Skip to main content

ಬಸವಣ್ಣನ ವಚನಗಳು - 171 ರಿಂದ 180 ರವರೆಗೆ


೧೭೧.
ಇತ್ತ ಬಾರೈ ಇತ್ತ ಬಾರೈಯೆಂದು
ಭಕ್ತರೆಲ್ಲರು ಕೂರ್ತು ಹತ್ತಿರಕೆ ಕರೆವುತಿರಲು,
ಮತ್ತೆ ಕೆಲಸಕ್ಕೆ ಹೋಗಿ,
ಶರಣೆಂದು ಹಸ್ತಬಾಯನೆ ಮುಚ್ಚಿ, ಕಿರಿದಾಗಿ;
ಭೃತ್ಯಾಚಾರವ ನುಡಿದು
ವಿನಯ ತದ್ಧ್ಯಾನ ಉಳ್ಳವರನೆತ್ತಿಕೊಂಬನಯ್ಯ
ಕೂಡಲಸಂಗಮದೇವ ಪ್ರಮಥರ ಮುಂದೆ.

೧೭೨.
ತನಗೆ ಮುನಿವರಿಗೆ ತಾ ಮುನಿಯಲೇಕಯ್ಯ ?
ತನಗಾದ ಆಗೇನು ? ಅವರಿಗಾದ ಚೇಗೇನು ?
ತನುವಿನ ಕೋಪ ತನ್ನ ಹಿರಿಯತನದ ಕೇಡು.
ಮನದ ಕೋಪ ತನ್ನ ಅರಿವಿನ ಕೇಡು.
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವ.

೧೭೩.
ಭಕ್ತನು ಕಾಣದ ಠಾವಿನಲ್ಲಿ ಜರಿದನೆಂದರೆ
ಕೇಳಿ ಪರಿಣಾಮಿಸಬೇಕು!
ಅದೇನು ಕಾರಣವೆಂದರೆ--
ಕೊಡದೆ ಕೊಳದೆ ಅವಂಗೆ ಸಂತೋಷವಹುದಾಗಿ!
ಎನ್ನ ಮನದ ತದ್ವೇಷವಳಿದು
ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸು, ಕೂಡಲಸಂಗಮದೇವ!

೧೭೪.
ಕರಗಿಸಿ ಎನ್ನ ಮನದ ಕಾಳಿಕೆಯ ಕಳೆಯಯ್ಯ.
ಒರೆ ಬಣ್ಣಕ್ಕೆ ತಂದೆನ್ನ ಪುಟವಿಕ್ಕಿ ನೋಡಯ್ಯ,
ಕಡಿಹಕ್ಕೆ ಬಡಿಹಕ್ಕೆ ತಂದೆನ್ನ ಕಡೆಯಾಣಿಯ ಮಾಡಿ
ನಿಮ್ಮ ಶರಣರ ಪಾದಕ್ಕೆ ತೊಡಿಗೆಯ ಮಾಡಿ
ಸಲಹಯ್ಯ ಕೂಡಲಸಂಗಮದೇವ.

೧೭೫.
ಅವರಿವರೆನ್ನದೆ ಚರಣಕ್ಕೆರಗಲು
ಅಯ್ಯತನವೇರಿ ಬೆಬ್ಬನೆ ಬೆರೆವೆ ನಾನು
ಕೆಚ್ಚು ಬೆಳೆಯಿತಯ್ಯ ಎನ್ನ ಎದೆಯಲ್ಲಿ!
ಆ ಕೆಚ್ಚಿಂಗೆ ಕಿಚ್ಚನಿಕ್ಕಿ ಸುಟ್ಟು
ಬೆಳುಕನ ಮಾಡಿ
ಬೆಳುಗಾರದಂತೆ ಮಾಡು
ಕೂಡಲಸಂಗಮದೇವ.








೧೭೬.
ಇರಿಸಿಕೊಂಡು ಭಕ್ತರಾದರೆಮ್ಮವರು
ತರಿಸಿಕೊಂಡು ಭಕ್ತರಾದರೆಮ್ಮವರು
ಜರಿಸಿಕೊಂಡು ಭಕ್ತರಾದರೆಮ್ಮವರು
ಕೊರಿಸಿಕೊಂಡು ಭಕ್ತರಾದರೆಮ್ಮವರು
ಕೂಡಲಸಂಗನ ಶರಣರಿಗೆ ಮುಳಿಸ ತಾಳಿ
ಎನ್ನ ಭಕ್ತಿ ಅರೆಯಾಯಿತ್ತು.

೧೭೭.
ಕುದುರನೇಸು ತೊಳೆದರೆಯು ಕೆಸರು ಮಾಬುದೇ ?
ಎನ್ನ ಕಾಯದಲುಳ್ಳ ಅವಗುಣಂಗಳ ಕಳೆದು
ಕೃಪೆಯ ಮಾಡಯ್ಯ ತಂದೆ,
ಕಂಬಳಿಯಲ್ಲಿ ಕಣಿಕವ ನಾದಿದಂತೆ ಎನ್ನ ಮನ!
ಕೂಡಲಸಂಗಮದೇವ ನಿಮಗೆ ಶರಣೆಂದು ಶುದ್ಧ ಕಾಣಯ್ಯ.

೧೭೮.
ಕಾಣದುದನೆಲ್ಲವ ಕಾಣಲಾರೆನಯ್ಯ.
ಕೇಳದುದನೆಲ್ಲವ ಕೇಳಲಾರೆನಯ್ಯ.
ದ್ರೋಹವಿಲ್ಲ - ಎಮ್ಮ ಶಿವಲ್ಲಿ ಸೀಮೆಯಯ್ಯ.
ಒಲೆಯ ಮುಂದಿದ್ದು ಮಾಡದ ಕನಸ ಕಾಬವರನು
ಒಲ್ಲನಯ್ಯ ಕೂಡಲಸಂಗಮದೇವ.

೧೭೯.
ಕಾಣಬಹುದೇ ಪರುಷದ ಗಿರಿಯಂಧಕಂಗೆ ?
ಮೊಗೆಯಬಹುದೇ ರಸದ ಬಾವಿ ನಿರ್ಭಾಗ್ಯಂಗೆ ?
ತೆಗೆಯಬಹುದೇ ಕಡವರವು ದರಿದ್ರಂಗೆ ?
ಕರೆಯಬಹುದೇ ಕಾಮಧೇನುವಶುದ್ಧಂಗೆ ?
ಹೊನ್ನ ಹುಳುವ ಕಂಡು ನರಿ ತನ್ನ ಬಾಲವ
ಹುಣ್ಣುಮಾಡಿಕೊಂಡರೆ ಹೋಲಬಹುದೆ ?
ಎನ್ನೊಡೆಯ ಕೂಡಲಸಂಗನ ಶರಣನ
ಪುಣ್ಯವಿಲ್ಲದೆ ಕಾಣಬಹುದೇ ?

೧೮೦.
ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು,
ಪುರುಷನ ಒಲವಿಲ್ಲದ ಲಲನೆಯಂತೆ ನಾನಿದ್ದೆನಯ್ಯ!
ವಿಭೂತಿಯನೆ ಪೂಸಿ, ರುದ್ರಾಕ್ಷಿಯನೆ ಧರಿಸಿ
ಶಿವ, ನಿಮ್ಮ ಒಲವಿಲ್ಲದಂತೆ ನಾನಿದ್ದೆನಯ್ಯ!
ಕೆಟ್ಟು ಬಾಳುವರಿಲ್ಲ ನಮ್ಮವರ ಕುಲದಲ್ಲಿ
ನೀನೊಲಿದಂತೆ ಸಲಹಯ್ಯ ಕೂಡಲಸಂಗಮದೇವ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...