Skip to main content

ಬಸವಣ್ಣನ ವಚನಗಳು - 81 ರಿಂದ 90 ರವರೆಗೆ

ಬಸವಣ್ಣನ ವಚನಗಳು - 81 ರಿಂದ 90 ರವರೆಗೆ
೮೧.
ಏತ ತಲೆವಾಗಿದರೇನು ? ಗುರುಭಕ್ತನಾಗಬಲ್ಲುದೆ ?
ಇಕ್ಕುಳ ಕೈ ಮುಗಿದರೇನು ? ಭೃತ್ಯಾಚಾರಿಯಾಗಬಲ್ಲುದೆ ?
ಗಿಳಿಯೋದಿದರೇನು ? ಲಿಂಗವೇದಿಯಾಗಬಲ್ಲುದೆ ?
ಕೂಡಲಸಂಗನ ಶರಣರು ಬಂದ ಬರವ, ನಿಂದ ನಿಲವ
ಅನಂಗಸಂಗಿಗಳೆತ್ತ ಬಲ್ಲರು ?
೮೨.
ಒಲವಿಲ್ಲದ ಪೂಜೆ, ನೇಹವಿಲ್ಲದ ಮಾಟ;
ಆ ಪೂಜೆಯು, ಆ ಮಾಟವು
ಚಿತ್ರದ ರೂಹು ಕಾಣಿರಣ್ಣ!
ಚಿತ್ರದ ಕಬ್ಬು ಕಾಣಿರಣ್ಣ!
ಅಪ್ಪಿದರೆ ಸುಖವಿಲ್ಲ, ಮೆಲಿದರೆ ಸವಿಯಿಲ್ಲ;
ಕೂಡಲಸಂಗಮದೇವ, ನಿಜವಿಲ್ಲದವನ ಭಕ್ತಿಯಿಂತುಟು!
೮೩.
ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತ್ತು!
ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ
ಹೋಯಿತ್ತು!
ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು.
ಕೊಂದವರುಳಿದರೆ ಕೂಡಲಸಂಗಮದೇವ ?
೮೪.
ಹಾವಿನ ಬಾಯಿ ಕಪ್ಪೆ ಹಸಿದು
ತಾ ಹಾರುವ ನೊಣಕಾಸೆ ಮಾಡುವಂತೆ,
ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು
ಮೇಲಿನ್ನೇಸು ಕಾಲ ಬದುಕುವನೋ ?!
ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು
ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ.
೮೫.
ಅರತವಡಗದು. ಕ್ರೋಧ ತೊಲಗದು;
ಕ್ರೂರಕುಭಾಷೆ ಕುಹುಕ ಬಿಡದನ್ನಕ
ನೀನೆತ್ತಲು ? ಶಿವನೆತ್ತಲು ? ಹೋಗತ್ತ ಮರುಳೆ!
ಭವರೋಗವೆಂಬ ತಿಮಿರ ತಿಳಿಯದನ್ನಕ
ಕೂಡಲಸಂಗಯ್ಯನೆತ್ತ ? ನೀನೆತ್ತ ? ಮರುಳೇ!
೮೬.
ಹಾವು ತಿಂದವರ ನುಡಿಸ ಬಹುದು!
ಗರ ಹೊಡೆದವರ ನುಡಿಸ ಬಹುದು!
ಸಿರಿಗರ ಹೊಡೆದವರ ನುಡಿಸ ಬಾರದು ನೋಡಯ್ಯ!
ಬಡತನವೆಂಬ ಮಂತ್ರವಾದಿ ಹೋಗಲು
ಒಡನೆ ನುಡಿವರಯ್ಯ ಕೂಡಲಸಂಗಮದೇವ.
೮೭.
ಅರೆಭಕ್ತರಾದವರ ನೆರೆ ಬೇಡ, ಹೊರೆ ಬೇಡ.
ದಾರಿಸಂಗಡ ಬೇಡ, ದೂರ ನುಡಿಯಲು ಬೇಡ.
ಕೂಡಲಸಂಗನ ಶರಣರಲ್ಲಿ ಅಚ್ಚಲಿಂಗೈಕ್ಯಂಗೆ
ತೊತ್ತಾಗಿಹುದು ಕರಲೇಸಯ್ಯ.
೮೮.
ದೂಷಕನಾವನೊಬ್ಬ ದೇಶವ ಕೊಟ್ಟರೆ,
ಆಸೆಮಾಡಿ ಅವನ ಹೊರೆಯಲಿರಬೇಡ.
ಮಾದಾರ ಶಿವಭಕ್ತನಾದರೆ
ಆತನ ಹೊರೆಯಲು ಇಪ್ಪುದು ಕರಲೇಸಯ್ಯ!
ಭೃತ್ಯನಾಗಿ, ತೊತ್ತಾಗಿಪ್ಪುದು ಕರಲೇಸಯ್ಯ!
ಕಾಡುಸೊಪ್ಪ ತಂದು ಓಡಿನಲ್ಲಿ ಹುರಿದಿಟ್ಟುಕೊಂಡು
ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ.
೮೯.
ಸಾರ ಸಜ್ಜನರ ಸಂಗವೇ ಲೇಸು ಕಂಡಯ್ಯ!
ದೂರ ದುರ್ಜನರ ಸಂಗವದು ಭಂಗವಯ್ಯ!
ಸಂಗವೆರಡುಂಟು-ಒಂದ ಬಿಡು, ಒಂದ ಹಿಡಿ
ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣ.
೯೦.
ಪಟ್ಟವ ಕಟ್ಟಿದ ಬಳಿಕ ಲಕ್ಷಣವನರಸುವರೆ ?
ಲಿಂಗದೇವನ ಪೂಜಿಸಿ ಕುಲವನರಸುವರೆ,
ಅಯ್ಯಾ, ಕೂಡಲಸಂಗಮದೇವ
"ಭಕ್ತಕಾಯ ಮಮಕಾಯ" ವೆಂದನಾಗಿ ?

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...