Skip to main content

ಬಸವಣ್ಣನ ವಚನಗಳು - 131 ರಿಂದ 140 ರವರೆಗೆ


೧೩೧.
ಎರೆದರೆ ನೆನೆಯದು, ಮರೆದರೆ ಬಾಡದು
ಹುರುಳಿಲ್ಲ ಹುರುಳಿಲ್ಲ ಲಿಂಗಾರ್ಚನೆ!
ನೋಡಯ್ಯ, ಕೂಡಲಸಂಗಮದೇವಯ್ಯ,
"ಜಂಗಮ"ಕ್ಕೆರೆದರೆ, "ಸ್ಥಾವರ" ನೆನೆಯಿತ್ತು.

೧೩೨.
ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯ;
ಭೂಮಿಯಧಾರದಲ್ಲಿ ವೃಕ್ಷ ನೀರುಂಬುದಯ್ಯ.
ಜಂಗಮಾಪ್ಯಾಯನವಾದರೆ ಲಿಂಗಸಂತುಷ್ಟಿಯಹುದಯ್ಯ
"ವೃಕ್ಷಸ್ಯ ವದನಂ ಭೂಮಿಃ
ಸ್ಥಾವರಸ್ಯ ತು ಜಂಗಮಃ!
ಅಹಂ ತುಷ್ಟಿರುಮೇ ದೇವ್ಯು-
ಭಯೋರ್ಜಂಗಮಲಿಂಗಯೋಃ ||"
ಇದು ಕಾರಣ ಕೂಡಲಸಂಗನ ಶರಣರಲ್ಲಿ
ಜಂಗಮಾಪ್ಯಾಯನವಾದರೆ ಲಿಂಗಸಂತುಷ್ಟಿ.

೧೩೩.
ಬಂಡವ ತುಂಬಿದ ಬಳಿಕ
ಸುಂಕವ ತೆತ್ತಲ್ಲದೆ ಹೊಗಬಾರದು.
ಕಳ್ಳನಾಣ್ಯ ಸಲಿಕೆಗೆ ಸಲ್ಲದು,
ಕಳ್ಳನಾಣ್ಯವ ಸಲಲೀಯರಯ್ಯ.
ಭಕ್ತಿಯೆಂಬ ಬಂಡಕ್ಕೆ ಜಂಗಮವೇ ಸುಂಕಿಗ
ಕೊಡಲಸಂಗಮದೇವ.

೧೩೪.
ಮಾಡಿ, ನೀಡಿ, ಲಿಂಗವ ಪೂಜಿಸಿಹೆವೆಂಬವರು
ನೀವೆಲ್ಲ ಕೇಳಿರಣ್ಣ;
ಹಾಗದ ಕೆರಹ ಹೊರಗೆ ಕಳೆದು
ದೇಗುಲಕ್ಕೆ ಹೋಗಿ,
ನಮಸ್ಕಾರವ ಮಾಡುವನಂತೆ,
ತನ್ನ ಕೆರಹಿನ ಧ್ಯಾನವಲ್ಲದೆ,
ದೇವರ ಧ್ಯಾನವಿಲ್ಲ;
ಧನವನಿರಿಸದಿರಾ ! ಇರಿಸಿದರೆ ಭವ ಬಪ್ಪುದು ತಪ್ಪದು!
ಕೂಡಲಸಂಗನ ಶರಣರಿಗೆ ಸವೆಸಲೇಬೇಕು.

೧೩೫.
ಉಂಡುದು ಬಂದೀತೆಂಬ ಸಂದೇಹಿಮಾನವ ನೀ ಕೇಳ!
ಉಂಡುದೇನಾಯಿತೆಂಬುದ ನಿನ್ನ ನೀ ತಿಳಿದು ನೋಡಾ!
ಉಂಡುದಾಗಳೇ ಆ ಪೀಯವಾಯಿತ್ತು!
ಆ ಉಂಡುದನುಣಬಂದ ಹಂದಿಯ ಬಾಳುವೆಯವರ
ಕಂಡು ಆನು ಮರುಗುವೆನಯ್ಯ ಕೂಡಲಸಂಗಮದೇವ.







೧೩೬.
ಆಯುಷ್ಯವುಂಟು ಪ್ರಳಯವಿಲ್ಲೆಂದು,
ಅರ್ಥವ ಮಡಗುವಿರಿ:
ಆಯುಷ್ಯ ತೀರಿ ಪ್ರಳಯ ಬಂದರೆ
ಆ ಅರ್ಥವನುಂಬವರಿಲ್ಲ:
ನೆಲನನಗೆದು ಮಡಗದಿರಾ!
ನೆಲ ನುಂಗಿದರುಗುಳುವುದೇ ?
ಕಣ್ಣಿನಲ್ಲಿ ನೋಡಿ, ಮಣ್ಣಿನಲ್ಲಿ ನೆರಹಿ
ಉಣ್ಣದೆ ಹೋಗದಿರಾ;
ನಿನ್ನ ಮಡದಿಗಿರಲೆಂದರೆ--ಮಡದಿಯ ಕೃತಕ ಬೇರೆ!
ನಿನ್ನೊಡಲು ಕೆಡೆಯಲು
ಮತ್ತೊಬ್ಬನಲ್ಲಿಗೆ ಅಡಕದೆ ಮಾಬಳೆ ?
ಹೆರರಿಗಿಕ್ಕಿ ಹೆಗ್ಗುರಿಯಾಗಿ ಕೆಡಬೇಡ.
ಕೂಡಲಸಂಗನ ಶರಣರಿಗೆ ಒಡನೆ ಸೆವೆಸುವುದು.

೧೩೭.
ಅವಳ ವಚನ ಬೆಲ್ಲದಂತೆ!
ಹೃದಯದಲಿಪ್ಪುದೆಲ್ಲಾ ನಂಜು ಕಂಡಯ್ಯ!!
ಕಂಗಳಲೊಬ್ಬನ ಕರೆವಳು ಮನದಲೊಬ್ಬನ ನೆನೆವಳು,
ವಚನದಲೊಬ್ಬನ ನೆರೆವಳು!
ಇಂತಿವಳ ತನು ಒಂದೆಸೆ, ಮನ ಒಂದೆಸೆ, ಮಾತೊಂದೆಸೆ!!
ಈ ಮಾನಿಸಗಳ್ಳಿಯ ನನ್ನವಳೆಂದು ನಂಬುವ
ಕುರಿನರರನೇನೆಂಬೆನಯ್ಯ ಕೂಡಲಸಂಗಮದೇವ.

೧೩೮.
ತನು-ಮನ-ಧನವ ಹಿಂದಿಕ್ಕಿಕೊಂಡು
ಮಾತಿನ ಬಣಬೆಯ ಒಳಲೊಟ್ಟೆಯ ನುಡಿವರು
ನೀವೆಲ್ಲ ಕೇಳಿರೆ:
ತಲಹಿಲ್ಲದ ಕೋಲು ಪೊಳ್ಳುಹಾರುವುದಲ್ಲದೆ
ಗುರಿಯ ತಾಗಬಲ್ಲುದೆ ?
ಮಾಯಾಪಾಶ ಹಿಂಗಿ, ಮನದ ಗಂಟು ಬಿಡದನ್ನಕ
ಕೂಡಲಸಂಗಮದೇವನೆಂತೊಲಿವನಯ್ಯ.

೧೩೯.
ಹಲವು ಮಣಿಯ ಕಟ್ಟಿ ಕುಣಿಕುಣಿದಾಡಿ,
ಹಲವು ಪರಿಯಲಿ ವಿಭೂತಿಯ ಪೂಸಿ,
ಗಣಾಡಂಬರದ ನಡುವೆ ನಲಿನಲಿದಾಡಿ
ಉಂಡು ತಂಬುಲಗೊಂಡು ಹೋಹುದಲ್ಲ!
ತನು-ಮನ-ಧನವ ಸಮರ್ಪಿಸದವರ
ಕೂಡಲಸಂಗಮದೇವನೆಂತೊಲಿವ ?

೧೪೦.
ತನುವ ಕೊಟ್ಟು ಗುರುವನೊಲಿಸಲೆ ಬೇಕು.
ಮನವ ಕೊಟ್ಟು ಲಿಂಗವನೊಲಿಸಲೆ ಬೇಕು.
ಧನವ ಕೊಟ್ಟು ಜಂಗಮವನೊಲಿಸಲೆ ಬೇಕು.
ಈ ತ್ರಿವಿಧವ ಮರೆಸಿಕೊಂಡು,
ಹರೆಯ ಹೊಯಿಸಿ, ಕುರುಹ ಪೂಜಿಸುವ ಡಂಬಕರ ಮೆಚ್ಚ
ಕೂಡಲಸಂಗಮದೇವ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...