Skip to main content

ಬಸವಣ್ಣನ ವಚನಗಳು - 1 ರಿಂದ 10 ರವರೆಗೆ

ಬಸವಣ್ಣನ ವಚನಗಳು - 1 ರಿಂದ 10 ರವರೆಗೆ


೧.
ಉದಕದೊಳಗೆ ಬೈಚಿಟ್ಟ
ಬೈಕೆಯ ಕಿಚ್ಚಿನಂತೆ ಇದ್ದಿತ್ತು;
ಸಸಿಯೊಳಗಣ
ರಸದ ರುಚಿಯಂತೆ ಇದ್ದಿತ್ತು;
ನನೆಯೊಳಗಣ
ಪರಿಮಳದಂತೆ ಇದ್ದಿತ್ತು;
ಕೂಡಲಸಂಗಮದೇವರ ನಿಲವು
ಕನ್ನೆಯ ಸ್ನೇಹದಂತೆ ಇದ್ದಿತ್ತು.
೨.
ಕಾಳಿಯ ಕಂಕಾಳದಿಂದ ಮುನ್ನ
ತ್ರಿಪುರ ಸಂಹಾರದಿಂದ ಮುನ್ನ
ಹರಿವಿರಿಂಚಿಗಳಿಂದ ಮುನ್ನ
ಉಮೆಯ ಕಲ್ಯಾಣದಿಂದ ಮುನ್ನ
ಮುನ್ನ, ಮುನ್ನ, ಮುನ್ನ,
ಅಂದಂದಿಗೆ ಎಳೆಯ ನೀನು, ಹಳೆಯ ನಾನು
ಮಹಾದಾನಿ ಕೂಡಲಸಂಗಮದೇವ.
೩.
ಅಯ್ಯಾ, ನೀನು ನಿರಾಕಾರವಾದಲ್ಲಿ
ನಾನು ಜ್ಞಾನವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ನಾಂಟ್ಯಕ್ಕೆ ನಿಂದಲ್ಲಿ
ನಾನು ಚೈತನ್ಯವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ಸಾಕಾರವಾಗಿದ್ದಲ್ಲಿ
ನಾನು ವೃಷಭನೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು
ಜಂಗಮಲಾಂಛನವಾಗಿ ಬಂದಲ್ಲಿ
ನಾನು ಭಕ್ತನೆಂಬ ವಾಹನವಾಗಿದ್ದೆ ಕಾಣಾ ಕೂಡಲಸಂಗಮದೇವ.
೪.
ಕರಿ ಘನ, ಅಂಕುಶ ಕಿರಿದೆನ್ನಬಹುದೆ ? ಬಾರದಯ್ಯ!
ಗಿರಿ ಘನ, ವಜ್ರ ಕಿರಿದೆನ್ನಬಹುದೆ ? ಬಾರದಯ್ಯ!
ತಮಂಧ ಘನ, ನಿಮ್ಮ ನೆನೆವ ಮನ ಕಿರಿದೆನ್ನಬಹುದೆ ? ಬಾರದಯ್ಯ!
ಮರಹು ಘನ, ನಿಮ್ಮ ನೆನೆವ ಮನ ಕಿರಿದೆನ್ನಬಹುದೆ ? ಬಾರದಯ್ಯ!
ಕೂಡಲಸಂಗಮದೇವ.
೫.
ಸಂಸಾರಸಾಗರದ ತೆರೆ ಕೊಬ್ಬಿ
ಮುಖದ ಮೇಲೆ ಅಲೆವುತ್ತಿದೆ ನೋಡಾ!
ಸಂಸಾರಸಾಗರ ಉರದುದ್ದವೇ ಹೇಳಾ ?
ಸಂಸಾರಸಾಗರ ಕೊರಲುದ್ದವೇ ಹೇಳಾ ?
ಸಂಸಾರಸಾಗರ ಶಿರದುದ್ದವಾದ ಬಳಿಕ ಏನ ಹೇಳುವೆನಯ್ಯ ?
ಅಯ್ಯ; ಅಯ್ಯ, ಎನ್ನ ಹುಯ್ಯಲ ಕೇಳಯ್ಯ!
ಕೂಡಲಸಂಗಮದೇವ, ನಾನೇವೆನೇವೆನಯ್ಯ!
೬.
ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯ,
ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು.
ಇನ್ನೆಂದಿಂಗೆ ಮೋಕ್ಷವಹುದೋ ?! ಕೂಡಲಸಂಗಮದೇವ.
೭.
ನಾನೊಂದ ನೆನೆದರೆ, ತಾನೊಂದ ನೆನೆವುದು;
ನಾನಿತ್ತಲೆಳೆದರೆ, ತಾನತ್ತಲೆಳೆವುದು;
ತಾ ಬೇರೆ ಎನ್ನನಳಲಿಸಿ ಕಾಡಿತ್ತು;
ತಾ ಬೇರೆ ಎನ್ನ ಬಳಲಿಸಿ ಕಾಡಿತ್ತು;
ಕೂಡಲಸಂಗನ ಕೂಡಿಹೆನೆಂದರೆ
ತಾನೆನ್ನ ಮುಂದುಗೆಡಿಸಿತ್ತು ಮಾಯೆ.
೮.
ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ,
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ,
ಕೂಟಕ್ಕೆ ಸ್ತ್ರಿಯಾಗಿ ಕೂಡಿದಳು ಮಾಯೆ,
ಇದಾವಾವ ಪರಿಯಲ್ಲು ಕಾಡಿತ್ತು ಮಾಯೆ.
ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೇ ಬಲ್ಲಿರಿ ಕೂಡಲಸಂಗಮದೇವ.
೯.
ಇಂದಿಂಗೆಂತು ನಾಳಿಂಗೆಂತೆಂದು
ಬೆಂದೊಡಲ ಹೊರೆಯ ಹೋಯಿತ್ತೆನ್ನ ಸಂಸಾರ!
ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲ!
ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲ!
ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ
ಕೊಂದಹುದೀ ಮಾಯೆ ಕೂಡಲಸಂಗಮದೇವ!
೧೦.
ಆಸತ್ತೆನಲಸಿದೆನೆಂದರೆ ಮಾಣದು,
ಬೇಸತ್ತೆ ಬೆಂಬಿದ್ದೆನೆಂದರೆ ಮಾಣದು,
ಏವೆನೇವೆನೆಂದರೆ ಮಾಣದು-
ಕಾಯದ ಕರ್ಮದ ಫಲಭೋಗವು.
ಕೂಡಲಸಂಗನ ಶರಣರು ಬಂದು
"ಹೋ ಹೋ ಅಂಜದಿರಂಜದಿರು" ಎಂದರಾನು ಬದುಕುವೆನು.

Comments

  1. ಆತ್ಮೀಯ
    ವಚನಗಳನ್ನು ಅ೦ತರ್ಜಾಲದಲ್ಲಿ ಪೇರಿಸಿರುವುದು ಸ೦ತೋಷದ ವಿಷಯ. ಅದರ ಜೊತೆಗೆ ಪ್ರತಿಯೊ೦ದು ವಚನದ ಸಾರವನ್ನೂ ವಿವರಿಸಿದ್ದರೆ ಚರ್ಚೆಗಳಿಗೆ ಮತ್ತು ಜ್ಞಾನವ್ರುದ್ಧಿಗೆ ಸಹಾಯವಾಗುತ್ತಿತ್ತು. ನಿಮ್ಮ ಪ್ರಯತ್ನಕ್ಕೆ ಮೆಚ್ಚತಕ್ಕದ್ದು.
    ಮು೦ದುವರೆಯಲಿ ನಿಮ್ಮ ವಚನಗಳ ಅಭಿಯಾನ
    ನಿಮ್ಮವ
    ಹರಿ

    ReplyDelete
  2. ಪ್ರಿಯ ಗೆಳೆಯ ನಿಮ್ಮ ಟಿಪ್ಪಣಿಗೆ ಧನ್ಯವಾದಗಳು.
    ನಿಮ್ಮ ಗೆಳೆಯರನು ಆಹ್ವಾನಿ ಕನ್ನಡ ಉಳಿಸಲು ಪ್ರೋಸಹಿಸು
    ಧನ್ಯವಾದಗಳು.

    ReplyDelete

Post a Comment

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...