Skip to main content

ಬಸವಣ್ಣನ ವಚನಗಳು - 191 ರಿಂದ 200 ರವರೆಗೆ


೧೯೧.
ಓತಿ ಬೇಲಿವರಿದಂತೆನ್ನ ಮನವಯ್ಯ,
ಹೊತ್ತಿಗೊಂದು ಪರಿಯಪ್ಪ
ಗೋಸುಂಬೆಯಂತೆನ್ನ ಮನವು.
ಬಾವಲ ಬಾಳುವೆಯಂತೆನ್ನ ಮನವು.
ನಡುವಿರುಳೆದ್ದ ಕುರುಡಂಗಗುಸೆಯಲ್ಲಿ ಬೆಳಗಾದಂತೆ
ನಾನಿಲ್ಲದ ಭಕ್ತಿಯ ಬಯಸಿದರುಂಟೆ
ಕೂಡಲಸಂಗಮದೇವ.

೧೯೨.
ಶಬ್ದ-ಸಂಭಾಷಣೆಯ ನುಡಿಯ ವರ್ಚ್ಚಿಸಿ ನುಡಿವೆ
ತೊಡೆಹದ ಕೆಲಸದ ಬಣ್ಣದಂತೆ!
ಕಡಿಹಕ್ಕೆ ಒರಗೆ ಬಾರದು ನೋಡಾ!
ಎನ್ನ ಮನದಲೊಂದು, ಹೃದಯದಲೊಂದು,
ವಚನದಲೊಂದು ನೋಡಾ! ಕೂಡಲಸಂಗಮದೇವ,
ಆನು ಭಕ್ತನೆಂಬ ಹುಸಿಯ ಮಸಕವನೇನ ಬಣ್ಣಿಸುವೆನಯ್ಯ!

೧೯೩.
ಏನನೋದಿ, ಏನ ಕೇಳಿ, ಏನ ಮಾಡಿಯೂ
ಫಲವೇನು ನಿನ್ನವರೊಲಿಯದನ್ನಕ ?
ಶಿವ ಶಿವ ಮಹಾದೇವ!
ಬಾಳಿಲ್ಲದವಳ ಒಲೆಯಂತಾಯಿತ್ತೆನಗೆ
ಕೂಡಲಸಂಗಮದೇವ.

೧೯೪.
ಮುನ್ನೂರರವತ್ತು ದಿನ ಶರವ ಮಾಡಿ,
ಕಳನೇರಿ ಕೈಮರೆದಂತಾಯಿತ್ತೆನ್ನ ಭಕ್ತಿ!
ಎನಿಸು ಕಾಲ ಲಿಂಗಾರ್ಚನೆಯ ಮಾಡಿ
ಏವೆನಯ್ಯ ಮನದಲ್ಲಿ ದೃಢವಿಲ್ಲದನ್ನಕ ?
ಕೊಡನ ತುಂಬಿದ ಹಾಲ ಕೆಡಹಿ
ಉಡುಗಲೆನ್ನಳವೆ ಕೂಡಲಸಂಗಮದೇವ.

೧೯೫.
ಅಂಕ ಓಡಿದರೆ ತೆತ್ತಿಗಂಗೆ ಭಂಗವಯ್ಯ,
ಕಾದಿ ಗೆಲಿಸಯ್ಯ-ಎನ್ನನು ಕಾದಿ ಗೆಲಿಸಯ್ಯ,
ಕೂಡಲಸಂಗಮದೇವಯ್ಯ, ಎನ್ನ ತನು-ಮನ-ಧನದಲ್ಲಿ
ವಂಚನೆಯಿಲ್ಲದಂತೆ ಮಾಡಯ್ಯ.








೧೯೬.
ಅಂಕ ಕಳನೇರಿ ಕೈಮರೆದಿದ್ದರೆ
ಮಾರಂಕ ಬಂದಿರಿವುದು ಮಾಬನೆ ?
ನಿಮ್ಮ ನೆನವ ಮತಿ ಮರೆದಿದ್ದರೆ
ಪಾಪ ತನುವನಂಡಲೆವುದ ಮಾಬುದೆ ?
ಕೂಡಲಸಂಗಯ್ಯನ ನೆನೆದರೆ
ಪಾಪ ಉರಿಗೊಂಡಿದರಗಿನಂತೆ ಕರಗುವುದಯ್ಯ.

೧೯೭.
ಹೇಡಿ ಬಿರುದ ಕಟ್ಟಿದಂತಾಯಿತೆನ್ನ ವೇಷ!
ಕಾದಬೇಕು, ಕಾದುವರೆ ಮನವಿಲ್ಲ!
ಆಗಳೇ ಹೋಯಿತ್ತು ಬಿರುದು;
ಹಗರಣಿಗನಂತೆ ನಗೆಗೆಡೆಯಾಯಿತ್ತು!
ಮಾರಂಕ-ಜಂಗಮ ಮನೆಗೆ ಬಂದರೆ
ಕಾಣದಂತಡ್ಡ ಮುಸುಡಿಟ್ಟರೆ,
ಕೂಡಲಸಂಗಮದೇವ ಜಾಣ
ಮೂಗ ಕೊಯ್ವ ಹಲುದೋರಲು.

೧೯೮.
ಆಡುವುದಳವಟ್ಟಿತ್ತು-ಹಾಡುವುದಳವಟ್ಟಿತ್ತು.
ಅರ್ಚನೆಯಳವಟ್ಟಿತ್ತು-ಪೂಜನೆಯಳವಟ್ಟಿತ್ತು.
ನಿತ್ಯಲಿಂಗಾರ್ಚನೆಯು ಮುನ್ನವೇ ಅಳವಟ್ಟಿತ್ತು!
ಕೂಡಲಸಂಗನ ಶರಣರು ಬಂದರೆ
ಏಗುವುದೇಬೇಸನೆಂಬುದೊಪ್ಪಚ್ಚಿಯಳವಡದು!!

೧೯೯.
ಹೊರಿಸಿಕೊಂಡು ಹೋದ ನಾಯಿ
ಮೊಲನನೇನ ಹಿಡಿವುದಯ್ಯ ?
ಇರಿಯದ ವೀರ ಇಲ್ಲದ ಸೊಬಗುವ
ಹೇಳುವುದೇ ನಾಚಿಕೆ!
ಆನು ಭಕ್ತನೆಂತೆಂಬೆನಯ್ಯ
ಕೂಡಲಸಂಗಮದೇವ ?

೨೦೦.
ನೋಡುವರುಳ್ಳರೆ ಮಾಡುವೆ ದೇಹಾರವ,
ಎನಗೊಂದು ನಿಜವಿಲ್ಲ,
ಎನಗೊಂದು ನಿಷ್ಪತ್ತಿಯಿಲ್ಲ;
ಲಿಂಗವ ತೋರಿ ಉದರವ ಹೊರೆವ
ಭಂಗಗಾರ ನಾನು ಕೂಡಲಸಂಗಮದೇವ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...