Skip to main content

ಬಸವಣ್ಣನ ವಚನಗಳು - 61 ರಿಂದ 70 ರವರೆಗೆ

ಬಸವಣ್ಣನ ವಚನಗಳು - 61 ರಿಂದ 70 ರವರೆಗೆ 
೬೧.
ಓಡೆತ್ತ ಬಲ್ಲುದೋ ಅವಲಕ್ಕಿಯ ಸವಿಯ ?
ಕೋಡಗ ಬಲ್ಲುದೇ ಸೆಳೆಮಂಚದ ಸುಖವ ?
ಕಾಗೆ ನಂದನವನದೊಳಗಿದ್ದರೇನು,
ಕೋಗಿಲೆಯಾಗಬಲ್ಲುದೇ ?
ಕೊಳನ ತಡಿಯಲೊಂದು ಹೊರಸು ಕುಳಿತಿದ್ದರೇನು
ಕಳಹಂಸೆಯಾಗಬಲ್ಲುದೇ ಕೂಡಲಸಂಗಮದೇವ ?
೬೨.
ಎನಿಸು ಕಾಲ ಕಲ್ಲು ನೀರೊಳಗಿದ್ದರೇನು,
ನೆನೆದು ಮೃದುವಾಗಬಲ್ಲುದೆ ?
ಎನಿಸುಕಾಲ ನಿಮ್ಮ ಪೂಜಿಸಿ ಏವೆನಯ್ಯಾ
ಮನದಲ್ಲಿ ದೃಢವಿಲ್ಲದನ್ನಕ ?
ನಿಧಾನವ ಕಾಯ್ದಿದ್ದ ಬೆಂತರನ ವಿಧಿ ಎನಗಾಯಿತ್ತು
ಕಾಣಾ ಕೂಡಲಸಂಗಮದೇವ.
೬೩.
ಕೂಸುಳ್ಳ ಸೂಳೆ ಧನದಾಸೆಗೊತ್ತೆಗೊಂಡರೆ
ಕೂಸಿಂಗಿಲ್ಲ, ಬೊಜಗಂಗಿಲ್ಲ;
ಕೂಸನೊಮ್ಮೆ ಸಂತವಿಡುವಳು,
ಬೊಜಗನನೊಮ್ಮೆ ನೆರೆವಳು;
ಧನದಾಸೆ ಬಿಡದು ಕೂಡಲಸಂಗಮದೇವ.
೬೪.
ಎರದೆಲೆಯಂತೆ ಒಳಗೊಂದು ಹೊರಗೊಂದಾದರೆ
ಮೆಚ್ಚುವನೆ ?
ತಾನು ತನ್ನಂತೆ!
ನುಡಿ ಎರಡಾದರೆ ಮೆಚ್ಚುವನೆ ?
ತಾನು ತನ್ನಂತೆ!
ನಡೆ ಎರಡಾದರೆ ಮೆಚ್ಚುವನೆ ?
ತಾನು ತನ್ನಂತೆ!
ಉಡುವಿನ ನಾಲಗೆಯಂತೆ ಎರಡಾದರೆ ಮೆಚ್ಚುವನೇ ?
ಕೂಡಲಸಂಗಮದೇವ ತಾನು ತನ್ನಂತೆ!
೬೫.
ಭಕ್ತರ ಕಂಡರೆ ಬೋಳಪ್ಪಿರಯ್ಯ;
ಸವಣರ ಕಂಡರೆ ಬತ್ತಲೆಯಪ್ಪಿರಯ್ಯ
ಹಾರುವರ ಕಂಡರೆ ಹರಿನಾಮವೆಂಬಿರಯ್ಯ;
ಅವರವರ ಕಂಡರೆ ಅವರವರಂತೆ
ಸೂಳೆಗೆ ಹುಟ್ಟಿದವರ ತೋರದಿರಯ್ಯ.
ಕೂಡಲಸಂಗಯ್ಯನ ಪೂಜಿಸಿ ಅನ್ಯದೈವಂಗಳಿಗೆರಗಿ
ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯ!
೬೬.
ಗಂಡ ಶಿವಲಿಂಗದೇವರ ಭಕ್ತ,
ಹೆಂಡತಿ ಮಾರಿಮಸಣಿಯ ಭಕ್ತೆ;
ಗಂಡ ಕೊಂಬುದು ಪಾದೋದಕಪ್ರಸಾದ,
ಹೆಂಡತಿ ಕೊಂಬುದು ಸುರೆಮಾಂಸ.
ಭಾಂಡ-ಭಾಜನ ಶುದ್ಧವಿಲ್ಲದವರ ಭಕ್ತಿ
ಹೆಂಡದ ಮಡಕೆಯ ಹೊರಗೆ ತೊಳೆದಂತೆ
ಕೂಡಲಸಂಗಮದೇವ.
೬೭.
ಹಾವಾಡಿಗನು, ಮೂಕೊರತಿಯು ತನ್ನ ಮಗನ ಮದುವೆಗೆ
ಶಕುನವ ನೋಡ ಹೋಗುವಾಗ,
ಇದಿರಲೊಬ್ಬ ಮೂಕೊರತಿಯ ಹಾವಾಡಿಗನ ಕಂಡು
ಶಕುನ ಹೊಲ್ಲವೆಂಬ ಚದುರನ ನೋಡಾ!
ತನ್ನ ಸತಿ ಮೂಕೊರತಿ, ತನ್ನ ಕೈಯಲು ಹಾವು!
ತಾನು ತನ್ನ ಭಿನ್ನವನರಿಯದೆ
ಅನ್ಯರನೆಂಬ ಕುನ್ನಿಯನೇನೆಂಬೆ ಕೂಡಲಸಂಗಮದೇವ!
೬೮.
ಅರ್ಥರೇಖೆಯಿದ್ದಲ್ಲಿ ಫಲವೇನು
ಆಯುಷ್ಯರೇಖೆಯಿಲ್ಲದನ್ನಕ ?
ಹಂದೆಯ ಕೈಯಲ್ಲಿ ಚಂದ್ರಾಯುಧವಿದ್ದು ಫಲವೇನು ?
ಅಂಧಕನ ಕೈಯಲ್ಲಿ ದರ್ಪಣವಿದ್ದು ಫಲವೇನು ?
ಮರ್ಕಟನ ಕೈಯಲ್ಲಿ ಮಾಣಿಕ್ಯವಿದ್ದು ಫಲವೇನು ?
ನಮ್ಮ ಕೂಡಲಸಂಗನ ಶರಣರನರಿಯದವರ ಕೈಯಲ್ಲಿ
ಲಿಂಗವಿದ್ದು ಫಲವೇನು ಶಿವಪಥವನರಿಯದನ್ನಕ ?
೬೯.
ಗಂಡನ ಮೇಲೆ ಸ್ನೇಹವಿಲ್ಲದ ಹೆಂಡತಿ,
ಲಿಂಗದ ಮೇಲೆ ನಿಷ್ಠೆಯಿಲ್ಲದ ಭಕ್ತ,
ಇದ್ದರೇನೋ, ಶಿವಶಿವಾ, ಹೋದರೇನೋ!
ಕೂಡಲ ಸಂಗಮ ದೇವ, ಕೇಳಯ್ಯ,
ಊಡದ ಆವಿಂಗೆ ಉಣ್ಣದ ಕರುವ ಬಿಟ್ಟಂತೆ!
೭೦.
ಹಾದರಕ್ಕೆ ಹೋದರೆ ಕಳ್ಳದಮ್ಮವಾಯಿತ್ತು!
ಹಾಳುಗೋಡೆಗೆ ಹೋದರೆ ಚೇಳೂರಿತ್ತು!
ಅಬ್ಬರವ ಕೇಳಿ ತಳವಾರನುಟ್ಟ ಸೀರೆಯ ಸುಲಿದ!
ನಾಚಿ ಹೋದರೆ, ಮನೆಯ ಗಂಡ ಬೆನ್ನ ಬಾರನೆತ್ತಿದ!
ಅರಸು ಕೂಡಲಸಂಗಮದೇವ ದಂಡವ ಕೊಂಡ!

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...