Skip to main content

ಬಸವಣ್ಣನ ವಚನಗಳು - 101 ರಿಂದ 110 ರವರೆಗೆ


೧೦೧.
ಲೇಸೆನಿಸಿಕೊಂಡು ಐದು ದಿನ ಬದುಕಿದರೇನು ?
ಲೇಸೆನಿಸಿಕೊಂಡು ನಾಲ್ಕು ದಿನ ಬದುಕಿದರೇನು ?
ಲೇಸೆನಿಸಿಕೊಂಡು ಮೂರು ದಿನ ಬದುಕಿದರೇನು ?
ಲೇಸೆನಿಸಿಕೊಂಡು ಎರಡು ದಿನ ಬದುಕಿದರೇನು ?
ಲೇಸೆನಿಸಿಕೊಂಡು ಒಂದು ದಿನ ಬದುಕಿದರೇನು ?
ಕೂಡಲಸಂಗನ ಶರಣರ ವಚನದಲ್ಲಿ
ಲೇಸೆನಿಸಿಕೊಂಡು ಒಂದು ದಿನ ಬದುಕಿದರೆ ಸಾಕು.

೧೦೨.
ಮರ್ತ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯ.
ಇಲ್ಲಿ ಸಲ್ಲುವರು ಅಲ್ಲಿಯೂ ಸಲ್ಲುವರಯ್ಯ.
ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರಯ್ಯ
ಕೂಡಲಸಂಗಮದೇವ.

೧೦೩.
ಹೊತ್ತಾರೆಯೆದ್ದು ಶಿವಲಿಂಗದೇವನ
ದೃಷ್ಟಿಯಾರೆ ನೋಡದವನ ಸಂಸಾರವೇನವನ ?!
ಬಾಳುವೆಣನ ಬೀಳುವೆಣನ ಸಂಸಾರವೇನವನ ?!
ನಡೆವೆಣನ ನುಡಿವೆಣನ ಸಂಸಾರವೇನವನ ?!
ಕರ್ತೃ ಕೂಡಲಸಂಗ, ನಿಮ್ಮ ತೊತ್ತಗೆಲಸಮಾಡದವನ
ಸಂಸಾರವೇನವನ ?!

೧೦೪.
ವ್ಯಾಧನೊಂದು ಮೊಲನ ತಂದರೆ
ಸಲುವ ಹಾಗಕ್ಕೆ ಬಿಲಿವರಯ್ಯ.
ನೆಲನಾಳ್ದನ ಹೆಣನೆಂದರೆ
ಒಂದಡಕೆಗೆ ಕೊಂಬವರಿಲ್ಲ ನೋಡಯ್ಯ.
ಮೊಲನಿಂದ ಕರಕಷ್ಟ ನರನ ಬಾಳುವೆ!
ಸಲೆ ನಂಬೋ ನಮ್ಮ ಕೂಡಲಸಂಗಮದೇವನ.

೧೦೫.
ಉತ್ಪತ್ತಿ ಶುಕ್ಲ-ಶೋಣಿತದಿಂದಾದ ಲಜ್ಜೆ ಸಾಲದೆ ?
ಅಂತು ಬಲಿದ ಸಪ್ತಧಾತುವಿನ
ನರಕದೇಹದೊಳಿಪ್ಪ ಹೇಸಿಕೆ ಸಾಲದೆ ?
ಮತ್ತೆಯು ಪಾಪಂಗಳ ಮಾಡಿ
ದುರಿತಂಗಳ ಹೆರುವ ಹೇಗತನವೇಕಯ್ಯ ?
ಕಾಲನ ಕೈಯ ಬಡಿಸಿಕೊಂಡು
ನರಕವನುಂಬುದು ವಿಧಿಯೇ, ಎಲೆ ಮನುಜ ?
ಒತ್ತೊತ್ತೆಯ ಜನನವ ಗೆಲುವಡೆ
ಕರ್ತನ ಪೂಜಿಸು ನಮ್ಮ ಕೂಡಲಸಂಗಮದೇವನ!







೧೦೬.
ಮನವೇ ಸರ್ಪ, ತನುವೇ ಹೇಳಿಗೆ!
ಹಾವಿನೊಡತಣ ಹುದುವಾಳಿಗೆ!
ಇನ್ನಾವಾಗ ಕೊಂದಹುದೆಂದರಿಯೆ.
ಇನ್ನಾವಾಗ ತಿಂದಹುದೆಂದರಿಯೆ.
ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ
ಅದೇ ಗಾರುಡ ಕೂಡಲಸಂಗಮದೇವ.

೧೦೭.
ನರೆ ಕೆನ್ನೆಗೆ, ತೆರೆ ಗಲ್ಲಕೆ,
ಶರೀರ ಗೂಡುವೋಗದ ಮುನ್ನ;
ಹಲ್ಲು ಹೋಗಿ, ಬೆನ್ನು ಬಾಗಿ
ಆನ್ಯರಿಗೆ ಹಂಗಾಗದ ಮುನ್ನ;
ಕಾಲ ಮೇಲೆ ಕೈಯನೂರಿ
ಕೋಲ ಹಿಡಿಯದ ಮುನ್ನ;
ಮುಪ್ಪಿಂದೊಪ್ಪವಳಿಯದ ಮುನ್ನ;
ಮೃತ್ಯು ಮುಟ್ಟದ ಮುನ್ನ
ಪೂಜಿಸುವೋ ಕೂಡಲಸಂಗಮದೇವನ.

೧೦೮.
ನೀರ ಬೊಬ್ಬುಳಿಕೆಗೆ ಕಬ್ಬುನದ ಕಟ್ಟ ಕೊಟ್ಟು
ಸುರಕ್ಷಿತವ ಮಾಡುವ ಭರವ ನೋಡಾ!
ಮಹಾದಾನಿ ಕೂಡಲಸಂಗಮ ದೇವನ ಪೂಜಿಸಿ ಬದುಕುವೋ
ಕಾಯವ ನಿಶ್ಚಯಿಸದೆ!

೧೦೯.
ಹಂಜರ ಬಲ್ಲಿತ್ತೆಂದು ಅಂಜದೇ ಓದುವ ಗಿಳಿಯೇ,
ಎಂದೆಂದೂ ಅಳಿಯೆನೆಂದು
ಗುಡಿಗಟ್ಟಿದೆಯಲ್ಲಾ ನಿನ್ನ ಮನದಲ್ಲಿ!
ಮಾಯಾಮಂಜರ ಕೊಲುವಡೆ, ನಿನ್ನ ಹಂಜರ ಕಾವುದೇ
ಕೂಡಲಸಂಗಮದೇವನಲ್ಲದೆ ?

೧೧೦.
ಸಂಸಾರವೆಂಬುದೊಂದು ಗಾಳಿಯ ಸೊಡರು!
ಸಿರಿಯೆಂಬುದೊಂದು ಸಂತೆಯ ಮಂದಿ ಕಂಡಯ್ಯ!
ಇದ ನೆಚ್ಚಿ ಕೆಡಬೇಡ;
ಸಿರಿಯೆಂಬುದ ಮರೆದು ಪೂಜಿಸು
ನಮ್ಮ ಕೂಡಲಸಂಗಮದೇವನ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...