Skip to main content

ಬಸವಣ್ಣನ ವಚನಗಳು - 31 ರಿಂದ 40 ರವರೆಗೆ

ಬಸವಣ್ಣನ ವಚನಗಳು - 31 ರಿಂದ 40 ರವರೆಗೆ
೩೧.
ಆನು ಒಬ್ಬನು; ಸುಡುವರೈವರು.
ಮೇಲೆ ಕಿಚ್ಚು ಘನ, ನಿಲಲು ಬಾರದು.
ಕಾಡುಬಸವನ ಹುಲಿ ಕೊಂಡೊಯ್ದರೆ
ಆರೈಯಲಾಗದೆ ಕೂಡಲಸಂಗಮದೇವ ?
೩೨.
ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ,
ತಿಳಿಯಲೀಯದು; ಎಚ್ಚರಲೀಯದು.
ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯ ಲಿಂಗತಂದೆ.
ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ.
೩೩.
ವಿಷಯವೆಂಬ ಹಸುರನೆನ್ನ ಮುಂದೆ ತಂದು
ಪಸರಿಸಿದೆಯಯ್ಯ;
ಪಶುವೇನ ಬಲ್ಲುದು ಹಸುರೆಂದೆಳಸುವುದು
ವಿಷಯರಹಿತನ ಮಾಡಿ, ಭಕ್ತಿರಸವ ದಣಿಯ ಮೇಯಿಸಿ
ಸುಬುದ್ಧಿಯೆಂಬುದಕವನೆರೆದು ನೋಡಿ ಸಲಹಯ್ಯ
ಕೂಡಲಸಂಗಮದೇವ.
೩೪.
ಅಯ್ಯ, ಎಳಗರು ತಾಯನರಸಿ ಬಳಲುವಂತೆ
ಅಯ್ಯ, ನಿಮ್ಮನರಸಿ ಬಳಲುತ್ತಿದ್ದೇನೆ,
ಅಯ್ಯ, ನೀವೆನ್ನ ಮನಕ್ಕೆ ಪ್ರಸನ್ನವ ಮಾಡಿ
ಕಾರುಣ್ಯವ ಮಾಡಿರಯ್ಯ!
ನೀವೆನ್ನ ಮನಕ್ಕೆ ನೆಲೆವನೆಯಾಗಿ ಕಾರುಣ್ಯವ ಮಾಡಿರಯ್ಯ!
ನೀವಿನಿತು ಲೇಸನೀಯಯ್ಯ, ಅಂಬೇ, ಅಂಬೇ,
ಕೂಡಲಸಂಗಮದೇವ!
೩೫.
ಕೆಸರಲ್ಲಿ ಬಿದ್ದ ಪಶುವಿನಂತೆ
ಅನು ದೆಸೆದೆಸೆಗೆ ಬಾಯ ಬಿಡುತಿದ್ದೇನಯ್ಯ
ಅಯ್ಯಾ, ಆರೈವರಿಲ್ಲ--
"ಅಕಟಕಟಾ! ಪಶು" ವೆಂದೆನ್ನ
ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ.
೩೬.
ಬಡಪಶು ಪಂಕದಲ್ಲಿ ಬಿದ್ದರೆ
ಕಾಲ ಬಡಿವುದಲ್ಲದೆ, ಬೇರೆ ಗತಿಯುಂಟೆ ?
ಶಿವ ಶಿವಾ! ಹೋದಹೆ, ಹೋದಹೆನಯ್ಯ!
ನಿಮ್ಮ ಮನದೆತ್ತಲೆನ್ನ ತೆಗೆಯಯ್ಯ
ಪಶುವಾನು, ಪಶುಪತಿ ನೀನು.
ತುಡುಗುಣಿಯೆಂದೆನ್ನ ಹಿಡಿದು ಬಡಿಯದ ಮುನ್ನ.
ಒಡೆಯ, ನಿಮ್ಮ ಬಯ್ಯದಂತೆ ಮಾಡು
ಕೂಡಲಸಂಗಮದೇವ.
೩೭.
ಬಲೆಗೆ ಸಿಕ್ಕಿದ ಮೃಗದಂತೆ ನಾನಯ್ಯ.
ಮರಿದಪ್ಪಿದ ಹುಲ್ಲೆಯಂತೆ
ದೆಸೆದೆಸೆಗೆ ಬಾಯ ಬಿಡುತಿರುವೆನಯ್ಯ,
ನಾನಾರ ಸಾರುವೆನಯ್ಯ.
ತಾಯಾಗಿ ತಂದೆಯಾಗಿ ನೀನೇ, ಸಕಲ ಬಂಧುಬಳಗವು ನೀನೆ
ಕೂಡಲಸಂಗಮದೇವ.
೩೮.
ಸಮುದ್ರದೊಳಗಣ ಸಿಂಪಿನಂತೆ ಬಾಯ ಬಿಡುತಿದ್ದೇನಯ್ಯ!
ನೀವಲ್ಲದೆ ಮತ್ತಾರೂ ಎನ್ನನರಿವರಿಲ್ಲ ನೋಡಯ್ಯ!
ಕೂಡಲಸಂಗಮದೇವ, ನೀನಲ್ಲದೊಳಕೊಂಬವರಿಲ್ಲವಯ್ಯ.
೩೯.
ನೀ ಹುಟ್ಟಿಸಿದಲ್ಲಿ ಹುಟ್ಟಿ, ನೀ ಕೊಂದಲ್ಲಿ ಸಾಯದೆ
ಎನ್ನ ವಶವೇ ಅಯ್ಯ ?
ನೀನಿರಿಸಿದಲ್ಲಿ ಇರದೆ ಎನ್ನ ವಶವೇ ಅಯ್ಯ.
ಅಕಟಕಟಾ ಎನ್ನವನೆನ್ನವನೆನ್ನಯ್ಯ ಕೂಡಲಸಂಗಮದೇವಯ್ಯ.
೪೦.
ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ
ಸಲಹುತ್ತ, "ಶಿವಶಿವಾ" ಎಂದೋದಿಸಯ್ಯ.
ಭಕ್ತಿ ಎಂಬ ಪಂಜರದೊಳಗಿಕ್ಕಿ ಸಲಹು ಕೂಡಲಸಂಗಮದೇವ.

Comments

  1. ಒಳ್ಳೆಯ ಕೆಲಸ್ ಮಾಡಿದ್ದಿರ, ನಾಗ, ಇಂದಿನ ಜಾಗತೀಕರಣದ ಬಿರುಗಾಳಿಯಲ್ಲಿ ನಮ್ಮವರ ನೆನಪನ್ನು ಮತ್ತು ಅವರ ವಚನಗಳನ್ನು ಉಳಿಸಿಕೊಂಡ ಹೋಗಬೇಕು ಅಂದ್ರೆ, ಇಂತಹ ಕೆಲಸಗಳಾಗಬೇಕು.......

    ReplyDelete
  2. ಪ್ರಿಯ ಗೆಳೆಯ ನಿಮ್ಮ ಟಿಪ್ಪಣಿಗೆ ಧನ್ಯವಾದಗಳು.
    ನಿಮ್ಮ ಗೆಳೆಯರನು ಆಹ್ವಾನಿ ಕನ್ನಡ ಉಳಿಸಲು ಪ್ರೋಸಹಿಸು
    ಧನ್ಯವಾದಗಳು.

    ReplyDelete
  3. Tumba tumba olle kelasa..
    Ondu manavi..salpa kashtavaada vachanagalige aara saaramshavannoo kooda haakidare.. vachanavannu aaswaadisalu innoo anukoolavaaguthade..

    ReplyDelete
  4. ok sure friend
    let me try
    keep on visiting

    ReplyDelete

Post a Comment

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...