನವಳಿಸಿ ಮಾರುವೋಗಿ ಮರೆವೊಕ್ಕೊಡೆ ಕೊಂಬ ಪರಿಯೆಂತಯ್ಯ ಚೆನ್ನಮಲ್ಲಿಕಾರ್ಜುನ ೨೯೪. ಮುಡಿ ಬಿಟ್ಟು ಮೊಗ ಬಾಡಿ ತನು ಕರಗಿದವಳ ಎನ್ನನೇಕೆ ನುಡಿಸುವಿರಿ ಎಲೆ ಅಣ್ಣಗಳಿರಾ? ಎನ್ನನೇಕೆ ಕಾಡುವಿರಿ ಎಲೆ ತಂದೆಗಳಿರಾ? ಬಲುಹಳಿದು, ಭವಗೆಟ್ಟು ಛಲವಳಿದು ಭಕ್ತೆಯಾಗಿ ಚೆನ್ನಮಲ್ಲಿಕ