Skip to main content

ಬಸವಣ್ಣನ ವಚನಗಳು - 71 ರಿಂದ 80 ರವರೆಗೆ

ಬಸವಣ್ಣನ ವಚನಗಳು - 71 ರಿಂದ 80 ರವರೆಗೆ
೭೧.
ಅಳೆಯುತ್ತ ಅಳೆಯುತ್ತ ಬಳಲುವರಲ್ಲದೆ
ಕೊಳಗ ಬಳಲುವುದೇ ?
ನಡೆಯುತ್ತ ನಡೆಯುತ್ತ ಬಳಲುವರಲ್ಲದೆ, ಬಟ್ಟೆ ಬಳಲುವುದೆ ?
ಶ್ರವವ ಮಾಡುತ್ತ ಮಾಡುತ್ತ ಬಳಲುವರಲ್ಲದೆ
ಕೋಲು ಬಳಲುವುದೆ ?
ನಿಜವನರಿಯದ ಭಕ್ತ ಬಳಲುವನಲ್ಲದೆ, ಲಿಂಗ ಬಳಲುವುದೆ ?
ಕೂಡಲಸಂಗಮದೇವ, ಅರಸರಿಯದ ಬಿಟ್ಟಿಯೋಪಾದಿ!
೭೨.
ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ
ಹರದ ಕುಳ್ಳಿರ್ದ ನಮ್ಮ ಮಹದೇವಸೆಟ್ಟಿ.
ಒಮ್ಮನವಾದರೆ ಒಡನೆ ನುಡಿವನು;
ಇಮ್ಮನವಾದರೆ ನುಡಿಯನು.
ಕಾಣಿಯ ಸೋಲ; ಅರ್ಧ ಕಾಣಿಯ ಗೆಲ್ಲ.
ಜಾಣ ನೋಡವ್ವ ನಮ್ಮ ಕೂಡಲಸಂಗಮದೇವ.
೭೩.
ನಂಬರು, ನಚ್ಚರು; ಬರಿದೆ ಕರೆವರು;
ನಂಬಲರಿಯರೀ ಲೋಕದ ಮನುಜರು!
ನಂಬಿ ಕರೆದಡೆ, "ಓ" ಎನ್ನನೇ ಶಿವನು ?
ನಂಬದೆ, ನಚ್ಚದೆ ಬರಿದೆ ಕರೆವರ
ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ.
೭೪.
ಹುತ್ತವ ಬಡಿದರೆ ಉರಗ ಸಾವುದೆ
ಘೋರತಪವ ಮಾಡಿದರೇನು
ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ
ಕೂಡಲಸಂಗಮದೇವ ?
೭೫.
ಮೇರು ಗುಣವನರಸುವುದೇ ಕಾಗೆಯಲ್ಲಿ ?
ಪರುಷ ಗುಣವನರಸುವುದೇ ಕಬ್ಬುನದಲ್ಲಿ ?
ಸಾಧು ಗುಣವನರಸುವನೇ ಅವಗುಣಿಯಲ್ಲಿ ?
ಚಂದನ ಗುಣವನರಸುವುದೇ ತರುಗಳಲ್ಲಿ ?
ಸರ್ವಗುಣಸಂಪನ್ನ ಲಿಂಗವೇ,
ನೀನೆನ್ನಲ್ಲಿ ಅವಗುಣವನರಸುವುದೇ, ಕೂಡಲಸಂಗಮದೇವ!
೭೬
ಸಾರ, ಸಜ್ಜನರ ಸಂಗವ ಮಾಡುವುದು!
ದೂರ, ದುರ್ಜನರ ಸಂಗ ಬೇಡವಯ್ಯ!
ಆವ ಹಾವಾದರೇನು ? ವಿಷವೊಂದೆ!
ಅಂಥವರ ಸಂಗ ನಮಗೆ ಬೇಡವಯ್ಯ.
ಅಂತರಂಗಶುದ್ಧವಿಲ್ಲದವರ ಸಂಗ
ಸಿಂಗಿ ಕಾಳಕೂಟ ವಿಷವೋ ಕೂಡಲಸಂಗಯ್ಯ.
೭೭.
ಹಸಿದು ಎಕ್ಕೆಯ ಕಾಯ ಮೆಲಬಹುದೆ ?
ನೀರಡಸಿ ವಿಷವನೀಂಟಬಹುದೆ ?
ಸುಣ್ಣದ, ತುಯ್ಯಲ ಬಣ್ಣವೊಂದೆ ಎಂದರೆ
ನಂಟುತನಕ್ಕೆ ಉಣ್ಣಬಹುದೆ ?
ಲಿಂಗಸಾರಾಯ ಸಜ್ಜನರಲ್ಲದವರ
ಕೂಡಲಸಂಗಮ ದೇವರೆಂತೊಲಿವ!
೭೮.
ಎಲವದ ಮರ ಹೂತು ಫಲವಾದ ತೆರನಂತೆ
ಸಿರಿಯಾದರೇನು ಶಿವಭಕ್ತಿಯಿಲ್ಲದನ್ನಕ ?
ಫಲವಾದರೇನು, ಹೇಳಾ, ಹಾವುಮೆಕ್ಕೆಯ ಕಾಯಿ ?
ಕುಲವಿಲ್ಲದ ರೂಹು ಎಲ್ಲಿದ್ದರೇನು ?
ಬಚ್ಚಲ ನೀರು ತಿಳಿದಲ್ಲಿ ಫಲವೇನು ?
ಅವಗುಣಿಗಳ ಮೆಚ್ಚ ಕೂಡಲಸಂಗಮದೇವ.
೭೯.
ಗಿಳಿಯೋದಿ ಫಲವೇನು
ಬೆಕ್ಕು ಬಹುದ ಹೇಳಲರಿಯದು!
ಜಗವೆಲ್ಲವ ಕಾಂಬ ಕಣ್ಣು
ತನ್ನ ಕೊಂಬ ಕೊಯಿಲೆಯ ಕಾಣಲರಿಯದು!
ಇದಿರ ಗುಣವ ಬಲ್ಲೆವೆಂಬರು
ತಮ್ಮ ಗುಣವ ತಾವರಿಯರು ಕೂಡಲಸಂಗಮದೇವ.
೮೦.
ಲೋಕದ ಡೊಂಕ ನೀವೇಕೆ ತಿದ್ದುವಿರಿ ?
ನಿಮ್ಮ ನಿಮ್ಮ ತನವ ಸಂತೈಸಿಕೊಳ್ಳಿ;
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ.
ನೆರೆಮನೆಯ ದುಃಖಕ್ಕೆ ಅಳುವರ ಮೆಚ್ಚ
ನಮ್ಮ ಕೂಡಲಸಂಗಮದೇವ.

Comments

  1. Thumba valleya kelasa .. munduvaresi ...
    innu jasti vachanagalu barali ....

    inti,
    Vivek

    ReplyDelete
  2. Sure ನಿಮ್ಮ ಗೆಳೆಯರನು ಹಾಗು ಎಲ್ಲ ಕನ್ನಡಿಗರನು ಆಹ್ವಾನಸಿ !!!

    ReplyDelete

Post a Comment

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...