ಬಸವಣ್ಣನ ವಚನಗಳು - 81 ರಿಂದ 90 ರವರೆಗೆ
೮೧.
ಏತ ತಲೆವಾಗಿದರೇನು ? ಗುರುಭಕ್ತನಾಗಬಲ್ಲುದೆ ?
ಇಕ್ಕುಳ ಕೈ ಮುಗಿದರೇನು ? ಭೃತ್ಯಾಚಾರಿಯಾಗಬಲ್ಲುದೆ ?
ಗಿಳಿಯೋದಿದರೇನು ? ಲಿಂಗವೇದಿಯಾಗಬಲ್ಲುದೆ ?
ಕೂಡಲಸಂಗನ ಶರಣರು ಬಂದ ಬರವ, ನಿಂದ ನಿಲವ
ಅನಂಗಸಂಗಿಗಳೆತ್ತ ಬಲ್ಲರು ?
೮೨.
ಒಲವಿಲ್ಲದ ಪೂಜೆ, ನೇಹವಿಲ್ಲದ ಮಾಟ;
ಆ ಪೂಜೆಯು, ಆ ಮಾಟವು
ಚಿತ್ರದ ರೂಹು ಕಾಣಿರಣ್ಣ!
ಚಿತ್ರದ ಕಬ್ಬು ಕಾಣಿರಣ್ಣ!
ಅಪ್ಪಿದರೆ ಸುಖವಿಲ್ಲ, ಮೆಲಿದರೆ ಸವಿಯಿಲ್ಲ;
ಕೂಡಲಸಂಗಮದೇವ, ನಿಜವಿಲ್ಲದವನ ಭಕ್ತಿಯಿಂತುಟು!
೮೩.
ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತ್ತು!
ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ
ಹೋಯಿತ್ತು!
ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು.
ಕೊಂದವರುಳಿದರೆ ಕೂಡಲಸಂಗಮದೇವ ?
೮೪.
ಹಾವಿನ ಬಾಯಿ ಕಪ್ಪೆ ಹಸಿದು
ತಾ ಹಾರುವ ನೊಣಕಾಸೆ ಮಾಡುವಂತೆ,
ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು
ಮೇಲಿನ್ನೇಸು ಕಾಲ ಬದುಕುವನೋ ?!
ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು
ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ.
೮೫.
ಅರತವಡಗದು. ಕ್ರೋಧ ತೊಲಗದು;
ಕ್ರೂರಕುಭಾಷೆ ಕುಹುಕ ಬಿಡದನ್ನಕ
ನೀನೆತ್ತಲು ? ಶಿವನೆತ್ತಲು ? ಹೋಗತ್ತ ಮರುಳೆ!
ಭವರೋಗವೆಂಬ ತಿಮಿರ ತಿಳಿಯದನ್ನಕ
ಕೂಡಲಸಂಗಯ್ಯನೆತ್ತ ? ನೀನೆತ್ತ ? ಮರುಳೇ!
೮೬.
ಹಾವು ತಿಂದವರ ನುಡಿಸ ಬಹುದು!
ಗರ ಹೊಡೆದವರ ನುಡಿಸ ಬಹುದು!
ಸಿರಿಗರ ಹೊಡೆದವರ ನುಡಿಸ ಬಾರದು ನೋಡಯ್ಯ!
ಬಡತನವೆಂಬ ಮಂತ್ರವಾದಿ ಹೋಗಲು
ಒಡನೆ ನುಡಿವರಯ್ಯ ಕೂಡಲಸಂಗಮದೇವ.
೮೭.
ಅರೆಭಕ್ತರಾದವರ ನೆರೆ ಬೇಡ, ಹೊರೆ ಬೇಡ.
ದಾರಿಸಂಗಡ ಬೇಡ, ದೂರ ನುಡಿಯಲು ಬೇಡ.
ಕೂಡಲಸಂಗನ ಶರಣರಲ್ಲಿ ಅಚ್ಚಲಿಂಗೈಕ್ಯಂಗೆ
ತೊತ್ತಾಗಿಹುದು ಕರಲೇಸಯ್ಯ.
೮೮.
ದೂಷಕನಾವನೊಬ್ಬ ದೇಶವ ಕೊಟ್ಟರೆ,
ಆಸೆಮಾಡಿ ಅವನ ಹೊರೆಯಲಿರಬೇಡ.
ಮಾದಾರ ಶಿವಭಕ್ತನಾದರೆ
ಆತನ ಹೊರೆಯಲು ಇಪ್ಪುದು ಕರಲೇಸಯ್ಯ!
ಭೃತ್ಯನಾಗಿ, ತೊತ್ತಾಗಿಪ್ಪುದು ಕರಲೇಸಯ್ಯ!
ಕಾಡುಸೊಪ್ಪ ತಂದು ಓಡಿನಲ್ಲಿ ಹುರಿದಿಟ್ಟುಕೊಂಡು
ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ.
೮೯.
ಸಾರ ಸಜ್ಜನರ ಸಂಗವೇ ಲೇಸು ಕಂಡಯ್ಯ!
ದೂರ ದುರ್ಜನರ ಸಂಗವದು ಭಂಗವಯ್ಯ!
ಸಂಗವೆರಡುಂಟು-ಒಂದ ಬಿಡು, ಒಂದ ಹಿಡಿ
ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣ.
೯೦.
ಪಟ್ಟವ ಕಟ್ಟಿದ ಬಳಿಕ ಲಕ್ಷಣವನರಸುವರೆ ?
ಲಿಂಗದೇವನ ಪೂಜಿಸಿ ಕುಲವನರಸುವರೆ,
ಅಯ್ಯಾ, ಕೂಡಲಸಂಗಮದೇವ
"ಭಕ್ತಕಾಯ ಮಮಕಾಯ" ವೆಂದನಾಗಿ ?
೮೧.
ಏತ ತಲೆವಾಗಿದರೇನು ? ಗುರುಭಕ್ತನಾಗಬಲ್ಲುದೆ ?
ಇಕ್ಕುಳ ಕೈ ಮುಗಿದರೇನು ? ಭೃತ್ಯಾಚಾರಿಯಾಗಬಲ್ಲುದೆ ?
ಗಿಳಿಯೋದಿದರೇನು ? ಲಿಂಗವೇದಿಯಾಗಬಲ್ಲುದೆ ?
ಕೂಡಲಸಂಗನ ಶರಣರು ಬಂದ ಬರವ, ನಿಂದ ನಿಲವ
ಅನಂಗಸಂಗಿಗಳೆತ್ತ ಬಲ್ಲರು ?
೮೨.
ಒಲವಿಲ್ಲದ ಪೂಜೆ, ನೇಹವಿಲ್ಲದ ಮಾಟ;
ಆ ಪೂಜೆಯು, ಆ ಮಾಟವು
ಚಿತ್ರದ ರೂಹು ಕಾಣಿರಣ್ಣ!
ಚಿತ್ರದ ಕಬ್ಬು ಕಾಣಿರಣ್ಣ!
ಅಪ್ಪಿದರೆ ಸುಖವಿಲ್ಲ, ಮೆಲಿದರೆ ಸವಿಯಿಲ್ಲ;
ಕೂಡಲಸಂಗಮದೇವ, ನಿಜವಿಲ್ಲದವನ ಭಕ್ತಿಯಿಂತುಟು!
೮೩.
ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತ್ತು!
ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ
ಹೋಯಿತ್ತು!
ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು.
ಕೊಂದವರುಳಿದರೆ ಕೂಡಲಸಂಗಮದೇವ ?
೮೪.
ಹಾವಿನ ಬಾಯಿ ಕಪ್ಪೆ ಹಸಿದು
ತಾ ಹಾರುವ ನೊಣಕಾಸೆ ಮಾಡುವಂತೆ,
ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು
ಮೇಲಿನ್ನೇಸು ಕಾಲ ಬದುಕುವನೋ ?!
ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು
ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ.
೮೫.
ಅರತವಡಗದು. ಕ್ರೋಧ ತೊಲಗದು;
ಕ್ರೂರಕುಭಾಷೆ ಕುಹುಕ ಬಿಡದನ್ನಕ
ನೀನೆತ್ತಲು ? ಶಿವನೆತ್ತಲು ? ಹೋಗತ್ತ ಮರುಳೆ!
ಭವರೋಗವೆಂಬ ತಿಮಿರ ತಿಳಿಯದನ್ನಕ
ಕೂಡಲಸಂಗಯ್ಯನೆತ್ತ ? ನೀನೆತ್ತ ? ಮರುಳೇ!
೮೬.
ಹಾವು ತಿಂದವರ ನುಡಿಸ ಬಹುದು!
ಗರ ಹೊಡೆದವರ ನುಡಿಸ ಬಹುದು!
ಸಿರಿಗರ ಹೊಡೆದವರ ನುಡಿಸ ಬಾರದು ನೋಡಯ್ಯ!
ಬಡತನವೆಂಬ ಮಂತ್ರವಾದಿ ಹೋಗಲು
ಒಡನೆ ನುಡಿವರಯ್ಯ ಕೂಡಲಸಂಗಮದೇವ.
೮೭.
ಅರೆಭಕ್ತರಾದವರ ನೆರೆ ಬೇಡ, ಹೊರೆ ಬೇಡ.
ದಾರಿಸಂಗಡ ಬೇಡ, ದೂರ ನುಡಿಯಲು ಬೇಡ.
ಕೂಡಲಸಂಗನ ಶರಣರಲ್ಲಿ ಅಚ್ಚಲಿಂಗೈಕ್ಯಂಗೆ
ತೊತ್ತಾಗಿಹುದು ಕರಲೇಸಯ್ಯ.
೮೮.
ದೂಷಕನಾವನೊಬ್ಬ ದೇಶವ ಕೊಟ್ಟರೆ,
ಆಸೆಮಾಡಿ ಅವನ ಹೊರೆಯಲಿರಬೇಡ.
ಮಾದಾರ ಶಿವಭಕ್ತನಾದರೆ
ಆತನ ಹೊರೆಯಲು ಇಪ್ಪುದು ಕರಲೇಸಯ್ಯ!
ಭೃತ್ಯನಾಗಿ, ತೊತ್ತಾಗಿಪ್ಪುದು ಕರಲೇಸಯ್ಯ!
ಕಾಡುಸೊಪ್ಪ ತಂದು ಓಡಿನಲ್ಲಿ ಹುರಿದಿಟ್ಟುಕೊಂಡು
ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ.
೮೯.
ಸಾರ ಸಜ್ಜನರ ಸಂಗವೇ ಲೇಸು ಕಂಡಯ್ಯ!
ದೂರ ದುರ್ಜನರ ಸಂಗವದು ಭಂಗವಯ್ಯ!
ಸಂಗವೆರಡುಂಟು-ಒಂದ ಬಿಡು, ಒಂದ ಹಿಡಿ
ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣ.
೯೦.
ಪಟ್ಟವ ಕಟ್ಟಿದ ಬಳಿಕ ಲಕ್ಷಣವನರಸುವರೆ ?
ಲಿಂಗದೇವನ ಪೂಜಿಸಿ ಕುಲವನರಸುವರೆ,
ಅಯ್ಯಾ, ಕೂಡಲಸಂಗಮದೇವ
"ಭಕ್ತಕಾಯ ಮಮಕಾಯ" ವೆಂದನಾಗಿ ?
Comments
Post a Comment