೧೪೧.
ಐದು ಪರಿಯ ಬಣ್ಣವ ತಂದುಕೊಟ್ಟರೆ
ನಾಲ್ಕು ಮೊಲೆಯ ಹಸುವಾಯಿತ್ತು
ಹಸುವಿನ ಬಸರಲ್ಲಿ ಕರು ಹುಟ್ಟಿತ್ತು
ಕರುವ ಮುಟ್ಟಲೀಯದೆ ಹಾಲು ಕರೆದುಕೊಂಡರೆ
ಕರ ರುಚಿಯಾಗಿತ್ತು
ಮಧುರ ತಲೆಗೇರಿ, ಅರ್ಥ ನೀಗಾಡಿ
ಆ ಕರುವಿನ ಬೆಂಬಳಿವಿಡಿದು ಭವ ಹರಿಯಿತ್ತು
ಚೆನ್ನಮಲ್ಲಿಕಾರ್ಜುನ
೧೪೨.
ರವಿಯ ಕಾಳಗವ ಗೆಲಿದು
ಒಂಬತ್ತು ಬಾಗಿಲ ಮುರಿದು
ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ
ಅಲ್ಲ-ಅಹುದು, ಉಂಟು-ಇಲ್ಲ, ಬೇಕು-ಬೇಡ ಎಂಬ
ಆರರತಾತನೇ ಗುರು
ಗುರು ತಾನೇ ಬೇರಿಲ್ಲ
ದ್ವಯಕಮಲದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣ ಸಂಗನ ಬಸವಣ್ಣನ
ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು
೧೪೩.
ಹುಟ್ಟದ ಯೋನಿಯಲ್ಲಿ ಹುಟ್ಟಿಸಿ,
ಬಾರದ ಭವಂಗಳಲಿ ಬರಿಸಿ,
ಉಣ್ಣದ ಊಟವನುಣಿಸಿ ವಿಧಿಯೊಳಗಾಗಿಸುವ ಕೇಳಿರಣ್ಣ!
ತನ್ನವರೆಂದರೆ ಮನ್ನಿಸುವನೇ ಶಿವನು?
ಹತ್ತಿರಿದ್ದ ಭೃಂಗಿಯ ಚರ್ಮವ ಕಿತ್ತೀಡಾಡಿಸಿದನು
ಮತ್ತೆ ಕೆಲವರ ಬಲ್ಲನೇ?
ಇದನರಿದು ಬಿಡದಿರು ಚೆನ್ನಮಲ್ಲಿಕಾರ್ಜುನನಿಂತಹ ಸಿತಗನವ್ವ!
೧೪೪.
ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ
ಐವರು ಮಕ್ಕಳು ಜನಿಸಿದರೆಂತೆಂಬೆ?!
ಒಬ್ಬ ಭಾವದರೂಪ, ಒಬ್ಬ ಪ್ರಾಣದರೂಪ,
ಒಬ್ಬನೈಮುಖನಾಗಿ ವಿಶ್ವಕ್ಕೆ ಕಾಯರೂಪಾದ
ಇಬ್ಬರು ಉತ್ಪತ್ತಿಸ್ಥಿತಿಗೆ ಕಾರಣರಾದರು
ಐಮುಗನರಮನೆ ಸುಖವಿಲ್ಲೆಂದರಿದವನಾಗಿ
ಇನ್ನು ಕೈಲಾಸವನು ಹೊಗೆ ಹೊಗೆ!
ಮರ್ತ್ಯಕ್ಕೆ ಅಡಿಯಿಡೆನು
ಚೆನ್ನಮಲ್ಲಿಕಾರ್ಜುನದೇವ ನೀನೆ ಸಾಕ್ಷಿ!
೧೪೫.
ಸುಖದ ಸುಖಿಗಳ ಸಂಭಾಷಣೆಯಿಂದ
ದುಃಖಕ್ಕೆ ವಿಶ್ರಾಮವಾಯಿತ್ತು
ಭಾವಕ್ಕೆ ಭಾವ ತಾರ್ಕಣೆಯಾದಲ್ಲಿ
ನೆನಹಕ್ಕೆ ವಿಶ್ರಾಮವಾಯಿತ್ತು
ಬೆಚ್ಚು ಬೆರೆಸಲೊಡನೆ ಮೆಚ್ಚು ಒಳಕೊಂಡಿತಯ್ಯ
ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣರ ಸಂಗದಿಂದ
೧೪೬.
ಅಂಗೈಯೊಳಗಣ ಲಿಂಗವ ಪೂಜಿಸುತ್ತ
ಮಂಗಳಾರತಿಗಳನು ತೊಳಗಿ ಬೆಳಗುತಲಿರ್ದೆ ನೋಡಯ್ಯ
ಕಂಗಳ ನೋಟ ಕರುವಿಟ್ಟ ಭಾವ,
ಹಿಂಗದ ಮೋಹ ತೆರಹಿಲ್ಲದಿರ್ದೆ ನೋಡಯ್ಯ
ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮನಲಗದ ಪೂಜೆ ಅನುವಾಯಿತ್ತೆನಗೆ
೧೪೭.
ಪುರುಷರ ಮುಂದೆ ಮಾಯೆ
ಸ್ತ್ರೀಯೆಂಬ ಅಭಿಮಾನವಾಗಿ ಕಾಡಿತ್ತು ನೋಡಾ!
ಸ್ತ್ರೀಯ ಮುಂದೆ ಮಾಯೆ
ಪುರುಷನೆಂಬ ಅಭಿಮಾನವಾಗಿ ಕಾಡಿತ್ತು ನೋಡಾ!
ಲೋಕವೆಂಬ ಮಾಯೆಗೆ
ಶರಣಚಾರಿತ್ರ ಮರುಳಾಗಿ ತೋರುವುದು ನೋಡಾ!
ಚೆನ್ನಮಲ್ಲಿಕಾರ್ಜುನನೊಲಿದ ಶರಣಂಗೆ
ಮಾಯೆಯಿಲ್ಲ, ಮರಹಿಲ್ಲ, ಅಭಿಮಾನವೂ ಇಲ್ಲ
೧೪೮.
ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ,
ಬೆಳೆದನು ಅಸಂಖ್ಯಾತರ ಕರುಣದಲ್ಲಿ
ಸುಜ್ಞಾನವೆಂಬ ತುಪ್ಪ,
ಪರಮಾರ್ಥವೆಂಬ ಸಕ್ಕರೆಯನಿಕ್ಕಿದಿರಿ ನೋಡಾ!
ಇಂತಪ್ಪ ತ್ರಿವಿಧಾಮೃತವ ದಣಿಯಲೆರಡು ಸಲಹಿದಿರಿ
ಎನ್ನ ವಿವಾಹವ ಮಾಡಿದಿರಿ
ಸಯವಪ್ಪ ಗಂಡಂಗೆ ಕೊಟ್ಟಿರಿ
ಕೊಟ್ಟ ಮನೆಗೆ ಕಳುಹಲೆಂದು ಅಸಂಖ್ಯಾತರೆಲ್ಲರು ನೆರೆದು ಬಂದಿರಿ
ಬಸವಣ್ಣ ಮೆಚ್ಚಲು ಒಗೆತನವ ಮಾಡುವೆ
ಚೆನ್ನಮಲ್ಲಿಕಾರ್ಜುನನ ಕೈವಿಡಿದು,
ನಿಮ್ಮ ಮಂಡೆಗೆ ಹೂವ ತಹೆವಲ್ಲದೆ ಹುಲ್ಲ ತಾರೆನು!
ಅವಥರಿಸಿ ನಿಮ್ಮಡಿಗಳೆಲ್ಲರು
ಮರಳಿ ಬಿಜಯಂಗೈವುದು ಶರಣು ಶರಣಾರ್ಥಿ
೧೪೯.
ಅಯ್ಯ, ನಿಮ್ಮ ಮಹಂತರ ಕೂಡಿದ
ಸುಖವನುಪಮೆಗೆ ತರಬಾರದಯ್ಯ
ಅಯ್ಯ, ನಿಮ್ಮ ಮಹಂತರ ಕೂಡಿಯಗಲುವ ಧಾವತಿಯಿಂದ
ಸಾವುದೇ ಕರ ಲೇಸು ಕಂಡಯ್ಯ
ಚೆನ್ನಮಲ್ಲಿಕಾರ್ಜುನಯ್ಯ
ನಿಮ್ಮ ನಿಜವನರುಹಿದ ಮಹಿಮರನಗಲಿ ನಿಲಲಾರೆನಯ್ಯ
೧೫೦.
ಅಯ್ಯ, ನಿಮ್ಮ ಸದ್ಭಕ್ತರ ಕಂಡೆನಾಗಿ
ಎನ್ನ ಕಂಗಳ ಪಟಲ ಹರಿಯಿತ್ತು
ಅಯ್ಯ ನಿಮ್ಮ ಸಜ್ಜನ ಸದ್ಭಕ್ತರ ಶ್ರೀಚರಣಕ್ಕೆರಗಿದೆನಾಗಿ
ಎನ್ನ ಹಣೆಯ ಲಿಖಿತ ತೊಡೆಯಿತ್ತು
ಚೆನ್ನಮಲ್ಲಿಕಾರ್ಜುನದೇವ,
ನಿಮ್ಮ ಶರಣ ಸಂಗನಬಸವಣ್ಣನ ಕಂಡು
ಮಿಗೆ ಮಿಗೆ ನಮೋ ನಮೋ ಎನುತಿರ್ದೆನು
ಐದು ಪರಿಯ ಬಣ್ಣವ ತಂದುಕೊಟ್ಟರೆ
ನಾಲ್ಕು ಮೊಲೆಯ ಹಸುವಾಯಿತ್ತು
ಹಸುವಿನ ಬಸರಲ್ಲಿ ಕರು ಹುಟ್ಟಿತ್ತು
ಕರುವ ಮುಟ್ಟಲೀಯದೆ ಹಾಲು ಕರೆದುಕೊಂಡರೆ
ಕರ ರುಚಿಯಾಗಿತ್ತು
ಮಧುರ ತಲೆಗೇರಿ, ಅರ್ಥ ನೀಗಾಡಿ
ಆ ಕರುವಿನ ಬೆಂಬಳಿವಿಡಿದು ಭವ ಹರಿಯಿತ್ತು
ಚೆನ್ನಮಲ್ಲಿಕಾರ್ಜುನ
೧೪೨.
ರವಿಯ ಕಾಳಗವ ಗೆಲಿದು
ಒಂಬತ್ತು ಬಾಗಿಲ ಮುರಿದು
ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ
ಅಲ್ಲ-ಅಹುದು, ಉಂಟು-ಇಲ್ಲ, ಬೇಕು-ಬೇಡ ಎಂಬ
ಆರರತಾತನೇ ಗುರು
ಗುರು ತಾನೇ ಬೇರಿಲ್ಲ
ದ್ವಯಕಮಲದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣ ಸಂಗನ ಬಸವಣ್ಣನ
ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು
೧೪೩.
ಹುಟ್ಟದ ಯೋನಿಯಲ್ಲಿ ಹುಟ್ಟಿಸಿ,
ಬಾರದ ಭವಂಗಳಲಿ ಬರಿಸಿ,
ಉಣ್ಣದ ಊಟವನುಣಿಸಿ ವಿಧಿಯೊಳಗಾಗಿಸುವ ಕೇಳಿರಣ್ಣ!
ತನ್ನವರೆಂದರೆ ಮನ್ನಿಸುವನೇ ಶಿವನು?
ಹತ್ತಿರಿದ್ದ ಭೃಂಗಿಯ ಚರ್ಮವ ಕಿತ್ತೀಡಾಡಿಸಿದನು
ಮತ್ತೆ ಕೆಲವರ ಬಲ್ಲನೇ?
ಇದನರಿದು ಬಿಡದಿರು ಚೆನ್ನಮಲ್ಲಿಕಾರ್ಜುನನಿಂತಹ ಸಿತಗನವ್ವ!
೧೪೪.
ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ
ಐವರು ಮಕ್ಕಳು ಜನಿಸಿದರೆಂತೆಂಬೆ?!
ಒಬ್ಬ ಭಾವದರೂಪ, ಒಬ್ಬ ಪ್ರಾಣದರೂಪ,
ಒಬ್ಬನೈಮುಖನಾಗಿ ವಿಶ್ವಕ್ಕೆ ಕಾಯರೂಪಾದ
ಇಬ್ಬರು ಉತ್ಪತ್ತಿಸ್ಥಿತಿಗೆ ಕಾರಣರಾದರು
ಐಮುಗನರಮನೆ ಸುಖವಿಲ್ಲೆಂದರಿದವನಾಗಿ
ಇನ್ನು ಕೈಲಾಸವನು ಹೊಗೆ ಹೊಗೆ!
ಮರ್ತ್ಯಕ್ಕೆ ಅಡಿಯಿಡೆನು
ಚೆನ್ನಮಲ್ಲಿಕಾರ್ಜುನದೇವ ನೀನೆ ಸಾಕ್ಷಿ!
೧೪೫.
ಸುಖದ ಸುಖಿಗಳ ಸಂಭಾಷಣೆಯಿಂದ
ದುಃಖಕ್ಕೆ ವಿಶ್ರಾಮವಾಯಿತ್ತು
ಭಾವಕ್ಕೆ ಭಾವ ತಾರ್ಕಣೆಯಾದಲ್ಲಿ
ನೆನಹಕ್ಕೆ ವಿಶ್ರಾಮವಾಯಿತ್ತು
ಬೆಚ್ಚು ಬೆರೆಸಲೊಡನೆ ಮೆಚ್ಚು ಒಳಕೊಂಡಿತಯ್ಯ
ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣರ ಸಂಗದಿಂದ
೧೪೬.
ಅಂಗೈಯೊಳಗಣ ಲಿಂಗವ ಪೂಜಿಸುತ್ತ
ಮಂಗಳಾರತಿಗಳನು ತೊಳಗಿ ಬೆಳಗುತಲಿರ್ದೆ ನೋಡಯ್ಯ
ಕಂಗಳ ನೋಟ ಕರುವಿಟ್ಟ ಭಾವ,
ಹಿಂಗದ ಮೋಹ ತೆರಹಿಲ್ಲದಿರ್ದೆ ನೋಡಯ್ಯ
ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮನಲಗದ ಪೂಜೆ ಅನುವಾಯಿತ್ತೆನಗೆ
೧೪೭.
ಪುರುಷರ ಮುಂದೆ ಮಾಯೆ
ಸ್ತ್ರೀಯೆಂಬ ಅಭಿಮಾನವಾಗಿ ಕಾಡಿತ್ತು ನೋಡಾ!
ಸ್ತ್ರೀಯ ಮುಂದೆ ಮಾಯೆ
ಪುರುಷನೆಂಬ ಅಭಿಮಾನವಾಗಿ ಕಾಡಿತ್ತು ನೋಡಾ!
ಲೋಕವೆಂಬ ಮಾಯೆಗೆ
ಶರಣಚಾರಿತ್ರ ಮರುಳಾಗಿ ತೋರುವುದು ನೋಡಾ!
ಚೆನ್ನಮಲ್ಲಿಕಾರ್ಜುನನೊಲಿದ ಶರಣಂಗೆ
ಮಾಯೆಯಿಲ್ಲ, ಮರಹಿಲ್ಲ, ಅಭಿಮಾನವೂ ಇಲ್ಲ
೧೪೮.
ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ,
ಬೆಳೆದನು ಅಸಂಖ್ಯಾತರ ಕರುಣದಲ್ಲಿ
ಸುಜ್ಞಾನವೆಂಬ ತುಪ್ಪ,
ಪರಮಾರ್ಥವೆಂಬ ಸಕ್ಕರೆಯನಿಕ್ಕಿದಿರಿ ನೋಡಾ!
ಇಂತಪ್ಪ ತ್ರಿವಿಧಾಮೃತವ ದಣಿಯಲೆರಡು ಸಲಹಿದಿರಿ
ಎನ್ನ ವಿವಾಹವ ಮಾಡಿದಿರಿ
ಸಯವಪ್ಪ ಗಂಡಂಗೆ ಕೊಟ್ಟಿರಿ
ಕೊಟ್ಟ ಮನೆಗೆ ಕಳುಹಲೆಂದು ಅಸಂಖ್ಯಾತರೆಲ್ಲರು ನೆರೆದು ಬಂದಿರಿ
ಬಸವಣ್ಣ ಮೆಚ್ಚಲು ಒಗೆತನವ ಮಾಡುವೆ
ಚೆನ್ನಮಲ್ಲಿಕಾರ್ಜುನನ ಕೈವಿಡಿದು,
ನಿಮ್ಮ ಮಂಡೆಗೆ ಹೂವ ತಹೆವಲ್ಲದೆ ಹುಲ್ಲ ತಾರೆನು!
ಅವಥರಿಸಿ ನಿಮ್ಮಡಿಗಳೆಲ್ಲರು
ಮರಳಿ ಬಿಜಯಂಗೈವುದು ಶರಣು ಶರಣಾರ್ಥಿ
೧೪೯.
ಅಯ್ಯ, ನಿಮ್ಮ ಮಹಂತರ ಕೂಡಿದ
ಸುಖವನುಪಮೆಗೆ ತರಬಾರದಯ್ಯ
ಅಯ್ಯ, ನಿಮ್ಮ ಮಹಂತರ ಕೂಡಿಯಗಲುವ ಧಾವತಿಯಿಂದ
ಸಾವುದೇ ಕರ ಲೇಸು ಕಂಡಯ್ಯ
ಚೆನ್ನಮಲ್ಲಿಕಾರ್ಜುನಯ್ಯ
ನಿಮ್ಮ ನಿಜವನರುಹಿದ ಮಹಿಮರನಗಲಿ ನಿಲಲಾರೆನಯ್ಯ
೧೫೦.
ಅಯ್ಯ, ನಿಮ್ಮ ಸದ್ಭಕ್ತರ ಕಂಡೆನಾಗಿ
ಎನ್ನ ಕಂಗಳ ಪಟಲ ಹರಿಯಿತ್ತು
ಅಯ್ಯ ನಿಮ್ಮ ಸಜ್ಜನ ಸದ್ಭಕ್ತರ ಶ್ರೀಚರಣಕ್ಕೆರಗಿದೆನಾಗಿ
ಎನ್ನ ಹಣೆಯ ಲಿಖಿತ ತೊಡೆಯಿತ್ತು
ಚೆನ್ನಮಲ್ಲಿಕಾರ್ಜುನದೇವ,
ನಿಮ್ಮ ಶರಣ ಸಂಗನಬಸವಣ್ಣನ ಕಂಡು
ಮಿಗೆ ಮಿಗೆ ನಮೋ ನಮೋ ಎನುತಿರ್ದೆನು
Comments
Post a Comment