Skip to main content

ಅಕ್ಕನ ವಚನಗಳು - 151 ರಿಂದ 160 ರವರೆಗೆ

೧೫೧.
ಎನ್ನಂಗದಲಿ ಆಚಾರವ ತೋರಿದನಯ್ಯ ಬಸವಣ್ಣನು
[ಆ] ಆಚಾರವೇ ಲಿಂಗವೆಂದರುಹಿದನಯ್ಯ ಬಸವಣ್ಣನು
ಎನ್ನ ಪ್ರಾಣದಲ್ಲಿ ಅರುಹ ತೋರಿದನಯ್ಯ ಬಸವಣ್ಣನು
ಆ ಅರುಹೇ ಜಂಗಮವೆಂದರುಹಿದನಯ್ಯ ಬಸವಣ್ನನು
[ಚೆನ್ನಮಲ್ಲಿಕಾರ್ಜುನ] [ಎನ್ನ] ಹೆತ್ತ ತಂದೆ ಸಂಗಬಸವಣ್ನನು
ಎನಗೀ ಕ್ರಮವನರುಹಿದನಯ್ಯ

೧೫೨.
ಗಂಗೆಯೊಡನಾಡಿದ ಗಟ್ಟ-ಬೆಟ್ಟಂಗಳು
ಕೆಟ್ಟ ಕೇಡ ನೋಡಯ್ಯ
ಅಗ್ನಿಯೊಡನಾಡಿದ ಕಾಷ್ಟಂಗಳು ಕೆಟ್ಟ ಕೇಡ ನೋಡಯ್ಯ
ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಯ್ಯ
ಇಂತೀ ಪರಶಿವಮೂರ್ತಿ ಹರನೇ
ನಿಮ್ಮ ಜಂಗಮಲಿಂಗದೊಡನಾಡಿ ಎನ್ನ ಭವಾದಿಭವಂಗಳು
ಕೆಟ್ಟ ಕೇಡ ನೋಡಾ ಚೆನ್ನಮಲ್ಲಿಕಾರ್ಜುನ

೧೫೩.
ಮರ್ತ್ಯಲೋಕದ ಭಕ್ತರ ಮನವ ಬೆಳಗಲೆಂದು
ಇಳಿತಂದನಯ್ಯ ಶಿವನು
ಕತ್ತಲೆಯ ಪಾತಾಳವ ರವಿ ಹೊಕ್ಕಂತಾಯಿತಯ್ಯ
ಚಿತ್ತದ ಪ್ರವೃತ್ತಿಯ ಹಿಂಗಿಸಿ
ಮುಕ್ತಿಪಥವ ತೋರಿದನಲ್ಲಾ ಅಸಂಖ್ಯಾತರುಗಳಿಗೆ
ತನುವೆಲ್ಲ ಸ್ವಯಂಲಿಂಗ, ಮನವೆಲ್ಲ ಚರಲಿಂಗ
ಭಾವವೆಲ್ಲ ಮಹಾಘನದ ಬೆಳಗು
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣಸಮ್ಯಜ್ಞಾನಿ ಚೆನ್ನಬಸವಣ್ಣನ
ಶ್ರೀಪಾದಕ್ಕೆ ಶರಣೆಂದು
ಎನ್ನ ಭಾವಂ ನಾಸ್ತಿಯಾಯಿತ್ತಯ್ಯ ಪ್ರಭುವೇ

೧೫೪.
ಕಲ್ಯಾಣವೆಂಬುದಿನ್ನಾರಿಗೂ ಹೊಗಬಾರದು
ಆಶೆ-ಆಮಿಷವನಳಿದವಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು
ಒಳಗು-ಹೊರಗೂ ಶುದ್ಧವಾದಂಗಲ್ಲದೆ ಕಲ್ಯಾಣವ ಹೊಗಬಾರದು
ನಾನೆಂಬುದು ಹರಿದವಂಗಲ್ಲದೆ ಕಲ್ಯಾಣವ ಹೊಗಬಾರದು
ಒಳಗು ತಿಳಿದು ಚೆನ್ನಮಲ್ಲಿಕಾರ್ಜುನಂಗೊಲಿದು
ಉಭಯ ಲಜ್ಜೆಯಳಿದೆನಾಗಿ ಕಲ್ಯಾಣವ ಕಂಡು
ನಮೋ ನಮೋ ಎನುತಿರ್ದೆನು

೧೫೫.
ಅಯ್ಯಾ ನಿಮ್ಮಾನುಭಾವಿಗಳ ಸಂಗದಿಂದ
ಎನ್ನ ತನು ಶುದ್ಧವಾಯಿತ್ತು!
ಅಯ್ಯಾ ನಿಮ್ಮ ಅನುಭಾವಿಗಳ ಸಂಗದಿಂದ
ಎನ್ನ ಮನ ಶುದ್ಧವಾಯಿತ್ತು!
ಅಯ್ಯಾ ನಿಮ್ಮ ಅನುಭಾವಿಗಳು ಒರೆದೊರೆದು ಆಗುಮಾಡಿದ ಕಾರಣ
ಚೆನ್ನಮಲ್ಲಿಕಾರ್ಜುನ, ನಿಮಗಾನು ತೊಡಿಗೆಯಾದೆನು






೧೫೬.
ಅರಸಿ ತೊಳಲಿದರಿಲ್ಲ ಹರಸಿ ಬಳಲಿದರಿಲ್ಲ
ಬಯಸಿ ಹೊಕ್ಕರಿಲ್ಲ ತಪಸ್ಸು ಮಾಡಿದರಿಲ್ಲ
ಅದು ತನ್ನ ತಾನಹ ಕಾಲಕ್ಕಲ್ಲದೆ ಸಾಧ್ಯವಾಗದು
ಶಿವನೊಲಿದಲ್ಲದೇ ಕೈಗೂಡದು
ಚೆನ್ನಮಲ್ಲಿಕಾರ್ಜುನನೆನಗೊಲಿದನಾಗಿ
ನಾನು ಸಂಗನಬಸವಣ್ಣನ ಶ್ರೀಪಾದವ ಕಂಡು ಬದುಕಿದೆನು

೧೫೭.
ಹಾವಿನ ಬಾಯ ಹಲ್ಲ ಕಳೆದು
ಹಾವನಾಡಿಸಬಲ್ಲೆಡೆ
ಹಾವಿನ ಸಂಗವೆ ಲೇಸು ಕಂಡಯ್ಯ!
ಕಾಯದ ಸಂಗವ ವಿವರಿಸಬಲ್ಲಡೆ
ಕಾಯದ ಸಂಗವೇ ಲೇಸು ಕಂಡಯ್ಯ!
ತಾಯಿ ರಕ್ಕಸಿಯಾದಂತೆ ಕಾಯವಿಕಾರವು
ಚೆನ್ನಮಲ್ಲಿಕಾರ್ಜುನಯ್ಯ,
ನೀನೊಲಿದವರು ಕಾಯಗೊಂಡಿದ್ದರೆನಬೇಡ

೧೫೮.
ಅಂಗವಿಕಾರಸಂಗವ ಮರೆದು
ಲಿಂಗವನೊಡಗೂಡುತಿಪ್ಪರ ತೋರಾ ಎನಗೆ!
ಕಾಯವಿಕಾರ ಕತ್ತಲೆಯಳಿದು
ಭಕ್ತಿಯೇ ಪ್ರಾಣವಾಗಿಪ್ಪರ ತೋರಾ ಎನಗೆ!
ತ್ರಿಕರಣಶುದ್ಧವಾಗಿ ನಿಮ್ಮ ನೆರೆನಂಬಿದ ಸದ್ಭಕ್ತರ ತೋರಾ ಎನಗೆ
ಚೆನ್ನಮಲ್ಲಿಕಾರ್ಜುನ

೧೫೯.
ತುಂಬಿದುದು ತುಳುಕದು ನೋಡಾ
ನಂಬಿದುದು ಸಂದೇಹಿಸದು ನೋಡಾ
ಒಳಿದುದು ಓಸರಿಸದು ನೋಡಾ
ನೆರೆಯರಿದುದು ಮರೆಯದು ನೋಡಾ
ಚೆನ್ನಮಲ್ಲಿಕಾರ್ಜುನಯ್ಯ, ನೀನೊಲಿದ ಶರಣಂಗೆ
ನಿಸ್ಸೀಮ ಸುಖ ನೋಡಯ್ಯ!

೧೬೦.
ನೋಡಿ ನುಡಿಸಿ ಮಾತಾಡಿಸಿದಡೊಂದು ಸುಖ
ಏನ ಮಾಡದಯ್ಯ ನಿಮ್ಮ ಶರಣರ ಅನುಭಾವ?
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣರ ಸದ್ಗೋಷ್ಠಿ ಏನ ಮಾಡಯ್ಯ?

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...