Skip to main content

ಬಸವಣ್ಣನ ವಚನಗಳು - 11 ರಿಂದ 20 ರವರೆಗೆ

ಬಸವಣ್ಣನ ವಚನಗಳು - 11 ರಿಂದ 20 ರವರೆಗೆ

೧೧.
ಸಂಸಾರವೆಂಬ ಸರ್ಪ ಮುಟ್ಟಲು
ಪಂಚೇಂದ್ರಿಯವಿಷಯವೆಂಬ
ವಿಷದಿಂದಾನು ಮುಂದುಗೆಟ್ಟೆನಯ್ಯ,
ಆನು ಹೊರಳಿ ಬೀಳುತ್ತಿದ್ದೆನಯ್ಯ;
"ಓಂ ನಮಶ್ಶಿವಾಯ" ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ
ಕೂಡಲಸಂಗಮದೇವ.
೧೨.
ಎಂದೋ, ಸಂಸಾರದ ದಂದುಗ ಹಿಂಗುವುದೆನಗೆಂದೋ ?
ಮನದಲ್ಲಿ ಪರಿಣಾಮವಹುದೆನಗಿನ್ನೆಂದೊ ?
ಕೂಡಲಸಂಗಮದೇವಾ ಇನ್ನೆಂದೋ
ಪರಮಸಂತೋಷದಲಿಹುದೆನಗೆಂದೋ ?
೧೩.
ಕಾಲಲಿ ಕಟ್ಟಿದ ಗುಂಡು, ಕೊರಳಲಿ ಕಟ್ಟಿದ ಬೆಂಡು!
ತೇಲಲೀಯದು ಗುಂಡು, ಮುಳುಗಲೀಯದು ಬೆಂಡು!
ಇಂತಪ್ಪ ಸಂಸಾರಶರಧಿಯ ದಾಂಟಿಸಿ
ಕಾಲಾಂತಕನೇ ಕಾಯೋ, ಕೂಡಲಸಂಗಯ್ಯ!
೧೪.
ಲೇಸ ಕಂಡು ಮನ ಬಯಸಿ ಬಯಸಿ
ಆಶೆ ಮಾಡಿದರಿಲ್ಲ ಕಂಡಯ್ಯ.
ತಾಳಮರಕ್ಕೆ ಕೈಯ್ಯ ನೀಡಿ, ಮೇಲ ನೋಡಿ
ಗೋಣು ನೊಂದುದಯ್ಯ.
ಕೂಡಲಸಂಗಮದೇವ ಕೇಳಯ್ಯ
ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯ.
೧೫.
ಚಂದ್ರೋದಯಕ್ಕೆ ಅಂಬುಧಿ ಹೆಚ್ಚುವುದಯ್ಯ.
ಚಂದ್ರ ಕುಂದೆ ಕುಂದುವುದಯ್ಯ,
ಚಂದ್ರಂಗೆ ರಾಹು ಅಡ್ಡ ಬಂದಲ್ಲಿ
ಅಂಬುಧಿ ಬೊಬ್ಬಿಟ್ಟಿತ್ತೇ ಅಯ್ಯ ?
ಅಂಬುಧಿಯ ಮುನಿ ಆಪೋಶನವ ಕೊಂಡಲ್ಲಿ
ಚಂದ್ರಮನಡ್ಡ ಬಂದನೆ ಅಯ್ಯ ?
ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ
ಜಗದ್ ನಂಟ ನೀನೇ ಅಯ್ಯ ಕೂಡಲಸಂಗಮದೇವ.
೧೬.
ಒಲೆ ಹತ್ತಿ ಉರಿದರೆ ನಿಲ ಬಹುದಲ್ಲದೆ
ಧರೆ ಹತ್ತಿ ಉರಿದರೆ ನಿಲ ಬಾರದು.
ಏರಿ ನೀರುಂಬಡೆ, ಬೇಲಿ ಕೈಯ ಮೇವಡೆ
ನಾರಿ ತನ್ನ ಮನೆಯಲ್ಲಿ ಕಳುವಡೆ
ತಾಯ ಮೊಲೆವಾಲು ನಂಜಾಗಿ ಕೊಲುವಡೆ
ಇನ್ನಾರಿಗೆ ದೂರುವೆ
ತಂದೆ ಕೂಡಲಸಂಗಮದೇವ
ನೀ ಹುಟ್ಟಿಸಿ ಜೀವನ ಭವದುಃಖಿಯ ಮಾಡಿದ ಬಳಿಕ.
ಬಿಡಿಸುವರಾರುಂಟು ?
೧೭.
ಎನ್ನ ಚಿತ್ತವು ಅತ್ತಿಯ ಹಣ್ಣು ನೋಡಯ್ಯ,
ವಿಚಾರಿಸಿದರೇನು ಹುರುಳಿಲ್ಲವಯ್ಯ.
ಪ್ರಪಂಚಿನ ಡಂಬಿನಲ್ಲಿ ಎನ್ನನೊಂದು ರೂಹುಮಾಡಿ
ನೀವಿರಿಸಿದಿರಯ್ಯ ಕೂಡಲಸಂಗಮದೇವ.
೧೮.
ಮುಂಗಯ್ಯ ಕಂಕಣಕೆ ಕನ್ನಡಿಯ ತೋರುವಂತೆ
ಎನ್ನ ಮನ ನಿಧಾನವನೊಲ್ಲದೆ ಜರಗ ಮೆಚ್ಚಿತ್ತು ನೋಡಾ
ನಾಯಿಗೆ ನಾರಿವಾಣವಕ್ಕುವುದೆ ? ಕೂಡಲಸಂಗಮದೇವ.
೧೯.
ಎನ್ನ ಮನವೆಂಬ ಮರ್ಕಟನು
ತನುವಿಕಾರವೆಂಬ ಅಲ್ಪಸುಖದಾಸೆ ಮಾಡಿ,
ವೃಥಾ ಭ್ರಮಣಗೊಂಡು, ನಾನಾ ದೆಸೆಗೆ ಲಂಘಿಸಿ
ಅಳಲಿಸಿ ಬಳಲಿಸುತ್ತಿದೆ ನೋಡಾ!
ಕೂಡಲಸಂಗಮದೇವರೆಂಬ ವೃಕ್ಷಕ್ಕೆ ಲಂಘಿಸಿ
ಅಪರಿಮಿತ ಸುಖವನೆಯ್ದದು ನೋಡಾ!
೨೦.
ಕೊಂಬೆಯ ಮೇಲಣ ಮರ್ಕಟನಂತೆ
ಲಂಘಿಸುವುದೆನ್ನ ಮನವು
ನಿಂದಲ್ಲಿ ನಿಲಲೀಯದೆನ್ನ ಮನವು
ಹೊಂದಿದಲ್ಲಿ ಹೊಂದಲೀಯದೆನ್ನ ಮನವು
ಕೂಡಲಸಂಗಮದೇವಾ
ನಿಮ್ಮ ಚರಣ ಕಮಲದಲ್ಲಿ ಭ್ರಮರನಾಗಿರಿಸು ನಿಮ್ಮ ಧರ್ಮ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...